ನಾಪೋಕ್ಲು, ಜ.8- ಚೆರಿಯಪರಂಬು ಕಾವೇರಿ ನದಿ ದಡದ ಸಮೀಪದಲ್ಲಿ ಮಡಿಕೇರಿಯ ಹೋಂಸ್ಟೇವೊಂದರ ತ್ಯಾಜ್ಯಗಳನ್ನು ತಂದು ಸುರಿಯುತ್ತಿದ್ದವರಿಗೆ ಗ್ರಾಮ ಪಂಚಾಯಿತಿ ಆಡಳಿತ 5,000 ರೂ. ದಂಡ ವಿಧಿಸಿದ ಘಟನೆ ನಡೆದಿದೆ. ಮಡಿಕೇರಿಯ ಹೋಂ ಸ್ಟೇವೊಂದರ ತ್ಯಾಜ್ಯಗಳನ್ನು ದೊಡ್ಡ, ದೊಡ್ಡ ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿಸಿ ಟಾಟಾ ಏಸ್ ವಾಹನದಲ್ಲಿ ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆರಿಯಪರಂಬು ಪಂಚಾಯಿತಿ ಕಸ ವಿಲೇವಾರಿ ಜಾಗದಲ್ಲಿ ತಂದು ಸುರಿಯಲಾಗುತ್ತಿತ್ತು. ಈ ಬಗ್ಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ, ಉಪಾಧ್ಯಕ್ಷ ಕಾಳೆಯಂಡ ಸಾಬ ತಿಮ್ಮಯ್ಯ…
ಎಟಿಎಂಗೆ ಹಣ ತುಂಬುವ ಸಿಬ್ಬಂದಿ ಎಡವಟ್ಟು ಗ್ರಾಹಕರ ಕೈ ಸೇರಿತು ಐದು ಪಟ್ಟು ಹಣ
January 9, 2020ಪೊಲೀಸರಿಗೆ ದೂರು ನೀಡಿ ಗ್ರಾಹಕರಿಂದ ಹಣ ವಸೂಲಿ ಮಾಡಿದ ಬ್ಯಾಂಕ್ ಮಡಿಕೇರಿ, ಜ.8- ನಗರದ ಕೆನರಾ ಬ್ಯಾಂಕ್ ಎಟಿಎಂ ಕೇಂದ್ರ ಒಂದರಲ್ಲಿ ಅದಕ್ಕೆ ಹಣ ತುಂಬುವ ಸಿಬ್ಬಂದಿ ಮಾಡಿದ್ದ ಎಡವಟ್ಟಿನಿಂದ ಹತ್ತು ಹಲವು ಮಂದಿ ತಾವು ಪಡೆಯಬೇಕಿದ್ದ ಹಣಕ್ಕಿಂತ ಐದು ಪಟ್ಟು ಹೆಚ್ಚು ಹಣವನ್ನು ಪಡೆದುಕೊಂಡ ಪ್ರಕರಣ ಬೆಳಕಿಗೆ ಬಂದಿದೆ. ಕೆಲವು ಗ್ರಾಹಕರು ಹಣವನ್ನು ಹಿಂದಿರುಗಿಸಲು ಹಿಂದೇಟು ಹಾಕಿದ್ದರಿಂದ ಈ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇ ರಿತ್ತು. ಹಣವನ್ನು ಡ್ರಾ ಮಾಡಿದ್ದ ವ್ಯಕ್ತಿಗಳು ಪೊಲೀಸ ರಿಗೆ ಹೆದರಿ…
7ನೇ ಆರ್ಥಿಕ ಗಣತಿಗೆ ಮೊಬೈಲ್ ಆ್ಯಪ್ ಬಿಡುಗಡೆ
January 8, 2020ಜಿಲ್ಲೆಯಲ್ಲಿ ಜನವರಿಯಿಂದ ಮಾರ್ಚ್ವರೆಗೆ ಗಣತಿ ಕಾರ್ಯ, ಕಾರ್ಯಕ್ರಮ ಯಶಸ್ವಿಗೆ ಜಿಲ್ಲಾಧಿಕಾರಿ ಸೂಚನೆ ಮಡಿಕೇರಿ, ಜ.7- ಜಿಲ್ಲೆಯಾದ್ಯಂತ 7ನೇ ಆರ್ಥಿಕ ಗಣತಿಯನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಮಂಗಳವಾರ ಕೇಂದ್ರ ಸರ್ಕಾ ರದ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಇಲಾಖೆಯ 7ನೇ ಆರ್ಥಿಕ ಗಣತಿ ‘ಡಿಜಿಟಲ್ ಇಂಡಿಯಾ’ ಕಾರ್ಯ ಕ್ರಮದಡಿ ಜಿಲ್ಲಾ ಮಟ್ಟದಲ್ಲಿ ಇದೇ ಮೊದಲ ಬಾರಿಗೆ ಮಾಹಿತಿ ಸಂಗ್ರಹಿಸಲು ಹೊರ ತಂದಿರುವ ‘ಮೊಬೈಲ್ ಆ್ಯಪ್’…
ಪೆರ್ಪಣ ನೋಡಿ ಚಿರತೆ ಎಂದು ಬೆಚ್ಚಿದ ಗ್ರಾಮಸ್ಥರು
January 8, 2020ಗೋಣಿಕೊಪ್ಪಲು, ಜ.7- ಚಿರತೆಯನ್ನೇ ಹೋಲುವ ಅಪರೂಪದ ವನ್ಯಜೀವಿ ಪೆರ್ಪಣ ಅಥವಾ ಲಿಪರ್ಡ್ ಕ್ಯಾಟ್ ಅನ್ನು ಕಂಡು ಚಿರತೆ ಎಂದು ಭಾವಿಸಿ ಗ್ರಾಮಸ್ಥರು ಆತಂಕಗೊಂಡ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ದ.ಕೊಡಗಿನ ಭಾಗದಲ್ಲಿ ರೈತರ ಭತ್ತದ ಗದ್ದೆ, ಕಾಫಿ ತೋಟಗಳಲ್ಲಿ ಕಂಡು ಬರುತ್ತಿದ್ದ ವನ್ಯ ಜೀವಿಗಳ ಸಾಲಿಗೆ ಇದೀಗ ಚಿರತೆ ಮಾದರಿಯ ಪೆರ್ಪಣ(ಆಡು ಭಾಷೆ) ಸೇರಿಕೊಂಡಿದೆ. ಸಮೀಪದ ಅರಣ್ಯದಿಂದ ಪೆರ್ಪಣ ನೀರನ್ನು ಅರಸುತ್ತ ಕಾಫಿ ತೋಟದ ಮಧ್ಯೆ ಇರುವ ರೈತನ ಮನೆಯ ಬಳಿ ತೆರಳಿದೆ. ಈ ವೇಳೆ ಮನೆಯ…
ಮಕ್ಕಳ ಕೊಡವ ಜನಪದ ಸಾಂಸ್ಕøತಿಕ ನಮ್ಮೆ
January 8, 2020ಗೋಣಿಕೊಪ್ಪ, ಜ.7- ಇಲ್ಲಿನ ಟಿ.ಶೆಟ್ಟಿ ಗೇರಿ ರೂಸ್ಟ್ ವಿದ್ಯಾಸಂಸ್ಥೆಯಲ್ಲಿ ಕರ್ನಾ ಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಕೊಡವ ಮಕ್ಕಡ ಕೂಟದಿಂದ 5ನೇ ವರ್ಷದ ‘ಮಕ್ಕಳÀ ಕೊಡವ ಜನಪದ ಸಾಂಸ್ಕ್ರತಿಕ ನಮ್ಮೆ’ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಸಂಸ್ಥೆಯ ಟ್ರಸ್ಟ್ನ ಮಲ್ಲಂಗಡ ಕೆ.ನಿರನ್ ಉತ್ತಪ್ಪ ಮಾತನಾಡಿ, ಮಕ್ಕಳಿಗೆ ಕೊಡವ ಸಂಸ್ಕøತಿ ಪರಿಚಯಿಸುವ ಉದ್ದೇಶದಿಂದ ಕಳೆದ 5 ವರ್ಷಗಳಿಂದ ಕೊಡವ ಮಕ್ಕಡ ಸಾಂಸ್ಕø ತಿಕ ಹಬ್ಬವನ್ನು ಆಚರಿಸಿಕೊಂಡು ಬರ ಲಾಗುತ್ತಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕರ್ನಾಟಕ ಕೊಡವ ಸಾಹಿತ್ಯ…
ಸೋಮವಾರಪೇಟೆ: ಮತದಾರರ ಮಿಂಚಿನ ನೋಂದಣಿ
January 8, 2020ಸೋಮವಾರಪೇಟೆ, ಜ.7- ಸಮೀ ಪದ ಯಡೂರು ಗ್ರಾಮದ ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಚುನಾವಣಾ ಸಾಕ್ಷರತಾ ಕ್ಲಬ್ನಿಂದ ‘ಮತದಾರರ ಮಿಂಚಿನ ನೋಂದಣಿ’ ಕಾರ್ಯಕ್ರಮ ನಡೆಯಿತು. ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಪ್ರೊ. ಶ್ರೀಧರ್ ಮಾತನಾಡಿ, ಚುನಾವಣೆ ಪ್ರತಿಯೊಬ್ಬ ಭಾರತೀಯರ ಹಕ್ಕು. 18 ವರ್ಷ ತುಂಬಿದವರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಸಿ ಕೊಂಡು ತಪ್ಪದೇ ಮತದಾನದಲ್ಲಿ ಪಾಲ್ಗೊಳ್ಳಬೇಕು ಎಂದರು. ಈ ವೇಳೆ 18 ವರ್ಷ ತುಂಬಿದ ವಿದ್ಯಾರ್ಥಿಗಳು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು…
ಕೊಡಗಿನಲ್ಲಿ ಕಾಡಾನೆಗಳ ಅಟ್ಟಹಾಸ..!
January 7, 2020ಕಾಫಿ ತೋಟಗಳಲ್ಲೇ ಕಾಡಾನೆಗಳ ವಾಸ ಸಂಕಷ್ಟದಲ್ಲಿ ಕಾರ್ಮಿಕರು, ಬೆಳೆಗಾರರು ಕಾಡಾನೆ ಹಾವಳಿ ತಡೆಗೆ ಅರಣ್ಯ ಇಲಾಖೆ ವಿಫಲಕಾಫಿ ಕೊಯ್ಲು, ಭತ್ತ ಕಟಾವಿಗೆ ಕಂಟಕ ಮಡಿಕೇರಿ, ಜ.6- ಕೊಡಗು ಜಿಲ್ಲೆ ಯಾದ್ಯಂತ ಕಾಡಾನೆಗಳ ಅಟ್ಟಹಾಸ ಮುಂದುವರೆದಿದೆ. ವೀರಾಜಪೇಟೆ ಮತ್ತು ಸೋಮವಾರಪೇಟೆ ಸೇರಿದಂತೆ ಜಿಲ್ಲೆಯ ಬಹುತೇಕ ಪ್ರದೇಶದಲ್ಲಿ ಈಗ ಕಾಡಾನೆ-ಮಾನವ ಸಂಘರ್ಷ ಸಾಮಾನ್ಯ ಎಂಬಂತಾ ಗಿದ್ದು, ಆತಂಕ ಸೃಷ್ಟಿ ಮಾಡಿದೆ. ಜಿಲ್ಲೆಯ ಜನತೆಗೆ ವರ್ಷದ ಕೂಳು ನೀಡುವ ಕಾಫಿ ಮತ್ತು ಭತ್ತ ಕೊಯ್ಲು ಸಂದರ್ಭದಲ್ಲಿ ಹಾಡಹಗಲೇ ಜನವಸತಿ ಪ್ರದೇಶಗಳಿಗೆ ಕಾಡಾನೆಗಳು…
ಕುಶಾಲನಗರ: ಶ್ರದ್ಧಾಭಕ್ತಿಯ ವೈಕುಂಠ ಏಕಾದಶಿ
January 7, 2020ಕುಶಾಲನಗರ, ಜ.6- ನಗರದ ರಥ ಬೀದಿಯಲ್ಲಿರುವ ಶ್ರೀಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವೈಕುಂಠ ಏಕಾದಶಿ ವಿಶೇಷ ಪೂಜಾ ಕಾರ್ಯಕ್ರಮ ಶ್ರದ್ಧಾ-ಭಕ್ತಿಯಿಂದ ನೆರವೇರಿತು. ಆರ್ಯವೈಶ್ಯ ಮಂಡಳಿಯಿಂದ ನಡೆದ ಪೂಜಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆ ಯಲ್ಲಿ ಭಕ್ತರು ಪಾಲ್ಗೊಂಡು ಶ್ರೀನಿವಾಸನ ದರ್ಶನ ಪಡೆದು ಪುನೀತರಾದರು. ಬೆಳಿಗ್ಗೆ 7.30ಕ್ಕೆ ಮಹಾಸಂಕಲ್ಪದೊಂ ದಿಗೆ ಪೂಜಾ ಕೈಂಕರ್ಯಗಳು ಆರಂಭ ಗೊಂಡವರು. ಅರ್ಚಕ ಪ್ರಮೋದ್ ಭಟ್ ನೇತೃತ್ವದ ತಂಡದಿಂದ ಪೂಜಾ ವಿಧಿಗಳು ನೆರವೇರಿದವು. ಪಂಚಾಮೃತ ಅಭಿಷೇಕ, ಮಹಾಮಂಗಳಾರತಿಯೊಂದಿಗೆ ಮಧ್ಯಾಹ್ನ 12.30ಕ್ಕೆ ಸ್ವರ್ಗದ ಬಾಗಿಲು ಅನಾವರಣ ಗೊಳಿಸಲಾಯಿತು. ದೇವಾಲಯ…
ಪೌರತ್ವ ತಿದ್ದುಪಡಿ ಕಾಯ್ದೆಯ ಸಮಗ್ರ ಮಾಹಿತಿ ನೀಡಲು ಕರೆ
January 7, 2020ಸೋಮವಾರಪೇಟೆ, ಜ.6- ಪೌರತ್ವ ತಿದ್ದು ಪಡಿ ಕಾಯ್ದೆಯ ಬಗ್ಗೆ ಕಾಂಗ್ರೆಸ್ ಸೇರಿ ದಂತೆ ಇತರೆ ಪಕ್ಷಗಳು ಮುಸ್ಲಿಂ ಸಮು ದಾಯಕ್ಕೆ ತಪ್ಪು ಸಂದೇಶ ರವಾನಿಸಿ ಸರ್ಕಾ ರದ ವಿರುದ್ಧ ಎತ್ತಿಕಟ್ಟುತ್ತಿದ್ದು, ಈ ಬಗ್ಗೆ ಪ್ರತಿ ಮನೆಗೆ ಬಿಜೆಪಿ ಕಾರ್ಯಕರ್ತರು ತೆರಳಿ ಕಾಯ್ದೆಯ ಬಗ್ಗೆ ಸಮಗ್ರ ಮಾಹಿತಿ ಒದಗಿಸಬೇಕು ಎಂದು ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಕರೆ ನೀಡಿದರು. ಇಲ್ಲಿನ ಕೊಡವ ಸಮಾಜದಲ್ಲಿ ಸೋಮ ವಾರಪೇಟೆಯ ಬಿಜೆಪಿ ಮಂಡಲ ವತಿ ಯಿಂದ ಆಯೋಜಿಸಿದ್ದ ಜನಜಾಗೃತಿ ಅಭಿ ಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ…
ರಸ್ತೆ ವಿಸ್ತರಣೆಗೆ ಸ್ಥಳೀಯರು ಸಹಕರಿಸಿ: ಶಾಸಕ ಕೆ.ಜಿ.ಬೋಪಯ್ಯ ಮನವಿ
January 7, 2020ವೀರಾಜಪೇಟೆ, ಜ.6- ವೀರಾಜಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ, ಚರಂಡಿ ನಿರ್ಮಾಣ ಸೇರಿದಂತೆ ಇತರ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಸ್ಥಳೀಯ ನಿವಾಸಿಗಳು ರಸ್ತೆ ವಿಸ್ತರಣೆಗೆ ಸಹಕಾರ ನೀಡಬೇಕು ಎಂದು ಶಾಸಕ ಕೆ.ಜಿ.ಬೋಪಯ್ಯ ಹೇಳಿದರು. ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಎಸ್ಬಿಐ ಬ್ಯಾಂಕ್ ಮುಂಭಾಗದ ರಸ್ತೆ ಡಾಂಬರೀ ಕರಣ, ಮಠದ ಗದ್ದೆ ಬಳಿಯಿಂದ ಚರ್ಚ್ಗೆ ಸಂಪರ್ಕ ಕಲ್ಪಿಸುವ ರಸ್ತೆ ಮೇಲ್ದರ್ಜೆ ಮತ್ತು ಶಿವಕೇರಿಯಲ್ಲಿರುವ ನೀರಿನ ಶುದ್ಧೀಕರಣ ಟ್ಯಾಂಕ್ ಬಳಿ ಪಂಚಾಯಿತಿ ಸಿಬ್ಬಂದಿ, ಅಧಿ ಕಾರಿಗಳಿಗೆ ನೂತನ ವಸತಿ ಗೃಹ ನಿರ್ಮಾಣ…