ಮಡಿಕೇರಿ: ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ 2018-19ನೇ ಸಾಲಿನಲ್ಲಿ ಬಿ.ಎಡ್ ಹಾಗೂ ಡಿ.ಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳಿಗೆ ರೂ.25 ಸಾವಿರಗಳ ವಿಶೇಷ ಪ್ರೋತ್ಸಾಹಧನ ಯೋಜನೆಯಡಿ ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಆನ್ಲೈನ್ನಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ದಾಖಲಾತಿಗಳೊಂದಿಗೆ ನ.30 ರೊಳಗೆ ವಿದ್ಯಾರ್ಥಿಯು ವ್ಯಾಸಂಗ ಮಾಡುತ್ತಿರುವ ಜಿಲ್ಲೆಯ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್ಸೈಟ್ www.gokdom.kar.nic.in ಹಾಗೂ ಕಚೇರಿ ದೂ.ಸಂಖ್ಯೆ: 08272-220214 ನ್ನು ಸಂಪರ್ಕಿಸಹುದು ಎಂದು…
ಕೊಡಗು ಸೇರಿ ರಾಜ್ಯದ ಅತಿವೃಷ್ಟಿ ಹಾನಿಗೆ ಕೇಂದ್ರದಿಂದ 546.21 ಕೋಟಿ ನೆರವು
November 20, 2018ನವದೆಹಲಿ: ಕೊಡಗು ಸೇರಿ ದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಅತಿ ವೃಷ್ಟಿಯಿಂದ ಉಂಟಾದ ಹಾನಿಗೆ ಕೇಂದ್ರ 546.21 ಕೋಟಿ ಹೆಚ್ಚುವರಿ ನೆರವನ್ನು ಪ್ರಕಟಿಸಿದೆ. ಕೇಂದ್ರ ಗೃಹ ಸಚಿವ ರಾಜ ನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಉನ್ನತ ಮಟ್ಟದ ಸಮಿತಿ ಈ ನೆರವನ್ನು ಪ್ರಕಟಿಸಿದ್ದು, ಸಭೆಯಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ, ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಇತರರು ಪಾಲ್ಗೊಂಡಿದ್ದರು. ದೇಶದಲ್ಲೇ ಅತ್ಯಂತ ಹೆಚ್ಚು ಕಾಫಿ ಬೆಳೆಯುವ ಪ್ರದೇಶವಾದ ಕೊಡಗು, ದಕ್ಷಿಣ ಕನ್ನಡ,…
ಹಳೇ ಖಾಸಗಿ ಬಸ್ ನಿಲ್ದಾಣ ಸ್ಥಳದಲ್ಲಿ ತಲೆ ಎತ್ತಲಿದೆ ಪಾರಂಪರಿಕ ತಾಣ
November 20, 2018ಮಡಿಕೇರಿ: ನಗರದ ಹಳೇ ಖಾಸಗಿ ಬಸ್ ನಿಲ್ದಾಣದ ಕಟ್ಟಡ ಕೆಡವಲಾದ ಸ್ಥಳದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಿಸುವ ಉದ್ದೇಶವನ್ನು ಕೈ ಬಿಡಲಾಗಿದ್ದು, ಆ ಸ್ಥಳದಲ್ಲಿ ವಿದೇಶಿ ಮಾದರಿಯ ಪಾರಂಪರಿಕ ತಾಣವೊಂದು ತಲೆ ಎತ್ತಲಿದೆ. ಈ ಸ್ಥಳವನ್ನು ಪ್ರವಾಸೋದ್ಯಮಕ್ಕೆ ಪೂರಕ ವಾದ ತಾಣವನ್ನಾಗಿಸಿ ನಗರದ ಸೌಂದರ್ಯಕ್ಕೆ ಹೊಸ ಭಾಷ್ಯ ಬರೆಯವಂತೆ “ಮೈಸೂರು ಮಿತ್ರ” ಮತ್ತು “ಸ್ಟಾರ್ ಆಫ್ ಮೈಸೂರು” ಪತ್ರಿಕೆಯ ಪ್ರಧಾನ ಸಂಪಾದಕರಾದ ಕಲ್ಯಾಟಂಡ ಬಿ. ಗಣಪತಿ ಅವರು ತಮ್ಮ ಪ್ರಖ್ಯಾತ ಅಂಕಣ “ಛೂ ಮಂತ್ರ”ದ ಮೂಲಕ ಸಲಹೆ ಮತ್ತು…
ಪತ್ರಕರ್ತ ಸಂತೋಷ್ ತಮ್ಮಯ್ಯಗೆ ಕೊಲೆ ಬೆದರಿಕೆ; ಭದ್ರತೆಗೆ ಆಗ್ರಹ
November 20, 2018ಪೊನ್ನಂಪೇಟೆ: ಟಿಪ್ಪುವಿನ ಕ್ರೌರ್ಯದ ಬಗ್ಗೆ ಇತಿಹಾಸದ ವಾಸ್ತವಂಶವನ್ನು ತೆರೆದಿಟ್ಟ ಪತ್ರಕರ್ತ ಹಾಗೂ ಅಂಕಣಕಾರ ಸಂತೋಷ್ತಮ್ಮಯ್ಯನವರಿಗೆ ಬಹಿರಂಗವಾಗಿ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಲಾಗಿದ್ದು ಸರ್ಕಾರವು ಕೂಡಲೇ ಸಮಾಜಘಾತುಕ ಶಕ್ತಿಗಳನ್ನು ಬಂಧಿಸಿ ಸಂತೋಷ್ತಮ್ಮಯ್ಯನವರಿಗೆ ಸೂಕ್ತ ಭದ್ರತೆ ನೀಡಬೇಕೆಂದು ಯುಕೊ ಸಂಸ್ಥೆಯ ಅಧ್ಯಕ್ಷ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ಒತ್ತಾಯಿಸಿದರು. ಗೋಣಿಕೊಪ್ಪದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಭಾರತದ ಸಂವಿಧಾನದ 19(1)ಎ ವಿಧಿಯಂತೆ ಈ ದೇಶದ ಎಲ್ಲಾ ನಾಗರಿಕರಿಗೆ ಯಾವುದೇ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಮಾಧ್ಯಮದ ಮೂಲಕ ತಮ್ಮ ಅನಿಸಿಕೆ ಅಭಿಪ್ರಾಯವನ್ನು ವ್ಯಕ್ತಪಡಿಸಬಹುದಾದ…
ಶ್ರೀಗಂಧ ಮರ ಕಡಿದು ಸಾಗಾಟಕ್ಕೆ ಯತ್ನ; ಇಬ್ಬರ ಬಂಧನ
November 20, 2018ಸಿದ್ದಾಪುರ: ಕಾಫಿ ತೋಟದಲ್ಲಿದ್ದ ಶ್ರೀಗಂಧ ಮರವನ್ನು ಕಡಿದು ಸಾಗಾಟಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ, ಶ್ರೀಗಂಧವನ್ನು ವಶಪಡಿಸಿಕೊಂಡಿದ್ದಾರೆ. ವಿರಾಜಪೇಟೆ ತಾಲೂಕಿನ ಮಾಯಮುಡಿ ವ್ಯಾಪ್ತಿಯ ರುದ್ರಬೀಡು ಗ್ರಾಮದ ಕಾಫಿತೋಟವೊಂದರಲ್ಲಿ ಇದ್ದ ಶ್ರೀಗಂಧದ ಮರವನ್ನು ಕಡಿದು ಸಾಗಾಟಕ್ಕೆ ಯತ್ನಿಸಿದ ರುದ್ರಬೀಡು ಗ್ರಾಮದ ಮಾರ, ಸಿದ್ದ ಎಂಬುವರನ್ನು ತಿತಿಮತಿ ವಲಯ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರಿಂದ ಇಪ್ಪತ್ತೈದು ಸಾವಿರ ಮೌಲ್ಯದ ಶ್ರೀಗಂಧ ವಶಪಡಿಸಿಕೊಂಡು ಕ್ರಮ ಕೈಗೊಂಡಿದ್ದಾರೆ. ವಲಯ ಅರಣ್ಯಾಧಿಕಾರಿ ಅಶೋಕ್, ಉಪವಲಯ ಅರಣ್ಯಾಧಿಕಾರಿ ಗಣಪತಿ, ಅರಣ್ಯ ರಕ್ಷಕರಾದ ದೇವರಾಜು,…
ಚರಂಡಿ ಕಾಮಗಾರಿ ಕಳಪೆ ಆರೋಪ; ಶಾಸಕರು ಪರಿಶೀಲನೆ
November 19, 2018ಕುಶಾಲನಗರ: ಕುಶಾಲನಗರ ಗುಂಡೂರಾವ್ ಬಡಾವಣೆಯಲ್ಲಿ ಅಂದಾಜು ಸುಮಾರು ರೂ. 7 ಕೋಟಿ ವೆಚ್ಚದಲ್ಲಿ ಬಡಾವಣೆಯ ರಸ್ತೆ ಚರಂಡಿ ಮತ್ತಿತರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿ ತುಂಬಾ ಕಳಪೆ ಮಟ್ಟದಿಂದ ನಡೆಯುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಇಂದು ಬೆಳಗ್ಗೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಇಂಜಿನಿಯರ್ ಶ್ರೀದೇವಿ ಅವರನ್ನು ಶಾಸಕರು ತರಾಟೆಗೆ ತೆಗೆದು ಕೊಂಡರು ಮತ್ತು ಈ ಕಾಮಗಾರಿಯ ವಿವರ ನೀಡುವಂತೆ ಸೂಚಿಸಿದರು. ನಂತರ…
ಕೊಡಗು ಸಂತ್ರಸ್ತರಿಗೆ ನೆರವು
November 19, 2018ವಿರಾಜಪೇಟೆ: ಕೊಡಗು ಸಂತ್ರಸ್ತರಿಗಾಗಿ ವಿದ್ಯಾರ್ಥಿಗಳು ಇತರರಿಂದ ಸಂಗ್ರಹ ಮಾಡಿದ ರೂ. ಒಂದು ಲಕ್ಷ ಹಣವನ್ನು ಮಳೆಯಿಂದ ಆಸ್ತಿ ಮನೆ ಕಳೆದು ಕೊಂಡ 12 ನಿರಾಶ್ರಿತರಿಗೆ ನೀಡಿದ್ದಾರೆ. ವಿರಾಜಪೇಟೆಯ ಮಂಡೆಪಂಡ ಸುಜಾ ಕುಶಾಲಪ್ಪ ಅವರ ಕಿರಿಯ ಪುತ್ರ ನಿಶಾಂಕ್ ಪೊನ್ನಪ್ಪ ಅವರ ಮುಂದಾಳತ್ವದಲ್ಲಿ ಅಜ್ಜಮಾಡ ತಿಮ್ಮಯ್ಯ ಅವರ ಪುತ್ರ ಚಂಗಪ್ಪ, ಚಾರಿಮಂಡ ಕಾವೇರಪ್ಪ ಅವರ ಪುತ್ರ ಬಿದ್ದಪ್ಪ, ಕೊಲ್ಲಿರ ಭರತ್, ಗಗನ್ ಮುತ್ತಪ್ಪ, ಪಟ್ಟಡ ರಕ್ಷಿತ್ ಹಾಗೂ ಜಾನ್ಹವಿ ಅವರುಗಳು ಇತರರಿಂದ ಸಂಗ್ರಹಿಸಿದ್ದ ಒಂದು ಲಕ್ಷ ಹಣವನ್ನು ಆಸ್ತಿ…
ಕೊಡಗಿನ ನೆರೆ ಸಂತ್ರಸ್ತರ ನೆರವಿಗೆ ಕೊಡವ ಸಮಾಜಗಳ ಒಕ್ಕೂಟ ನಿರ್ಧಾರ
November 18, 2018ಮಡಿಕೇರಿ: ಇತ್ತೀಚೆಗೆ ಕೊಡಗಿನಲ್ಲಿ ಸಂಭವಿಸಿದ ಅತಿವೃಷ್ಟಿ ಹಾನಿ ಸಂತ್ರಸ್ತರಿಗೆ ಬಾಳುಗೋಡು ಕೊಡವ ಸಮಾಜಗಳ ಒಕ್ಕೂಟದ ಮೂಲಕ ಅಗತ್ಯ ನೆರ ವನ್ನು ನೀಡಲು ಒಕ್ಕೂಟದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಬಾಳುಗೋಡಿನಲ್ಲಿ ನಡೆದ ಒಕ್ಕೂಟದ ಮಾಸಿಕ ಸಭೆಯಲ್ಲಿ ಪ್ರಕೃತಿ ವಿಕೋಪ ಮತ್ತು ಮುಂದೆ ಕೈಗೊಳ್ಳಬಹುದಾದ ಪರಿಹಾರ ಕಾರ್ಯಗಳ ಕುರಿತು ಪ್ರಮುಖರು ಚರ್ಚಿಸಿದರು. ಮಡಿಕೇರಿ ಹಾಗೂ ಸೋಮವಾರ ಪೇಟೆಯಲ್ಲಿ ಸಂಭವಿಸಿದ ಮಳೆಹಾನಿ ಪ್ರದೇಶಗಳಿಗೆ ಒಕ್ಕೂಟದ ಪದಾಧಿಕಾರಿಗಳು ಇತ್ತೀಚೆಗೆ ಭೇಟಿ ನೀಡಿ ಪರಿಶೀಲನೆ ನಡೆ ಸಿದ್ದರು. ಸಂತ್ರಸ್ತರಿಗೆ ಸಾಂತ್ವನ ಹೇಳಿ ಅಭಯ ನೀಡಿದ…
ದ್ವಿರಾಷ್ಟ್ರ ಕರಾಟೆ ಚಾಂಪಿಯನ್ಶಿಪ್: ಕೊಡಗಿನ ಮೂವರಿಗೆ ಪ್ರಶಸ್ತಿ
November 18, 2018ಪೊನ್ನಂಪೇಟೆ: ದ್ವಿರಾಷ್ಟ್ರ ಕರಾಟೆ ಚಾಂಪಿಯನ್ಶಿಪ್ನಲ್ಲಿ ಪಾಲ್ಗೊಂಡಿದ್ದ ಕೊಡಗಿನ ಮೂವರು ಯುವ ಕರಾಟೆ ಪಟುಗಳಿಗೆ ಪ್ರಶಸ್ತಿ ಲಭಿಸಿದೆ.ಇತ್ತೀಚೆಗೆ ಕೇರಳದ ಕಲ್ಲಿಕೋಟೆ ಸಮೀ ಪದ ನಾದಪುರಂನಲ್ಲಿರುವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 2ನೇ ಇಂಡೋ- ಶ್ರೀಲಂಕ ಮುಕ್ತ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಾದ ಆಲೀರ ಯು. ನಾಫೀಯಾ, ದುದ್ದಿಯಂಡ ಹೆಚ್. ಉವೈಸ್ ಮತ್ತು ದುದ್ದಿಯಂಡ ಹೆಚ್. ಮುರ್ಶಿದಾ ಅವರ ಅತ್ಯುತ್ತಮ ಸಾಧನೆಯ ಹಿನ್ನೆಲೆಯಲ್ಲಿ ಈ ಪ್ರಶಸ್ತಿ ದೊರೆತಿದೆ. ಚಾಂಪಿಯನ್ಶಿಪ್ನ 32ರಿಂದ 35 ಕೆ.ಜಿ. ಯವರೆಗಿನ ವಿಭಾಗದಲ್ಲಿ ಆಲೀರ ನಾಫೀಯಾ ಪ್ರಥಮ…
ಮಕ್ಕಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ
November 16, 2018ಮಡಿಕೇರಿ: ಪ್ರತಿಯೊಬ್ಬ ಮಕ್ಕ ಳಲ್ಲಿಯೂ ಸಹ ಒಂದೊಂದು ರೀತಿಯ ಪ್ರತಿಭೆ ಇದ್ದು, ಪ್ರತಿಭೆಯನ್ನು ಪ್ರೋತ್ಸಾಹಿ ಸುವ ನಿಟ್ಟಿನಲ್ಲಿ ಪೋಷಕರು ಉತ್ತೇಜನ ನೀಡುವಂತಾಗಬೇಕು ಎಂದು ಜಿಪಂ ಉಪಾ ಧ್ಯಕ್ಷೆ ಲೋಕೇಶ್ವರಿ ಗೋಪಾಲ್ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವ ಶಿಕ್ಷಣ ಅಭಿಯಾನ ಮತ್ತು ಮಾಧ್ಯಮಿಕ ಶಿಕ್ಷಣ ಅಭಿಯಾನ ಸಂಯುಕ್ತ ಆಶ್ರ ಯದಲ್ಲಿ ಗುರುವಾರ ನಗರದ ಸಂತ ಮೈಕ ಲರ ಪ್ರೌಢಶಾಲೆಯಲ್ಲಿ ನಡೆದ ಕೊಡಗು ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಹಾಗೂ ಪದವಿ ಪೂರ್ವ…