ಮಂಡ್ಯ: ಮದ್ದೂರು ತಾಲೂಕಿನ ಕೊಪ್ಪ ಹೋಬಳಿ ಬೆಳತೂರು ಗ್ರಾಮದ ವಿಚ್ಛೇದಿತ ದಂಪತಿಗಳ ಜಮೀನು ವಿವಾದ ಪ್ರಕರಣದಲ್ಲಿ ನ್ಯಾಯಾಲಯದ ಆದೇಶದಂತೆ ಸರ್ವೇ ಕಾರ್ಯ ನಡೆಸದೇ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಜಾಮೀನು ರಹಿತ ಬಂಧನದ ವಾರೆಂಟ್ಗೆ ಒಳಗಾಗಿದ್ದ ಮದ್ದೂರು ತಹಶೀಲ್ದಾರ್ ಜಿ.ಹೆಚ್. ನಾಗರಾಜು ಅವರಿಗೆ ಜೆಎಂಎಫ್ಸಿ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ. ತಾಲೂಕು ಕಚೇರಿಯ ಸರ್ವೇ ಇಲಾಖೆ ಸಿಬ್ಬಂದಿಗಳೊಂದಿಗೆ ಬೆಳಿಗ್ಗೆ 11.15ರ ಸುಮಾರಿಗೆ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಬಾಲಸುಬ್ರಹ್ಮಣ್ಯಂ ಅವರ ಮುಂದೆ ಹಾಜರಾದ ತಹಶೀಲ್ದಾರ್…
ಅಸಮರ್ಪಕ ಮತದಾರರ ಪಟ್ಟಿ ಪರಿಷ್ಕರಣೆ ಖಂಡಿಸಿ: ಪ್ರತಿಭಟನೆ
June 2, 2018ಮದ್ದೂರು: ಪಟ್ಟಣದ ಪುರ ಸಭಾಧಿಕಾರಿಗಳು ಸ್ಥಳೀಯ ಸಂಸ್ಥೆ ಚುನಾವಣೆ ಮತಪಟ್ಟಿ ಪರಿಷ್ಕರಣೆಯನ್ನು ಸಮರ್ಪಕವಾಗಿ ಮಾಡಿಲ್ಲ ಎಂದು ಆರೋಪಿಸಿ ಭ್ರಷ್ಟಾಚಾರ ನಿರ್ಮೂಲನಾ ಸಂಘಟನೆ ಮತ್ತು ಜಯ ಕರ್ನಾಟಕ ಸಂಘಟನೆ ಕಾರ್ಯ ಕರ್ತರು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ತಾಲೂಕು ಕಚೇರಿ ಎದುರು ಜಮಾ ಯಿಸಿದ ಕಾರ್ಯಕರ್ತರು ಪುರಸಭಾಧಿ ಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಭ್ರಷ್ಟಾಚಾರ ನಿರ್ಮೂಲನಾ ಸಂಘಟನೆ ಸಂಚಾಲಕಿ ಪ್ರಿಯಾಂಕ ಅಪ್ಪು ಪಿ.ಗೌಡ ಮಾತನಾಡಿ, ಸ್ಥಳೀಯ ಸಂಸ್ಥೆಗಳ ಚುನಾ ವಣೆ ನಡೆಯುವ ಹಿನ್ನೆಲೆಯಲ್ಲಿ…
ತಂಬಾಕು ತ್ಯಜಿಸಿ ಆರೋಗ್ಯಯುತ ಜೀವನ ನಡೆಸಿ
June 1, 2018ಮದ್ದೂರು: ತಂಬಾಕು ಸೇವನೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರಿಂದ, ತಂಬಾಕು ತ್ಯಜಿಸಿ ಆರೋಗ್ಯ ಯುತ ಜೀವನ ನಡೆಸುವಂತೆ ಹಿರಿಯ ಸಿವಿಲ್ ನ್ಯಾ.ಆರ್.ಪಿ.ಗೌಡ ಸಲಹೆ ನೀಡಿದರು. ಪಟ್ಟಣದ ವಕೀಲರ ಭವನದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಅಂಗವಾಗಿ ನಡೆದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ತಂಬಾಕು ಸೇವಿಸುವ ವ್ಯಕ್ತಿ ತಾನು ಆರೋಗ್ಯ ಹಾಳು ಮಾಡಿಕೊಳ್ಳುವ ಜೊತೆಗೆ ತನ್ನ ಜೊತೆ…
ತಾಲೂಕು ಕಚೇರಿ ಎದುರು ರೈತರ ಪ್ರತಿಭಟನೆ
May 30, 2018ಮದ್ದೂರು: ಪಟ್ಟಣದ ತಾಲೂಕು ಕಚೇರಿಯಲ್ಲಿ ರೈತರ ಹಾಗೂ ಜನಸಾಮಾನ್ಯರ ಕೆಲಸಗಳು ಸಮ ರ್ಪಕವಾಗಿ ಆಗುತ್ತಿಲ್ಲವೆಂದು ಆರೋಪಿಸಿ ರೈತರು ಮಂಗಳವಾರ ಪ್ರತಿಭಟನೆ ನಡೆಸಿದರು.ತಾಲೂಕು ಕಚೇರಿ ಎದುರು ಜಮಾ ಯಿಸಿದ ರೈತರು, ಇಲ್ಲಿನ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರೈತ ಮುಖಂಡ ಪುಟ್ಟಸ್ವಾಮಿ ಮಾತ ನಾಡಿ, ತಾಲೂಕು ಕಚೇರಿಯಲ್ಲಿ ಖಾತೆ ಬದಲಾವಣೆ, ಆರ್ಟಿಸಿ, ಪಡಿತರ ಚೀಟಿ ವಿತರಣೆ, ಒತ್ತುವರಿ ತೆರವು ಸೇರಿದಂತೆ ಇನ್ನಿತರ ಕೆಲಸಗಳು ತ್ವರಿತವಾಗಿ ನಡೆ ಯುತ್ತಿಲ್ಲ. ಇದರಿಂದ ನಿತ್ಯ ರೈತರು ಹಾಗೂ ಸಾರ್ವಜನಿಕರು ತಮ್ಮ…
ಕೆ.ಆರ್.ಪೇಟೆ, ಮದ್ದೂರಲ್ಲಿ ಗ್ರಾಪಂ ನೌಕರರಿಂದ ತಾಪಂಗೆ ಮುತ್ತಿಗೆ
May 29, 2018ಮಂಡ್ಯ: ಗ್ರಾಪಂ ನೌಕರರ ವೇತನವನ್ನು ಇ- ಪಾವತಿ ಮೂಲಕ ಅನು ಷ್ಠಾನಗೊಳಿಸುವಂತೆ ಒತ್ತಾಯಿಸಿ ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಗ್ರಾಪಂ ನೌಕರರು ಮದ್ದೂರು ಮತ್ತು ಕೆ.ಆರ್.ಪೇಟೆಗಳಲ್ಲಿ ತಾಪಂಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಕೆ.ಆರ್.ಪೇಟೆ: ಗ್ರಾಪಂ ನೌಕರರ ವೇತನ ವನ್ನು ಇ- ಪಾವತಿ ಮೂಲಕ ಅನುಷ್ಠಾನ ಗೊಳಿಸುವಂತೆ ಒತ್ತಾಯಿಸಿ ಗ್ರಾಪಂ ನೌಕರರು ತಾಪಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿ ಭಟನೆ ನಡೆಸಿದರು. ತಾಲೂಕು ಅಧ್ಯಕ್ಷ ಮೋದೂರು ನಾಗ ರಾಜು ಮಾತನಾಡಿ, ಸರ್ಕಾರ ಗ್ರಾಪಂ ನೌಕರರಿಗೆ ಮಾಸಿಕ…
ಬಿಜೆಪಿ ತೊರೆದು ‘ಕೈ’ ಸೇರಿದ ಲಕ್ಷ್ಮಣ್ಕುಮಾರ್
April 25, 2018ಮದ್ದೂರು: ತಾಲೂಕು ಬಿಜೆಪಿ ಅಧ್ಯಕ್ಷ ಲಕ್ಷ್ಮಣ್ಕುಮಾರ್ ಬಿಜೆಪಿ ತೊರೆದು ಮಧು ಜಿ.ಮಾದೇಗೌಡರ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು. ಈ ವೇಳೆ ಮಾತನಾಡಿದ ಲಕ್ಷ್ಮಣ್ ಕುಮಾರ್, ಕಳೆದ 2 ವರ್ಷದಿಂದ ತಾಲೂಕಿ ನಾದ್ಯಂತ ತಳಮಟ್ಟದಿಂದ ಬಿಜೆಪಿಯನ್ನು ಸಂಘಟಿಸಿದ್ದೇನೆ. ಪ್ರತಿ ಹಳ್ಳಿಯಲ್ಲೂ ಬಿಜೆಪಿ ಕಾರ್ಯಕರ್ತರನ್ನು ಹುಟ್ಟು ಹಾಕಿ, ಹೋಬಳಿಗಳಲ್ಲಿ ಉಚಿತ ಆರೋಗ್ಯ ತಪಾ ಸಣಾ ಶಿಬಿರ ಸೇರಿದಂತೆ ಸಮಾಜಮುಖಿ ಕಾರ್ಯಗಳನ್ನು ಮಾಡಿ ಪಕ್ಷಕ್ಕೆ ಉತ್ತಮ ಹೆಸರು ತಂದಿದ್ದೆ. ಆದರೆ ಇಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸುವ ಉದ್ದೇಶದಿಂದ ನನ್ನಂತ ನಿಷ್ಠಾವಂತನಿಗೆ ಟಿಕೆಟ್ ನೀಡದೇ…