ಮಂಡ್ಯ: ಅಹಿಂದ ವರ್ಗವನ್ನು ವೋಟ್ ಬ್ಯಾಂಕ್ ಮಾಡಿಕೊಂಡು ಅಧಿಕಾರಕ್ಕೆ ಬರುವ ಕಾಂಗ್ರೆಸ್ ಸರ್ಕಾರ, ಹಿಂದುಳಿದವರಿಗೆ ಹಿಂದಿನಿಂದಲೂ ಭಾರೀ ಅನ್ಯಾಯ ಮಾಡಿಕೊಂಡೆ ಬಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಪಿ.ನಂಜುಂಡಿ ಗಂಭೀರ ಆರೋಪ ಮಾಡಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದಿನ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗದವರನ್ನು ಕಾಲು ಕಸದಂತೆ ನಡೆಸಿಕೊಂಡಿತು. ಸಿದ್ದ ರಾಮಯ್ಯ ಕಾಯಕ (ವಿಶ್ವಕರ್ಮ) ಸಮಾಜವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದರು ಎಂದು ದೂರಿದರು. ಕಾಂಗ್ರೆಸ್ ಪಕ್ಷವನ್ನು ಮತದಾರರು ಯಾವುದೇ ಕಾರಣಕ್ಕೂ ಬೆಂಬಲಿಸಬಾರದು. ಬಿಜೆಪಿಗೆ ಮತ…