ಮಡಿಕೇರಿ: ಕೊಡಗಿನ ಯುವ ಪೀಳಿಗೆ ವೈದ್ಯಕೀಯ ಶಿಕ್ಷಣ ಪಡೆಯಲು ಆಸಕ್ತಿ ವಹಿಸುವಂತೆ ಇಲ್ಲಿನ ಸರ್ಕಾರಿ ವೈದ್ಯಕೀಯ ವಿಜ್ಞಾನ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸಲಹೆ ಮಾಡಿದೆ. ಮಡಿಕೇರಿಯ ಹೊರ ವಲಯದಲ್ಲಿ ರುವ ವಿಶಾಲ ಬೆಟ್ಟ ಶ್ರೇಣಿಯ ನಡುವೆ ಕರ್ಣಂಗೇರಿ ಗ್ರಾಮದ ಪ್ರಕೃತಿ ರಮಣೀಯ ಸೊಬಗಿನ ಪ್ರದೇಶದಲ್ಲಿ ನಾಲ್ಕು ವರ್ಷದ ಹಿಂದೆ ನಿರ್ಮಾಣಗೊಂಡಿರುವ ಸರ್ಕಾರಿ ವೈದ್ಯಕೀಯ ವಿಜ್ಞಾನ ಶಿಕ್ಷಣ ಸಂಸ್ಥೆಯು ತನ್ನ ಎರಡು ಶೈಕ್ಷಣಿಕ ವರ್ಷಗಳನ್ನು ಪೂರೈಸಿರುವ ಸಂದರ್ಭ ದಲ್ಲಿ ಈ ಸಲಹೆ ಮಾಡಿದೆ. ಕರ್ಣಂಗೇರಿ ಗ್ರಾಮದ ಈ…