ಬೆಂಗಳೂರು: 17ನೇ ಲೋಕಸಭಾ ಚುನಾ ವಣೆಯ ದಿನಾಂಕವನ್ನು ಭಾರತ ಚುನಾವಣಾ ಆಯೋಗ ಘೋಷಣೆ ಮಾಡಿದ್ದು, ದೇಶದಲ್ಲಿ 7 ಹಂತಗಳಲ್ಲಿ ಚುನಾ ವಣೆ ನಡೆಯಲಿದೆ. ಕರ್ನಾಟಕದಲ್ಲಿ 2 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದ ಚುನಾವಣೆಯು ಏ.18ರಂದು ಮತ್ತು ಎರಡನೇ ಹಂತದ ಚುನಾವಣೆ ಏ.23ರಂದು ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಸಂಜೀವ್ ಕುಮಾರ್ ಹೇಳಿದರು. ಇಂದು ಸಂಜೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತ ನಾಡಿದ ಅವರು, ರಾಜ್ಯದಲ್ಲಿ ಒಟ್ಟು 28 ಕ್ಷೇತ್ರಗಳಿದ್ದು, ಅದರಲ್ಲಿ 5 ಪರಿಶಿಷ್ಟ ಜಾತಿ ಮೀಸಲು…
ಏಪ್ರಿಲ್ 11ರಿಂದ ಮೇ 19ರವರೆಗೆ ದೇಶದಲ್ಲಿ ಏಳು ಹಂತಗಳಲ್ಲಿ ಚುನಾವಣೆ
March 11, 2019ನವದೆಹಲಿ: 17ನೇ ಲೋಕ ಸಭಾ ಚುನಾವಣೆಯ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗವು ಇಂದು ಸಂಜೆ ಪ್ರಕಟಿಸಿದ್ದು, ದೇಶದಲ್ಲಿ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೊದಲನೇ ಹಂತದ ಚುನಾವಣೆಯು ಏ.11ರಂದು ನಡೆಯಲಿದ್ದು, 7ನೇ ಹಂತದ ಚುನಾವಣೆ ಮೇ 12ರಂದು ನಡೆಯಲಿದೆ. ಮೇ 23ಕ್ಕೆ ದೇಶದ ಎಲ್ಲಾ 543 ಕ್ಷೇತ್ರಗಳ ಚುನಾವಣಾ ಫಲಿತಾಂಶ ಹೊರ ಬೀಳಲಿದೆ. ನವದೆಹಲಿಯ ವಿಜ್ಞಾನ ಭವನದಲ್ಲಿ ಇಂದು ಸಂಜೆ ಸುದ್ದಿಗೋಷ್ಠಿ ನಡೆಸಿದ ಭಾರತ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಸುನೀಲ್ ಅರೋರಾ ಅವರು ವಿವರಗಳನ್ನು ನೀಡಿದರು….
ಮೋದಿಯವರ ಭ್ರಷ್ಟಾಚಾರ ರಹಿತ ಆಡಳಿತ ಮುಂದಿಟ್ಟು ಮತ ಯಾಚಿಸಿ
March 7, 2019ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿರಂತರ ಕಠಿಣ ಪರಿಶ್ರಮ, ಭ್ರಷ್ಟಾಚಾರ ರಹಿತ ಆಡಳಿತ ಹಾಗೂ ಜನಪರ ಯೋಜನೆಗಳನ್ನು ಮುಂದಿಟ್ಟುಕೊಂಡು ಮತ ಯಾಚಿಸಿ ಎಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಮೈಸೂರಿನ ಜೆ.ಕೆ. ಮೈದಾನದಲ್ಲಿ ಇಂದು ನಡೆದ ಬಿಜೆಪಿ ಶಕ್ತಿ ಕೇಂದ್ರಗಳ ಪ್ರಮುಖರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾ ಡುತ್ತಿದ್ದ ಅವರು, ಮೋದಿ ಅವರು ಶ್ರಮಜೀವಿ, ದೇಶಕ್ಕಾಗಿ ನಿರಂತರ ವಾಗಿ ದುಡಿಯುತ್ತಿದ್ದಾರೆ. ಅವರ ವೇಗಕ್ಕೆ ಹೆಜ್ಜೆ ಹಾಕುವುದು ನಮಗೇ ಸವಾಲಾಗಿದೆ….
ಮೈಸೂರು ಮೈತ್ರಿ ಅಭ್ಯರ್ಥಿ ದೇವೇಗೌಡರೋ ಇಲ್ಲ ನಿಖಿಲ್ ನಿಲ್ತಾರೋ…
March 2, 2019ಮೈಸೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಪುತ್ರ, ನಟ ನಿಖಿಲ್ಕುಮಾರ್ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿ ಎಂಬುದು ಇಂದು ಮೈಸೂರಿನಲ್ಲಿ ಬಹಿರಂಗವಾಗಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ನಾಗರಿಕ ಸನ್ಮಾನ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವರೂ ಆದ ಮೈಸೂರು ಜಿಲ್ಲಾ ಉಸುವಾರಿ ಸಚಿವ ಜಿ.ಟಿ.ದೇವೇಗೌಡರು ಮಾತನಾಡಿ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ನೀವೇ ಸ್ಪರ್ಧಿಸಬೇಕೆಂದು ವರಿಷ್ಠರಾದ ಹೆಚ್.ಡಿ.ದೇವೇಗೌಡ ಅವರನ್ನು ಮನವಿ ಮಾಡಿಕೊಂಡೆವು. ಅದೇನೇ ಇರಲಿ ಯಾರೇ ಅಭ್ಯರ್ಥಿಯಾದರೂ ದೇವೇಗೌಡರು ಹಾಗೂ ಕುಮಾರಸ್ವಾಮಿ…
ನಿಗದಿತ ಅವಧಿಯಲ್ಲೇ ಲೋಕಸಭಾ ಚುನಾವಣೆ
March 2, 2019ಲಖನೌ: ಭಾರತ- ಪಾಕಿಸ್ತಾನ ನಡುವಣ ಪ್ರಕ್ಷುಬ್ದ ಪರಿಸ್ಥಿತಿಯ ನಡುವೆ ನಿಗದಿತ ಅವಧಿಯಲ್ಲಿಯೇ ಲೋಕಸಭಾ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರ ಹೇಳಿದ್ದಾರೆ. ಉತ್ತರ ಪ್ರದೇಶದ ಲಖನೌದಲ್ಲಿ ಕಳೆದೆರಡು ದಿನಗಳಿಂದ ಚುನಾವಣೆ ಪೂರ್ವ ಸಿದ್ಧತೆ ಪರಿಶೀಲನೆಯಲ್ಲಿ ತೊಡಗಿರುವ ಸುನೀಲ್ ಅರೋರ, ಪಾಕಿಸ್ತಾನ ಹಾಗೂ ಪರಿಸ್ಥಿತಿ ಬಿಗಡಾಯಿಸಿದ್ದರೂ ನಿಗದಿತ ಅವಧಿಯಲ್ಲಿಯೇ ಸಾರ್ವತ್ರಿಕ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು. ಚುನಾವಣಾ ಆಯೋಗದ ಹೊಸ ಅಧಿಸೂಚನೆ ಪ್ರಕಾರ, ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ದೇಶದಲ್ಲಿ ಮಾತ್ರವಲ್ಲದೇ, ವಿದೇಶದಲ್ಲಿ ಇರುವ ಆಸ್ತಿಪಾಸ್ತಿಗಳ…
ಲೋಕಸಭಾ ಚುನಾವಣೆಯಲ್ಲಿ 25 ಸ್ಥಾನ ಗೆದ್ದು ಬನ್ನಿ, ಮರುದಿನವೇ ಬಿ.ಎಸ್.ಯಡಿಯೂರಪ್ಪ ಸಿಎಂ ಆಗ್ತಾರೆ
February 23, 2019ಬೆಂಗಳೂರು: ಕರ್ನಾಟಕದಲ್ಲಿ ಸರ್ಕಾರ ರಚಿಸಲು ಬೇಡುತ್ತಾ ಕೂರುವ ಅಗತ್ಯವಿಲ್ಲ. ಲೋಕಸಭಾ ಚುನಾವಣೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಸೀಟುಗಳನ್ನು ಗೆಲ್ಲಿಸಿ, ಮರು ದಿನವೇ ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಅಧಿಕಾರ ಗದ್ದುಗೆ ಹಿಡಿಯುತ್ತದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸ್ಥಳೀಯ ನಾಯಕರಿಗೆ ತಿಳಿಸಿದ್ದಾರೆ. ನಿನ್ನೆ ತಡರಾತ್ರಿ ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿದ ಅಮಿತ್ ಷಾ, ನೇರವಾಗಿಯೇ ಆಪರೇಷನ್ ಕಮಲ ಕಾರ್ಯಾಚರಣೆ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. ಕರ್ನಾಟಕದಲ್ಲಿ ನಾವೇ ಸರ್ಕಾರ ರಚಿಸಬೇಕಿತ್ತು. ಆದರೆ ಸಂವಿಧಾನ…
ರಾಜ್ಯದಲ್ಲಿದ್ದಾರೆ 5,03,07,182 ಅರ್ಹ ಮತದಾರರು
February 22, 2019ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು 2019ರ ಜ.16ರವರೆಗಿನ ರಾಜ್ಯದ ಮತದಾರರ ವಿವರಗಳನ್ನು ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ 2,54,55,976 ಪುರುಷರು, 2,48,46,488 ಮಹಿಳೆಯರು 28,996 ಇತರರೂ ಸೇರಿದಂತೆ ಒಟ್ಟು 5,03,07,182 ಮತ ದಾರರಿದ್ದಾರೆ. ಅವರಲ್ಲಿ 18ರಿಂದ 19 ವರ್ಷ ವಯಸ್ಸಿನವರಾಗಿದ್ದು, ಇದೇ ಪ್ರಥಮ ಬಾರಿಗೆ 7,12,606 ಮಂದಿ ಮತದಾನದ ಹಕ್ಕನ್ನು ಹೊಂದಿದ್ದಾರೆ. ಬೆಳಗಾವಿ ಜಿಲ್ಲೆ ಹೆಚ್ಚಿನ ಮತದಾರರನ್ನು ಹೊಂದಿ ರುವ ಜಿಲ್ಲೆಯಾಗಿದ್ದು, ಇಲ್ಲಿ 18,71,307 ಪುರುಷರು, 18,30,708 ಮಹಿಳೆಯರು, 123 ಇತರರೂ ಸೇರಿದಂತೆ ಒಟ್ಟು 37,02,138…
ಮೋದಿಯೇ ಮತ್ತೆ ಪ್ರಧಾನಿ; ಶೇ.83 ಮಂದಿ ಅಭಿ`ಮತ’
February 22, 2019ಟೈಮ್ಸ್ ಮೆಗಾ ಆನ್ಲೈನ್ ಸಮೀಕ್ಷೆಯಲ್ಲಿ 2 ಲಕ್ಷ ಮಂದಿ ಭಾಗಿ; ರಾಹುಲ್ಗೆ ಶೇ.8.33 ಮಂದಿ ಮತ ನವದೆಹಲಿ: ಲೋಕಸಭೆ ಚುನಾವಣೆಗೆ ಕೆಲವೇ ವಾರಗಳು ಉಳಿದಿರುವಾಗ ಟೈಮ್ಸ್ ಸಮೂಹದ ಮೆಗಾ ಆನ್ ಲೈನ್ ಸಮೀಕ್ಷೆಯಲ್ಲಿ 3ನೇ ಎರಡಕ್ಕಿಂತಲೂ ಹೆಚ್ಚು ಮಂದಿ (ಶೇ.83) ನರೇಂದ್ರ ಮೋದಿ ಅವರೇ ಮತ್ತೆ ಪ್ರಧಾನಿಯಾಗುತ್ತಾರೆ ಎಂದು ಅಭಿ`ಮತ’ ಚಲಾಯಿಸಿದ್ದಾರೆ. ಮೋದಿ ಅವರ ನೇತೃತ್ವದ ಎನ್ಡಿಎ ಸರಕಾರವೇ ಮತ್ತೆ ಅಧಿ ಕಾರಕ್ಕೆ ಬರುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ. ಕೇವಲ ಶೇ 3.47 ಮಂದಿ ಮಾತ್ರ ಎನ್ಡಿಎಯೇತರ,…
ಆದಿಚುಂಚನಗಿರಿ ಮಠಕ್ಕೆ ಸುಮಲತಾ ಅಂಬರೀಶ್ ಭೇಟಿ: ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ಸುಮಲತಾ
February 11, 2019ರಾಜಕೀಯ ಪ್ರವೇಶ ಅಂಬಿ ಆಶಯವಲ್ಲ, ಅಭಿಮಾನಿಗಳ ಆಶಯ ಕಾಂಗ್ರೆಸ್ನಿಂದ ಸ್ಪರ್ಧೆಗೆ ನನ್ನ ಪ್ರಥಮ ಆದ್ಯತೆ ಮಂಡ್ಯ: ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ಸುಮಲತಾ, ಚುನಾವಣೆಯಲ್ಲಿ ಸ್ಪರ್ಧಿಸುವುದಾದರೆ ಕಾಂಗ್ರೆಸ್ ಪಕ್ಷ ನನ್ನ ಮೊದಲ ಆದ್ಯತೆ ಎಂದು ತಿಳಿಸಿದರು. ನಾಗಮಂಗಲ ತಾಲೂಕಿನ ಆದಿಚುಂಚನ ಗಿರಿ ಶ್ರೀಕ್ಷೇತ್ರಕ್ಕೆ ಭಾನುವಾರ ಬೆಳಿಗ್ಗೆ ಪುತ್ರ ಅಭಿಷೇಕ್ ಸೇರಿದಂತೆ ಚಿತ್ರರಂಗದ ಗಣ್ಯ ರೊಂದಿಗೆ ಭೇಟಿ ನೀಡಿ ಕಾಲಭೈರವೇಶ್ವರನ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದ ಅವರು, ನಂತರ ಮಠಕ್ಕೆ ತೆರಳಿ ಶ್ರೀನಿರ್ಮಲಾನಂದ ನಾಥ…
ಇಂದು ಹುಬ್ಬಳ್ಳಿಯಲ್ಲಿ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ
February 10, 2019ಬೆಂಗಳೂರು: ಆಪರೇಷನ್ ಕಮಲದ ಮೂಲಕ ಬಿ.ಎಸ್.ಯಡಿ ಯೂರಪ್ಪ ಮುಖ್ಯಮಂತ್ರಿಯಾಗಲು ನಿರಂತರ ಪ್ರಯತ್ನ ನಡೆಸುತ್ತಿದ್ದರೆ, ಮತ್ತೊಂದೆಡೆ ಇದ್ಯಾವುದೂ ನಮಗೆ ತಿಳಿಯದೆನ್ನುವಂತೆ ಬಿಜೆಪಿ ವರಿಷ್ಠರು ಮುಂಬ ರುವ ಲೋಕಸಭಾ ಚುನಾವಣೆಗೆ ಸಜ್ಜಾಗುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣಾ ಪ್ರಚಾರವನ್ನು ಮುಂಬೈ ಕರ್ನಾ ಟಕ ಭಾಗದ ಹುಬ್ಬಳ್ಳಿಯಲ್ಲಿ ನಾಳೆ ಆರಂಭಿಸುತ್ತಿದ್ದು, ಇದಲ್ಲದೆ ಇನ್ನು ಎರಡು ಕೇಂದ್ರಗಳಲ್ಲಿ ಇದೇ ತಿಂಗಳಲ್ಲಿ ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸ ಮಾಡುತ್ತಾರೆ. ಮತ್ತೊಂದೆಡೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ರಾಜ್ಯದ ಪ್ರಮುಖ…