ಕೆ.ಆರ್.ಪೇಟೆ: ಮದ್ಯಪಾನದಿಂದ ಸಂಸಾರದ ನೆಮ್ಮದಿ ಹಾಳಾಗಲಿದ್ದು, ಹಣವೂ ವ್ಯರ್ಥವಾಗಲಿದೆ ಎಂದು ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಅಭಿಪ್ರಾಯಪಟ್ಟರು. ತಾಲೂಕಿನ ಸಿಂಧುಘಟ್ಟ ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಶ್ರೀಕ್ಷೇತ್ರ ಧರ್ಮ ಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಹಾಗೂ ಪ್ರಗತಿ ಬಂಧು ಸ್ತ್ರೀಶಕ್ತಿ ಸ್ವಸಹಾಯ ಸಂಘಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಹಮ್ಮಿ ಕೊಂಡಿದ್ದ ರಾಜ್ಯಮಟ್ಟದ 1223ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮದ್ಯಪಾನ, ಬೀಡಿ-ಸಿಗರೇಟು, ಗುಟ್ಕಾ, ಗಾಂಜಾ ಸೇರಿದಂತೆ ಮಾದಕ ವಸ್ತುಗಳಿಂದ ಪ್ರತಿಯೊಬ್ಬರೂ ದೂರವಿರಬೇಕು….