ಬೆಂಗಳೂರು, ಅ.29: ಉಪಚುನಾವಣೆಯಲ್ಲಿ ಬಿಜೆಪಿ ಮಣಿಸಿ, ಮೈತ್ರಿ ಸರ್ಕಾರವನ್ನು ಮತ್ತಷ್ಟು ಗಟ್ಟಿಗೊಳಿಸುವ ಗುರಿ ಹಿನ್ನೆಲೆಯಲ್ಲಿ, ಹಾವು-ಮುಂಗುಸಿಯಂತಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 13 ವರ್ಷಗಳ ನಂತರ ಒಂದೇ ವೇದಿಕೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದಾರೆ. ಬಿಜೆಪಿ ವಿರುದ್ಧ ರಾಷ್ಟ್ರ ಮಟ್ಟದಲ್ಲಿ ಪ್ರತಿಪಕ್ಷಗಳನ್ನು ಒಂದು ಮಾಡಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲೂ ಮೈತ್ರಿಯೊಂದಿಗೆ ಕಣಕ್ಕಿಳಿ ಯುವ ಉದ್ದೇಶದಿಂದ ತಮ್ಮೆಲ್ಲಾ ವೈಮನಸ್ಸನ್ನು ಬದಿಗಿರಿಸಿ ಮತದಾರರ ಮನವೊಲಿಸಲು ಹೊರಟಿದ್ದಾರೆ. ದೇವೇಗೌಡರ ಕುಟುಂಬದ ವಿರುದ್ಧ ಸದಾ…
ಮಂಡ್ಯ
ಮಂಡ್ಯ ಲೋಕಸಭಾ ಉಪ ಚುನಾವಣೆ ಗರಿಗೆದರಿದ ರಾಜಕೀಯ ಚಟುವಟಿಕೆ
October 11, 2018ಮಂಡ್ಯ: ಲೋಕಸಭಾ ಉಪ ಸಮರಕ್ಕೆ ದಿನಾಂಕ ಪ್ರಕಟವಾದ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಜಿಲ್ಲೆಯಲ್ಲಿ ಗರಿಗೆದರಿವೆ. ಸಿಕ್ಸ್ ಮಂತ್ ಕಾ ಸುಲ್ತಾನ್ ಯಾರಾಗಲಿದ್ದಾರೆ ಎಂಬ ಬಿಸಿ ಬಿಸಿ ಚರ್ಚೆ ಶುರುವಾಗಿದೆ. ಸಿ.ಎಸ್.ಪುಟ್ಟರಾಜು ರಾಜೀನಾಮೆಯಿಂದ ಈ ಚುನಾವಣೆ ಎದುರಾಗಿದೆ. ಸಾರ್ವತ್ರಿಕ ಚುನಾವಣೆಗೆ 6 ತಿಂಗಳಷ್ಟೇ ಬಾಕಿ ಇರುವ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆಯೋದಿಲ್ಲ ಎಂಬ ಭಾವನೆ ಬಹುತೇಕರಲ್ಲಿತ್ತು. ಆದರೆ, ಇದೀಗ ಆಯೋಗ ಉಪ ಚುನಾವಣೆ ಘೋಷಿಸಿರುವ ಹಿನ್ನೆಲೆಯಲ್ಲಿ ಒಲ್ಲದ ಮನಸ್ಸಿನಿಂದಲೇ ಚುನಾವಣೆಗೆ ರೆಡಿಯಾಗ ಬೇಕಾದ ಸಂದಿಗ್ಧ ಪರಿಸ್ಥಿತಿ ರಾಜಕಾರಣಿಗಳಿಗೆ ಮಾತ್ರವಲ್ಲ ಮತದಾರರಿಗೂ…