ಮೈಸೂರು: ಭಾರತೀಯ ಜೀವ ವಿಮಾ ಪ್ರತಿನಿಧಿಗಳ ಒಕ್ಕೂಟದ 5ನೇ ಮಹಾ ಸಮ್ಮೇಳನ ಆ.11ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಸಾ.ರಾ. ಸಭಾಂಗಣದಲ್ಲಿ ನಡೆಯಲಿದೆ. ಸಮ್ಮೇಳನವನ್ನು ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಎಸ್.ಬಿ.ಶ್ರೀನಿವಾಸಚಾರಿ ಉದ್ಘಾಟಿಸಲಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ಮೇಯರ್ ಭಾಗ್ಯವತಿ, ಎಲ್ಐಸಿ ವಲಯ ಪ್ರಬಂಧಕ ಟಿ.ಸಿ.ಸುನೀಲ್ ಕುಮಾರ್, ಮೈಸೂರು ವಿಭಾಗಾಧಿಕಾರಿ ಕೆ.ಅನಂತ ಪದ್ಮನಾಭ, ಸಂಸದರಾದ ಪ್ರತಾಪ್…
ಮೈಸೂರು
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜೀವ ವಿಮಾ ನಿಗಮ ಪ್ರತಿನಿಧಿಗಳ ಪ್ರತಿಭಟನೆ
August 9, 2018ಮೈಸೂರು: ವಿಮಾ ಕಂತಿನ ಮೇಲೆ ಜಿಎಸ್ಟಿ ವಿಧಿಸಿರುವುದನ್ನು ಹಿಂಪಡೆಯುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬುಧವಾರ ಅಖಿಲ ಭಾರತ ಜೀವ ವಿಮಾ ಪ್ರತಿನಿಧಿಗಳ ಸಂಘಟನೆಯ ಜಿಲ್ಲಾ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮೈಸೂರಿನ ಬನ್ನಿಮಂಟಪದಲ್ಲಿರುವ ಭಾರತೀಯ ಜೀವ ವಿಮಾ(ಎಲ್ಐಸಿ) ನಿಗಮದ ಕಚೇರಿ ಬಳಿ ಇಂದು ಬೆಳಿಗ್ಗೆ ಪ್ರತಿಭಟನೆ ನಡೆಸಿದ ಎಲ್ಐಸಿ ಪ್ರತಿನಿಧಿಗಳು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ವಿಮೆ ಕಂತಿನ ಮೇಲೆ ಜಿಎಸ್ಟಿ ವಿಧಿಸಿರುವು ದನ್ನು ವಿರೋಧಿಸಿ ಅಖಿಲ ಭಾರತ ಜೀವ ವಿಮಾ ಪ್ರತಿನಿಧಿಗಳ…