ಮೈಸೂರು: ಕೆಆರ್ ಕ್ಷೇತ್ರದ ಶಾಸಕರೂ ಆದ ಮಾಜಿ ಸಚಿವ ಎಸ್.ಎ. ರಾಮದಾಸ್ ಅವರ ನೇತೃತ್ವದಲ್ಲಿ ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬವನ್ನು ಸದ್ಭಾವನಾ ದಿನವಾಗಿ ಆಚರಿಸಲಾಯಿತು. ಕೆಆರ್ ಕ್ಷೇತ್ರದ 20 ವಾರ್ಡ್ಗಳ ವ್ಯಾಪ್ತಿ ಯಲ್ಲಿ ಸ್ವಚ್ಛತಾ ಶ್ರಮದಾನ ನಡೆಸುವುದ ರೊಂದಿಗೆ ಮೈಸೂರಿನ ಕಾಡಾ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಸಭಾ ಕಾರ್ಯಕ್ರಮದಲ್ಲಿ ನಿವೃತ್ತ ಯೋಧರು, ಶಿಕ್ಷಕರು ಸೇರಿದಂತೆ ಹಲವರನ್ನು ಸನ್ಮಾನಿಸುವ ಮೂಲಕ ಮೋದಿಯವರ ಹುಟ್ಟುಹಬ್ಬವನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಎಸ್.ಎ. ರಾಮದಾಸ್, ವಿಶ್ವದಲ್ಲಿ ಭಾರತ…
ಮೈಸೂರು ಪಾಲಿಕೆ ಚುನಾವಣೆ : ಕೆಆರ್ ಕ್ಷೇತ್ರದಲ್ಲಿ ಬಿಜೆಪಿ ಎಲ್ಲಾ ವಾರ್ಡ್ ಗೆಲುವಿನ ಟಾರ್ಗೆಟ್-20
August 15, 2018ಮೈಸೂರು: ಬಿಜೆಪಿ ಭದ್ರಕೋಟೆಯಾಗಿರುವ ಕೃಷ್ಣರಾಜ ಕ್ಷೇತ್ರದಲ್ಲಿ ಮೈಸೂರು ಪಾಲಿಕೆ ಚುನಾವಣೆಯಲ್ಲಿ ಜಾತಿ ಮೀಸಲಾತಿಯ ಮೂಲಕ ಬಿಜೆಪಿಯನ್ನು ಕಟ್ಟಿ ಹಾಕಲು ಜೆಡಿಎಸ್ ಮತ್ತು ಕಾಂಗ್ರೆಸ್ ಸಂಚು ರೂಪಿಸಿದ್ದು, ಪಕ್ಷದ ಕಾರ್ಯಕರ್ತರು ಟಾರ್ಗೆಟ್-20 ಸೂತ್ರದೊಂದಿಗೆ ಅಭ್ಯರ್ಥಿಗಳ ಗೆಲುವಿಗೆ ಪಣ ತೊಡಬೇಕೆಂದು ಶಾಸಕ ಎಸ್.ಎ.ರಾಮದಾಸ್ ಸಲಹೆ ನೀಡಿದ್ದಾರೆ. ಮೈಸೂರು ನಗರ ಪಾಲಿಕೆಯ ಚುನಾವಣೆ ಹಿನ್ನೆಲೆಯಲ್ಲಿ ಮಂಗಳವಾರ ಗನ್ಹೌಸ್ ವೃತ್ತದ ಬಳಿ ಇರುವ ವಿದ್ಯಾಶಂಕರ ಕಲ್ಯಾಣ ಮಂಟಪದಲ್ಲಿ ಕೃಷ್ಣರಾಜ ಕ್ಷೇತ್ರದ ವಿವಿಧ ವಾರ್ಡ್ಗಳಿಂದ ಟಿಕೆಟ್ಗಾಗಿ ಅರ್ಜಿ ಸಲ್ಲಿಸಿರುವ ಆಕಾಂಕ್ಷಿಗಳ ಸಭೆಯನ್ನು ಉದ್ಘಾಟಿಸಿ ಮಾತನಾಡಿದ…
ಪಿಂಜರಾಪೋಲ್ ಮಾದರಿ ನಾಯಿಗಳಿಗೊಂದು ಆಶ್ರಯ ತಾಣ
July 26, 2018ಮೈಸೂರು: ನಗರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ಪಿಂಜರಾಪೋಲ್ ರೀತಿಯಲ್ಲೇ ಬೀದಿ ನಾಯಿಗಳನ್ನು ನೋಡಿಕೊಳ್ಳುವ ಕೇಂದ್ರವನ್ನು ಪ್ರಾರಂಭಿಸುವ ಕುರಿತು ಪಾಲಿಕೆ ಆಯುಕ್ತರೊಂದಿಗೆ ಚರ್ಚಿಸುವುದಾಗಿ ಶಾಸಕ ಎಸ್.ಎ.ರಾಮದಾಸ್ ಭರವಸೆ ನೀಡಿದ್ದಾರೆ. ಬುಧವಾರ ಬೆಳಿಗ್ಗೆ ಕೃಷ್ಣರಾಜ ಕ್ಷೇತ್ರದ ಹಿಂದಿನ 1 ಮತ್ತು 4ನೇ ವಾರ್ಡ್ ಸೇರಿ 51ನೇ ವಾರ್ಡ್ನ ಅಗ್ರಹಾರ, ರಾಮಾನುಜ ರಸ್ತೆ ಮತ್ತಿತರೆ ಪ್ರದೇಶಗಳಲ್ಲಿ ಪಾದಯಾತ್ರೆ ಮೂಲಕ ಸಾರ್ವಜನಿಕರಿಂದ ಸಮಸ್ಯೆ ಆಲಿಸಿದರು. ನಂತರ ಅವರು ಮಾತನಾಡಿ, ಈ ಭಾಗದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವ ಬಗ್ಗೆ ವ್ಯಾಪಕ…
ಮೈಸೂರಿನ 11ನೇ ವಾರ್ಡ್ನಲ್ಲಿ ಶಾಸಕ ರಾಮದಾಸ್ ಪಾದಯಾತ್ರೆ
July 24, 2018ಮೈಸೂರು: ಕೃಷ್ಣರಾಜ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವರಾದ ಎಸ್.ಎ.ರಾಮದಾಸ್ ಅವರು ಕೃಷ್ಣರಾಜ ಕ್ಷೇತ್ರದ ಹಿಂದಿನ 11ನೇ ವಾರ್ಡ್ ಇಂದು 61ನೇ ವಾರ್ಡ್ ಆಗಿ ಪರಿವರ್ತನೆ ಆಗಿರುವ ಪ್ರದೇಶಕ್ಕೆ ಪಾದಯಾತ್ರೆ ಮೂಲಕ ತೆರಳಿ ಸಾರ್ವಜನಿಕರ ಕುಂದು ಕೊರತೆ ಆಲಿಸಿದರು. ಧರಂಸಿಂಗ್ ಕಾಲೋನಿಯಲ್ಲಿ ಇರುವಂತಹ ಪೌರಕಾರ್ಮಿಕರ ಬಡಾವಣೆಯಲ್ಲಿ ಸಾರ್ವಜನಿಕರೊಂದಿಗೆ ಸಂವಾದ ಮಾಡುವ ಮೂಲಕ ಪಾದಯಾತ್ರೆ ಪ್ರಾರಂಭಿಸಿದರು. ಕಳೆದ 5 ವರ್ಷಗಳಿಂದ ಯಾವುದೇ ಕಾಮಗಾರಿಗಳು ಆಗಿಲ್ಲವೆಂದು ಜನರು ದೂರಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕರು ಸ್ಲಂ ಬೋರ್ಡ್ ಅಡಿಯಲ್ಲಿ ರಸ್ತೆ…
ಮಳೆ ನೀರು ಸರಾಗವಾಗಿ ಹರಿದು ಹೋಗಲು 72 ಕಿ.ಮೀ. ರಾಜಕಾಲುವೆ ಹೂಳೆತ್ತಲು ಅಧಿಕಾರಿಗಳಿಗೆ ಸೂಚನೆ
June 29, 2018ಮಳೆ ಹಾವಳಿ ತಡೆಗೆ ಅಧಿಕಾರಿಗಳೊಂದಿಗೆ ಶಾಸಕ ರಾಮದಾಸ್ ಸಭೆ ಮೈಸೂರು: ಮಳೆಗಾಲ ಆರಂಭವಾಗಿದ್ದು, ಕೆ.ಆರ್.ಕ್ಷೇತ್ರ ಸೇರಿದಂತೆ ಮೈಸೂರಿನಲ್ಲಿ 72 ಕಿ.ಮೀ. ರಾಜಕಾಲುವೆಯ ನಕ್ಷೆ ಸಿದ್ಧಪಡಿಸುವುದರೊಂದಿಗೆ ಒಂದು ತಿಂಗಳೊಳಗೆ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಹೂಳೆತ್ತಲು ಕ್ರಮ ಕೈಗೊಳ್ಳುವಂತೆ ಶಾಸಕ ಎಸ್.ಎ.ರಾಮದಾಸ್ ಅವರು ಮುಡಾ ಹಾಗೂ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮೈಸೂರು ನಗರ ಪಾಲಿಕೆ ಹಳೆ ಕೌನ್ಸಿಲ್ ಸಭಾಂಗಣದಲ್ಲಿ ಗುರುವಾರ ನಡೆದ ಕೆ.ಆರ್.ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಪಾಲಿಕೆ ಆಯುಕ್ತ ಕೆ.ಹೆಚ್.ಜಗದೀಶ್ ಸಮ್ಮುಖದಲ್ಲಿ ನಡೆದ ವಿವಿಧ ಇಲಾಖೆಯ…
ಕೆ.ಆರ್. ಕ್ಷೇತ್ರದ ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳ ಮತಯಾಚನೆ
May 3, 2018ಮೈಸೂರು: ಮೈಸೂರಿನ ಕೆ.ಆರ್.ಕ್ಷೇತ್ರದ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ಬುಧವಾರ ಕ್ಷೇತ್ರದ ವಿವಿಧ ಬಡಾವಣೆಗಳಲ್ಲಿ ತಮ್ಮ ಬೆಂಬಲಿಗ ರೊಂದಿಗೆ ಬಿರುಸಿನಿಂದ ಮತ ಯಾಚಿಸಿದರು. ಕಾಂಗ್ರೆಸ್: ಕೆ.ಆರ್.ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಶಾಸಕ ಎಂ.ಕೆ.ಸೋಮಶೇಖರ್, ತಮ್ಮ ಬೆಂಬಲಿಗರೊಂದಿಗೆ ಅಗ್ರಹಾರ ಸೇರಿ ದಂತೆ ವಿವಿಧ ಬಡಾವಣೆಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿದರು. ಈ ವೇಳೆ ಮಾತ ನಾಡಿದ ಅವರು, ಕಳೆದ 5 ವರ್ಷಗಳಿಂದ ಕೆ.ಆರ್.ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯ ನಡೆಸಲಾಗಿದೆ. ಅಲ್ಲದೆ ಸಿಎಂ ಸಿದ್ದ ರಾಮಯ್ಯ ಅವರು 5 ವರ್ಷದಲ್ಲಿ ನೀಡಿ…