ಮೈಸೂರು: ವಿಶ್ವ ರೈತ ದಿನಾಚರಣೆ ಹಾಗೂ ರೈತ ಹೋರಾಟಗಾರ ದಿ.ಕೆ.ಎಸ್.ಪುಟ್ಟಣ್ಣಯ್ಯ ಅವರ 70ನೇ ಹುಟ್ಟುಹಬ್ಬದ ಪ್ರಯುಕ್ತ ಡಿ.23ರಂದು ಬೆಳಿಗ್ಗೆ 11 ಗಂಟೆಗೆ ಪಾಂಡವಪುರ ತಾಲೂಕಿನ ಎಣ್ಣೆಹೊಳೆ ಕೊಪ್ಪಲು ಗ್ರಾಮದಲ್ಲಿ ದಿ. ಪುಟ್ಟಣ್ಣಯ್ಯ ಪುತ್ಥಳಿ ಅನಾವರಣ ಹಾಗೂ ಪ್ರಶಸ್ತಿ ಪ್ರದಾನ ಸಮಾ ರಂಭ ಹಮ್ಮಿಕೊಂಡಿರುವುದಾಗಿ ಕೆ.ಎಸ್.ಪುಟ್ಟಣ್ಣಯ್ಯ ಅಭಿ ಮಾನಿ ಬಳಗದ ವೈ.ಪಿ.ಮಂಜುನಾಥ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಕೃಷ್ಣಶಿಲೆಯಲ್ಲಿ ಮೂಡಿರುವ ಪುಟ್ಟಣ್ಣಯ್ಯರ ಪುತ್ಥಳಿ ಯನ್ನು ಗ್ರಾಮದ ಶಾಲಾ ಕಟ್ಟಡದ ಮುಂದೆ ಅನಾವರಣಗೊಳಿಸಲಾಗುವುದು…