ವಿರಾಜಪೇಟೆ: ಮನುಷ್ಯನ ಜೀವ ಉಳಿಸಲು ರಕ್ತದ ಅವಶ್ಯಕತೆ ಇರುವುದರಿಂದ 18 ವಯಸ್ಸಿನ ಮೇಲ್ಪಟ್ಟ ವಿದ್ಯಾರ್ಥಿಗಳು ಹಾಗೂ ಪ್ರತಿಯೊಬ್ಬರು ರಕ್ತದಾನ ಮಾಡುವ ಮೂಲಕ ಮತ್ತೊಂದು ಜೀವವನ್ನು ಉಳಿಸಬೇಕಾಗಿದೆ ಎಂದು ಭಾರತ ಸ್ಕೌಟ್ಸ್-ಗೈಡ್ಸ್ನ ಜಿಲ್ಲಾ ಪ್ರದಾನ ಆಯುಕ್ತ ಕಂಬಿರಂಡ ಕಿಟ್ಟು ಕಾಳಪ್ಪ ಹೇಳಿದರು. ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಯುವ ರೆಡ್ಕ್ರಾಸ್ ಘಟಕ, ರೋವರ್ಸ್ ಆಂಡ್ ರೇಂಜರ್ಸ್ ಘಟಕ ಮತ್ತು ರೆಡ್ ರಿಬ್ಬನ್ ಕ್ಲಬ್ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ರಕ್ತದಾನ ಶಿಬಿರ’ದಲ್ಲಿ ಕಿಟ್ಟು ಕಾಳಪ್ಪ ಮಾತನಾಡಿ, ನಾನು…
ಒಣ ಹುಲ್ಲು ಮಾರಾಟ ನಿರ್ಬಂಧ ಸಡಿಲಗೊಳಿಸಲು ಡಿಸಿಗೆ ರೈತ ಸಂಘ ಮನವಿ
February 10, 2019ಗೋಣಿಕೊಪ್ಪಲು: ರೈತರ ವಿವಿಧ ಸಮಸ್ಯೆಗಳನ್ನು ಬಗೆ ಹರಿಸುವಂತೆ ಒತ್ತಾ ಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯ ಕ್ಷರಾದ ಕಾಡ್ಯಮಾಡ ಮನು ಸೋಮಯ್ಯ ಮುಂದಾಳತ್ವದಲ್ಲಿ ರೈತ ಮುಖಂಡರ ನಿಯೋಗ ತೆರಳಿ ಕೊಡಗು ಜಿಲ್ಲೆಯ ನೂತನ ಜಿಲ್ಲಾ ಧಿಕಾರಿಗಳಾದ ಕಣ್ಮಣಿ ಜಾಯ್ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಜಿಲ್ಲೆಯ ರೈತರು ತಮ್ಮ ಗದ್ದೆಗÀಳಲ್ಲಿ ಬೆಳೆದ ಭತ್ತದ ಒಣ ಹುಲ್ಲನ್ನು ತಮ್ಮ ಕಣಗಳಲ್ಲಿ ಶೇಖರಿಸಿಟ್ಟಿದ್ದು ಇವುಗಳನ್ನು ವಿಲೇವಾರಿ ಮಾಡಲು ಕಾನೂನಿನ ತೊಡಕಿದ್ದು ಇದನ್ನು…
ಟೆಂಪೋ ಟ್ರಾವೆಲರ್-ಬೈಕ್ ಮುಖಾಮುಖಿ ಡಿಕ್ಕಿ ಸವಾರ ಸಾವು
February 10, 2019ಮಡಿಕೇರಿ: ಟೆಂಪೋ ಟ್ರಾವೆ ಲರ್ ಮತ್ತು ಬೈಕ್ ನಡುವೆ ಮುಖಾ ಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸುಂಟಿಕೊಪ್ಪ ಸಮೀಪದ ಶಾಂತಿಗೇರಿ ಎಸ್ಟೇಟ್ ಬಳಿ ನಡೆದಿದೆ. ಮೈಸೂರು-ಹೆಚ್.ಡಿ.ಕೋಟೆ ರಸ್ತೆಯ ಮಾದ್ರಳ್ಳಿ ಗ್ರಾಮದ ನಿವಾಸಿ ಬಸವ(32) ಎಂಬಾತನೇ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಬೈಕ್ಗೆ ಡಿಕ್ಕಿ ಹೊಡೆದ ಬಳಿಕ ಟೆಂಪೋ ಟ್ರಾವೆಲರ್ ವಾಹನ ರಾಷ್ಟ್ರೀಯ ಹೆದ್ದಾರಿ ಬದಿ ಯಿದ್ದ ಜಾಹೀರಾತು ಫಲಕಕ್ಕೆ ಡಿಕ್ಕಿ ಹೊಡೆದು ನಿಂತಿದ್ದು, ಅಪ ಘಾತದ ತೀವ್ರತೆಗೆ ಸಾಕ್ಷಿ ಹೇಳುತ್ತಿದೆ. ಘಟನೆ…
ಬಜೆಟ್ನಲ್ಲಿ ಕೊಡವ ಸಮುದಾಯಕ್ಕೆ ಕೊಡುಗೆ: ರಾಜ್ಯ ಸರ್ಕಾರಕ್ಕೆ ಕೊಡವ ಸಮಾಜಗಳ ಒಕ್ಕೂಟ ಕೃತಜ್ಞತೆ
February 10, 2019ಮಡಿಕೇರಿ: ಕೊಡವ ಸಮುದಾಯದ ಏಳಿಗೆಗಾಗಿ ರೂ.10 ಕೋಟಿ ಮತ್ತು ಕೊಡಗಿನ ಹಾಕಿಪಟುಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ವಿರಾಜಪೇಟೆಯ ಬಾಳುಗೋಡು ವಿನಲ್ಲಿ ಖಾಯಂ ಹಾಕಿ ಕ್ರೀಡಾಂಗಣ ನಿರ್ಮಾಣಕ್ಕೆ 5 ಕೋಟಿ ರೂ.ಗಳನ್ನು ಘೋಷಿಸಿರುವ ರಾಜ್ಯ ಸರ್ಕಾರಕ್ಕೆ ಕೊಡವ ಸಮಾಜಗಳ ಒಕ್ಕೂಟ ಕೃತಜ್ಞತೆ ಸಲ್ಲಿಸಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ಹಾಗೂ ಮುಕ್ಕಾಟಿರ ಕುಟುಂಬದ ಮುಖ್ಯಸ್ಥ, ನಿವೃತ್ತ ಪೊಲೀಸ್ ಅಧಿಕಾರಿ ಮುಕ್ಕಾಟಿರ ಉತ್ತಯ್ಯ ಅವರಿಗೆ ಒಕ್ಕೂಟ ಆಭಾರಿಯಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ…
ರಾಜ್ಯ ಬಜೆಟ್: ಕೊಡಗು ಜಿಲ್ಲೆಗೆ ನೀಡದ ವಿಶೇಷ ಅನುದಾನ
February 9, 2019ಕೊಡಗಿನಾದ್ಯಂತ ಸಾರ್ವಜನಿಕರ ಅಸಮಾಧಾನ 450 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ 100 ಕೋಟಿ ರೂ. ಹಾರಂಗಿ ಜಲಾನಯನ ಪುನಶ್ಚೇತನಕ್ಕೆ 75 ಕೋಟಿ ರೂ. ಮಡಿಕೇರಿ: ರಾಜ್ಯ ಸಮ್ಮಿಶ್ರ ಸರಕಾರದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮಂಡಿಸಿದ ರಾಜ್ಯ ಬಜೆಟ್ ನಲ್ಲಿ ಕೊಡಗಿನ ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪ ಮಾಡದಿರುವ ಕ್ರಮಕ್ಕೆ ಸಾರ್ವಜನಿಕ ವಲಯದಿಂದ ಅಸಮಾಧಾನ ವ್ಯಕ್ತಗೊಂಡಿದೆ. ಕೊಡಗು ಪುನರ್ ನಿರ್ಮಾಣ ಪ್ರಾಧಿಕಾರದ ದೈನಂದಿನ ಕಾರ್ಯ ಚಟುವಟಿಕೆಗಳಿಗೆ ಮಾತ್ರವೇ 2 ಕೋಟಿ. ರೂ.ಗಳನ್ನು ಮೀಸಲಿರಿಸಲಾ ಗಿದೆ. ಸಂತ್ರಸ್ತರ ಮನೆಗಳ…
ನಿರಾಶ್ರಿತರಿಗೆ ಹಕ್ಕು ಪತ್ರ ನೀಡಲು ಆಗ್ರಹಿಸಿ ಪ್ರತಿಭಟನೆ
February 9, 2019ಮಡಿಕೇರಿ: ಜಿಲ್ಲೆಯ ಮಡಿಕೇರಿ ಸೇರಿದಂತೆ 3 ತಾಲೂಕುಗಳ ಬಡ ನಿರಾ ಶ್ರಿತರಿಗೆ 94ಸಿ ಹಾಗೂ 94ಸಿಸಿ ಅಡಿ ಹಕ್ಕು ಪತ್ರ ನೀಡದೆ ತಹಶೀಲ್ದಾರರು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರೋಪಿಸಿ ಬಹು ಜನ ಕಾರ್ಮಿಕರ ಸಂಘ ಹಾಗೂ ಸೋಶಿ ಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಘಟನೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಗಾಂಧಿ ಮೈದಾನದಿಂದ ಜಿಲ್ಲಾಡಳಿತ ಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಹಕ್ಕು ಪತ್ರ ವಂಚಿತರು ಹಾಗೂ ಸಂಘಟನೆಗಳ ಕಾರ್ಯಕರ್ತರು ತಾಲೂಕು ಆಡಳಿತದ ವಿರುದ್ಧ ಅಸಮಾಧಾನ…
ಸೋಮವಾರಪೇಟೆಯಲ್ಲಿ ಜಂತು ಹುಳು ನಿವಾರಣಾ ದಿನಾಚರಣೆ
February 9, 2019ಸೋಮವಾರಪೇಟೆ: ರಾಷ್ಟ್ರೀಯ ಜಂತುಹುಳು ನಿವಾ ರಣಾ ದಿನಾಚರಣೆ ಯನ್ನು ಇಲ್ಲಿಗೆ ಸಮೀ ಪದ ಚೌಡ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲೆಕಟ್ಟೆ-ಕಲ್ಲಾರೆ ಹಾಗೂ ಚೌಡ್ಲು-ಆಲೆಕಟ್ಟೆ ಅಂಗ ನವಾಡಿ ಕೇಂದ್ರಗಳಲ್ಲಿ ಆಚರಿಸಲಾಯಿತು. ಅಂಗನವಾಡಿ ಮಕ್ಕಳಿಗೆ ಚೌಡ್ಲು ಗ್ರಾಮ ಪಂಚಾಯಿತಿ ಸದಸ್ಯೆ ಮಂಜುಳಾ ಸುಬ್ರಮಣಿ ಜಂತುಹುಳು ನಾಶಕ ಮಾತ್ರೆಗಳನ್ನು ನೀಡುವ ಮೂಲಕ ಚಾಲನೆ ನೀಡಿದರು. ನಂತರ ಅವರು ಮಾತನಾಡಿ, ಮಕ್ಕಳ ಆರೋಗ್ಯವನ್ನು ಕಾಪಾಡಿಕೊಳ್ಳಲು ನಿಗದಿತ ಕಾಲ ಕಾಲಕ್ಕೆ ಜಂತುಹುಳು ನಿವಾ ರಣೆಯ ಮಾತ್ರೆಗಳನ್ನು ನೀಡಬೇಕು. ಇದರಿಂದ ಅಪೌಷ್ಠಿಕತೆ ಹಾಗೂ ರಕ್ತ ಹೀನತೆಗೆ…
ಪ್ರಕೃತಿ ವಿಕೋಪ ಕಾಮಗಾರಿ ಪೂರ್ಣಗೊಳಿಸಲು ಸೂಚನೆ
February 7, 2019ಮಡಿಕೇರಿ: ಇನ್ನೆರಡು ತಿಂಗ ಳಲ್ಲಿ ಮುಂಗಾರು ಮಳೆ ಆರಂಭವಾಗ ಲಿದ್ದು, ಪ್ರಕೃತಿ ವಿಕೋಪ ಸಂಬಂಧ ಈಗಾ ಗಲೇ ಕೈಗೊಳ್ಳಲಾಗಿರುವ ಮನೆ ಸೇರಿದಂತೆ ರಸ್ತೆ, ಸೇತುವೆ, ತಡೆಗೋಡೆ ಮತ್ತಿತರ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣ ಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಬುಕುಮಾರ್ ಸ್ಪಷ್ಟ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲೋಕೋಪಯೋಗಿ, ಪಂಚಾಯತ್ ರಾಜ್, ನಗರಾಭಿವೃದ್ಧಿ, ಸಣ್ಣ ನೀರಾವರಿ ಹೀಗೆ ನಾನಾ ಇಲಾಖೆಗಳ ಮೂಲಕ ಕೈಗೊಳ್ಳಲಾಗಿರುವ…
ಹೆಗ್ಗಳ ಶಾಲೆಯಲ್ಲಿ ಸೈಕಲ್ ವಿತರಣೆ
February 7, 2019ವಿರಾಜಪೇಟೆ: ವಿದ್ಯಾರ್ಥಿಗಳು ಕನ್ನಡ ಪಾಠದೊಂದಿಗೆ ಅಗತ್ಯವಾಗಿರುವ ಇಂಗ್ಲಿಷ್ ಭಾಷೆಯನ್ನು ಕಲಿಯುವ ಮೂಲಕ ಜೀವನದಲ್ಲಿ ಸಾಧನೆ ಮಾಡಬೇಕೆಂಬ ಗುರಿಯನ್ನು ಇಟ್ಟುಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವಂತಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ ಹೇಳಿದರು. ವಿರಾಜಪೇಟೆ ಸಮೀಪದ ಹೆಗ್ಗಳ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾಮೀಣ sÁಗದಲ್ಲಿರುವ ವಿದ್ಯಾರ್ಥಿಗಳು ತಪ್ಪದೆ ಶಾಲೆಗೆ ಬರಬೇಕೆಂಬ ಉದ್ದೇಶದಿಂದ ಸರಕಾರ ಸೈಕಲ್ ನೀಡುತ್ತದೆ. ಇದನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಂಡು ತಮ್ಮಲ್ಲಿರುವ…
ರಸ್ತೆ ಸುರಕ್ಷತೆ ಬಗ್ಗೆ ನಿಗಾವಹಿಸಲು ಕರೆ
February 7, 2019ಮಡಿಕೇರಿ: ಪ್ರಾದೇಶಿಕ ಸಾರಿಗೆ ಕಚೇರಿ ವತಿಯಿಂದ 30ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಗುರುವಾರ ನಡೆಯಿತು. ನಗರದ ಜಿಲ್ಲಾಡಳಿತ ಭವನದಲ್ಲಿ ಸಪ್ತಾಹ ಜಾಥಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಚಾಲನೆ ನೀಡಿದರು. ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರ ರಾಜ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಸೌಂದರ್ಯ ಇತರರು ಇದ್ದರು. ಆಟೋ ಚಾಲಕರ ಸಂಘದ ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಆಟೋ ಅಸೋಷಿಯೇಷನ್, ಟ್ಯಾಕ್ಸಿ ಅಸೋಷಿಯೇಷನ್, ಡ್ರೈವಿಂಗ್ ಸ್ಕೂಲ್ ಸಂಘ ಜಾಥದಲ್ಲಿ ಪಾಲ್ಗೊಂಡು ರಸ್ತೆ ಸುರಕ್ಷತೆ ಬಗ್ಗೆ ಅರಿವು…