ಚಾಮರಾಜನಗರ: ‘ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾ ಕಾರ್ಯವನ್ನು ನಿಷ್ಪಕ್ಷಪಾತ ಹಾಗೂ ಶ್ರದ್ಧೆಯಿಂದ ನಿರ್ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಸೂಚನೆ ನೀಡಿದರು.ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆ.ಡಿ.ಪಿ ಸಭಾಂಗಣದಲ್ಲಿ ಶನಿವಾರ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾರ್ಯಕ್ಕಾಗಿ ನಿಯೋಜನೆಗೊಂಡಿರುವ ಮೈಕ್ರೋ ಅಬ್ಸರ್ ವರ್ಗಳು ಹಾಗೂ ಮತಗಟ್ಟೆ ಅಧಿಕಾರಿ ಗಳಿಗೆ ಆಯೋಜಿಸಲಾಗಿದ್ದ ತರಬೇತಿ ಕಾರ್ಯ ಕ್ರಮದಲ್ಲಿ ಅವರು ಮಾತನಾಡಿದರು. ಜೂ. 8ರಂದು ನಡೆಯುವ ಮತದಾನ ದಿನದಂದು ಯಾವುದೇ ಸಮಸ್ಯೆ, ಗೊಂದ ಲಕ್ಕೆ ಆಸ್ಪದವಿಲ್ಲದಂತೆ ಕಾರ್ಯನಿರ್ವ ಹಿಸಲು ಸಿದ್ಧರಾಗಿರಬೇಕು….
ಬಿಜೆಪಿ ಅಭ್ಯರ್ಥಿ ನಿರಂಜನಮೂರ್ತಿ ಗೆಲ್ಲಿಸಲು ಮನವಿ
June 3, 2018ಚಾಮರಾಜನಗರ: ‘ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ದಲ್ಲಿದ್ದಾಗ ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಅಭಿ ವೃದ್ಧಿ ಕೆಲಸಗಳನ್ನು ಮಾಡಲಾಗಿತ್ತು. ಇದನ್ನು ಗಮನಿಸಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತ ದಾರರು ಬಿಜೆಪಿ ಅಭ್ಯರ್ಥಿ ನಿರಂಜನ ಮೂರ್ತಿ ಅವರನ್ನು ಗೆಲ್ಲಿಸಬೇಕು’ ಎಂದು ವಿಧಾನಪರಿಷತ್ ಸದಸ್ಯ ಅರುಣ್ ಶಹಾ ಪೂರ ಮನವಿ ಮಾಡಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರಿಗೆ ವೇತನ ಅನುದಾನ…
ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಪರಿಷತ್ಗೆ ಚುನಾವಣೆ: ಜೂ.8ರಂದು ಬೆಳಿಗ್ಗೆ 7ರಿಂದ ಸಂಜೆ 5ರವರೆಗೆ ಮತದಾನ
June 2, 2018ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ಗೆ ಜೂ.8ರಂದು ಚುನಾವಣೆ ನಡೆಯಲಿದ್ದು, ನಿಗದಿತ ಕೇಂದ್ರಗಳಲ್ಲಿ ಅಂದು ಬೆಳಿಗ್ಗೆ 7ರಿಂದ ಸಂಜೆ 5ರವರೆಗೆ ಮತ ಚಲಾಯಿಸಬಹುದು. ಪಿರಿಯಾಪಟ್ಟಣ, ಕೆ.ಆರ್.ನಗರ, ಹೆಚ್.ಡಿ.ಕೋಟೆ, ತಿ.ನರಸೀಪುರದ ಮಿನಿ ವಿಧಾನಸೌಧ, ಹುಣಸೂರು ಹಾಗೂ ನಂಜನಗೂಡು ತಾಲೂಕು ಕಚೇರಿ ಮತಗಟ್ಟೆ ಕೇಂದ್ರಗಳಲ್ಲಿ ಆಯಾ ತಾಲೂಕಿನ ಶಿಕ್ಷಕರು ಮತ ಚಲಾಯಿಸಬಹುದು. ಮೈಸೂರು ನಗರದ ಪೀಪಲ್ಸ್ ಪಾರ್ಕ್ ಬಳಿಯಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೊಠಡಿ ಸಂಖ್ಯೆ 1ರಲ್ಲಿ ಮೈಸೂರು ತಾಲೂಕಿನ ಕ್ರಮ ಸಂಖ್ಯೆ 1ರಿಂದ 799…
ಚುನಾವಣೆಗೆ ಕೊಡಗು ಜಿಲ್ಲಾಡಳಿತ ಸಿದ್ಧತೆ
June 2, 2018ಮಡಿಕೇರಿ: ಇದೇ ಜೂನ್ 8 ರಂದು ನಡೆಯುವ ನೈರುತ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆಯ ಮತದಾನಕ್ಕೆ ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ನೈರುತ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆಯ ಮತದಾನವು ಜೂನ್ 8 ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ಜಿಲ್ಲೆಯ ಸೋಮವಾರಪೇಟೆ ಪಟ್ಟಣ ಪಂಚಾಯತ್(ಸೋಮವಾರಪೇಟೆ ತಾಲೂ ಕಿನ ಸೋಮವಾರಪೇಟೆ,…
ವಿಧಾನಸಭೆಯಿಂದ ವಿಧಾನ ಪರಿಷತ್ನ 11 ಸ್ಥಾನಕ್ಕೆ ಅವಿರೋಧ ಆಯ್ಕೆ ಖಚಿತ
June 1, 2018ಬೆಂಗಳೂರು: ರಾಜ್ಯ ವಿಧಾನ ಸಭೆಯಿಂದ ವಿಧಾನಪರಿಷತ್ತಿನ 11 ಸ್ಥಾನಗಳಿಗೆ ಅವಿ ರೋಧ ಆಯ್ಕೆಯಾಗುವುದು ಖಚಿತವಾಗಿದೆ. ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಇಂದು ವಿಧಾನಸಭೆಯ ತಮ್ಮ ಪಕ್ಷದ ಸದಸ್ಯರ ಆಧಾರದ ಮೇಲೆ ಬಿಜೆಪಿಯಿಂದ 5, ಕಾಂಗ್ರೆಸ್ 4 ಹಾಗೂ ಜೆಡಿಎಸ್ನಿಂದ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ವಿಧಾನಸಭೆ ಜಂಟಿ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ತಿನ ಚುನಾ ವಣಾಧಿಕಾರಿ ಎಂ.ಎಸ್.ಕುಮಾರಸ್ವಾಮಿ ಅವರಿಗೆ 11 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಇಂದು ಸಲ್ಲಿಸಿದರು. ಬಿಜೆಪಿ ಅಭ್ಯರ್ಥಿಯಾಗಿ ರಘುನಾಥ್ ಮಲ್ಕಾಪುರೆ, ಎನ್.ರವಿಕುಮಾರ್, ತೇಜಸ್ವಿನಿಗೌಡ, ಕೆ.ಪಿ.ನಂಜುಂಡಿ,…
ಶೈಕ್ಷಣ ಕ ಸಮಸ್ಯೆಗಳಿಗೆ ಹೋರಾಡಲು ನನ್ನನ್ನು ಗೆಲ್ಲಿಸಿ
June 1, 2018ಮೈಸೂರು: ವಿಧಾನ ಪರಿಷತ್ತಿಗೆ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ನಡೆಯುವ ಚುನಾವಣೆಯಲ್ಲಿ ತಾವು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಶೈಕ್ಷಣ ಕ ಕ್ಷೇತ್ರದ ಅನೇಕ ಸಮಸ್ಯೆಗಳ ಕುರಿತು ಹೋರಾಡಲು ಕಂಕಣಬದ್ಧರಾಗಿರುವ ತಮಗೆ ಶಿಕ್ಷಕ ಮತದಾರರು ಪ್ರಥಮ ಪ್ರಾಶಸ್ತ್ಯದ ಮತ ನೀಡುವಂತೆ ಮಾನಸಗಂಗೋತ್ರಿ ಇಂಗ್ಲಿಷ್ ಪ್ರಾಧ್ಯಾಪಕ ಪ್ರೊ.ಮಹದೇವ ಮನವಿ ಮಾಡಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಕರಿಗೆ ಅರ್ಹತೆ ಪ್ರಕಾರ ಪದೋನ್ನತಿ ನೀಡಬೇಕು. ನೂತನ ಸಂಬಳ ನೀತಿ ಜಾರಿಗೊಳಿಸಿ, ನೀಡಬೇಕಾದ ಬಾಕಿಯನ್ನು ಒಂದೇ ಕಂತಿನಲ್ಲಿ ನೀಡಬೇಕು. ಕರ್ನಾಟಕ…
ವಿಧಾನಸಭೆಯಿಂದ ಪರಿಷತ್ಗೆ ಚುನಾವಣೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿ ಪ್ರಕಟ
May 31, 2018ಬೆಂಗಳೂರು: ವಿಧಾನಸಭೆ ಯಿಂದ ವಿಧಾನ ಪರಿಷತ್ನ 11 ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ತಮ್ಮ ಅಭ್ಯರ್ಥಿ ಗಳನ್ನು ಪ್ರಕಟಿಸಿದೆ. ಕಾಂಗ್ರೆಸ್ ತನ್ನ ಪಾಲಿನ ನಾಲ್ಕು ಸ್ಥಾನಗಳಿಗೆ ಸಿ.ಎಂ.ಇಬ್ರಾಹಿಂ, ಕೆ.ಗೋವಿಂದರಾಜ್, ಅರವಿಂದ ಕುಮಾರ್ ಎಸ್.ಅರಳಿ ಮತ್ತು ಕೆ.ಹರೀಶ್ ಕುಮಾರ್ ಅಭ್ಯರ್ಥಿಗಳನ್ನಾಗಿ ಘೋಷಿಸಿದೆ. ಇನ್ನು ಬಿಜೆಪಿ ತನ್ನ ಪಾಲಿಗೆ ಬರುವ 5 ಸ್ಥಾನಕ್ಕೆ ಕೆ.ಪಿ.ನಂಜುಂಡಿ, ತೇಜಸ್ವಿನಿಗೌಡ, ಎಸ್.ರುದ್ರೇ ಗೌಡ, ಎನ್.ರವಿಕುಮಾರ್ ಹಾಗೂ ರಘುನಾಥ್ ಮಲ್ಕಾಪುರೆ ಅವರನ್ನು ಆಯ್ಕೆ ಮಾಡಿದೆ. ಜೆಡಿಎಸ್ ತನ್ನ ಪಾಲಿಗೆ ದಕ್ಕುವ ಎರಡು…