ಮಡಿಕೇರಿ: ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಆಶ್ಲೇಷ ಮಳೆ ಅಬ್ಬರಿಸುತ್ತಿದ್ದು, ಕೊಡಗು ಜಿಲ್ಲೆ ಸಂಪೂರ್ಣವಾಗಿ ತತ್ತರಿಸಿದೆ. ಬಿರುಗಾಳಿ ಸಹಿತ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂ ದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ನದಿ ತೊರೆಗಳು ಅಪಾಯ ಮಟ್ಟವನ್ನು ಮೀರಿ ಹರಿಯುತ್ತಿವೆ. ಕಳೆದ ಒಂದು ವಾರದಿಂದ ಮಳೆ ಕೊಂಚ ಬಿಡುವ ನೀಡಿದ್ದರಿಂದ ಜನತೆ ಅಲ್ಪ ನಿರಾಳರಾಗಿ ನಿಟ್ಟುಸಿರು ಬಿಡುತ್ತಿದ್ದಂತೆಯೇ ಆಶ್ಲೇಷ ಮಳೆ ಆರ್ಭಟ ತೋರಿದ್ದು, ಪ್ರಕೃತಿ ವಿಕೋಪಗಳ ಸರ ಣಿಯೂ ಮುಂದುವರಿದಿದೆ. ಈ ಹಿಂದೆ ಸುರಿದ ಆರಿದ್ರ ಮಳೆಯ ರಭಸಕ್ಕೆ ಮಡಿಕೇರಿ-ಮಂಗಳೂರು ರಾಷ್ಟ್ರೀಯ…
ಕೊಡಗು
ತಾಳತ್ತಮನೆ ಬಳಿ ಹೆದ್ದಾರಿಯಲ್ಲಿ ಗುಂಡಿ
July 30, 2018ಮಡಿಕೇರಿ: ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ತಾಳತ್ತಮನೆ ಸಮೀಪ ರಸ್ತೆಯ ಮಧ್ಯದಲ್ಲಿ ಬೃಹತ್ ಗುಂಡಿ ಬಿದ್ದಿದೆ. ಅಂತರ್ಜಲದಿಂದ ಈ ಗುಂಡಿ ಉದ್ಭವವಾಗಿದ್ದು, ವಾಹನ ಸಂಚಾರ ದುಸ್ಥರವಾಗಿ ಪರಿಣಮಿಸಿದೆ. ಹೆದ್ದಾರಿಯ ತಿರುವಿನಲ್ಲೇ ಬೃಹತ್ ಹೊಂಡ ಸೃಷ್ಟಿಯಾಗಿರುವುದರಿಂದ ಮಲ್ಟಿ ಆ್ಯಕ್ಸಿಲ್ ಲಾರಿಗಳು ಮತ್ತು ಬಸ್ಗಳ ಸಂಚಾರಕ್ಕೆ ಸಂಚಕಾರವಾಗಿದೆ. ಪೊಲೀಸರು ಬ್ಯಾರಿಕೇಡ್ ಅಳವಡಿಸಿ ಅಪಾಯದ ಸೂಚನೆ ಫಲಕ ಅಳವಡಿಸಿದ್ದಾರೆ. ಸ್ಥಳೀಯ ನಿವಾಸಿಗಳು ಹೆದ್ದಾರಿಯ ಹೊಂಡಕ್ಕೆ ಕಲ್ಲುಗಳನ್ನು ಹಾಕಿ ಮುಚ್ಚಿದ್ದರು ಕೂಡ ಅಧಿಕ ಭಾರ ಹೊತ್ತು ಸಾಗುತ್ತಿರುವ ಲಾರಿಗಳಿಂದಾಗಿ ಮತ್ತಷ್ಟು ಗುಂಡಿ ಸೃಷ್ಟಿಯಾಗುತ್ತಿದೆ. ರಾತ್ರಿ…