ಮೈಸೂರು: ಸರ್ಕಾರಗಳು ಯಾವುದೇ ಸಮುದಾಯಕ್ಕೆ ಸವಲತ್ತು ಕಲ್ಪಿಸಲು ತಾರತಮ್ಯ, ಓಟ್ಬ್ಯಾಂಕ್ ರಾಜಕಾರಣ ಮಾಡಬಾರದು ಎಂದು ಶಾಸಕ ಎಲ್.ನಾಗೇಂದ್ರ ತಿಳಿಸಿದರು. ನಗರದ ಚಂದ್ರಗುಪ್ತ ರಸ್ತೆಯ ಎಂ.ಎಲ್.ಜೈನ್ ಬೋರ್ಡಿಂಗ್ ಹೋಂನ ಎಂ.ಎಲ್.ವರ್ಧಮಾನಯ್ಯ ಸ್ಮಾರಕ ಭವನದಲ್ಲಿ ಕರ್ನಾಟಕ ಜೈನ್ ಸ್ವಯಂ ಸೇವಾ ಚಾರಿಟಬಲ್ ಟ್ರಸ್ಟ್ ಭಾನುವಾರ ಆಯೋಜಿಸಿದ್ದ `ಮೈಸೂರು ನಗರದ ಜೈನ್ ಮಹಿಳಾ ಸ್ವ-ಸಹಾಯ ಸಂಘಗಳ ಸಮಾವೇಶ’ದಲ್ಲಿ ಮಾತನಾಡಿದ ಅವರು, ಜೈನ ಸಮುದಾಯವು ಶಾಂತಿ, ನೆಮ್ಮದಿಯಿಂದ ಯಾರಿಗೂ ತೊಂದರೆಕೊಡದೆ ಸಮಾಜದಲ್ಲಿ ಸೌಹಾರ್ದಯುತ ಜೀವನ ನಡೆಸುತ್ತಿದೆ. ಈ ಸಮುದಾಯಕ್ಕೆ ಸರ್ಕಾರದ ಯೋಜನೆಗಳು, ಸವಲತ್ತುಗಳು…
ಇಂದು ಸ್ವಕುಳಸಾಳಿ ಸಮಾಜದ ಸಮಾವೇಶ
July 29, 2018ಮೈಸೂರು: ಮೈಸೂರಿನ ಸ್ವಕುಳಸಾಳಿ ಸಮಾಜದ (ನೇಕಾರ) ವತಿಯಿಂದ ನಾಳೆ (ಭಾನುವಾರ) ಕರ್ನಾಟಕ ರಾಜ್ಯ ಸ್ವಕುಳಸಾಳಿ ಸಮಾಜದ ಸಂಘಟನಾ ಸಮಾವೇಶ ಹಾಗೂ ರಾಜ್ಯ ಪದಾಧಿಕಾರಿಗಳ ವಾರ್ಷಿಕ ಸಾಮಾನ್ಯ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಸಮಾಜದ ಸಂಚಾಲಕ ಸುಬ್ರಹ್ಮಣ್ಯ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ ಲಷ್ಕರ್ ಮೊಹಲ್ಲಾ ಪೊಲೀಸ್ ಠಾಣೆ ಹಿಂಭಾಗದಲ್ಲಿರುವ ಶ್ರೀ ಗೀತಾ ಮಂದಿರದಲ್ಲಿ ಸಮಾವೇಶ ಹಾಗೂ ಸಭೆ ನಡೆಯಲಿದ್ದು, ಬೆಳಿಗ್ಗೆ 10.30ಕ್ಕೆ ಮೇಯರ್ ಬಿ.ಭಾಗ್ಯವತಿ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಹೇಳಿದರು….
ವಾಹನ ಚಾಲಕರ ಅನುಕೂಲಕ್ಕಾಗಿ ಹೆದ್ದಾರಿಯ ಪ್ರತಿ 25 ಕಿಮೀಗೊಂದರಂತೆ ತಂಗುದಾಣ
June 27, 2018ಶಾಸಕ ಎಸ್.ಎ. ರಾಮದಾಸ್ ಪ್ರಕಟ ಪ್ರಧಾನಿ ಮೋದಿಯವರ ಸದುದ್ದೇಶ ವಿವರಣೆ ಮೈಸೂರು: ವಾಹನ ಚಾಲಕರ ಅನುಕೂಲಕ್ಕಾಗಿ ರಾಷ್ಟ್ರೀಯ ಹೆದ್ದಾರಿಯ ಪ್ರತಿ 25 ಕೀ.ಮಿ ಅಂತರದಲ್ಲಿ ಒಂದೊಂದು ತಂಗುದಾಣ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಮುಂದಾಗಿದ್ದಾರೆ ಎಂದು ಶಾಸಕರೂ ಆದ ಮಾಜಿ ಸಚಿವ ಎಸ್.ಎ.ರಾಮದಾಸ್ ಹೇಳಿದರು. ಮೈಸೂರಿನ ವೀಣೆ ಶೇಷಣ್ಣ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮೈಸೂರು ಜಿಲ್ಲಾ ಪ್ರವಾಸಿ ವಾಹನ ಚಾಲಕರು ಮತ್ತು ಮಾಲೀಕರ ಯೋಗಕ್ಷೇಮಾಭಿವೃದ್ಧಿ ಸಂಘದ 7ನೇ ವಾರ್ಷಿಕ ಸರ್ವಸದಸ್ಯರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ನ್ಯಾಷನಲ್…
ಮೈಸೂರಲ್ಲಿ ಸಾರಿಗೆ ಬಸ್ ತಡೆದ ಸಂಸದ, ಶಾಸಕರೂ ಸೇರಿದಂತೆ 75 ಮಂದಿ ಬಂಧನ
May 29, 2018ಮೈಸೂರು: ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ರೈತರು ಮಾಡಿರುವ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಬಿಜೆಪಿ ಕರೆ ನೀಡಿದ್ದ ಕರ್ನಾಟಕ ಬಂದ್ ಅನ್ನು ಮೈಸೂರಿನಲ್ಲಿ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಸಾರಿಗೆ ಸಂಸ್ಥೆ ಬಸ್ಗಳ ಸಂಚಾರಕ್ಕೆ ಅಡ್ಡಿ ಪಡಿಸಲು ಮುಂದಾದ ಸಂಸದ ಪ್ರತಾಪ ಸಿಂಹ, ಶಾಸಕರುಗಳಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ ಸೇರಿದಂತೆ ಬಿಜೆಪಿಯ 75ಕ್ಕೂ ಹೆಚ್ಚು ಕಾರ್ಯಕರ್ತರನ್ನು ಸೋಮವಾರ ಬೆಳಿಗ್ಗೆ ಪೊಲೀಸರು ಬಂಧಿಸಿ, ಮಧ್ಯಾಹ್ನ ಬಿಡುಗಡೆ ಮಾಡಿದರು. ರಾಜ್ಯ ಬಿಜೆಪಿ ಕರೆ ನೀಡಿದ್ದ ‘ಕರ್ನಾಟಕ ಬಂದ್’ ಹಿನ್ನೆಲೆಯಲ್ಲಿ ಮೈಸೂರಿನ ಬಸ್ ನಿಲ್ದಾಣ, ಬಸ್ ಡಿಪೋಗಳ…
ಅಭಿವೃದ್ಧಿ ಕೆಲಸಗಳ ಪ್ರಸ್ತಾವನೆಗಳನ್ನು ಪ್ರಾಮಾಣ ಕವಾಗಿ ಅನುಷ್ಠಾನಗೊಳಿಸಿ
May 27, 2018ಮೈಸೂರು: ಹಿರಿಯರು, ಅನುಭವಸ್ಥರ ಮಾರ್ಗದರ್ಶನ ಹಾಗೂ ಅಭಿವೃದ್ಧಿ ಕೆಲಸಗಳ ಪ್ರಸ್ತಾವನೆಗಳನ್ನು ಪ್ರಾಮಾಣ ಕವಾಗಿ ಅನುಷ್ಠಾನಗೊಳಿಸುವ ಮೂಲಕ ಬಿಜೆಪಿಗೆ ಗೌರವ ತರುವಂತೆ ಚಾಮರಾಜ ಕ್ಷೇತ್ರದ ನೂತನ ಶಾಸಕ ಎಲ್.ನಾಗೇಂದ್ರ ಅವರಿಗೆ ಮಾಜಿ ವಿಧಾನ ಪರಿಷತ್ ಸದಸ್ಯ ಡಿ.ಮಾದೇಗೌಡರು ಕಿವಿಮಾತು ಹೇಳಿದ್ದಾರೆ. ಭಾರತೀಯ ಜನತಾ ಪಾರ್ಟಿ ವತಿಯಿಂದ ಮೈಸೂರಿನ ವಿಜಯನಗರ ಒಂದನೇ ಹಂತದಲ್ಲಿರುವ ಸಪ್ತಪಧಿ ಕಲ್ಯಾಣ ಮಂಟಪದಲ್ಲಿ ಇಂದು ಏರ್ಪಡಿಸಿದ್ಧ ಚಾಮರಾಜ ಕ್ಷೇತ್ರದ ನೂತನ ಶಾಸಕ ಎಲ್.ನಾಗೇಂದ್ರ ಅವರಿಗೆ ಅಭಿನಂದನೆ ಹಾಗೂ ಕೃತಜ್ಞತೆ ಸಮರ್ಪಣಾ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಚಾಮರಾಜ…