ಮಡಿಕೇರಿ: ಪ್ರಕೃತಿ ವಿಕೋಪದ ಸಂತ್ರಸ್ತ ಕುಟುಂಬ ಗಳು ದಾನಿಗಳು ನೀಡುವ ಆರ್ಥಿಕ ನೇರವನ್ನು ಸದ್ಬಳಕೆ ಮಾಡಿಕೊಂಡು ಹೊಸ ಬದುಕು ಕಟ್ಟಿ ಕೊಳ್ಳಬೇಕೆಂದು ಮೈಸೂರಿನ ಶ್ರೀ ಕಾವೇರಿ ಕೊಡವ ಅಸೋಷಿಯೇಷನ್ ಈಸ್ಟ್ ಅಧ್ಯಕ್ಷ ಬೊವ್ವಡಿರ ಎಂ. ದೇವಯ್ಯ ಸಲಹೆ ನೀಡಿದ್ದಾರೆ. ನಗರದ ಕೊಡವ ಸಮಾಜದ ವಾಣಿಜ್ಯ ಸಂಕೀರ್ಣದಲ್ಲಿರುವ ಕೊಡಗು ಸೇವಾ ಕೇಂದ್ರದಲ್ಲಿ ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತರಾದ ಕುಟುಂಬಗಳಿಗೆ ಶ್ರೀ ಕಾವೇರಿ ಕೊಡವ ಅಸೋಷಿಯೇಷನ್ ಈಸ್ಟ್ ವತಿಯಿಂದ 2.5 ಲಕ್ಷ ರೂ. ಹಾಗೂ ಟಿ.ನರಸೀಪುರದ ಗ್ರಾಮ ವಿದ್ಯೋದಯ ಸಂಘ ಮತ್ತು…
ಕುಟುಂಬಗಳಲ್ಲಿ ಅನ್ಯೂನ್ಯತೆ ಇರಬೇಕು
December 17, 2018ವಿರಾಜಪೇಟೆ: ಮಾಳೇಟಿರ ಕುಟುಂಬದ ಫಂಡಿನ 2017-18ನೇ ವಾರ್ಷಿಕ ಮಹಾ ಸಭೆಯು ಕೆದಮುಳ್ಳೂರು ಗ್ರಾಮದ ಮಾಳೇಟಿರ ಕುಟುಂಬದ ಕೈಮಡದ ಸಭಾಂಗಣದಲ್ಲಿ ಹಿರಿಯರಾದ ಮಾಳೇಟಿರ ಎಂ.ಗಣಪತಿ ಅಧ್ಯಕ್ಷತೆಯಲ್ಲಿ ನಡೆದು ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಮಾತನಾಡಿದ ಮಾಳೇಟಿರ ಎಂ.ಗಣಪತಿ, ಎಲ್ಲಾ ಕುಟುಂಬಗಳು ಅನ್ಯೂ ನ್ಯತೆಯಿಂದ ಒಂದಾಗಿ ಜೀವನ ನಡೆಸುವ ಮೂಲಕ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವಂತಾಗತಬೇಕು. ಮಕ್ಕಳು ಸಿಗು ವಂತ ಸೌಲಭ್ಯಗಳನ್ನು ಪಡೆದುಕೊಂಡು ತಮ್ಮ ಜೀವನದಲ್ಲಿ ಉತ್ತಮ ಬದುಕನ್ನು ರೂಪಿಸಿಕೊಂಡು ದೇಶದ ಉತ್ತಮ ಪ್ರಜೆ ಗಳಾಗುವಂತೆ ಹೇಳಿದರು….
ಯುವ ಜನಾಂಗದಲ್ಲಿ ಶಿಸ್ತು, ಸಮಯ ಪ್ರಜ್ಞೆ ಅಗತ್ಯ
December 17, 2018ಸುಂಟಿಕೊಪ್ಪ: ಸೋಮವಾರಪೇಟೆ ಸಂತ ಜೋಸೆಫರ ಪದವಿ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ವಿಶೇಷ ವಾರ್ಷಿಕ ಶಿಬಿರವು ಸಮೀಪದ ಯಡವಾರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಸಲಾಯಿತು. ಎನ್ಎಸ್ಎಸ್ ಶಿಬಿರದ ಉದ್ಘಾಟನಾ ಸಮಾರಂಭದ ದ್ವಜಾರೋಹಣವನ್ನು ಐಗೂರು ಗ್ರಾಪಂ ಪ್ರಭಾರ ಅಧ್ಯಕ್ಷೆ ಕೆ.ಪಿ.ಶೋಭಾ ನೆರವೇರಿಸಿ ಮಾತನಾಡಿದ ಅವರು, ಯುವ ಜನಾಂ ಗದವರಲ್ಲಿ ಶಿಸ್ತು, ಸಮಯಪಾಲನೆ, ಸೇವಾ ಮನೋಭಾವನೆಯನ್ನು ರೂಢಿಸಿಕೊಳ್ಳುವುದರ ಜೊತೆಯಲ್ಲಿ ರಾಷ್ಟ್ರೀಯ ಭಾವೈಕ್ಯತೆಯನ್ನುಗಳಿಸಬೇಕು ಎಂದರು. ಐಗೂರು ಗ್ರಾಪಂ ಮಾಜಿ ಅಧ್ಯಕ್ಷ ಡಿ.ಎಸ್.ಚಂಗಪ್ಪ ಮಾತನಾಡಿ, ಇಂತಹ ಶಿಬಿರಗಳು ಆಯಾ ಗ್ರಾಮದ ಗ್ರಾಮಸ್ಥರಿಗೆ…
ನೆರೆ ಸಂತ್ರಸ್ತರಿಗೆ ಪರಿಹಾರ ವಿಳಂಬ ಖಂಡಿಸಿ ಪ್ರತಿಭಟನೆ
December 15, 2018ಮಡಿಕೇರಿ: ಜಿಲ್ಲೆಯ ಅತಿವೃಷ್ಟಿ ಹಾನಿ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಹಾಗೂ ಜಿಲ್ಲಾಡಳಿತ ವಿಳಂಬ ಧೋರಣೆಯನ್ನು ಅನುಸರಿಸುತ್ತಿವೆ ಎಂದು ಆರೋಪಿಸಿ ಪ್ರಕೃತಿ ವಿಕೋಪ ಪರಿಹಾರ ಹೋರಾಟ ಸಮಿತಿ ವಿವಿಧ ಗ್ರಾಮಗಳ ಸಂತ್ರಸ್ತರೊಂದಿಗೆ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿದ ಗ್ರಾಮಸ್ಥರು ಹಾಗೂ ಹೋರಾಟ ಸಮಿತಿಯ ಪ್ರಮುಖರು ಪರಿಹಾರ ಕಾರ್ಯ ಗಳನ್ನು ಶೀಘ್ರ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳದಿದ್ದಲ್ಲಿ ಅಮರಣಾಂತ ಉಪ ವಾಸ ಸತ್ಯಾಗ್ರಹವನ್ನು ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ…
ಅಕ್ರಮ ಮರಳು ಸಾಗಣೆ: ಮೂವರ ಬಂಧನ
December 15, 2018ಗೋಣಿಕೊಪ್ಪಲು: ಅಕ್ರಮವಾಗಿ ಮರಳು ಸಾಗಣೆ ಮಾಡುತ್ತಿದ್ದ ಸಂದರ್ಭ ದಾಳಿ ನಡೆಸಿರುವ ಗೋಣಿಕೊಪ್ಪ ಪೊಲೀಸರು, 2 ಟಿಪ್ಪರ್ ಲಾರಿ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದು, ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಮುಂಜಾನೆ 3 ಗಂಟೆ ಸುಮಾರಿಗೆ ಹಾತೂರು ರಸ್ತೆಯಲ್ಲಿ ವಶಕ್ಕೆ ಪಡೆಯಲಾಗಿದೆ. ಸಾಗಣೆ ಮಾಡುತ್ತಿದ್ದ ಸಂದರ್ಭ ದಾಳಿ ನಡೆಸಲಾಗಿದೆ. ಎರಡು ಟಿಪ್ಪರ್ಗಳಲ್ಲಿ ಮರಳನ್ನು ವಶಕ್ಕೆ ಪಡೆಯಲಾಗಿದೆ. ಲಾರಿ ಚಾಲಕರುಗಳಾದ ವಿರಾಜಪೇಟೆಯ ಫಾರುಕ್ (37), ಸಜನ್ (36), ಮರಳು ಸಂಗ್ರಹಿಸಿದ್ದ ಆರೋಪದಡೀ ಕೊಳ್ತೋಡು ಗ್ರಾಮದ ಮುತ್ತಪ್ಪ (52) ಅವರನ್ನು ಬಂಧಿಸಿ…
ಹೊಟ್ಟೆ ನೋವು ತಾಳದೆ ಆತ್ಮಹತ್ಯೆ
December 13, 2018ವಿರಾಜಪೇಟೆ: ವಿರಾಜಪೇಟೆ ಸಮೀಪದ ಕಡಂಗ ಅರಪಟ್ಟುವಿನಲ್ಲಿ ಮಹಿಳೆ ಯೊಬ್ಬಳು ಹೊಟ್ಟೆ ನೋವು ತಾಳದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿ ರುವುದಾಗಿ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ಕೂಲಿ ಕಾರ್ಮಿಕರಾಗಿದ್ದ ತಮಿಳರ ಈಶ್ವರಿ(37) ಕಳೆದ 5 ವರ್ಷಗಳ ಹಿಂದೆ ರಮರ್ ಎಂಬಾತನೊಂದಿಗೆ ವಿವಾಹವಾಗಿದ್ದರು. ಕೆಲವು ದಿನಗಳಿಂದ ಈಶ್ವರಿ ಹೊಟ್ಟೆ ನೋವು ನಿಂದ ಬಳಲುತ್ತಿದ್ದರೆನ್ನಲಾಗಿದೆ. ಇದರಿಂದ ಮನನೊಂದು ಡಿ.11 ರಂದು ರಾತ್ರಿ 8 ಗಂಟೆ ಸಮಯದಲ್ಲಿ ಪತಿ ರಮರ್ ಇಲ್ಲದ ವೇಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತೆ…
ದಸಂಸ ಬೇಡಿಕೆಗೆ ಸಿಎಂ ಸ್ಪಂದನೆ: ದಾಖಲೆ ಪರಿಶೀಲಿಸಿ ನಿವೇಶನ ಹಂಚುವ ಭರವಸೆ
December 13, 2018ವೀರಾಜಪೇಟೆ: ದಲಿತ ಸಂಘರ್ಷ ಸಮಿತಿಯ ಬೇಡಿಕೆಯಂತೆ ದಲಿತರು, ಕಾರ್ಮಿಕರು, ಬಡ ವರ್ಗದವರು ಹಾಗೂ ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ಅಧಿಕಾರಿಗಳು ಗುರುತಿಸಿರುವ ಸರಕಾರಿ ಜಾಗದಲ್ಲಿ ನಿವೇಶನಗಳ ದಾಖಲೆಗಳನ್ನು ಪರಿಶೀಲಿಸಿ ಹದಿ ನೈದು ದಿನಗಳ ಅವಧಿಯಲ್ಲಿ ಹಕ್ಕು ಪತ್ರವನ್ನು ಹಂಚಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ದಸಂಸ ಮುಖಂಡರುಗಳಿಗೆ ಭರವಸೆ ನೀಡಿರುವುದಾಗಿ ಸಮಿತಿಯ ಜಿಲ್ಲಾ ಸಂಚಾಲಕ ಎಚ್.ಆರ್.ಪರಶುರಾಮ್ ತಿಳಿಸಿದರು. ವಿರಾಜಪೇಟೆ ಮಿನಿ ವಿಧಾನಸೌಧ ಎದುರು ಕೆಲವು ದಿನಗಳ ಹಿಂದೆ ಮನೆ ನಿವೇಶನ ಹಾಗೂ ವಿವಿದ ಬೇಡಿಕೆಗಳನ್ನು ಮುಂದಿಟ್ಟು…
ಕೊಡಗಿನ 1.91 ಲಕ್ಷ ಎಕರೆ ಬಾಣೆ ಜಾಗಗಳಿಗೆ ಕಂದಾಯ ನಿಗದಿ
December 13, 2018ಶಾಸಕ ಕೆ.ಜಿ.ಬೋಪಯ್ಯರಿಗೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಉತ್ತರ ಮಡಿಕೇರಿ: ಕೊಡಗಿನಲ್ಲಿ ಜಮ್ಮಾ ಬಾಣೆ ಮತ್ತಿತರ ಬಾಣೆ ಜಾಗಗಳಿಗೆ ಕಂದಾಯ ವಿಧಿಸುವಂತೆ ಭೂಕಂದಾಯ ಕಾಯ್ದೆ ತಿದ್ದುಪಡಿ ಮಾಡಲಾಗಿದ್ದು, ಬಾಣೆ ಜಾಗಗಳಿಗೆ ಕಂದಾಯ ನಿಗದಿಗೊಳಿಸಲಾ ಗಿದೆ ಎಂದು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದರು. ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿ ವೇಶನದಲ್ಲಿ ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಕರ್ನಾಟಕ ಭೂಕಂದಾಯ ಕಾಯ್ದೆಯ ತಿದ್ದುಪಡಿಯಂತೆ ಬಾಣೆ ಜಾಗ ಗಳಿಗೆ ಕಂದಾಯ ವಿಧಿಸಲು ಉಪ ವಿಭಾ ಗಾಧಿಕಾರಿಗಳಿಗೆ ಅಧಿಕಾರ…
ಹಾಕಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ
December 13, 2018ಸೋಮವಾರಪೇಟೆ: ಮೊಗೇರ ಸೇವಾ ಸಮಾಜದ ಕುಸುಬೂರು ಗ್ರಾಮ ಶಾಖೆಯ ವತಿಯಿಂದ ಹಾಕಿ ಕ್ರೀಡೆಯಲ್ಲಿ ಸಾಧನೆ ಮಾಡಿದ ಬಳಗುಂದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ತಾಲೂಕು ಮೊಗೇರ ಸೇವಾ ಸಮಾಜದ ಅಧ್ಯಕ್ಷ ದಾಮೋದರ್ ಮಾತನಾಡಿ, ಗ್ರಾಮೀಣ ಭಾಗದ ಸರಕಾರಿ ಶಾಲೆಯ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡುವ ಮೂಲಕ ನಾಡಿಗೆ ಕೀರ್ತಿ ತಂದಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು. ಪಟ್ಟಣ ಪಂಚಾಯಿತಿ ಸದಸ್ಯ ಪಿ.ಕೆ. ಚಂದ್ರು ಮಾತನಾಡಿ,…
ಪಯಸ್ವಿನಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು
December 13, 2018ನಾಪೋಕ್ಲು: ಕೊಡಗಿನ ವಿದ್ಯಾರ್ಥಿಯೊಬ್ಬ ಸುಳ್ಯದ ಪಯಸ್ವಿನಿ ನದಿಯಲ್ಲಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ಸುಳ್ಯದ ಖಾಸಗಿ ತರಬೇತಿ ಕೇಂದ್ರವೊಂದರಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಕಕ್ಕಬ್ಬೆ- ಮರಂದೋಡ ಗ್ರಾಮದ ಸುದೀಪ್ (18) ಮೃತಪಟ್ಟ ವಿದ್ಯಾರ್ಥಿ. ಡಿ.10 ರಂದು ಸೋಮವಾರ ಮೊಬೈಲ್ ರಿಪೇರಿಗೆಂದು ತೆರಳಿದ ಸುದೀಪ್ ಸಂಜೆಯಾದರೂ ಹಾಸ್ಟೆಲ್ಗೆ ಬಾರದ ಹಿನ್ನೆಲೆಯಲ್ಲಿ ಸುಳ್ಯ ಪೊಲೀಸ್ ಠಾಣೆಗೆ ನಾಪತ್ತೆಯಾದ ಬಗ್ಗೆ ದೂರು ನೀಡಲಾಗಿತ್ತು. ಈ ಬಗ್ಗೆ ಹುಡುಕಾಟ ನಡೆಸಿದ ಪೊಲೀಸರಿಗೆ ಸುಳ್ಯ ಸಮೀಪದ ಪಯಸ್ವಿನಿ ನದಿಯಲ್ಲಿ ಮೃತ ದೇಹ…