ಕೆ.ಆರ್.ಪೇಟೆ: ಸಮ್ಮಿಶ್ರ ಸರ್ಕಾರದಲ್ಲಿ ಮಾದಿಗ(ಆದಿಜಾಂಬವ) ಸಮುದಾಯದ ನಾಯಕರಿಗೆ ಸಚಿವ ಸ್ಥಾನ ನೀಡದ ಕ್ರಮ ಖಂಡಿಸಿ ತಾಲೂಕು ಮಾದಿಗ ಮೀಸಲಾತಿ ಹೋರಾಟ ಸಮಿತಿ ಹಾಗೂ ಡಾ.ಬಾಬು ಜಗಜೀವನರಾಂ ಸಂಘಟನೆಗಳ ಒಕ್ಕೂಟದ ಸದಸ್ಯರು ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಸಮುದಾಯದ ಕಾಂಗ್ರೆಸ್ ಹಿರಿಯ ನಾಯಕರಾದ ಸಂಸದ ಕೆ.ಹೆಚ್.ಮುನಿಯಪ್ಪ ಪುತ್ರಿ ರೂಪಾ ಶಶಿಧರ್ಗೆ ಕಡೇ ಗಳಿಗೆಯಲ್ಲಿ ಸಚಿವ ಸ್ಥಾನ ನೀಡದೇ ವಂಚಿಸಲಾಗಿದೆ. ಹಾಗೆಯೇ ಉತ್ತರ ಕರ್ನಾಟಕ ಭಾಗದ ಆರ್.ಬಿ.ತಿಮ್ಮಾಪೂರ್ ಅಥವಾ ಮೈಸೂರಿನ ಪ್ರಭಾವಿ ನಾಯಕ ಧರ್ಮಸೇನಾ ಅವರಿಗಾದರೂ ಸಚಿವ…