ಮಡಿಕೇರಿ: ಹಿರಿಯ ನಾಗರಿಕರ ವೇದಿಕೆಯ ಸಾಮಾನ್ಯ ಸಭೆಯು ಅಧ್ಯಕ್ಷ ಕೊಂಗಾಂಡ ಎ.ತಿಮ್ಮಯ್ಯ ಅಧ್ಯಕ್ಷತೆಯಲ್ಲಿ ಜ.19 ರಂದು ಬೆಳಗ್ಗೆ 10 ಗಂಟೆಗೆ ಸಿದ್ದಾಪುರ ರಸ್ತೆಯಲ್ಲಿರುವ ಕ್ಯಾಪಿಟಲ್ ವಿಲೇಜ್ನಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಮನೋಹರ್ ಜಿ.ಪಾಟ್ಕರ್, ಆಕಾಶವಾಣಿ ಉದ್ಘೋಷಕ ಸುಬ್ರಾಯ ಸಂಪಾಜೆ ಇತರರು ಪಾಲ್ಗೊಳ್ಳಲಿದ್ದಾರೆ. ಹೆಚ್ಚಿನ ಮಾಹಿತಿಗೆ 9448422279, 9972167576 ಮತ್ತು 9448292477 ನ್ನು ಸಂಪರ್ಕಿಸಬಹುದು.
ನಾಳೆ ಕುಶಾಲನಗರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
January 18, 2019ಮಡಿಕೇರಿ:ಕುಶಾಲನಗರ ವಿದ್ಯುತ್ ಉಪ-ಕೇಂದ್ರದಲ್ಲಿ ಕಾಮಗಾರಿ ಹಮ್ಮಿ ಕೊಂಡಿರುವುದರಿಂದ ಜನವರಿ 20 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಕೂಡು ಮಂಗಳೂರು, ಕೂಡ್ಲೂರು, ಕೂಡಿಗೆ, ಶಿರಂಗಾಲ, ಹಾರಂಗಿ, ಯಡವನಾಡು, ಸೀಗೆಹೊಸೂರು, ಹೆಬ್ಬಾಲೆ, ತೊರೆನೂರು, ಶಿರಂಗಾಲ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಏಕಮುಖ ಸಂಚಾರ ವಿರೋಧಿಸಿ ಗೋಣಿಕೊಪ್ಪ ಬಂದ್
January 17, 2019ಗೋಣಿಕೊಪ್ಪಲು: ಪಟ್ಟಣದ ಮುಖ್ಯ ರಸ್ತೆಯಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನ ಗೊಳಿಸಿರುವ ಏಕಮುಖ ಸಂಚಾರಕ್ಕೆ ವಿರೋಧ ವ್ಯಕ್ತಪಡಿಸಿ ಕೆಲ ವರ್ತಕರು ಕರೆದಿದ್ದ ಸ್ವಯಂ ಘೋಷಿತ ಬಂದ್ ಕರೆಗೆ ಉತ್ತಮ ಪ್ರತಿ ಕ್ರಿಯೆ ವ್ಯಕ್ತವಾಯಿತು. ಪಟ್ಟಣದ 6-7 ವರ್ತಕರನ್ನು ಹೊರತು ಪಡಿಸಿ ಪಟ್ಟಣ ಸಂಪೂರ್ಣ ಬಂದ್ ಮಾಡ ಲಾಗಿತ್ತು. ಬೆಳಗ್ಗೆ 6 ರಿಂದ ಸಂಜೆ 6ರವರೆಗೂ ಅಂಗಡಿ-ಮುಂಗಟ್ಟು ಮುಚ್ಚಲಾಗಿತ್ತು. ಹರಿಶ್ಚಂದ್ರಪುರದಿಂದ ಉಮಾಮಹೇ ಶ್ವರಿ ದೇವಾಲಯದವರೆಗೂ ಅಂಗಡಿ-ಮುಂಗಟ್ಟು ಮುಚ್ಚಲಾಗಿತ್ತು. ವಾಹನ, ಆಟೋ, ಖಾಸಗಿ ಬಸ್ ಸೇವೆ ಎಂದಿನಂತೆ ಸೇವೆ ನೀಡಿದ ಕಾರಣ ಸಾರ್ವಜನಿಕರಿಗೆ…
ಕೊಡಗು ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ಸರ್ಕಾರ ವಿಫಲ
January 17, 2019ವೀರಾಜಪೇಟೆ: ಕೊಡಗಿನಲ್ಲಿ ಇತ್ತೀಚೆಗೆ ನಡೆದ ಪ್ರಕೃತಿ ವಿಕೋಪದಿಂದ ಬೆಳೆ, ಆಸ್ತಿ ಮನೆಗಳನ್ನು ಕಳೆದುಕೊಂಡು ಐದು ತಿಂಗಳುಗಳು ಕಳೆದರೂ ಇದು ವರೆಗೆ ಸಂತ್ರಸ್ತರಿಗೆ ಪರಿಹಾರವನ್ನು ಒದ ಗಿಸದೆ ಇರುವುದು ಸರಕಾರದ ವೈಫಲ್ಯ ತೆಯನ್ನು ತೋರುತ್ತದೆ ಎಂದು ಅಖಿಲ ಕೊಡವ ಸಮಾಜದ ಅಧ್ಯಕ್ಷ ಮಾತಂಡ ಮೊಣ್ಣಪ್ಪ ಹೇಳಿದರು. ಅಖಿಲ ಕೊಡವ ಸಮಾಜದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಮಾತಂಡ ಮೊಣ್ಣಪ್ಪ, ಪ್ರಕೃತಿ ವಿಕೋಪ ನಡೆದ ಸಂದರ್ಭ ಜನರ ಕಷ್ಟಗಳಿಗೆ ಸ್ಪಂದಿಸಿದವರು ಆನಂ ತರದ ದಿನಗಳಲ್ಲಿ ಪರಿಹಾರ ಕಾರ್ಯಗಳು ಕುಂಟುತ್ತಾ ಸಾಗುತ್ತಿದೆ. ಕೇವಲ…
ಕುಶಾಲನಗರದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
January 17, 2019ಕುಶಾಲನಗರ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರವನ್ನು ಅತಂತ್ರ ಸ್ಥಿತಿಗೆ ತರಲು ಆಪರೇಷನ್ ಕಮಲದ ಮೂಲಕ ಶಾಸಕರನ್ನು ಖರೀದಿ ಮಾಡಲು ಬಿಜೆಪಿ ಯತ್ನಿಸಿ ವಿಫಲವಾಗಿದೆ ಎಂದು ದೂರಿದ ಕಾಂಗ್ರೆಸ್ ಕಾರ್ಯ ಕರ್ತರು ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ನೇತೃತ್ವದಲ್ಲಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಜಮಾಯಿಸಿದ ಪಕ್ಷದ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ರಾಜ್ಯಾ ಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಧಿಕ್ಕಾರ…
ಮತದಾರರ ಪಟ್ಟಿ ಪರಿಷ್ಕರಣೆ; ಜಿಲ್ಲೆಯಲ್ಲಿ 4,34,256 ಮತದಾರರು
January 16, 2019ಮಡಿಕೇರಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಭಾವಚಿತ್ರ ವಿರುವ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2019 ರ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಅಂತಿಮ ಮತ ದಾರರ ಪಟ್ಟಿಯಲ್ಲಿ ಒಟ್ಟು 4,34,256 ಮತದಾರರಿದ್ದಾರೆ. ಹೊಸದಾಗಿ 5,444 ಮತದಾರರು (2502 ಪುರುಷರು ಹಾಗೂ 2942 ಮಹಿಳೆಯರು) ಸೇರ್ಪಡೆಯಾಗಿ ದ್ದಾರೆ. ಜೊತೆಗೆ 6,449 ಮತದಾರರನ್ನು (ಮೃತ, ಸ್ಥಳಾಂತರ ಮತ್ತು ಪುನರಾವರ್ತನೆ ಗೊಂಡಿರುವ ಕಾರಣಗಳಿಂದ) ಮತದಾ ರರ ಪಟ್ಟಿಯಿಂದ ಕೈಬಿಡಲಾಗಿರುತ್ತದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶ್ರೀನಿ ವಾಸ್ ಮಾಹಿತಿ ನೀಡಿದ್ದಾರೆ. ನಗರದ…
ಆಪರೇಷನ್ ಷಡ್ಯಂತ್ರದ ಹಿಂದೆ ಮೋದಿ ಕೈವಾಡ
January 16, 2019ಮಡಿಕೇರಿ: ಪ್ರಧಾನಿ ಮೋದಿಗೆ ಅಭದ್ರತೆ ಕಾಡುತ್ತಿರುವುದರಿಂದಾಗಿಯೇ ಕರ್ನಾಟಕದಲ್ಲಿ ಬಿಜೆಪಿ ಬೇರೆ ಪಕ್ಷಗಳ ಶಾಸಕರನ್ನು ಸೆಳೆ ಯುವ ಕುತಂತ್ರ ರೂಪಿಸಿದ್ದು, ಈ ಷಡ್ಯಂತ್ರದ ಹಿಂದೆ ಮೋದಿ ಕೈವಾಡವಿದೆ ಎಂದು ಕಾಂಗ್ರೆಸ್ನ ಹಿರಿಯ ಮುಖಂಡ ಎಂ.ಸಿ. ನಾಣಯ್ಯ ಆರೋಪಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಸಿ. ನಾಣಯ್ಯ, ಗೋರೆಗಾಂವ್ನಲ್ಲಿ ಬಿಜೆಪಿ ಶಾಸಕರನ್ನು ಸೆರೆ ಮನೆಯಲ್ಲಿಟ್ಟಂತೆ ಕೂಡಿಟ್ಟಿರುವ ವಿದ್ಯಾಮಾನಗಳು, ಬೇರೆ ಪಕ್ಷಗಳಿಂದ ಶಾಸಕರನ್ನು ಖರೀದಿಸುತ್ತಿರುವ ಬೆಳವಣಿಗೆಗಳು ಪ್ರಧಾನಿಗೆ ತಿಳಿದಿ ಲ್ಲವೇ. ಈ ಎಲ್ಲಾ ರಾಜಕೀಯ ಪ್ರಧಾನಿಗೆ ಸ್ಪಷ್ಟವಾಗಿ ತಿಳಿದಿದ್ದರೂ ಲೋಕಸಭಾ ಚುನಾವಣೆ ಯನ್ನು…
ಜೆಡಿಎಸ್ನೊಂದಿಗೆ ಸರ್ಕಾರ ರಚಿಸಬಾರದಿತ್ತು
January 16, 2019ಮಡಿಕೇರಿ: ರಾಜ್ಯ ರಾಜಕೀಯದಲ್ಲಿನ ಬೆಳವಣಿಗೆಗಳು ಅಸಹ್ಯ ಹುಟ್ಟಿಸುವಂತಿದೆ. ಇಂದಿನ ರಾಜಕಾರಣಿಗಳ ಅಧಿಕಾರದ ಆಸೆ ಖಂಡಿತ ರಾಜಕೀಯ ರಂಗಕ್ಕೆ ಮಾದರಿಯಾಗಲಾರದು ಎಂದು ಪ್ರತಿಕ್ರಿಯಿಸಿರುವ ವಿಧಾನ ಪರಿ ಷತ್ ಮಾಜಿ ಸದಸ್ಯ, ಕಾಂಗ್ರೆಸ್ ಹಿರಿಯ ಮುಖಂಡ ಬಿ.ಎ. ಹಸನಬ್ಬ, ಜೆಡಿಎಸ್ ಜತೆ ಕಾಂಗ್ರೆಸ್ ಮೈತ್ರಿ ಸರಕಾರ ರಚಿಸಬಾರದಿತ್ತು ಎಂದು ಹೇಳಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಬಿ.ಎ. ಹಸನಬ್ಬ, ನಿರೀಕ್ಷಿತ ಸ್ಥಾನಗಳು ಬಾರದಿದ್ದಾಗ ವಿಪಕ್ಷದಲ್ಲಿಯೇ ಇರುವುದು ಸೂಕ್ತ ಎಂಬ ಕಾಂಗ್ರೆಸ್ ಕಾರ್ಯಕರ್ತನ ಮನಸ್ಸಿನ ಅಭಿಪ್ರಾಯಕ್ಕೆ ಸ್ಪಂದಿಸದೇ ಜೆಡಿಎಸ್ ಜತೆ ಸೇರಿ ಕಾಂಗ್ರೆಸ್…
ರಾಜ್ಯ ಸರ್ಕಾರ ಸುಭದ್ರವಾಗಿದೆ; ಸಚಿವ ಖಾದರ್
January 16, 2019ಮಡಿಕೇರಿ: ರಾಜ್ಯ ಸರ್ಕಾರ ಯಾವುದೇ ಸಂಕಷ್ಟಕ್ಕೆ ಒಳಗಾಗಿಲ್ಲ, ಸರ್ಕಾರ ಸುಭದ್ರವಾಗಿದೆ, ಸರ್ಕಾರವನ್ನು ಅಸ್ಥಿರ ಗೊಳಿಸುವ ಬಿಜೆಪಿಯ ಎಲ್ಲಾ ಪ್ರಯತ್ನ ಗಳು ವ್ಯರ್ಥವಾಗಿದೆ ಎಂದು ರಾಜ್ಯ ನಗರಾ ಭಿವೃದ್ಧಿ ಸಚಿವ ಯು.ಟಿ.ಖಾದರ್ ಹೇಳಿದರು. ಮಡಿಕೇರಿಯ ಸುದರ್ಶನ ಅತಿಥಿ ಗೃಹ ದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯದ್ದು ಇದು ಮೊದಲ ಪ್ರಯತ್ನವಲ್ಲ, ಈ ಹಿಂದೆಯೂ ಸರ್ಕಾರ ವನ್ನು ಅತಂತ್ರಗೊಳಿಸುವ ಪ್ರಯತ್ನ ಮಾಡಿ ಅದು ವಿಫಲವಾಗಿದೆ ಎಂದರು. ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ, ಬಿಜೆಪಿ ಶಾಸಕರಿಗೆ ಹಬ್ಬವೇ ಇಲ್ಲದ ಪರಿಸ್ಥಿತಿ ನಿರ್ಮಾ ಣವಾಗಿದೆ….
ರೇವ್ ಪಾರ್ಟಿ ಪ್ರಕರಣ: ಆರೋಪಿಗಳಿಗೆ ಜಾಮೀನು
January 16, 2019ಮಡಿಕೇರಿ: ನಾಪೋಕ್ಲು ಸಮೀಪದ ನೆಲಜಿ ಗ್ರಾಮದ ಹೋಂ ಸ್ಟೆ ಒಂದರಲ್ಲಿ ರೇವ್ ಪಾರ್ಟಿ ನಡೆಸಿ ನಿಷೇಧಿತ ಮಾದಕ ವಸ್ತುಗಳನ್ನು ಸರಬರಾಜು ಮಾಡಿದ ಆರೋಪದಲ್ಲಿ ಬಂಧಿಸಲ್ಪಟ್ಟಿದ್ದ 5 ಮಂದಿ ಆರೋಪಿಗಳಿಗೆ ನ್ಯಾಯಾಲಯ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ಜ.12 ರಂದು ರೇವ್ ಪಾರ್ಟಿಯಲ್ಲಿ ತೊಡಗಿದ್ದ ಆರೋಪಿಗಳ ಪೈಕಿ ಮುಂಬೈನ ಶಂಕರ್ ಶಾಂತನು(29) ಎಂಬಾತ ಆಕ್ಸಿಸ್ ಬ್ಯಾಂಕಿನ ಮುಂಬೈ ಪಶ್ಚಿಮ ಶಾಖೆಯ ಆಡಳಿತಾಧಿಕಾರಿ ಎಂದು ಜಿಲ್ಲಾ ಅಪರಾಧ ಪತ್ತೆ ದಳದ ಪೊಲೀಸರು ಖಚಿತಪಡಿಸಿದ್ದಾರೆ. ಮತ್ತೋರ್ವ ಆರೋಪಿ ಜೂಡ್ ಪೆರೇರ(32)…