ಬೆಂಗಳೂರು: ಕಾಂಗ್ರೆಸ್ಗೆ ಕಬ್ಬಿಣದ ಕಡಲೆಯಾಗಿರುವ ಕ್ಷೇತ್ರಗಳನ್ನು ಗೆಲ್ಲಿಸಿಕೊಡಲು ಸಕಲ ಪ್ರಯತ್ನ ಮಾಡುವುದಾಗಿ ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ ಅವರಿಗೆ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇ ಗೌಡ ಭರವಸೆ ನೀಡಿದ್ದಾರೆ. ರಾಜ್ಯದ ಇಪ್ಪತ್ತೆಂಟು ಲೋಕಸಭಾ ಕ್ಷೇತ್ರಗಳ ಪೈಕಿ ಇಪ್ಪತ್ತಕ್ಕೂ ಹೆಚ್ಚು ಸೀಟುಗಳನ್ನು ಮೈತ್ರಿಕೂಟ ಗೆಲ್ಲುತ್ತದೆ ಎಂದು ಭರವಸೆ ನೀಡಲಾರೆ. ಆದರೆ ನಿಶ್ಚಿತವಾಗಿ ಹದಿನೈದರಿಂದ ಹದಿನಾರು ಸೀಟುಗಳನ್ನು ಗೆಲ್ಲಿಸಿಕೊಡಲು ಶ್ರಮಿಸುತ್ತೇನೆ ಎಂದು ಗೌಡರು ಹೇಳಿದ್ದಾರೆ. ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ಕೆಲ ಕ್ಷೇತ್ರಗಳು ಕಾಂಗ್ರೆಸ್ ಪಾಲಿಗೆ ಸಂಕಷ್ಟಕರ ಕ್ಷೇತ್ರಗಳಾಗಿದ್ದು, ಇಲ್ಲೆಲ್ಲ…
ಮೊದಲ ದಿನವೇ ಮೂವರು ನಾಮಪತ್ರ ಸಲ್ಲಿಕೆ
March 20, 2019ಮೈಸೂರು: ರಾಜ್ಯದ 14 ಕ್ಷೇತ್ರ ಗಳಲ್ಲಿ ನಡೆಯಲಿರುವ ಮೊದಲ ಹಂತದ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಇಂದು ಅಧಿಕೃತ ಅಧಿಸೂಚನೆ ಹೊರ ಬಿದ್ದಿದೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಅಭಿರಾಂ ಜಿ ಶಂಕರ್ ಇಂದು ಬೆಳಿಗ್ಗೆ ಕನ್ನಡ ಮತ್ತು ಇಂಗ್ಲಿಷ್ ಎರಡರಲ್ಲೂ ಚುನಾವಣಾ ಅಧಿ ಸೂಚನೆ ಹೊರಡಿಸಿ ಅದರ ಪ್ರತಿಗಳನ್ನು ತಮ್ಮ ಕಚೇರಿಯ ಮೊದಲ ಮಹಡಿಯ ಕೋರ್ಟ್ ಹಾಲ್ ಬಳಿ ಸೂಚನಾ ಫಲಕದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಿದರು. ಆ ಮೂಲಕ ಅಭ್ಯರ್ಥಿಗಳಾಗ ಬಯಸುವವರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದು…
ಲೋಕಸಭಾ ಚುನಾವಣೆ ಇಂದಿನಿಂದ ಮೊದಲ ಹಂತದ ನಾಮಪತ್ರ ಸಲ್ಲಿಕೆ
March 18, 2019ನವದೆಹಲಿ: ರಾಷ್ಟ್ರದಲ್ಲಿ ನಡೆಯುತ್ತಿರುವ ಪ್ರಜಾಪ್ರಭುತ್ವದ ಮಹಾ ಹಬ್ಬವಾದ ಲೋಕಸಭೆ ಚುನಾ ವಣೆಯ ಮೊದಲ ಹಂತದ ಮತದಾನಕ್ಕೆ ನಾಳೆ (ಮಾ.18) ಅಧಿಸೂಚನೆ ಹೊರ ಬೀಳಲಿದ್ದು, ನಾಳೆ ಯಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಆಂಧ್ರಪ್ರದೇಶ, ತೆಲಂಗಾಣ, ಅಂಡಮಾನ್ ನಿಕೋಬಾರ್ ಸೇರಿದಂತೆ 20 ರಾಜ್ಯಗಳ 91 ಕ್ಷೇತ್ರಗಳಿಗೆ ನಾಳೆ ಅಧಿಸೂಚನೆ ಹೊರಡಿಸಲಾಗುತ್ತದೆ. ನಾಳೆಯಿಂದಲೇ ಆಯಾ ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ತಮ್ಮ ಉಮೇದು ವಾರಿಕೆಯನ್ನು ಸಲ್ಲಿಸಬಹುದಾಗಿದೆ. ಪ್ರಸ್ತುತ ಲೋಕಸಭೆ ಚುನಾವಣೆ ದೇಶಾ ದ್ಯಂತ ಏಳು ಹಂತದಲ್ಲಿ ನಡೆಯುತ್ತಿದೆ. ಮೊದಲ ಹಂತದ ಚುನಾವಣಾ…
ಲೋಕ ಚುನಾವಣೆ: ವರ್ಗಾವಣೆಯಾದಲ್ಲಿ ವರದಿ ಮಾಡಿಕೊಳ್ಳದ ಅಧಿಕಾರಿಗಳ ಮಾಹಿತಿ ನೀಡಿ
March 17, 2019ಬೆಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ವರ್ಗಾವಣೆಗೊಂಡಿರುವ ಅಧಿಕಾರಿಗಳು ನಿಯೋಜಿತ ಸ್ಥಳಕ್ಕೆ ತೆರಳದಿದ್ದರೆ ಅಂತಹವರ ಬಗ್ಗೆ ಮಾಹಿತಿ ನೀಡುವಂತೆ ಜಿಲ್ಲಾಡಳಿತಗಳಿಗೆ ಚುನಾ ವಣಾ ಆಯೋಗ ಸೂಚಿಸಿದೆ. ಈ ಅಧಿಕಾರಿಗಳು ಹಾಜರಾಗದಿರುವುದಕ್ಕೆ ಸೂಕ್ತ ಮಾಹಿತಿ ನೀಡಿದ್ದರೆ ಅದನ್ನೂ ಆಯೋಗದ ಗಮನಕ್ಕೆ ತರುವಂತೆ ಹೇಳಿದೆ. ಅತಿವೃಷ್ಟಿ, ಅನಾವೃಷ್ಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗದು ಎಂದು ಆಯೋಗ ಸ್ಪಷ್ಟ ಪಡಿಸಿದೆ. ಆಯೋಗವು ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ನಡೆ ಸಿದ ಕಾರ್ಯಾಗಾರದಲ್ಲಿ ರಾಜ್ಯ…
ಮೈಸೂರು-ಕೊಡಗಿನಿಂದ ರಾಹುಲ್ ಸ್ಪರ್ಧೆ?
March 17, 2019ಮೈಸೂರು: ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದಿಂದ ಸ್ಪರ್ಧಿಸಲು ಆಹ್ವಾನಿಸಿರುವ ಸಿದ್ದರಾಮಯ್ಯ ಅವರ ನಿರ್ಧಾರದ ಬಗ್ಗೆ ಪಕ್ಷದ ವಲಯದಲ್ಲಿ ತೀವ್ರ ಅಚ್ಚರಿ ವ್ಯಕ್ತವಾಗಿದ್ದು, ಒಂದೊಮ್ಮೆ ರಾಹುಲ್ಗಾಂಧಿ ಒಪ್ಪಿದರೆ ಯಾವ ಕ್ಷೇತ್ರದಿಂದ ಅವರನ್ನು ಕಣಕ್ಕಿಳಿಸಬಹುದು ಎಂಬುದರ ಬಗ್ಗೆ ಈಗ ಕುತೂಹಲ ಮೂಡಿ ಈಗಾಗಲೇ ಸ್ಪರ್ಧಿಸಲು ನಿರ್ಧರಿಸಿರುವ ಉತ್ತರ ಪ್ರದೇಶದ ಅಮೇಥಿ ಕ್ಷೇತ್ರ ದಲ್ಲಿ ಬಿಜೆಪಿ ಪ್ರಾಬಲ್ಯ ಸಾಧಿಸಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಎರಡು ಕಡೆ ಸ್ಪರ್ಧಿಸುವುದು ಅನಿವಾರ್ಯ ಎಂದು ನಿರ್ಧಸಿರುವ ಕಾಂಗ್ರೆಸ್ ವರಿಷ್ಠರು ಅದಕ್ಕಾಗಿ ಸುರಕ್ಷಿತ ಕ್ಷೇತ್ರವೊಂದರ ತಲಾಷೆಯಲ್ಲಿದ್ದಾರೆ….
ಕೃಷ್ಣ-ಯಡಿಯೂರಪ್ಪ ಭೇಟಿ: ಸುಮಲತಾ ಸ್ಪರ್ಧೆ ಕುರಿತು ಚರ್ಚೆ
March 17, 2019ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸೆಣಸಾಡುತ್ತಿರುವ ಮಾಜಿ ಸಚಿವ, ದಿವಂಗತ ನಟ ಅಂಬರೀಶ್ ಪತ್ನಿ ಸುಮ ಲತಾ ಅವರಿಗೆ ಬೆಂಬಲ ನೀಡಬೇಕೇ? ಬೇಡವೇ? ಎಂಬ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ. ಕೃಷ್ಣ-ಬಿ.ಎಸ್. ಯಡಿಯೂರಪ್ಪ ಚರ್ಚೆ ನಡೆಸಿದರು. ಇಂದು ಮಧ್ಯಾಹ್ನ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಮಾಜಿ ಸಚಿವರೂ ಆದ ಎಸ್.ಎಂ. ಕೃಷ್ಣ ಅವರನ್ನು ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷರೂ ಆದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಒಂದು ಗಂಟೆ…
ಪ್ರಣಾಳಿಕೆಗೂ ಸಮಯದ ನಿರ್ಬಂಧ
March 17, 2019ನವದೆಹಲಿ: ರಾಜ ಕೀಯ ಪಕ್ಷಗಳ ಚುನಾವಣಾ `ಪ್ರಣಾ ಳಿಕೆ’ ಮೇಲೆಯೂ ಕೇಂದ್ರ ಚುನಾ ವಣಾ ಆಯೋಗ ಈಗ ವಾರೆನೋಟ ಬೀರಿದೆ. ಮತದಾನಕ್ಕೆ 48 ಗಂಟೆಗಳ ಮುನ್ನ ಪ್ರಣಾಳಿಕೆಗಳನ್ನು ಬಿಡುಗಡೆ ಮಾಡುವಂತಿಲ್ಲ ಎಂಬ ನಿರ್ಬಂಧ ವಿಧಿಸಿದೆ. ಈ ಸಂಬಂಧ ಶನಿವಾರ ಸಂಜೆ ಸುತ್ತೋಲೆ ಹೊರಡಿಸಿರುವ ಚುನಾ ವಣಾ ಆಯೋಗ, ಪ್ರಣಾಳಿಕೆಯೂ `ಚುನಾವಣಾ ನೀತಿ ಸಂಹಿತೆ’ ವ್ಯಾಪ್ತಿಗೇ ಒಳಪಡುತ್ತದೆ. ಹಾಗಾಗಿ, ಮತದಾನಕ್ಕೆ ಮುಂಚಿನ 48 ಗಂಟೆಗಳ ಅವಧಿಯು ಪ್ರಜಾಪ್ರತಿನಿಧಿ ಕಾಯ್ದೆ-1951ರ ಕಲಂ 126ರ ಪ್ರಕಾರ, `ನಿಶ್ಶಬ್ದದ ಅವಧಿ’. ಈ ಅವಧಿಯಲ್ಲಿ…
‘ಕೈ’ಗೆ ಶಾಕ್ ನೀಡಲಿದ್ದಾರಾ ಎ.ಮಂಜು?
March 17, 2019ನೂರಾರು ಬೆಂಬಲಿಗರೊಂದಿಗೆ ‘ಕಮಲ’ ಹಿಡಿಯಲು ಮಂಜು ರೆಡಿ, ಜಿಲ್ಲೆಯಲ್ಲಿ ‘ಕೈ’ ಭವಿಷ್ಯ ಅಂತ್ಯವಾಗುವ ಭೀತಿ ಹಾಸನ: ಲೋಕಸಭಾ ಚುನಾವಣಾ ದಿನಾಂಕ ಘೋಷಣೆಯಾ ಗಿದ್ದು, ಜಿಲ್ಲೆಯಲ್ಲಿ ರಾಜಕೀಯ ಬೆಳವಣಿಗೆಗಳು ಸಂಚಲನ ಮೂಡಿಸಿದೆ. ಈಗಾ ಗಲೇ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಅಭ್ಯರ್ಥಿ ಯಾಗಿ ಪ್ರಜ್ವಲ್ ಕಣಕ್ಕಿಳಿದಿದ್ದು, ಚುನಾ ವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಇವರಿಗೆ ಸವಾಲೊಡ್ಡಲು ಮತ್ತೊಂದೆಡೆ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಎ.ಮಂಜು ‘ಕೈ’ ತೊರೆದು ಬಿಜೆಪಿ ಸೇರು ತ್ತಾರೆಂಬ ಚರ್ಚೆ ಶುರುವಾಗಿದೆ. ಮಾಜಿ ಸಚಿವ ಎ.ಮಂಜು…
ಹಾಸನ ‘ಗೌಡರ’ ಮತ್ತೊಬ್ಬ ಮೊಮ್ಮಗ ನಿಖಿಲ್ ಮಂಡ್ಯ ಮಡಿಲಿಗೆ
March 15, 2019ಮಂಡ್ಯ: ಮಂಡ್ಯದ ಅಭಿವೃದ್ಧಿ ದೃಷ್ಟಿಯಿಂದ ನನ್ನ ಮಗ ನಿಖಿಲ್ನನ್ನು ಅಭ್ಯರ್ಥಿ ಮಾಡ ಲಾಗಿದೆಯೇ ಹೊರತು ಅಧಿಕಾರದ ಲಾಲಸೆಯಿಂದ ಅಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಮಗನನ್ನು ಅಭ್ಯರ್ಥಿ ಮಾಡಿದ್ದನ್ನು ಸಮರ್ಥಿಸಿಕೊಂಡರು. ನಗರದ ಸಿಲ್ವರ್ಜ್ಯುಬಿಲಿ ಪಾರ್ಕ್ನಲ್ಲಿ ಇಂದು ನಡೆದ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ನನ್ನ ಮಗ ನಿಖಿಲ್ನನ್ನು ಚುನಾವಣೆಗೆ ನಿಲ್ಲಿಸಬೇಕೆಂಬ ಯೋಚನೆಯೇ ನನಗಿರ ಲಿಲ್ಲ. ರವೀಂದ್ರ ಶ್ರೀಕಂಠಯ್ಯನವರು ಮೊದಲು ನಿಖಿಲ್ ಹೆಸರನ್ನು ಹೇಳಿದಾಗ ಅವರ ಮಾತನ್ನು ಕೇಳಿ ನನಗೆ ನಡುಕ ಬಂತು. ಆ ನಂತರ ಮಂಡ್ಯ…
ಮೊಮ್ಮಗನ ಹಾದಿ ಸುಗಮಕ್ಕೆ ಮೈಸೂರಲ್ಲಿ ಕಾಂಗ್ರೆಸ್ನಿಂದ ಸುಮಲತಾ ಕಣಕ್ಕಿಳಿಸಲು ದೇವೇಗೌಡರ ಮಾಸ್ಟರ್ ಪ್ಲಾನ್
March 15, 2019ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮೊಮ್ಮಗ ನಿಖಿಲ್ ಗೆಲುವನ್ನು ಖಚಿತಪಡಿಸಿಕೊಳ್ಳುವ ತಂತ್ರವಾಗಿ ಸುಮಲತಾ ಅಂಬರೀಷ್ ಅವರನ್ನು ಮೈಸೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ರಾಜಕೀಯ ದಾಳ ಉರುಳಿಸಿದ್ದಾರೆ. ಇದೇ ಕಾರಣಕ್ಕೆ ಮೈಸೂರು ಕ್ಷೇತ್ರವನ್ನು ಕೊನೆಗಳಿಗೆಯಲ್ಲಿ ಬಿಟ್ಟುಕೊಟ್ಟು, ಸಿಎಲ್ಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಚೆಕ್ಮೇಟ್ ನೀಡಿದ್ದಾರೆ. ಗೌಡರ ಸಲಹೆ ಮೇರೆಗೆ ರಾಜ್ಯದ ಉಸ್ತುವಾರಿ ಹೊಣೆ ಹೊತ್ತ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಮೈಸೂರು ಕ್ಷೇತ್ರದಿಂದ ಸ್ಪರ್ಧಿಸುವಂತೆ ಸುಮಲತಾ…