ಮೈಸೂರು, ಜೂ.20(ಎಂಟಿವೈ)- ಮೈಸೂರು ತಾಲೂಕಿನ ಜಂತಗಳ್ಳಿ ಗ್ರಾಮದಲ್ಲಿ ಆಗಾಗ್ಗೆ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಅತಂಕ ಉಂಟು ಮಾಡಿದ್ದ ಹೆಣ್ಣು ಚಿರತೆ ಶುಕ್ರವಾರ ರಾತ್ರಿ ಬೋನಿಗೆ ಬಿದ್ದಿದೆ. ಗ್ರಾಮಸ್ಥರ ದೂರಿನ ಹಿನ್ನೆಲೆಯಲ್ಲಿ ಅರಣ್ಯ ಸಿಬ್ಬಂದಿ ಗ್ರಾಮದ ಜೆ.ಕೆ.ಫಾರಂನಲ್ಲಿ ಇಟ್ಟಿದ್ದ ಬೋನಿನಲ್ಲಿ 4 ವರ್ಷದ ಚಿರತೆ ಸೆರೆಯಾಗಿದೆ. ಇದರಿಂದ ಗ್ರಾಮಸ್ಥರಲ್ಲಿದ್ದ ಆತಂಕ ದೂರವಾಗಿದೆ. ಸ್ಥಳಕ್ಕೆ ತೆರಳಿದ ಅರಣ್ಯ ಸಿಬ್ಬಂದಿ ಚಿರತೆಯನ್ನು ಮೈಸೂರಿನ ಅರಣ್ಯ ಭವನಕ್ಕೆ ಒಯ್ದರು. ಚಿರತೆ ಆರೋಗ್ಯವಾಗಿದ್ದು, ಅದನ್ನು ಬಂಡೀಪುರದ ಮೂಲೆಹೊಳೆ ಅರಣ್ಯದಲ್ಲಿ ಬಿಡಲಿದ್ದಾರೆ. ಕೆಲ ದಿನಗಳಿಂದ ಗ್ರಾಮದಲ್ಲಿ ಚಿರತೆ…
ಕಪಿಲಾ ನದಿಯಲ್ಲಿ ಚಿರತೆ ಕಳೇಬರ ಪತ್ತೆ
April 18, 2020ಸರಗೂರು, ಏ. 17 (ನಾಗೇಶ್)- ಇಲ್ಲಿಗೆ ಸಮೀಪದ ಹಾಲಗಡ ಬಳಿ ಚಿರತೆ ಕಳೇಬರ ಪತ್ತೆಯಾಗಿದೆ. ಹಾಲಗಡ ಮತ್ತು ಇಟ್ನಾ ಗ್ರಾಮಕ್ಕೆ ಸಂಪರ್ಕ ಕಲ್ಪಿಸಲು ಕಪಿಲಾ ನದಿ ಸಮೀಪ ನಿರ್ಮಾಣ ಹಂತದಲ್ಲಿರುವ ಸೇತುವೆಯ ಪಿಲ್ಲರ್ ಬಳಿ 3ರಿಂದ 4 ವರ್ಷದ ಚಿರತೆ ಕಳೇಬರ ಪತ್ತೆ ಯಾಗಿದೆ. ಪಶುವೈದ್ಯ ಡಾ.ಮಹೇಶ್ ಮರಣೋತ್ತರ ಪರೀಕ್ಷೆ ನಡೆಸಿದರು. ಚಿರತೆ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅಂಗಾಂಗ ಮಾದರಿಯನ್ನು ಪ್ರಯೋಗಾಲಕ್ಕೆ ಕಳುಹಿಸಲಾಗಿದೆ. ಎಸಿಎಫ್ ಪರಮೇಶ್ವರ್, ಸರಗೂರು ಆರ್ಎಫ್ ಮಧು ಹಾಗೂ ಅರಣ್ಯ ಸಿಬ್ಬಂದಿ…
ಉರುಳಿಗೆ ಸಿಲುಕಿ ಗಂಡು ಚಿರತೆ ಸಾವು
June 29, 2018ಸಕಲೇಶಪುರ: ಬೇಟೆಗಾರರು ಜಮೀನೊಂದರ ಬೇಲಿಯಲ್ಲಿ ಇಟ್ಟಿದ್ದ ಉರುಳಿಗೆ ಸಿಲುಕಿ 4 ವರ್ಷದ ಗಂಡು ಚಿರತೆ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲೂಕಿನ ಅತ್ತಿಬೀಡು ಗ್ರಾಮದ ಬಳಿ ನಡೆದಿದೆ. ತಾಲೂಕಿನ ದೇವಲಕೆರೆ ಸಮೀಪವಿರುವ ಅತ್ತಿಬೀಡು ಗ್ರಾಮದ ಜಮೀನೊಂದರಲ್ಲಿ ಬೇಟೆಗಾರರು ಕಾಡುಹಂದಿ ಬೇಟೆಗೆ ಉರುಳು ಹಾಕಿದ್ದರು. ಆದರೆ, ಬುಧವಾರ ರಾತ್ರಿ ಆಹಾರ ಅರಸಿ ಬಂದ 4 ವರ್ಷದ ಗಂಡು ಚಿರತೆ ಉರುಳಿಗೆ ಸಿಕ್ಕಿ ಹಾಕಿ ಕೊಂಡಿದೆ. ಇದರಿಂದ ಬಿಡಿಸಿಕೊಳ್ಳಲು ಹರಸಾಹಸ ಪಟ್ಟಿರುವ ಚಿರತೆ ಅತ್ತಿಂದತ್ತ ಎಳೆದಾಡಿದೆ. ಆದರೆ, ಉರುಳು ಚಿರತೆಯ ಸೊಂಟದ…
ಉರುಳಿಗೆ ಸಿಲುಕಿದ್ದ ಚಿರತೆ ರಕ್ಷಣೆ
May 30, 2018ಅರಕಲಗೂಡು: ಹಂದಿ ಹಿಡಿಯಲು ಹಾಕಿದ್ದ ಉರುಳಿಗೆ ಸಿಲುಕಿದ್ದ ಒದ್ದಾಡುತ್ತಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಅರವಳಿಕೆ ನೀಡಿ ರಕ್ಷಿಸಿದ್ದಾರೆ. ತಾಲೂಕಿನ ಮಲ್ಲಿಪಟ್ಟಣದಲ್ಲಿ ಹಂದಿ ಹಿಡಿಯಲು ಹಾಕಿದ್ದ ಉರುಳಿಗೆ ಚಿರತೆ ಯೊಂದು ಸಿಲುಕಿ ಸುಮಾರು ನಾಲ್ಕು ಗಂಟೆಗಳ ಕಾಲ ನರಳಿದೆ. ಸುದ್ದಿ ತಿಳಿದ ಅರಣ್ಯಧಿಕಾರಿಗಳು ಸ್ಥಳಕ್ಕೆ ಧಾವಿಸಿ ಚಿರತೆಗೆ ಅರವಳಿಕೆ ನೀಡಿ ಸೆರೆ ಹಿಡಿಯು ವಲ್ಲಿ ಸಫಲರಾದರು. ಆಕ್ರೋಶ: ಈ ಘಟನೆ ನಂತರ ಗ್ರಾಮಸ್ಥರು ಮಾತ್ರ ಅರಣ್ಯ ಇಲಾಖೆ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎರಡು ತಿಂಗಳಿಂದ ಚಿರತೆಗಳ ಓಡಾಟದ ಬಗ್ಗೆ…