ಜು.9ರಂದು ಸರ್ಕಾರದ ಮಹತ್ವದ ಆದೇಶ ನೋಂದಣಿ ಯೊಂದಿಗೆ ಕಾರ್ಡ್ ಪಡೆಯಲು ಆಗಸ್ಟ್ 3 ಕಡೇ ದಿನ ಮೈಸೂರು: ಕರ್ನಾಟಕ ರಾಜ್ಯದ ಎಲ್ಲಾ ವರ್ಗದ ಜನರಿಗೂ ಆರೋಗ್ಯ ಮತ್ತು ತುರ್ತು ಆರೋಗ್ಯ ಸೇವೆ ಒದಗಿಸಿ, ಸಾರ್ವತ್ರಿಕ ಆರೋಗ್ಯ ರಕ್ಷಣೆ ನೀಡುವ ಸಲುವಾಗಿ 2018ರ ಮಾರ್ಚ್ 2ರಿಂದ ಜಾರಿಗೆ ತಂದಿದ್ದ ‘ಆರೋಗ್ಯ ಕರ್ನಾಟಕ’ ಯೋಜನೆಯೊಂದಿಗೆ ‘ಯಶಸ್ವಿನಿ’ಯನ್ನು ವಿಲೀನಗೊಳಿಸಿ ಸರ್ಕಾರ ಜುಲೈ 9ರಂದು ಆದೇಶ ಹೊರಡಿಸಿದೆ. ಈ ಯೋಜನೆ ಮೂಲಕ ನಿರ್ಧಿಷ್ಠಪಡಿಸಿದ ಪ್ರಾಥಮಿಕ ಆರೋಗ್ಯ ಸೇವೆ, ಸಾಮಾನ್ಯ ದ್ವಿತೀಯ ಹಂತದ ಆರೋಗ್ಯ…
ಸೂರಿಗಾಗಿ ಅರ್ಜಿ ಸಲ್ಲಿಸಲು ಜು.30ರ ಕಾಲಾವಕಾಶ
July 7, 2018ವಿಧಾನಸಭೆಯಲ್ಲಿ ವಸತಿ ಸಚಿವ ಯು.ಟಿ. ಖಾದರ್ ವಿವರಣೆ ಅನರ್ಹರು ಅರ್ಜಿ ಸಲ್ಲಿಸಿದರೆ ಶಿಸ್ತು ಕ್ರಮ ಬೆಂಗಳೂರು: ಸೂರಿಲ್ಲದವರಿಗೆ ವಸತಿ ಕಲ್ಪಿಸಲು ಸಮೀಕ್ಷೆ ಕಾರ್ಯ ಪ್ರಗತಿಯಲ್ಲಿದ್ದು, ಶಾಶ್ವತ ಮನೆ ಇಲ್ಲದವರು ಇದೇ 30 ರೊಳಗೆ ಅರ್ಜಿ ಸಲ್ಲಿಸುವ ಮೂಲಕ ಹೆಸರು ನೋಂದಾಯಿಸಿಕೊಳ್ಳುವಂತೆ ವಸತಿ ಸಚಿವ ಯು.ಟಿ. ಖಾದರ್ ವಿಧಾನಸಭೆಯಲ್ಲಿಂದು ತಿಳಿಸಿದ್ದಾರೆ. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ರಾಜ್ಯದಲ್ಲಿ ಇದುವರೆಗೆ ಒಟ್ಟು 15 ಲಕ್ಷ ನಿವೇಶನ ಹಾಗೂ ವಸತಿ ರಹಿತರನ್ನು ಗುರುತಿಸಲಾಗಿದೆ. ಗ್ರಾಮ ಪಂಚಾಯ್ತಿ ಅಭಿ ವೃದ್ಧಿ ಅಧಿಕಾರಿ ಹಾಗೂ ಗ್ರಾಮ…
ಆರು ತಿಂಗಳಿಂದ ಬಿಡುಗಡೆಯಾಗದ ಅನುದಾನ :ಇಂದಿರಾ ಕ್ಯಾಂಟೀನ್ ಗುತ್ತಿಗೆದಾರರ ಸಂಕಷ್ಟ ವಾರದಲ್ಲಿ ಹಣ ಬಿಡುಗಡೆ ಆಶಯ
June 28, 2018ಮೈಸೂರು: ಹಸಿವು ಮುಕ್ತ ಕರ್ನಾಟಕ ಮಾಡುವ ನಿಟ್ಟಿನಲ್ಲಿ ಈ ಹಿಂದಿನ ಸರ್ಕಾರ ಜಾರಿಗೆ ತಂದಿದ್ದ ‘ಇಂದಿರಾ ಕ್ಯಾಂಟೀನ್’ ಸಂಕಷ್ಟದ ಸುಳಿಯಲ್ಲಿ ಸಿಲುಕಿದ್ದು, ರಾಜ್ಯ ಸರ್ಕಾರ ಕಳೆದ ಆರು ತಿಂಗಳಿಂದ ಅನುದಾನ ಬಿಡುಗಡೆ ಮಾಡದೆ ಇರುವುದು ಗುತ್ತಿಗೆದಾರರು ಹಾಗೂ ಈ ಕ್ಯಾಂಟೀನ್ ಅವಲಂಭಿತ ಬಡ ಜನರನ್ನು ಸಂಕಷ್ಟಕ್ಕೆ ದೂಡಿದೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರ ಕನಸಿನ ಯೋಜನೆ `ಇಂದಿರಾ ಕ್ಯಾಂಟೀನ್’ ಅನ್ನು ಆರಂಭದಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ನಂತರ ರಾಜ್ಯಾದ್ಯಂತ ಆರಂಭಿಸಲಾಗಿತ್ತು. ಬಡವರು, ಕೂಲಿ ಕಾರ್ಮಿಕರು ಹಾಗೂ…
ಪರಿಶಿಷ್ಟ ಪಂಗಡಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ನಾಯಕರ ಹಿತರಕ್ಷಣಾ ವೇದಿಕೆ ಆಗ್ರಹ
June 28, 2018ಮೈಸೂರು: ಪರಿಶಿಷ್ಟ ಪಂಗಡಕ್ಕೆ ಸರ್ಕಾರದ ಸವಲತ್ತುಗಳನ್ನು ಸಮರ್ಪಕವಾಗಿ ದೊರಕಿಸಿಕೊಡುವ ನಿಟ್ಟಿನಲ್ಲಿ ಪರಿಶಿಷ್ಟ ಪಂಗಡಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ ಮಾಡಬೇಕೆಂದು ಕರ್ನಾಟಕ ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆ ಆಗ್ರಹಿಸಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇದಿಕೆ ರಾಜ್ಯಾಧ್ಯಕ್ಷ ದ್ಯಾವಪ್ಪನಾಯಕ, ರಾಜ್ಯದಲ್ಲಿ ಸುಮಾರು 52 ಜಾತಿಗಳು ಪರಿಶಿಷ್ಟ ಪಂಗಡ ವ್ಯಾಪ್ತಿಗೆ ಬರಲಿದ್ದು, 60ರಿಂದ 65 ಲಕ್ಷ ಜನಸಂಖ್ಯೆ ಹೊಂದಿದೆ. ಇದರಲ್ಲಿ ಶೇ.90ರಷ್ಟು ಜನಸಂಖ್ಯೆ ಗ್ರಾಮೀಣ ಮತ್ತು ಗುಡ್ಡಗಾಡು ಪ್ರದೇಶದಲ್ಲಿ ವಾಸಿಸುತ್ತಿದೆ. ಈ ವರ್ಗಕ್ಕೆ ಮೂಲಸೌಲಭ್ಯ ಹಾಗೂ…
`ಆರೋಗ್ಯ ಕರ್ನಾಟಕ’ ಸಾರ್ವತ್ರಿಕ ವೈದ್ಯಕೀಯ ಯೋಜನೆ ಟಿ.ನರಸೀಪರದಲ್ಲಿ ಪ್ರಾಯೋಗಿಕ ಜಾರಿ
June 15, 2018ಮೈಸೂರು: ಸಹಕಾರ ಸಂಘ ಗಳ ಸದಸ್ಯರಿಗೆ ಆರೋಗ್ಯ ಭಾಗ್ಯ ಕಲ್ಪಿಸಿದ `ಯಶಸ್ವಿನಿ ಯೋಜನೆ’ ಸೇರಿದಂತೆ ವಿವಿಧ ವೈದ್ಯಕೀಯ ಸೌಲಭ್ಯ ಯೋಜನೆಗಳನ್ನು ವಿಲೀನಗೊಳಿಸಿ `ಆರೋಗ್ಯ ಕರ್ನಾಟಕ’ ಯೋಜನೆ ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿ ನಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ‘ಆರೋಗ್ಯ ಕರ್ನಾಟಕ: ಸಾರ್ವತ್ರಿಕ ಆರೋಗ್ಯ ರಕ್ಷಣಾ ಯೋಜನೆ’ಯಡಿ ತಿ.ನರಸೀಪುರ ತಾಲೂಕಿನಲ್ಲಿ ಸುಮಾರು 8 ಸಾವಿರ ಹೆಲ್ತ್ ಕಾರ್ಡ್ ವಿತರಣೆ ಮಾಡ ಲಾಗಿದೆ. ಎಲ್ಲಾ ಜಿಲ್ಲೆಗಳ ಒಂದೊಂದು ತಾಲೂಕಲ್ಲಿ ಪ್ರಾಯೋಗಿಕವಾಗಿ ಈ ಯೋಜನೆ ಅನುಷ್ಠಾನಗೊಳಿ ಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ರಾಜ್ಯಾದ್ಯಂತ ವಿಸ್ತರಿ…





