ಕೆ.ಆರ್.ನಗರ: ಸುದೀರ್ಘ 18 ವರ್ಷ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿ, ನಿವೃತ್ತಿ ಹೊಂದಿದ ನಂತರ ಸ್ವಗ್ರಾಮಕ್ಕೆ ಹಿಂತಿರುಗುತ್ತಿದ್ದ ಮಾಜಿ ಸೈನಿಕನಿಗೆ ಸರ್ಕಲ್ ಇನ್ಸ್ಪೆಕ್ಟರ್ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಗ್ರಾಮ ಸ್ಥರು ಕೆ.ಆರ್.ನಗರ ಪೊಲೀಸ್ ಠಾಣೆ ಮುಂದೆ ಇಂದು ಪ್ರತಿಭಟನೆ ನಡೆಸಿದರು. ಸೇನೆಯಿಂದ ನಿವೃತ್ತಿ ಹೊಂದಿ ಸ್ವಗ್ರಾಮ ತಾಲೂಕಿನ ಚಿಕ್ಕವಡ್ಡರಗುಡಿಗೆ ಹಿಂತಿರುಗುತ್ತಿದ್ದ ಮಾಜಿ ಸೈನಿಕ ಸಿ.ಎಂ.ಶ್ರೀಧರ್ ಅವ ರನ್ನು ಗ್ರಾಮಸ್ಥರು ಕೆ.ಆರ್.ನಗರ ಪಟ್ಟಣದಲ್ಲಿ ಬರಮಾಡಿಕೊಂಡು ಮೆರವಣಿಗೆ ಮೂಲಕ ಕರೆದೊಯ್ಯುತ್ತಿದ್ದರು. ಈ ವೇಳೆ ಸರ್ಕಲ್ ಇನ್ಸ್ಪೆಕ್ಟರ್ ಕೆ.ಕೆ. ರಘು,…