ಕೆ.ಆರ್.ಪೇಟೆ: ವಿದ್ಯಾರ್ಥಿಗಳ ಪ್ರತಿಭೆ ಗುರ್ತಿಸಿ ಪ್ರತಿಭಾ ಕಾರಂಜಿ, ಕ್ರೀಡಾ ಕೂಟ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸೂಕ್ತ ವೇದಿಕೆ ಕಲ್ಪಿಸಬೇಕಾದುದು ಶಾಲೆಯ ಶಿಕ್ಷಕರ ಜವಾಬ್ದಾರಿಯಾಗಿದೆ ಎಂದು ಶಾಸಕ ಡಾ.ಕೆ.ಸಿ.ನಾರಾಯಣಗೌಡ ಹೇಳಿದರು. ತಾಲೂಕಿನ ಮುರುಕನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸೋಮವಾರ ನಡೆದ ಕಸಬಾ ಸಿಆರ್ಸಿ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಯೊಂದು ಮಗುವಿನಲ್ಲೂ ಒಂದಲ್ಲ ಒಂದು ಪ್ರತಿಭೆ ಇದ್ದೇ ಇರುತ್ತದೆ. ಅದನ್ನು ಗಮನಿಸಿ ಆ ಮಗುವಿಗೆ ಸೂಕ್ತ ವೇದಿಕೆ ಕಲ್ಪಿಸಿಕೊಡುವ ಕೆಲಸವನ್ನು ಶಿಕ್ಷಕರು ಮಾಡಬೇಕು….
ಟೀ ಕುಡಿಯುವ ಸೋಗಿನಲ್ಲಿ ಮಾಂಗಲ್ಯ ಸರ ಅಪಹರಣ
July 24, 2018ಕೆ.ಆರ್.ಪೇಟೆ: ಟೀ ಕುಡಿಯುವ ಸೋಗಿನಲ್ಲಿ ನಿಂತಿದ್ದ ಯುವಕರಿಬ್ಬರು ಮಹಿಳೆಯ ಮಾಂಗಲ್ಯ ಸರ ಕಿತ್ತುಕೊಂಡು ಬೈಕಿನಲ್ಲಿ ಪರಾರಿಯಾಗಿರುವ ಘಟನೆ ಪಟ್ಟಣದ ಸುಭಾಷ್ನಗರಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಪಟ್ಟಣದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಚೇರಿ ಕಟ್ಟಡದ ನೆಲ ಅಂತಸ್ತಿನಲ್ಲಿ ಟೀ ಅಂಗಡಿ ನಡೆಸುತ್ತಿರುವ ಮಹದೇವ್ ಪತ್ನಿ ರತ್ನಮ್ಮ ಚಿನ್ನದ ಸರ ಕಳೆದು ಕೊಂಡವರು. ಘಟನೆ ವಿವರ: ರತ್ನಮ್ಮ ಅವರು ಎಂದಿನಂತೆ ಬೆಳಿಗ್ಗೆ 5.30ರಲ್ಲಿ ಟೀ ಅಂಗಡಿ ಮುಂಭಾಗ ಕಸ ಗುಡಿಸುವು ದರಲ್ಲಿ ನಿರತರಾಗಿದ್ದರು. ಈ ವೇಳೆ ಅಂಗಡಿ ಮುಂದೆ…
ಹಾಡಹಗಲೇ ಮನೆಗಳ್ಳತನ: ನಗನಾಣ್ಯ ಅಪಹರಣ
July 24, 2018ಕೆ.ಆರ್.ಪೇಟೆ: ಹಾಡಹಗಲೇ ಮನೆಗೆ ನುಗ್ಗಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ತಾಲೂಕಿನ ಅಘಲಯ ಸಮೀಪದ ನಾಯಸಿಂಗನಹಳ್ಳಿ ಗ್ರಾಮದಲ್ಲಿ ಸೋಮ ವಾರ ಮಧ್ಯಾಹ್ನ ನಡೆದಿದೆ. ಗ್ರಾಮದ ದಿನೇಶ್ ಅವರ ಮನೆಯಲ್ಲೇ ಕಳ್ಳತನ ನಡೆದಿರುವುದು. ಘಟನೆ ವಿವರ: ನಾಯಸಿಂಗನಹಳ್ಳಿ ಗ್ರಾಮದ ದಿನೇಶ್ ದಂಪತಿ ಮನೆಗೆ ಬೀಗ ಹಾಕಿಕೊಂಡು ಕೂಲಿಗೆ ಹೋಗಿದ್ದರು. ಇದನ್ನು ಗಮಸಿರುವ ದುಷ್ಕರ್ಮಿಗಳು ಮನೆಯ ಬೀಗ ಮುರಿದು ಒಳನುಗ್ಗಿ ಕಬ್ಬಿಣದ ರಾಡಿನಿಂದ ಬೀರು ಬಾಗಿಲು ಮುರಿದು ಬೀರುವಿನಲ್ಲಿದ್ದ 2 ಉಂಗುರ, 1 ಸರ, ಓಲೆ ಸೇರಿದಂತೆ 1ಲಕ್ಷ ರೂ.ಮೌಲ್ಯದ…
ಗ್ರಾಪಂ ಸದಸ್ಯನ ಮೇಲೆ ಹಲ್ಲೆ
July 23, 2018ಕೆ.ಆರ್.ಪೇಟೆ: ಮೂವರ ಗುಂಪೊಂದು ಗ್ರಾಪಂ ಸದಸ್ಯನ ಬೈಕ್ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿ ನಗ-ನಾಣ್ಯ ದೋಚಿರುವ ಘಟನೆ ತಾಲೂಕಿನ ಕಿಕ್ಕೇರಿ ಹೋಬಳಿಯ ಬಿದರಹಳ್ಳಿ ಗೇಟ್ ಬಳಿಯ ಫಾರಂ ಹೌಸ್ ಹತ್ತಿರ ಶುಕ್ರವಾರ ನಡೆದಿದೆ. ತಾಲೂಕಿನ ಕಿಕ್ಕೇರಿ ಹೋಬಳಿಯ ಹೊಳೆ ಮಾರ್ಗೋನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಅಜ್ಜೇಗೌಡ(48) ಗಾಯಗೊಂಡವರು. ವಿವರ: ಚನ್ನರಾಯಪಟ್ಟಣಕ್ಕೆ ಹೋಗಿದ್ದ ಅಜ್ಜೇಗೌಡರು ಶುಕ್ರವಾರ ರಾತ್ರಿ 10 ಗಂಟೆ ವೇಳೆ ಬೈಕಿನಲ್ಲಿ ವಾಪಸ್ ಬರುತ್ತಿದ್ದರು. ಈ ಸಂದರ್ಭದಲ್ಲಿ ಹೊಳೆ ಮಾರ್ಗೋನ ಹಳ್ಳಿ ರಘು,…
2ನೇ ಮಹಡಿಯಿಂದ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು
July 22, 2018ಕೆ.ಆರ್.ಪೇಟೆ: ಪೂಜೆ ಸಲ್ಲಿಸುವ ವೇಳೆ ಮನೆಯ 2ನೇ ಮಹಡಿಯಿಂದ ಕಾಲು ಜಾರಿಬಿದ್ದು ವ್ಯಕ್ತಿಯೊರ್ವ ಸಾವನ್ನಪ್ಪಿರುವ ಘಟನೆ ಪಟ್ಟಣದ ಬಸವೇಶ್ವರ ನಗರದಲ್ಲಿ ಶನಿವಾರ ನಡೆದಿದೆ. ತಾಲೂಕಿನ ಗವಿಮಠ ಶ್ರೀ ಕ್ಷೇತ್ರದ ಉಸ್ತುವಾರಿ ಹಾಗೂ ಸ್ವತಂತ್ರ ಸಿದ್ದ ಲಿಂಗೇಶ್ವರ ಸ್ವಾಮಿ ದೇವಾಲಯದ ಪ್ರಧಾನ ಅರ್ಚಕ ಬಸವರಾಜಪ್ಪ ಅವರ ಪುತ್ರ ನಂದೀಶ್ ಹಿರೇಮಠ್(47) ಮೃತಪಟ್ಟ ವ್ಯಕ್ತಿ. ನಂದೀಶ್ ಅವರು ಬೆಳಿಗ್ಗೆ ಸ್ನಾನ ಮಾಡಿ ದೇವರಿಗೆ ಪೂಜೆ ಸಲ್ಲಿಸುವ ವೇಳೆ ತಾವು ವಾಸವಿದ್ದ ಮನೆಯ ಎರಡನೇ ಮಹಡಿಯ ಮೇಲಿಂದ ಆಕಸ್ಮಿಕವಾಗಿ ಕಾಲು ಜಾರಿ…
ಸೆಲ್ಫಿ ತೆಗೆಯಲು ಹೋಗಿ ಯುವಕ ನೀರು ಪಾಲು
July 18, 2018ಕೆ.ಆರ್.ಪೇಟೆ: ಸೆಲ್ಫಿ ತೆಗೆದು ಕೊಳ್ಳಲು ಹೋಗಿ ಯುವಕನೊಬ್ಬ ನೀರು ಪಾಲಾಗಿರುವ ಘಟನೆ ತಾಲೂಕಿನ ಹರಿ ಹರಪುರ-ಅಕ್ಕಿಹೆಬ್ಬಾಳು ಸಂಪರ್ಕ ಕಲ್ಪಿಸುವ ಸೇತುವೆ ಬಳಿ ಮಂಗಳವಾರ ಸಂಜೆ ನಡೆದಿದೆ. ತಾಲೂಕಿನ ಹರಿಹರಪುರ ಗ್ರಾಮದ ಗಣೇಶ್ ಎಂಬುವರ ಪುತ್ರ ಶಿವಕುಮಾರ್ (28) ನೀರು ಪಾಲಾದ ಯುವಕ. ಘಟನೆ ವಿವರ: ಗೊರೂರಿನ ಹೇಮಾವತಿ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಹೇಮಾವತಿ ನದಿಗೆ ಸುಮಾರು 30 ಸಾವಿರ ಕ್ಯೂಸೆಕ್ಸ್ ನೀರು ಹರಿಸಲಾಗುತ್ತಿದ್ದು, ಉಕ್ಕಿ ಹರಿಯುತ್ತಿರುವ ನದಿಯ ಪ್ರವಾಹ ನೋಡಲು ತೆರಳಿದ್ದ ಶಿವಕುಮಾರ್ ಸೇತುವೆ ಮೇಲೆ ನಿಂತು…
ಪ್ರತಿಯೊಬ್ಬರೂ ದುಶ್ಚಟಗಳಿಂದ ದೂರವಿರಿ
June 27, 2018ಕೆ.ಆರ್.ಪೇಟೆ; ಸಮಾಜದಲ್ಲಿ ನಡೆಯುವ ಶೇ.80ರಷ್ಟು ಅಪರಾಧಗಳಿಗೆ ದುಶ್ಚಟಗಳೇ ಮೂಲ ಕಾರಣ. ಹಾಗಾಗಿ ಪ್ರತಿಯೊಬ್ಬರೂ ದುಶ್ಚಟಗಳಿಂದ ದೂರವಿರ ಬೇಕು ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಸಂಸ್ಥೆ ಮೈಸೂರು ವಿಭಾಗದ ಪ್ರಾದೇಶಿಕ ನಿರ್ದೇಶಕ ಶ್ರೀಹರಿ ಮನವಿ ಮಾಡಿದರು. ಪಟ್ಟಣದ ನಾಲ್ವಡಿ ಕೃಷ್ಣರಾಜ ಒಡೆಯರ್ ತಾಲೂಕು ಕ್ರೀಡಾಂಗಣದಲ್ಲಿ ಶ್ರೀಕ್ಷೇತ್ರ ಧರ್ಮ ಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ, ಜಿಲ್ಲಾ ಜನಜಾಗೃತಿ ವೇದಿಕೆ ಹಾಗೂ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ಅಂತಾ ರಾಷ್ಟ್ರೀಯ ಮಾದಕವಸ್ತು ವಿರೋಧಿ ದಿನಾ…
ಸಿ.ಫಾರಂ ಮೇಲೆ ನಾರಾಯಣಗೌಡ, ದೇವರಾಜು ನಾಮಪತ್ರ ಸಲ್ಲಿಕೆ: ಗೊಂದಲ
April 25, 2018ಕೆ.ಆರ್.ಪೇಟೆ: ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿಯುವಂತೆ ಶಾಸಕ ಕೆ.ಸಿ.ನಾರಾಯಣಗೌಡ ಮತ್ತು ಜಿಪಂ ಸದಸ್ಯ ಬಿ.ಎಲ್.ದೇವರಾಜು ಅವರಿಗೆ ಸಿ.ಫಾರಂ ನೀಡಿದ ಹಿನ್ನೆಲೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಹಾಲಿ ಶಾಸಕ ಕೆ.ಸಿ.ನಾರಾಯಣಗೌಡರು ಜೆಡಿಎಸ್ ವರಿಷ್ಠರಿಂದ ಬಿ.ಫಾರಂ ಪಡೆದು ಏ.23ರಂದು ಸಾವಿರಾರು ಕಾರ್ಯಕರ್ತ ರೊಂದಿಗೆ ಪಟ್ಟಣದ ಮಿನಿ ವಿಧಾನಸೌಧ ದಲ್ಲಿ ನಾಮಪತ್ರ ಸಲ್ಲಿಸಿದ್ದರು. ಆದರೆ ಜಿಪಂ ಸದಸ್ಯ ಬಿ.ಎಲ್.ದೇವರಾಜು ಸೋಮವಾರ ಸಂಜೆ ಜೆಡಿಎಸ್ ವರಿಷ್ಠ…