ಬೆಂಗಳೂರು: ರಾಜ್ಯದ ಹಳ್ಳಿ-ಹಳ್ಳಿಗಳಲ್ಲಿ ಕಿರಾಣ ಅಂಗಡಿಗಳಿಂದ ಹಿಡಿದು ಹಲವು ಕಡೆ ಪರವಾನಗಿ ಇಲ್ಲದೆ ಮದ್ಯ ಮಾರಾಟವಾಗುತ್ತಿರುವುದರಿಂದ ಸಣ್ಣ ಸಣ್ಣ ಹುಡುಗರೂ ಮದ್ಯವ್ಯಸನಿಗಳಾಗುತ್ತಿದ್ದಾರೆ.ಹೀಗಾಗಿ ತಕ್ಷಣವೇ ಪರವಾನಗಿ ರಹಿತ ಮಾರಾಟವನ್ನು ಸರ್ಕಾರ ಕಟ್ಟು ನಿಟ್ಟಾಗಿ ತಡೆಗಟ್ಟಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕ ಬಿ.ಸಿ.ಪಾಟೀಲ್ ಒತ್ತಾಯಿಸಿದ್ದಾರೆ. ವಿಧಾನಸಭೆಯಲ್ಲಿಂದು ರಾಜ್ಯಪಾಲರ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು,ರಾಜ್ಯ ಸರ್ಕಾರ ಮದ್ಯದಂಗಡಿಗಳಿಗೆ ಲೈಸೆನ್ಸ್ ನೀಡಿದೆ.ಆದರೆ ಲೈಸೆನ್ಸ್ ಇಲ್ಲದೆ ಹಳ್ಳಿ ಹಳ್ಳಿಗಳಲ್ಲಿ ಮದ್ಯ ಮಾರಾಟವಾಗುತ್ತಿದೆ ಎಂದು ದೂರಿದರು. ಲೈಸೆನ್ಸ್ ಇರುವ ಮದ್ಯದಂಗಡಿಗಳಲ್ಲಿ ಮದ್ಯ…