ಶ್ರೀನಗರ: ಪುಲ್ವಾಮ ಭಯೋತ್ಪಾದಕ ದಾಳಿಯ ನಂತರ ಭಾರತ ಎಲ್ಲೆಲ್ಲಿ ಸಾಧ್ಯವಾಗುತ್ತದೋ ಅಲ್ಲೆಲ್ಲಾ ಪಾಕಿಸ್ತಾನದ ಉಸಿರುಕಟ್ಟಿಸುವ ಕೆಲಸ ಮಾಡುತ್ತಿದೆ. ಒಂದೆಡೆ ವ್ಯಾಪಾರ ವಹಿವಾಟುಗಳ ವಿಷಯದಲ್ಲಿ ಪಾಕಿಸ್ತಾನಕ್ಕೆ ಹೊಡೆತ ನೀಡುತ್ತಿದ್ದರೆ. ಮತ್ತೊಂದೆಡೆ ಭಾರತ-ಪಾಕ್ ನಡುವೆ ಸೌಹಾರ್ದತೆಗಾಗಿ ಪ್ರಾರಂಭಿಸಲಾಗಿದ್ದ ಪೀಸ್ ಬಸ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ವಾರಕ್ಕೆ ಒಮ್ಮೆ ಸಂಚರಿಸುತ್ತಿದ್ದ ಶ್ರೀನಗರ-ಮುಜಾಫರಾಬಾದ್ ನಡುವಿನ ಬಸ್ ಸಂಪರ್ಕವನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿದ್ದು ಪಾಕಿಸ್ತಾನಕ್ಕೆ ಮತ್ತೊಂದು ಹೊಡೆತ ನೀಡಲಾಗಿದೆ. ಇದರ ಜೊತೆಗೆ ಪೂಂಚ್ ಜಿಲ್ಲೆಯಿಂದ ಪಾಕಿಸ್ತಾನದೊಂದಿಗೆ ನಡೆಯುತ್ತಿದ್ದ ವ್ಯಾಪಾರವನ್ನೂ ಸಹ ಸ್ಥಗಿತಗೊಳಿಸಲಾಗಿದೆ.
ವಿವಿಧ ಸಂಘಟನೆಗಳಿಂದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ
February 18, 2019ಮೈಸೂರು: ಜಮ್ಮುವಿನ ಪುಲ್ವಾಮಾದಲ್ಲಿ ಸಿಆರ್ಪಿಎಫ್ ಯೋಧರ ಮೇಲೆ ನಡೆದ ಪಾಕ್ ಪ್ರಾಯೋಜಿತ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಕೆಎಸ್ ಆರ್ಪಿ ಸಿಬ್ಬಂದಿ, ಅರೆಸೇನಾ ಪಡೆಗಳ ಮಾಜಿ ಯೋಧರ ಕ್ಷೇಮಾಭಿವೃದ್ಧಿ ಸಂಘ, ಯೋಗ ಫೆಡರೇಷನ್ ಆಫ್ ಮೈಸೂರು, ಮಿಲಿಟರಿ ವೆಟರನ್ಸ್ ವೆಲ್ಫೆರ್ ಅಸೋಸಿಯೇಷನ್ ಮತ್ತಿತರ ಸಂಸ್ಥೆ ಗಳ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮೈಸೂರಿನ ಕೋಟೆ ಆಂಜನೇಯ ದೇವ ಸ್ಥಾನದ ಬಳಿ ಮೇಣದ ಬತ್ತಿ ಹೊತ್ತಿಸಿ, ಹುತಾತ್ಮ ರಾದ ಯೋಧರಿಗೆ ನಮನ ಸಲ್ಲಿಸಿದರು. ಭಯೋತ್ಪಾದಕರ ದಾಳಿಗೆ ಕುಮ್ಮಕ್ಕು ನೀಡು ತ್ತಿರುವ…
ಉಗ್ರರಿಗೆ ತಕ್ಕ ಉತ್ತರ ನೀಡುವುದು ನಿಶ್ಚಿತ
February 18, 2019ಬೆಂಗಳೂರು: ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಗೆ ಕಾರಣರಾದವ ರಿಗೆ ತಕ್ಕ ಉತ್ತರ ನೀಡುವುದು ನಿಶ್ಚಿತ. ನಾವು ತಾಳ್ಮೆಯಿಂದ ಕಾಯೋಣ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಪುಲ್ವಾಮಾದಲ್ಲಿ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಭಾರತೀಯ ಯೋಧರ ಸೇವೆಯನ್ನು ಸ್ಮರಿಸಿ ಯೋಧ ರಿಗೆ ಶ್ರದ್ಧಾಂಜಲಿ ಸಲ್ಲಿಸಲು ಇಂದು ಬೆಂಗಳೂರಿನಲ್ಲಿ ಬೃಹತ್ ಸಭೆ ಆಯೋ ಜನೆಗೊಂಡಿತ್ತು. ರಾಜ್ಯ ಬಿಜೆಪಿ ಅಧ್ಯಕ್ಷರೂ ಆದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಈ ಸಂದರ್ಭದಲ್ಲಿ ಉಗ್ರವಾದ ಖಂಡಿಸಿ ನಡೆದ ಧರಣಿಯ ನೇತೃತ್ವ ವಹಿಸಿದ್ದರು. ಸಭೆಯಲ್ಲಿ…
ಕಾಶ್ಮೀರಿ ಪ್ರತ್ಯೇಕತಾವಾದಿಗಳ ಭದ್ರತೆ ಹಿಂಪಡೆದ ಕೇಂದ್ರ ಸರ್ಕಾರ
February 18, 2019ಜಮ್ಮು-ಕಾಶ್ಮೀರ: ಪಾಕಿಸ್ತಾನ ಹಾಗೂ ಐಎಸ್ಐ ಜೊತೆಗಿನ ನಂಟಿನ ಹಿನ್ನೆಲೆಯಲ್ಲಿ ಮಿರ್ವೈಜ್ ಉಮರ್ ಫಾರುಖ್ ಸೇರಿದಂತೆ ಪ್ರತ್ಯೇಕತಾವಾದಿಗಳಿಗೆ ನೀಡಲಾಗಿದ್ದ ಭದ್ರತೆಯನ್ನು ಕೇಂದ್ರ ಸರ್ಕಾರ ಇಂದು ಹಿಂಪಡೆದಿದೆ. ಪುಲ್ವಾಮಾ ಉಗ್ರರ ದಾಳಿಯಲ್ಲಿ 40 ಸಿಆರ್ಪಿಎಫ್ ಯೋಧರು ಹುತಾತ್ಮರಾದ ಬೆನ್ನಲ್ಲೇ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಪಾಕಿಸ್ತಾನ ಹಾಗೂ ಅದರ ಗುಪ್ತಚರ ಸಂಸ್ಥೆ ಐಎಸ್ಐ ಪರವಾಗಿ ಕೆಲಸ ಮಾಡುತ್ತಿರುವ ಪ್ರತ್ಯೇಕತಾ ವಾದಿಗಳಿಗೆ ನೀಡಲಾಗಿರುವ ಭದ್ರತೆಯನ್ನು ಹಿಂಪಡೆಯಲು ಸರ್ಕಾರ ಯೋಚನೆ ಮಾಡುತ್ತಿದೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಶುಕ್ರವಾರ ತಿಳಿಸಿದ್ದರು. ಪಾಕಿಸ್ತಾನ…
ಪುಲ್ವಾಮದಲ್ಲಿ ಯೋಧರ ಮೇಲೆ ಉಗ್ರರ ದಾಳಿ ಖಂಡಿಸಿ ಮಡಿಕೇರಿ, ವೀ.ಪೇಟೆಯಲ್ಲಿ ಪ್ರತಿಭಟನೆ
February 18, 2019ಮಡಿಕೇರಿ: ಪಾಕಿಸ್ತಾನಿ ಪ್ರೇರಿತ ಕಾಶ್ಮೀರಿ ಉಗ್ರ ಅದಿಲ್ ಅಹ್ಮದ್ ಗುರು ವಾರ ನಡೆಸಿದ ಆತ್ಮಾಹುತಿ ದಾಳಿಗೆ ಹುತಾತ್ಮ ರಾದ ಭಾರತದ ಯೋಧರಿಗೆ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಬಿಜೆಪಿ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾ ಯಿಸಿದ ಪ್ರತಿಭಟನಾಕಾರರು, ಪಾಕಿಸ್ತಾನದ ವಿರುದ್ಧ, ಉಗ್ರಗಾಮಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಶಾಸಕ ಅಪ್ಪಚ್ಚು ರಂಜನ್, ಉಗ್ರರ ದಾಳಿಯಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಸಂತಾಪ ವ್ಯಕ್ತಪಡಿಸಿದರು. ಭಯೋತ್ಪಾದನೆಗೆ ಹಣ ಎಲ್ಲಿಂದ ಬರುತ್ತದೆ ಎಂಬುದನ್ನು…
ಮಂಡ್ಯ ವೀರ ಯೋಧನಿಗೆ ಭಾವಪೂರ್ಣ ವಿದಾಯ
February 17, 2019ಹುಟೂರಲ್ಲಿ ಸಕಲ ಸರ್ಕಾರಿ ಗೌರವ ಹಾಗೂ ಸಹಸ್ರಾರು ಜನರ ಅಶ್ರುತರ್ಪಣದ ನಡುವೆ ಗುರು ಚಿತೆಗೆ ಸಹೋದರನಿಂದ ಅಗ್ನಿಸ್ಪರ್ಶ ಭಾರತೀನಗರ: ಕಾಶ್ಮೀರದ ಪುಲ್ವಾಮಾ ಬಳಿ ಉಗ್ರರ ದಾಳಿಯಿಂದ ಹುತಾತ್ಮನಾದ ಮಂಡ್ಯದ ವೀರ ಯೋಧ ಎಚ್. ಗುರು ಅವರಿಗೆ ಸ್ವಗ್ರಾಮವಾದ ತಾಲೂಕಿನ ಗುಡಿಗೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ‘ ಬೋಲೋ ಭಾರತ್ ಮಾತಾ ಕೀ ಜೈ’, ‘ವಂದೇ ಮಾತರಂ’, ‘ವೀರ ಯೋಧ ಗುರು ಅಮರ್ ರಹೇ’ ಮುಗಿಲು ಮುಟ್ಟುವ ಘೋಷಣೆಗಳ ನಡುವೆ ಭಾವಪೂರ್ಣ ವಿದಾಯ ಹೇಳಲಾಯಿತು. ಸಂಜೆ 7.45ರ ಸುಮಾರಿನಲ್ಲಿ…
ಐಎಸ್ಐ ಜತೆ ನಂಟು: ಕಾಶ್ಮೀರಿ ಪ್ರತ್ಯೇಕತಾವಾದಿಗಳ ಭದ್ರತೆ ಹಿಂಪಡೆಯಲು ಚಿಂತನೆ
February 17, 2019ಶ್ರೀನಗರ: ಕಾಶ್ಮೀರದ ಪ್ರತ್ಯೇಕತಾವಾದಿಗಳು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಜೊತೆ ನಂಟು ಹೊಂದಿರುವ ಶಂಕೆ ವ್ಯಕ್ತವಾ ಗಿದ್ದು, ಅವರಿಗೆ ನೀಡಿದ್ದ ಭದ್ರತೆಯನ್ನು ಹಿಂಪಡೆಯಲು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಮುಂದಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಸೂಚನೆಯಂತೆ ಕಾಶ್ಮೀರ ಗೃಹ ಕಾರ್ಯದರ್ಶಿಗಳು ಪ್ರತ್ಯೇಕತಾವಾದಿಗಳ ಭದ್ರತೆಯನ್ನು ಪರಿಶೀಲಿಸುತ್ತಿದ್ದು, ಐಎಸ್ಐ ಜೊತೆಗಿನ ನಂಟು ಪರಿಶೀಲಿಸಿದ ಬಳಿಕ ಭದ್ರತೆ ಹಿಂಪಡೆಯಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಆಲ್ ಇಂಡಿಯಾ ಮಿಲ್ಲಿ ಕೌನ್ಸಿಲ್ ಶ್ರದ್ಧಾಂಜಲಿ
February 17, 2019ಮೈಸೂರು: ಮೈಸೂ ರಿನ ವಿವಿಧೆಡೆ ಜಮ್ಮುವಿನ ಪುಲ್ವಾಮಾ ದಲ್ಲಿ ಭಾರತೀಯ ಸೇನೆ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧ ರಿಗೆ ಮೇಣದಬತ್ತಿ ಹಚ್ಚಿ, ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು. ಶನಿವಾರ ಸಂಜೆ ವಿವಿಧ ಸಂಘ-ಸಂಸ್ಥೆ ಗಳು, ಸಂಘಟನೆಗಳು ಮತ್ತು ವ್ಯಾಪಾರಿ ಗಳು ಮಹಾತ್ಮಗಾಂಧಿ ವೃತ್ತ, ಅಶೋಕರಸ್ತೆ, ಕೆ.ಟಿ.ಸ್ಟ್ರೀಟ್, ಕಲಾಮಂದಿರ ಮತ್ತಿತರೆ ಕಡೆ ಗಳಲ್ಲಿ ಮೇಣದ ಬತ್ತಿ ಹೊತ್ತಿಸಿ, ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದರು. ಆಲ್ ಇಂಡಿಯಾ ಮಿಲ್ಲಿ ಕೌನ್ಸಿಲ್: ಮುಸ್ಲಿಂ ಧರ್ಮಗುರು ಮತ್ತು ಶಾಸಕ ತನ್ವೀರ್ಸೇಠ್ ನೇತೃತ್ವದಲ್ಲಿ…
ಉಗ್ರರ ದಾಳಿಗೆ ತಕ್ಕ ಪ್ರತೀಕಾರ: ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ಪ್ರಧಾನಿ ಮೋದಿ ಘೋಷಣೆ
February 16, 2019ನವದೆಹಲಿ: ಕಾಶ್ಮೀರದ ಪುಲ್ವಾಮಾದಲ್ಲಿ ನಮ್ಮ ವೀರ ಯೋಧರನ್ನು ಬಲಿತೆಗೆದು ಕೊಂಡ ಉಗ್ರರ ದಾಳಿಗೆ ಪ್ರತಿಯಾಗಿ ಕಾರ್ಯಾಚರಣೆ ನಡೆಸಲು ನಮ್ಮ ಭದ್ರತಾ ಪಡೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು. ಸಂಪೂರ್ಣ ದೇಶೀ ನಿರ್ಮಿತ ಸ್ವಯಂಚಾಲಿತ ಅತಿವೇಗದ ರೈಲು, ದೆಹಲಿ-ವಾರಣಾಸಿ ನಡುವೆ ಸಂಚರಿಸುವ `ವಂದೇ ಭಾರತ’ ಎಕ್ಸ್ ಪ್ರೆಸ್ಗೆ ಹಸಿರು ನಿಶಾನೆ ತೋರುವ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ, ವೀರಯೋಧರ ಬಲಿದಾನ, ದಾಳಿಗೆ ಕಾರಣರಾದವರಿಗೆ ತಕ್ಕ ಪಾಠ ಕಲಿಸುವ ಕುರಿತೇ ಹೆಚ್ಚು ಮಾತನಾಡಿದರು. ನಮ್ಮ ವೀರ…
ರಕ್ಷಕರಿಗೇ ರಕ್ಷಣೆ ಇಲ್ಲಾಂದ್ರೆ ಇನ್ಯಾರಿಗೆ ರಕ್ಷಣೆ ಇದೆ..!
February 16, 2019ಮಂಡ್ಯ: ದೇಶ ಕಾಯೋ ರಕ್ಷಕರಿಗೇ ರಕ್ಷಣೆ ಇಲ್ಲಾಂದ್ರೆ ಇನ್ಯಾರಿಗೆ ರಕ್ಷಣೆ ಇದೆ, ನನ್ನ ಗಂಡನನ್ನು ಕೊಂದವರನ್ನು ಬ್ಲಾಸ್ಟ್ ಮಾಡಿ, ಯಾವುದೇ ಕಾರಣಕ್ಕೂ ಬಿಡಬೇಡಿ..! ಜಮ್ಮು-ಕಾಶ್ಮೀರದ ಪುಲ್ವಾಮಾದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧ ಹೆಚ್.ಗುರು ಅವರ ಪತ್ನಿ ಕಲಾವತಿ ಅವರ ಆಕ್ರೋಶದ ನುಡಿಗಳಿವು. ಪತಿಯನ್ನು ಕಳೆದುಕೊಂಡ ದುಃಖದ ನಡುವೆಯೇ ತನ್ನ ಪತಿ ಸಾವಿಗೆ ಪ್ರತೀಕಾರ ಸಾರಿದರು. ನಾನು ಪ್ರತಿದಿನ ಅವರ ಜೊತೆ ಫೋನಿನಲ್ಲಿ ಮಾತನಾಡುತ್ತಿದ್ದೆ. ಅವರು ನಿನ್ನೆ ಬೆಳಿಗ್ಗೆ 11 ಗಂಟೆಗೆ ಫೋನ್ ಮಾಡಿದ್ದರು. ನಾನು ಕೆಲಸ ಮಾಡು…