ಮಡಿಕೇರಿ: ಭಾರೀ ಮಳೆ ಹಿನ್ನೆಲೆಯಲ್ಲಿ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಕುಸಿಯುವ ಹಂತ ತಲುಪಿದ್ದು, ಸುರಕ್ಷತೆಯ ದೃಷ್ಟಿಯಿಂದ ಈ ರಸ್ತೆಯಲ್ಲಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತ ಹಾಗೂ ತಾಳತ್ತಮನೆ ಜಂಕ್ಷನ್ ಬಳಿ ರಸ್ತೆಯನ್ನು ಬಂದ್ ಮಾಡಿದ್ದು, ಎಲ್ಲಾ ರೀತಿಯ ವಾಹನಗಳನ್ನು ತಾಳತ್ತಮನೆ-ಮೇಕೇರಿ ಬೈಪಾಸ್ ರಸ್ತೆಯ ಮೂಲಕ ಮಡಿಕೇರಿಗೆ ತೆರಳಲು ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ. ಈ ರಸ್ತೆ ಸಂಪೂರ್ಣ ಕಿರಿದಾಗಿದ್ದು ಬಸ್ಗಳು, ಸರಕು ತುಂಬಿದ ಲಾರಿಗಳ ಸಂಚಾರಕ್ಕೆ ದುಸ್ತರವಾಗಿ ಪರಿಣಮಿಸಿದೆ. ಈ ರಸ್ತೆಯಲ್ಲಿ ಲಾರಿಗೆ…
ಕೊಡಗು
ಮಡಿಕೇರಿ-ಮಂಗಳೂರು ರಸ್ತೆ ಮತ್ತೊಂದು ಕಡೆ ಬಿರುಕು
July 19, 2018ಮಡಿಕೇರಿ: ಮಡಿಕೇರಿ-ಮಂಗಳೂರು ರಸ್ತೆಯ ಕಾಟಕೇರಿ ಜಂಕ್ಷನ್ ಬಳಿ ರಸ್ತೆಯ ಒಂದು ಪಾಶ್ರ್ವದಲ್ಲಿ ಮಂಗಳವಾರ ರಾತ್ರಿ ಭಾರೀ ಪ್ರಮಾಣದ ಬಿರುಕು ಮೂಡಿದೆ. ಕೆಲವು ದಿನಗಳ ಹಿಂದೆ ಇದೇ ಮಾರ್ಗದ ಮತ್ತೊಂದು ಸ್ಥಳದಲ್ಲಿ ಭಾರೀ ಬಿರುಕು ಕಂಡು ಬಂದು ಆತಂಕ ಎದುರಾಗಿತ್ತು. ಇದೀಗ ಇದೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗದೊಂದು ಬಿರುಕು ಕಂಡು ಬಂದಿದ್ದು, ರಸ್ತೆಯ ಬದಿಯಲ್ಲೆ ಕಂದಕವಿದ್ದು, ನೀರಿನ ಹರಿವೂ ಇದೆ. ಮಳೆಯ ಪ್ರಮಾಣ ಹೆಚ್ಚಿ ರಸ್ತೆ ಕುಸಿದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಸಮಸ್ಯೆ ಎದುರಾಗಲಿದೆ. ಈಗಾಗಲೆ ಬಿರುಕು…