ಮಡಿಕೇರಿ,ಮಾ.17-ಕೊರೊನಾ ವೈರಸ್ ಆತಂಕ ಜಿಲ್ಲೆಯ ದೇವಾಲಯ ಗಳಲ್ಲೂ ಮನೆ ಮಾಡಿರುವುದು ಕಂಡು ಬಂದಿದೆ. ಜಿಲ್ಲೆಯ ಪ್ರಸಿದ್ದ ಮತ್ತು ಪ್ರಮುಖ ದೇವಾಲಯ ಎನಿಸಿರುವ ಕಾವೇರಿ ತವರು ತಲಕಾವೇರಿ ಮತ್ತು ಭಾಗಮಂಡಲ ದಲ್ಲೂ ಬೆರಳೆಣಿಕೆ ಭಕ್ತರು ಕಂಡು ಬರುತ್ತಿ ದ್ದಾರೆ. ಸಾಮಾನ್ಯವಾಗಿ ಈ ತಿಂಗಳಲ್ಲಿ ಕ್ಷೇತ್ರಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಹೆಚ್ಚಿ ರುತ್ತಿತ್ತು. ಆದರೆ ದೇಶ ಸೇರಿದಂತೆ ರಾಜ್ಯ ದಲ್ಲೂ ಕೊರೊನಾ ಸೋಂಕಿನ ಭೀತಿ ಆವರಿ ಸಿರುವ ಹಿನ್ನಲೆಯಲ್ಲಿ ಜನರು ಕೂಡ ದೇವಾ ಲಯಗಳಿಗೆ ಹೋಗಲು ಮುಂದಾಗುತ್ತಿಲ್ಲ. ಭಾಗಮಂಡಲ ತಲಕಾವೇರಿಯಲ್ಲಿ…
ಕೊಡಗಿನಲ್ಲಿ ಕಾಡಾನೆ ಹಾವಳಿಗೆ ಅರಣ್ಯ ಒತ್ತುವರಿಯೇ ಕಾರಣ
March 18, 2020ಮಡಿಕೇರಿ,ಮಾ.17-ಮಾನವನ ಹಸ್ತ ಕ್ಷೇಪ ಮತ್ತು ಜೈವಿಕ ಅಡೆತಡೆಗಳಿಂದ ಅರಣ್ಯ ಪ್ರದೇಶಗಳು ಕ್ಷೀಣಿಸುತ್ತಿದ್ದು, ಕಾಡಾನೆಗಳ ಆವಾಸ ಸ್ಥಾನಗಳ ಮೇಲೆ ಒತ್ತಡ ಹೆಚ್ಚಾಗು ತ್ತಿರುವುದೇ ಕೊಡಗಿನಲ್ಲಿ ಕಾಡಾನೆಗಳ ದಾಳಿಗೆ ಕಾರಣವೆಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಖಾತೆ ಸಚಿವ ಆನಂದ ಸಿಂಗ್ ತಿಳಿಸಿದ್ದಾರೆ. ವಿಧಾನ ಪರಿಷತ್ ಸದಸ್ಯೆ ಶಾಂತೆ ಯಂಡ ವೀಣಾ ಅಚ್ಚಯ್ಯ ಅವರು ಕಾಡಾನೆ ದಾಳಿ ತಡೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಕೇಳಿರುವ ಪ್ರಶ್ನೆಗಳಿಗೆ ಅರಣ್ಯ ಸಚಿವರು ನೀಡಿದರು. ಇತ್ತೀಚಿನ ವರ್ಷಗಳಲ್ಲಿ ಜನಸಂಖ್ಯೆ ಹೆಚ್ಚಳ, ನಗರೀಕರಣ ಹಾಗೂ ಅನೇಕ…
ಕೊರೊನಾ ತಡೆಗೆ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮ: ಬೋಪಯ್ಯ
March 16, 2020ವಿರಾಜಪೇಟೆ, ಮಾ.15- ರಾಜ್ಯದಲ್ಲಿ ಈಗಾಗಲೇ ಕೊರೊನಾ ವೈರಸ್ ಸೋಂಕು ತಡೆಗೆ ಸರ್ಕಾರ ಸೂಕ್ತ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ ಎಂದು ಶಾಸಕ ಕೆ.ಜಿ.ಬೋಪಯ್ಯ ತಿಳಿಸಿದರು. ಇಲ್ಲಿನ ಪಪಂ ಪುರಭವನದಲ್ಲಿ ಶನಿ ವಾರ ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಕುರಿತು ಪಪಂ, ತಾಲೂಕು ಕಚೇರಿ, ಸ್ಥಳೀಯ ಮುಖ್ಯ ವೈದ್ಯರು ಹಾಗೂ ನಾಗರಿಕರ ಸಭೆಯಲ್ಲಿ ಮಾತನಾಡಿದ ಅವರು, ವಿಶ್ವ ದಾದ್ಯಂತ ವ್ಯಾಪಿಸಿರುವ ಈ ಕೊರೊನಾ ವೈರಸ್ ಬಗ್ಗೆ ಭಯ ಪಡುವ ಅಗತ್ಯವಿಲ್ಲ. ಈಗಾಗಲೇ ರಾಜ್ಯ ಸರ್ಕಾರ ಕೊರೊನಾ ತಡೆಗೆ…
ವಿದೇಶದಿಂದ ಬರುವವರ ಬಗ್ಗೆ ಮಾಹಿತಿ ನೀಡಲು ಡಿಸಿ ಮನವಿ
March 14, 2020ಮಡಿಕೇರಿ,ಮಾ.13-ಕೊಡಗು ಜಿಲ್ಲೆ ಯಲ್ಲಿ ಕೊರೊನಾ ಸೋಂಕಿನ ಪ್ರಕರಣ ಇದುವರೆಗೆ ವರದಿಯಾಗಿಲ್ಲ. ಆದರೂ ಒಬ್ಬರು ಕೊಡಗು ವೈದ್ಯಕೀಯ ಕಾಲೇಜು ಆಸ್ಪತ್ರೆಯ ವಿಶೇಷ ವಾರ್ಡ್ನಲ್ಲಿ ದಾಖಲಾಗಿದ್ದು, ಕೊರೊನಾ ಸಂಬಂಧಿಸಿದಂತೆ ವರದಿಗಾಗಿ ಕಾಯಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ. ನಗರದ ಜಿ.ಪಂ.ಕೆಡಿಪಿ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಕೊಡಗಿನಲ್ಲಿ ಈವರೆಗೂ ಕೊರೊನಾ ಸೋಂಕಿನ ಪ್ರಕರಣ ವರದಿ ಯಾಗಿಲ್ಲ. ದುಬೈನಿಂದ ಮರಳಿದ ವ್ಯಕ್ತಿ ಯೋರ್ವರಿಗೆ ಗಂಟಲು ನೋವು ಕಾಡಿದ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ಸ್ವಯಂ ದಾಖಲಾಗಿ ಪರೀಕ್ಷೆ…
ಕೊಡಗು ಜಿಲ್ಲೆಯಲ್ಲೂ ಸಭೆ ಸಮಾರಂಭ ನಡೆಸದಂತೆ ಸೂಚನೆ
March 14, 2020ಮಡಿಕೇರಿ,ಮಾ.13-ರಾಜ್ಯದಲ್ಲಿ ಕೋವಿಡ್-19 (ಕೊರೋನಾ) ವೈರಸ್ ನಿಂದ ವ್ಯಕ್ತಿ ಮೃತಪಟ್ಟ ಘಟನೆ ನಡೆದಿರುವ ಹಿನ್ನಲೆಯಲ್ಲಿ ರಾಜ್ಯ ಸರಕಾರ ಒಂದು ವಾರಗಳ ಕಾಲ ಹೆಚ್ಚು ಜನ ಸೇರುವ ಸಭೆ ಸಮಾರಂಭಗಳನ್ನು ನಡೆಸದಂತೆ ಸೂಚನೆ ನೀಡಿದ್ದು, ಕೊಡಗು ಜಿಲ್ಲೆಯಲ್ಲಿ ಈ ಕುರಿತು ಆತಂಕ ಪ್ರಾರಂಭವಾಗಿದೆ. ರಾಜ್ಯ ಸರಕಾರದ ಸೂಚನೆಯಂತೆ ಜಿಲ್ಲೆ ಯಲ್ಲೂ ಯಾವುದೇ ಸಭೆ ಸಮಾರಂಭ ನಡೆಸುವಂತಿಲ್ಲ. ಆದರೆ ಈಗಾಗಲೇ ಜಿಲ್ಲೆ ಯಲ್ಲಿ ಮದುವೆ, ನಾಮಕರಣ, ನಿಶ್ಚಿ ತಾರ್ಥ, ದೇವರ ಹಬ್ಬಗಳು, ದೇವಾಲಯ ಗಳ ವಾರ್ಷಿಕೋತ್ಸವ ಕೂಡ ನಡೆಯು ತ್ತಿದ್ದು, ಸಮಾರಂಭ…
ಶಿರಂಗಾಲದಲ್ಲಿ ಶ್ರೀ ಉಮಾಮಹೇಶ್ವರ ದೇವರ ರಥೋತ್ಸವ
March 10, 2020ಕುಶಾಲನಗರ,ಮಾ.9-ಸೋಮವಾರ ಪೇಟೆ ತಾಲೂಕಿನ ಅರೆಮಲೆನಾಡು ಹಾಗೂ ಬಯಲುಸೀಮೆ ಪ್ರದೇಶವಾದ ಶಿರಂಗಾಲ ಗ್ರಾಮದಲ್ಲಿ ಸೋಮವಾರ ಶ್ರೀ ಉಮಾ ಮಹೇಶ್ವರ ದೇವರ ರಥೋತ್ಸವ ವೈಭವ ಯುತವಾಗಿ ನಡೆಯಿತು. ಗ್ರಾಮದ ಕಾವೇರಿ ನದಿ ದಂಡೆಯ ಮೇಲೆ ಇರುವ ಶ್ರೀ ಉಮಾಮಹೇಶ್ವರ ದೇವಸ್ಥಾನವನ್ನು 9 ನೇ ಶತಮಾನದಲ್ಲಿ ಚೋಳರ ಒಂದನೇ ರಾಜ ರಾಜ ಜೋಳ ನಿರ್ಮಾಣ ಮಾಡಿದರು. ಪ್ರತಿ ಶಿವರಾತ್ರಿ ಯಂದು ವಿಶೇಷ ಪೂಜಾ ಕಾರ್ಯ ನಡೆ ಯುವುದರೊಂದಿಗೆ ಆ ದಿನದಂದು ಸೂರ್ಯೋದಯದ ಸೂರ್ಯನ ಕಿರಣಗಳು ನೇರವಾಗಿ ಉಮಾಮಹೇಶ್ವರ ದೇವ ಸ್ಥಾನದ ವಿಗ್ರಹದ…
ಪ್ರವಾಹ ಮುನ್ನೆಚ್ಚರಿಕೆಯಾಗಿ ಕಾವೇರಿ ನದಿ ತಟ ಪರಿಶೀಲನೆ ನಡೆಸಿದ ಅಪ್ಪಚ್ಚುರಂಜನ್
March 9, 2020ಕುಶಾಲನಗರ,ಮಾ.8-ಪಟ್ಟಣದ ಬೈಚನಹಳ್ಳಿ, ಮುಳ್ಳುಸೋಗೆ ಕೂಡುಮಂಗ ಳೂರು ವ್ಯಾಪ್ತಿಯ ಕಾವೇರಿ ನದಿ ತಟಗಳಿಗೆ ಭೇಟಿ ನೀಡಿದ ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ನದಿಯ ಸ್ಥಿತಿಗತಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಮಳೆಗಾಲದಲ್ಲಿ ಅತಿವೃಷ್ಠಿ ಸಂದರ್ಭ ಮುಳುಗಡೆಯಾಗಿದ್ದ ಪ್ರದೇಶಗಳಾದ ಕುಶಾಲನಗರ ಅಯ್ಯಪ್ಪಸ್ವಾಮಿ ದೇವಾ ಲಯ, ಬೈಚನಹಳ್ಳಿಯ ಮುತ್ತಪ್ಪ ದೇವಾ ಲಯ, ಮುಳ್ಳುಸೋಗೆ ಕುವೆಂಪು ಬಡಾ ವಣೆ, ಕೂಡ್ಲೂರು ಕೈಗಾರಿಕಾ ಪ್ರದೇಶದ ನದಿ ತಟಗಳಿಗೆ ಭೇಟಿ ನೀಡಿ ಅವರು ಪರಿಶೀಲಿಸಿದರು. ನದಿಯಲ್ಲಿ ಬೆಳೆದಿರುವ ಕಾಡು, ಮಣ್ಣಿನ ದಿಣ್ಣೆಗಳ ಬಗ್ಗೆ ಕುಶಾಲ ನಗರದ…
ಕೊಡವ ಮಹಿಳೆಯರಿಗೆ ಆಂತರಿಕ ಮೀಸಲಾತಿ ಖಾತ್ರಿಗೆ ಒತ್ತಾಯ
March 8, 2020ಮಡಿಕೇರಿ,ಮಾ.7-ದೇಶದ ರಾಜಕೀಯ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಸಂದರ್ಭ ಕೊಡವ ಮಹಿಳೆಯರಿಗೆ ಆಂತರಿಕ ಮೀಸಲಾತಿ ಖಾತ್ರಿ ಪಡಿಸಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಅಧ್ಯಕ್ಷ ಎನ್.ಯು. ನಾಚಪ್ಪ ಒತ್ತಾಯಿಸಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿ ರುವ ಅವರು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಂದರ್ಭ ಕೊಡವ ಮಹಿಳಾ ಸಬಲೀಕರಣದ ಬಗ್ಗೆ ಹೆಚ್ಚು ಆಸಕ್ತಿ ತೋರಿ ಸಿಎನ್ಸಿ ಸಂಘಟನೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಬಳಿ ಆಂತರಿಕ ಮೀಸಲಾತಿ ಗಾಗಿ ಒತ್ತಾಯಿಸುತ್ತಿರುವುದಾಗಿ ತಿಳಿಸಿದ್ದಾರೆ. ದೇಶದ ಸಂವಿಧಾನ ವಿವಿಧ…
ಗೋಣಿಕೊಪ್ಪಲಿನಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆ ಹೊರತುಪಡಿಸಿ ಬಜೆಟ್ನಲ್ಲಿ ಕೊಡಗು ಸಂಪೂರ್ಣ ಕಡೆಗಣನೆ
March 6, 2020ಮಡಿಕೇರಿ, ಮಾ.5- ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಡಿಸಿದ ಬಜೆಟ್ ಮೇಲ್ನೋಟಕ್ಕೆ ರೈತ ಪರವಾಗಿದೆ ಎನ್ನು ವಂತಿದೆ. ಕೃಷಿಕ ವರ್ಗಕ್ಕೆ ಸಾಕಷ್ಟು ಯೋಜನೆ ಗಳನ್ನು ಯಡಿಯೂರಪ್ಪ ಪ್ರಕಟಿಸಿದ್ದಾರೆ. 2 ಲಕ್ಷ 37 ಸಾವಿರದ 893 ಕೋಟಿ ರುಪಾಯಿ ಗಾತ್ರದ ಬಜೆಟ್ ಮಂಡಿಸಿದ ಸಿಎಂ ಯಡಿ ಯೂರಪ್ಪ, ಈ ಬಜೆಟ್ನಲ್ಲಿ ಜಿಲ್ಲಾವಾರು ಯೋಜನೆ ಬದಲಿಗೆ ವಿವಿಧ ಇಲಾಖೆಗಳ ಯೋಜನೆಗೆ ಒತ್ತು ನೀಡಿದ್ದಾರೆ. ಆದರೆ ಕೊಡಗು ಜಿಲ್ಲೆಯ ಜನರ ಬೇಡಿಕೆಗೆ ಯಾವುದೇ ಸ್ಪಂದನೆ ವ್ಯಕ್ತವಾಗಿಲ್ಲ ಎಂಬುದು ಬಜೆಟ್ ಅಂಕಿ ಅಂಶಗಳಿಂದ ಕಂಡು…
ಇಂದು ರಾಜ್ಯ ಬಜೆಟ್ ; ಬಹು ನಿರೀಕ್ಷೆಯಲ್ಲಿ ಜಿಲ್ಲೆಯ ಜನತೆ
March 5, 2020ಮಡಿಕೇರಿ,ಮಾ.4-ಮುಖ್ಯಮಂತ್ರಿ ಬಿ.ಎಸ್.ಯಡಿಯೂ ರಪ್ಪ ಮಾರ್ಚ್ 5ರಂದು ಬಜೆಟ್ ಮಂಡನೆ ಮಾಡಲಿದ್ದು, ಜಿಲ್ಲೆಯ ಜನರ ನಿರೀಕ್ಷೆಗಳು ಕೂಡ ಬೆಟ್ಟದಷ್ಟಿವೆ. ಕೊಡಗು ಜಿಲ್ಲೆಗೆ ಸಚಿವ ಸ್ಥಾನ ಬೇಕೆಂಬ ಕೂಗು ಕೂಡ ಇದ್ದು, ಇದೀಗ ಬಜೆಟ್ನಲ್ಲಿ ಕೊಡಗು ಜಿಲ್ಲೆಗೆ ವಿಶೇಷ ಪ್ಯಾಕೇಜ್ ಗಳು ದೊರೆಯಬಹುದೇ ಎಂಬ ಬಗ್ಗೆ ನಿರೀಕ್ಷೆ ಇಟ್ಟುಕೊಳ್ಳ ಲಾಗಿದೆ. ಕಳೆದ ಎರಡು ವರ್ಷಗಳಿಂದ ಕೊಡಗು ಜಿಲ್ಲೆ ಪ್ರಾಕೃತಿಕ ವಿಕೋಪಕ್ಕೆ ತುತ್ತಾಗುತ್ತಿದ್ದು, ಇಂದಿಗೂ 2018ರ ವಿಕೋಪದ ಕಾಮಗಾರಿಗಳು ಪೂರ್ಣಗೊಂಡಿಲ್ಲ. 2019ರ ಜಲ ಪ್ರಳಯಕ್ಕೆ ತುತ್ತಾದ ಕುಟುಂಬಗಳಿಗೆ ಸರಕಾರ ಪರಿಹಾರ ನೀಡಿದೆಯಾದರೂ,…