ಚುನಾವಣೆಗೆ ಹೋಗಲು ಸಂಘ ಪರಿವಾರ ಸೂಚನೆ ಬೆಂಗಳೂರು: ಮುಖ್ಯಮಂತಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರವನ್ನು ಕೆಳಗಿಸಿ, ಅಧಿಕಾರ ಹಿಡಿಯುವ ವಿಷಯದಲ್ಲಿ ರಾಜ್ಯ ಬಿಜೆಪಿ ಯಲ್ಲೇ ಗೊಂದಲ ನಿರ್ಮಾಣವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸರ್ಕಾರ ರಚನೆಗೆ ಮುಂದಾಗಿದ್ದರೆ, ಮತ್ತೊಂದೆಡೆ ಸಂಘಟನಾ ಕಾರ್ಯದರ್ಶಿ ಸಂತೋಷ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಈಶ್ವರಪ್ಪ ಕ್ಯಾತೆ ತೆಗೆದಿದ್ದಾರೆ. ಸಂಘ ಪರಿವಾರಕ್ಕಂತೂ ವಲಸಿಗರನ್ನು ಕಟ್ಟಿಕೊಂಡು ಸರ್ಕಾರ ಮಾಡುವ ಬದಲು ಮಧ್ಯಂತರ ಚುನಾವಣೆಗೆ ತೆರಳಿ, ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಕಿವಿಮಾತು ಹೇಳಿದ್ದಾರೆ. ಹಠಾತ್ ಬೆಳವಣಿಗೆಯಲ್ಲಿ…
ಟಿಪ್ಪು ಹಿಡಿದುಕೊಂಡವರೆಲ್ಲಾ ಹಾಳಾಗಿ ಹೋಗಿದ್ದಾರೆ, ಈಗ ಸಿಎಂ ಕುಮಾರಸ್ವಾಮಿ ಸರದಿ
November 8, 2018ಹಾಸನ: ಟಿಪ್ಪುವನ್ನು ಹಿಡಿದುಕೊಂಡ ವರೆಲ್ಲಾ ಈಗಾಗಲೇ ಹಾಳಾಗಿ ಹೋಗಿದ್ದು, ಇದನ್ನೇ ಮುಂದುವರೆಸಲು ಹೊರಟಿರುವ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸರದಿ ಬಂದಿದೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು. ಅದಿ ದೇವತೆ ಹಾಸನಾಂಬೆ ದರ್ಶನ ವನ್ನು ಕುಟುಂಬ ಸಮೇತ ಪಡೆದು ಹೊರಗೆ ಬಂದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಟಿಪ್ಪು ಹಿಡಿದುಕೊಂಡವರೆಲ್ಲಾ ಹಾಳಾಗಿ ಹೋಗಿದ್ದಾರೆ. ಟಿಪ್ಪು ಜಯಂತಿಗೆ ಅವಕಾಶ ಮಾಡಿಕೊಟ್ಟ ಸಿದ್ದರಾಮಯ್ಯ ಅವರ ಕಥೆ ಏನಾಯಿತು. ಮಲ್ಯ ಅವರ ಗತಿ ಏನಾಯಿತು. ಎಲ್ಲವೂ ಗೊತ್ತಿರುವ ವಿಚಾರ ಈಗ…
ಪ್ರಪಂಚದಲ್ಲೇ ದುಷ್ಟ ಸಿಎಂ ಕುಮಾರಸ್ವಾಮಿ
September 21, 2018ಶಿವಮೊಗ್ಗ: ಪ್ರಪಂಚದಲ್ಲಿರುವ ಎಲ್ಲರಿಗಿಂತಲೂ ದುಷ್ಟ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಎಂದು ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಈಶ್ವರಪ್ಪ, ಕುಮಾರಸ್ವಾಮಿ ಒಬ್ಬ ಮುಖ್ಯಮಂತ್ರಿಯಾಗಿ ತಮ್ಮ ಸ್ಥಾನ ಉಳಿಸಿಕೊಳ್ಳಲು ರಾಜ್ಯದ ಜನರು ದಂಗೆ ಏಳುವಂತೆ ಕರೆ ನೀಡಿರುವುದು ಅಪರಾಧ. ಕುಮಾರ ಸ್ವಾಮಿ ಅವರು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದಾರೆ. ಹೀಗಾಗಿ ಕೂಡಲೇ ಅವರು ರಾಜ್ಯದ ಜನರ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು. ಮಾಜಿ ಸಚಿವ, ಕಾಂಗ್ರೆಸ್ ನಾಯಕ ಎ.ಮಂಜು ಆರೋಪಿಸಿರುವಂತೆ ಸಚಿವ ರೇವಣ್ಣ ಪುತ್ರ ಪ್ರಜ್ವಲ್ ಭೂ ಕಬಳಿಕೆ ಮಾಡಿರುವುದು…
ರಾಜ್ಯ ಸರ್ಕಾರದಿಂದ ವರ್ಗಾವಣೆ ದಂಧೆ: ಸೂಕ್ತ ಕ್ರಮ ಕೈಗೊಳ್ಳಲು ಚು.ಆಯೋಗಕ್ಕೆ ಈಶ್ವರಪ್ಪ ಆಗ್ರಹ
August 12, 2018ಮೈಸೂರು: ನಗರ ಸ್ಥಳೀಯ ಸಂಸ್ಥೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ರಾಜ್ಯ ಸರ್ಕಾರ ಮಾತ್ರ ವರ್ಗಾವಣೆ ದಂಧೆ ನಡೆಸುತ್ತಿದೆ. ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ. ಮೈಸೂರಿನ ಖಾಸಗಿ ಹೊಟೇಲ್ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ 52 ತಹಸೀಲ್ದಾರ್, ಸಮಾಜ ಕಲ್ಯಾಣ ಇಲಾಖೆಯ ಸಿ ಗ್ರೂಪ್ ನೌಕರರು ಹಾಗೂ ಸಬ್ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಲಾಗಿದೆ. ನೀತಿ ಸಂಹಿತೆ ಜಾರಿಯಲ್ಲಿರುವಾಗ ವರ್ಗಾವಣೆ ಮಾಡಬಾರದೆಂಬ ತಿಳಿವಳಿಕೆ ಮುಖ್ಯಮಂತ್ರಿ…
ಲೋಕಸಭಾ ಚುನಾವಣೆಗೂ ಮುನ್ನವೇ ರಾಜ್ಯ ಸರ್ಕಾರ ಪತನ : ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಭವಿಷ್ಯ
August 10, 2018ಚಾಮರಾಜನಗರ: ಮುಂಬರುವ ಲೋಕಸಭಾ ಚುನಾವ ಣೆಗೂ ಮುನ್ನವೇ ರಾಜ್ಯದಲ್ಲಿ ಅಧಿಕಾರದಲ್ಲಿ ಇರುವ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನವಾಗಲಿದೆ ಎಂದು ಮಾಜಿ ಮುಖ್ಯ ಮಂತ್ರಿ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಭವನದಲ್ಲಿ ಗುರುವಾರ ಕರೆದಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಜನ ಸಾಮಾನ್ಯರಿಗೆ ಭಾರ ಆಗಿದೆ. ಆಡಳಿತ ವೈಫಲ್ಯವಾಗಿದೆ, ಆಡಳಿತ ಕೇಂದ್ರ ವಿಧಾನ ಸೌಧದಲ್ಲಿ ವರ್ಗಾವಣೆ ದಂಧೆ ವಿಪರೀತ ವಾಗಿದೆ. ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಇಷ್ಟು…
ಮೋದಿಯನ್ನು ವಿಶ್ವವೇ ಒಪ್ಪುತ್ತದೆ… ಸಿದ್ದರಾಮಯ್ಯ, ಪಾಕಿಸ್ತಾನ ಒಪ್ಪುವುದಿಲ್ಲ
August 10, 2018ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಡೀ ವಿಶ್ವವೇ ಒಪ್ಪುತ್ತದೆ. ಆದರೆ ಸಿದ್ದರಾಮಯ್ಯ ಮತ್ತು ಪಾಕಿಸ್ತಾನ ಮಾತ್ರ ಒಪ್ಪುವುದಿಲ್ಲ. ದೇಶದ ಪ್ರಧಾನಿ ಆಗಿರುವ ನರೇಂದ್ರ ಮೋದಿ ಅವರು, ದೇಶದ ರಕ್ಷಣೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಪಾಕಿಸ್ತಾನದ ಗೂಂಡಾವರ್ತನೆಗೆ ಸರಿಯಾದ ರೀತಿಯಲ್ಲಿಯೇ ಉತ್ತರ ಕೊಡುತ್ತಿದ್ದಾರೆ. ದೇಶದ ಪ್ರತಿಯೊಬ್ಬ ಸೈನಿಕನಿಗೂ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಮಾಡುತ್ತಿದ್ದಾರೆ. ಎಲ್ಲರೊಂದಿಗೆ ಪ್ರೀತಿ-ವಿಶ್ವಾಸದಿಂದ ಇಂದು ಭಾರತದ ಗೌರವವನ್ನು ಪ್ರಪಂಚಕ್ಕೆ ಕೊಂಡೊಯ್ದಿದ್ದಾರೆ. ಇಡೀ ವಿಶ್ವವೇ ನರೇಂದ್ರ ಮೋದಿ ಅವರನ್ನು ಹಾಡಿ ಹೊಗಳುತ್ತಿದೆ. ಆದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
‘ಗಂಡ ಸತ್ತ ಹೆಂಡತಿ, ಹೆಂಡತಿ ಸತ್ತ ಗಂಡನ ಕೂಡಾವಳಿಯಂತೆ ಸರ್ಕಾರ’
August 10, 2018ಚಾಮರಾಜನಗರ: ಗಂಡ ಸತ್ತ ಹೆಂಡತಿ, ಹೆಂಡತಿ ಸತ್ತ ಗಂಡ ಕೂಡಾವಳಿ ಮಾಡಿಕೊಂಡು ಜೀವನ ನಡೆಸುವಂತೆ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಕೂಡಾವಳಿ ಮಾಡಿಕೊಂಡಿವೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು. ನಗರದ ನಂದಿ ಭವನದಲ್ಲಿ ಗುರುವಾರ ನಡೆದ ಪಕ್ಷದ ಶಕ್ತಿ ಕೇಂದ್ರದ ಮೇಲ್ಪಟ್ಟ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹೆಂಡತಿ ಸತ್ತ ಗಂಡ, ಗಂಡ ಸತ್ತ ಹೆಂಡತಿ ಕೂಡಿಕೊಂಡು ಜೀವನ ನಡೆಸುವಂತೆ ಜೆಡಿಎಸ್-ಕಾಂಗ್ರೆಸ್ ಕೂಡಿಕೊಂಡು ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಈ ಸರ್ಕಾರದಲ್ಲಿ ಹೊಂದಾಣಿಕೆ ಇಲ್ಲ. ರಾಜ್ಯದ…
ಕಾಂಗ್ರೆಸ್ ಅತೃಪ್ತ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಕೆ.ಎಸ್.ಈಶ್ವರಪ್ಪ ಬಾಂಬ್
June 11, 2018ಮೈಸೂರು: ಸಚಿವ ಸ್ಥಾನದಿಂದ ವಂಚಿತರಾಗಿ ಅತೃಪ್ತರಾಗಿರುವ ಕಾಂಗ್ರೆಸ್ನ ಹಲವು ಶಾಸಕರು ನನ್ನ ಸಂಪರ್ಕದಲ್ಲಿದ್ದು, ಮುಂದೇನಾಗುತ್ತದೆ ಕಾದು ನೋಡಿ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಬಾಂಬ್ ಸಿಡಿಸಿದ್ದಾರೆ. ಜನ್ಮ ದಿನದ ಹಿನ್ನೆಲೆಯಲ್ಲಿ ಭಾನುವಾರ ಚಾಮುಂಡಿಬೆಟ್ಟಕ್ಕೆ ತೆರಳಿ ದೇವಿಯ ದರ್ಶನ ಪಡೆದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಅಪವಿತ್ರ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿವೆ. ಈ ಸಮ್ಮಿಶ್ರ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ. ಈಗಾಗಲೇ ಒಳಗೊಳಗೇ ಅಸಮಾಧಾನ ಹೆಚ್ಚಾಗಿದೆ. ಕಾಂಗ್ರೆಸ್ ಜೆಡಿಎಸ್ಗೆ ಶರಣಾದಂತೆ…
ನಂಜನಗೂಡಿನಲ್ಲಿ ಕೆ.ಎಸ್.ಈಶ್ವರಪ್ಪ ಹುಟ್ಟು ಹಬ್ಬ ಆಚರಣೆ
June 11, 2018ಮೈಸೂರು: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಭಾನುವಾರ ನಂಜನಗೂಡಿನ ದತ್ತಾತ್ರೇಯ ದೇವಾಲಯದಲ್ಲಿ ವಿಶೇಷ ಹೋಮ ನಡೆಸಿ, ಶ್ರೀಕಂಠೇಶ್ವರ ದೇವಾಲಯದಲ್ಲಿ ಪೂಜೆ ನೆರವೇರಿಸಿ 70ನೇ ಜನ್ಮ ದಿನವನ್ನು ಸಾರ್ವಜನಿಕರು ಹಾಗೂ ಬೆಂಬಲಿಗರೊಂದಿಗೆ ಆಚರಿಸಿಕೊಂಡರು. ಜನ್ಮ ದಿನದ ಹಿನ್ನೆಲೆಯಲ್ಲಿ ಶನಿವಾರವೇ ಕುಟುಂಬದ ಸದಸ್ಯರೊಂದಿಗೆ ಮೈಸೂರಿಗೆ ಆಗಮಿಸಿ ನಂಜನಗೂಡು ರಸ್ತೆಯಲ್ಲಿರುವ ವಸತಿ ಸಮುಚ್ಛಯವೊಂದರಲ್ಲಿ ವಾಸ್ತವ್ಯ ಹೂಡಿದ್ದ ಕೆ.ಎಸ್.ಈಶ್ವರಪ್ಪ ಅವರು, ಇಂದು ಬೆಳಿಗ್ಗೆ ನಂಜನಗೂಡಿನಲ್ಲಿರುವ ದತ್ತಾತ್ರೇಯ ದೇವಾಲಯದಲ್ಲಿ ಆಧ್ಯಾತ್ಮಿಕ ಚಿಂತಕ ದ್ವಾರಕಾನಾಥ್ ಅವರ ನೇತೃತ್ವದಲ್ಲಿ ಚಂಡಿಕಾ ಯಾಗ ಸೇರಿದಂತೆ ವಿವಿಧ ಹೋಮ-ಹವನ…
‘ಸಾಲ ಮನ್ನಾ’ ಮಾತು ಉಳಿಸಿಕೊಳ್ಳಲಿ ಬಿಜೆಪಿ ಮುಖಂಡ, ಶಾಸಕ ಕೆ.ಎಸ್.ಈಶ್ವರಪ್ಪ ಒತ್ತಾಯ
May 31, 2018ಬೇಲೂರು: ಸಚಿವ ಸಂಪುಟ ವಿಸ್ತರಣೆಗೂ ಮುನ್ನ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸಾಲ ಮನ್ನಾ ಮಾಡಿ ಪ್ರಣಾಳಿಕೆಯಲ್ಲಿ ನೀಡಿದ ಮಾತನ್ನು ಉಳಿಸಿಕೊಳ್ಳಲಿ ಎಂದು ಬಿಜೆಪಿ ಮುಖಂಡ ಶಾಸಕ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ. ತಾಲೂಕಿನ ಹಳೇಬೀಡು ಶ್ರೀಹೊಯ್ಸ ಳೇಶ್ವರ ದೇಗುಲಕ್ಕೆ ಭೇಟಿ ವೇಳೆ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ರಾಜ್ಯದ ಸಮ್ಮಿಶ್ರ ಸರ್ಕಾರವು ಅಪವಿತ್ರ ಮೈತ್ರಿ ಯಾಗಿದೆ. ಇದು ಇನ್ನಾರು ತಿಂಗಳಲ್ಲಿ ಕುಸಿಯ ಲಿದ್ದು, ನಂತರ ಚುನಾವಣೆ ನಡೆಯಲಿದೆ. ಇಲ್ಲವೆ ತಮ್ಮ ಪಕ್ಷವು ಅಧಿಕಾರಕ್ಕೆ ಬರು ತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು….