ಬೆಂಗಳೂರು,ಡಿ.8-ರೈತ ಸಂಘಟನೆಗಳ ಪ್ರತಿಭಟನೆ ಹಾಗೂ ಕಾಂಗ್ರೆಸ್ನ ತೀವ್ರ ವಿರೋಧದ ನಡುವೆಯೇ ಕರ್ನಾಟಕ ಭೂ ಸುಧಾರಣಾ ತಿದ್ದುಪಡಿ ಮಸೂದೆಯನ್ನು ಮಂಗಳವಾರ ವಿಧಾನ ಪರಿಷತ್ನಲ್ಲಿ ಅಂಗೀಕರಿಸಲಾ ಯಿತು. ಹಿಂದಿನ ಅಧಿವೇಶನದಲ್ಲಿ ಭೂ ಸುಧಾರಣಾ ತಿದ್ದುಪಡಿ ಮಸೂ ದೆಗೆ ವಿಧಾನ ಪರಿಷತ್ ಒಪ್ಪಿಗೆ ದೊರಕಿರಲಿಲ್ಲ. ಹೀಗಾಗಿ ಸೋಮವಾರ ಆರಂಭವಾದ ಅಧಿ ವೇಶನದಲ್ಲಿ ಕಂದಾಯ ಸಚಿವ ಆರ್. ಅಶೋಕ ಅವರು ಮತ್ತೆ ಪರಿಷ್ಕೃತ ಮಸೂದೆ ಮಂಡಿಸಿದ್ದರು. ಮಸೂದೆಯ ಕುರಿತು ವಿಸ್ತೃತ ಚರ್ಚೆ ಆಗಬೇ ಕೆಂದು ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಪಟ್ಟು ಹಿಡಿದ…
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಖಂಡಿಸಿ ರೈತ ಸಂಘದಿಂದ ಹೆದ್ದಾರಿ ತಡೆ
June 21, 2020ಮೈಸೂರು, ಜೂ.20(ಪಿಎಂ)- ಕರ್ನಾಟಕ ಭೂ ಸುಧಾರಣಾ ಕಾಯ್ದೆಯ 79ಎ, ಬಿ ಮತ್ತು ಸಿ ಹಾಗೂ 80ನೇ ಕಲಂ ತಿದ್ದು ಪಡಿಗೆ ರಾಜ್ಯ ಸರ್ಕಾರ ಮುಂದಾಗಿರು ವುದನ್ನು ಖಂಡಿಸಿ `ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ’ ವತಿ ಯಿಂದ ಸಾಮೂಹಿಕ ನಾಯಕತ್ವದಲ್ಲಿ ಮೈಸೂರು ಎಪಿಎಂಸಿ ಎದುರು ನಂಜನ ಗೂಡು ರಸ್ತೆ ರಾಜ್ಯ ಹೆದ್ದಾರಿ ತಡೆದು ಶನಿವಾರ ಪ್ರತಿಭಟನೆ ನಡೆಸಲಾಯಿತು. ರೈತ ಸಮುದಾಯಕ್ಕೆ ಮಾರಕವಾಗುವ ರೀತಿ ಭೂ ಸುಧಾರಣಾ ಕಾಯ್ದೆಗೆ ತಿದ್ದು ಪಡಿ ತರಲು ಸರ್ಕಾರ ಮುಂದಾಗಿದೆ….
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಪ್ರಸ್ತಾಪ ಖಂಡಿಸಿ ದಸಂಸ ಪ್ರತಿಭಟನೆ
June 21, 2020ಮೈಸೂರು,ಜೂ.20(ಪಿಎಂ)- ಕರ್ನಾಟಕ ಭೂ ಸುಧಾರಣಾ ಕಾಯ್ದೆಯ 79ಎ, ಬಿ ಮತ್ತು ಸಿ ಹಾಗೂ 80ನೇ ಕಲಂಗೆ ಪೂರ್ವಾನ್ವಯವಾಗುವಂತೆ ತಿದ್ದುಪಡಿಗೆ ರಾಜ್ಯ ಸರ್ಕಾರ ಮುಂದಾಗಿರುವುದನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ (ದಸಂಸ) ವತಿಯಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಜಮಾ ಯಿಸಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಪ್ರಸ್ತಾಪ ಖಂಡನೀಯ. ತಿದ್ದುಪಡಿಯಾದರೆ ಉಳುವವನೇ ಹೊಲದೊಡೆಯ ಎಂಬುದಕ್ಕೆ ಬದಲಾಗಿ ಉಳ್ಳವನೇ ಭೂ ಮಾಲೀಕ ಎನ್ನುವಂತೆ ಆಗಲಿದೆ. ಕೂಡಲೇ ಸರ್ಕಾರ ಈ ಪ್ರಸ್ತಾಪ…