ಮಡಿಕೇರಿ: ದುಷ್ಟ ಸಂಹಾರ ಶಿಷ್ಟ ಪರಿಪಾಲನೆಯ ಸಂದೇಶ ಸಾರುವ ಐತಿಹಾಸಿಕ ಮಡಿಕೇರಿ ದಸರಾ ಉತ್ಸವ ಮಳೆಯ ನಡುವೆಯೇ ಸಾಂಪ್ರದಾಯಿಕವಾಗಿ ನೆರವೇರಿತು. ನವದುರ್ಗೆಯರು ವಿವಿಧ ರೂಪ ತಾಳಿ ಅಸುರರನ್ನು ಸಂಹರಿಸುವ ಕಥಾ ಹಂದರ ಹೊಂದಿದ ದಶ ಮಂಟಪಗಳು, ದೈವಿಲೋಕವನ್ನು ಧರೆಗಿಳಿ ಸುವ ಮೂಲಕ ಮಡಿಕೇರಿ ದಸರಾಕ್ಕೆ ಮೆರಗು ತುಂಬಿದವು. ಶಕ್ತಿ ದೇವತೆಗಳಾದ ಶ್ರೀ ಚೌಟಿ ಮಾರಿಯಮ್ಮ, ಶ್ರೀ ದಂಡಿನ ಮಾರಿಯಮ್ಮ, ಶ್ರೀ ಕಂಚಿ ಕಾಮಾಕ್ಷಿಯಮ್ಮ, ಹಾಗೂ ಶ್ರೀ ಕೋಟೆ ಮಾರಿಯಮ್ಮ ಮಂಟಪಗಳೊಂದಿಗೆ ಶ್ರೀ ಪೇಟೆ ಶ್ರೀರಾಮ ಮಂದಿರ, ಶ್ರೀ…
ಮಡಿಕೇರಿ ದಸರಾ; ಖಾಸಗಿ ಬಸ್ ನಿಲುಗಡೆ ವಿವರ
October 17, 2018ಮಡಿಕೇರಿ: ಮಡಿಕೇರಿ ನಗರದಲ್ಲಿ ನಡೆಯಲಿರುವ ದಸರಾ ಉತ್ಸವದ ಸಂಬಂಧ ವಾಹನ ದಟ್ಟಣೆ, ಸಾರ್ವಜನಿಕ ಸುರಕ್ಷತೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಅ.19 ರಂದು ಮಧ್ಯಾಹ್ನ 2 ಗಂಟೆಯಿಂದ ಅ.20 ರ ಬೆಳಗ್ಗೆ 11 ಗಂಟೆಯವರೆಗೆ ತಾತ್ಕಾಲಿಕ ಸಂಚಾರ ವ್ಯವಸ್ಥೆ ನಿರ್ವಹಿಸಲು ಆರಕ್ಷಕ ಅಧೀಕ್ಷಕರು, ಪ್ರಾದೇಶಿಕ ಸಾರಿಗೆ ಅಧಿಕಾರಿ ಇವರಿಗೆ ಅನುಮತಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ಆದೇಶ ಹೊರಡಿಸಿದ್ದಾರೆ. ವಾಹನ ಸಂಚಾರ ವ್ಯವಸ್ಥೆ ಇಂತಿದೆ: ಕುಟ್ಟ, ಗೋಣಿಕೊಪ್ಪ, ಮಾಕುಟ್ಟ, ವಿರಾಜಪೇಟೆ, ಮೂರ್ನಾಡು…
ಮಡಿಕೇರಿ ದಸರಾ: ಶಕ್ತಿ ದೇವತೆಗಳ ಕರಗ ಉತ್ಸವಕ್ಕೆ ಚಾಲನೆ
October 11, 2018ಮಡಿಕೇರಿ: ಪೌರಾಣಿಕ ಹಿನ್ನಲೆ ಹೊಂದಿರುವ ಮಡಿಕೇರಿ ದಸರಾಕ್ಕೆ ಶಕ್ತಿ ದೇವತೆಗಳ ಕರಗ ಉತ್ಸವದ ಮೂಲಕ ಸಾಂಪ್ರದಾಯಿಕ ಚಾಲನೆ ದೊರೆತಿದೆ. ಮಡಿಕೇರಿಯ ಪಂಪಿನಕೆರೆಯಲ್ಲಿ 4 ಶಕ್ತಿ ದೇವತೆಗಳಾದ ಶ್ರೀ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ, ಶ್ರೀ ದಂಡಿನ ಮಾರಿಯಮ್ಮ, ಶ್ರೀ ಕಂಚಿ ಕಾಮಾಕ್ಷಿಯಮ್ಮ ಮತ್ತು ಶ್ರೀ ಕೋಟೆ ಮಾರಿಯಮ್ಮ ದೇವಿ ಗಳ ಕರಗಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮಡಿಕೇರಿ ದಸರಾಕ್ಕೆ ಅಧಿಕೃತ ಚಾಲನೆ ನೀಡಲಾಯಿತು. ಆ ಬಳಿಕ ಕರಗಗಳನ್ನು ಮೆರವಣಿಗೆ ಮೂಲಕ ಬನ್ನಿ ಮಂಟಪಕ್ಕೆ ಕರೆತಂದು ವಿಶೇಷ ಪೂಜೆ…
ಸಾಂಪ್ರದಾಯಿಕ, ಸರಳ ದಸರಾಗೆ ನಿರ್ಧಾರ: ಮಡಿಕೇರಿ ದಸರಾಗೆ 50, ಗೋಣಿಕೊಪ್ಪಲು ದಸರಾಗೆ 25 ಲಕ್ಷ ಅನುದಾನ
October 9, 2018ಮಡಿಕೇರಿ: ಮಡಿಕೇರಿ ದಸರಾಕ್ಕೆ 50 ಲಕ್ಷ ರೂ. ಮತ್ತು ಗೋಣಿಕೊಪ್ಪಲು ದಸರಾಕ್ಕೆ 25 ಲಕ್ಷ ರೂ. ಸೇರಿದಂತೆ ಕೊಡಗು ಜಿಲ್ಲೆಯಲ್ಲಿನ ನಾಡಹಬ್ಬಕ್ಕೆ 75 ಲಕ್ಷ ರೂ.ಗಳನ್ನು ಸರ್ಕಾರ ನೀಡುವುದಾಗಿ ಘೋಷಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್, ವಿಜೃಂಭಣೆಯ ಬದಲಿಗೆ ಸಾಂಪ್ರದಾಯಿಕವಾಗಿ ದಸರಾ ಆಚರಿಸುವಂತೆ ಸೂಚಿಸಿದ್ದಾರೆ. ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಜರುಗಿದ ಕೊಡಗು ಜಿಲ್ಲಾ ದಸರಾ ಆಚರಣೆ ಸಂಬಂ ಧಿತ ಸಭೆಯಲ್ಲಿ ಮಾತನಾಡಿದ ಅವರು, ಪ್ರಕೃತಿ ವಿಕೋಪದಿಂದಾಗಿ ಮಡಿಕೇರಿ ತಾಲೂಕಿನ 7-8 ಪಂಚಾಯತ್ಗಳ ಜನ ಸಂಕಷ್ಟದಲ್ಲಿದ್ದಾರೆ. ಹೀಗಾಗಿ ವಿಜೃಂಭಣೆ…