ಮಡಿಕೇರಿ: ಪುನರ್ವಸು ಮಳೆಯನ್ನು ಹಿಂಬಾಲಿಸುವ ರೀತಿಯಲ್ಲಿ ಪುಷ್ಯ ಮಳೆಯ ಬಿರುಸು ಕೊಡಗು ಜಿಲ್ಲೆಯನ್ನು ವ್ಯಾಪಿಸಿದೆ. ಕಳೆದೊಂದು ದಿನದ ಅವಧಿ ಯಲ್ಲಿ ಭಾರೀ ಗಾಳಿ ಮಳೆಗೆ ಮತ್ತೊಮ್ಮೆ ‘ಕಾವೇರಿ’ಯ ಒಡಲು ಭರ್ತಿಯಾಗಿ ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ ನೀರು ರಸ್ತೆಗಳನ್ನು ಆವರಿಸಿದೆ. ಕಾವೇರಿಯ ಕ್ಷೇತ್ರ ತಲಕಾವೇರಿ ಮತ್ತು ಭಾಗಮಂಡಲ ವ್ಯಾಪ್ತಿಯಲ್ಲಿ ನಿನ್ನೆ ಬೆಳಗ್ಗಿ ನಿಂದ ಇಂದು ಬೆಳಗ್ಗಿನವರೆಗೆ ಸಾಧಾರಣ ವಾಗಿ 3 ಇಂಚಿನಷ್ಟು ಮಳೆಯಾಗಿದ್ದು, ಮಳೆಯ ಪ್ರಮಾಣ ಹೆಚ್ಚುವುದರೊಂದಿಗೆ ಕಾವೇರಿ ನದಿ ನೀರಿನ ಮಟ್ಟ ಏರಲಾರಂಭಿಸಿದೆ. ಇದರಿಂದ ಭಾಗಮಂಡಲದ ಅಯ್ಯಂಗೇರಿ…
ಕೊಡಗು
ಮಡಿಕೇರಿ-ಮಂಗಳೂರು ಹೆದ್ದಾರಿ ಕುಸಿತ
July 13, 2018ಮಡಿಕೇರಿ: ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತದಿಂದ, ರಾಜಾಸೀಟ್ ಬೆಟ್ಟದ ಕೆಳ ಭಾಗದ ಹೆದ್ದಾರಿಯಲ್ಲಿ ಭಾರೀ ಬಿರುಕು ಮೂಡಿದ್ದು, ಹೆದ್ದಾರಿ ಕುಸಿತಗೊಂಡಿದೆ. ಮಳೆಯ ನೀರು ರಸ್ತೆಯಲ್ಲಿ ಹರಿದ ಪರಿಣಾಮ ಹೆದ್ದಾರಿಯ ಪಕ್ಕದಲ್ಲಿ ಬರೆ ಕುಸಿತವಾಗಿ, ಹೆದ್ದಾರಿ ಸಂಚಾರ ದುಸ್ಥರ ಗೊಂಡಿದೆ. ಯಾವುದೇ ಕ್ಷಣದಲ್ಲೂ ರಸ್ತೆ ಕುಸಿಯುವ ಸಾಧ್ಯತೆಯಿದ್ದು, ಪ್ರಸ್ತುತ ಏಕಮುಖ ವಾಹನ ಸಂಚಾರ ವ್ಯವಸ್ಥೆ ರೂಪಿಸಲಾಗಿದೆ. ಶಿರಾಡಿಘಾಟ್ನಲ್ಲಿ ಭಾರೀ ವಾಹನಗಳ ಸಾಗಾಟಕ್ಕೆ ರಸ್ತೆ ನವೀಕರ ಣದಿಂದ ನಿರ್ಭಂದ ಹೇರಲಾಗಿದ್ದು, ಮಂಗಳೂರು-ಶಿರಾಡಿ ರಸ್ತೆಯಲ್ಲಿ ಸಂಚರಿಸು ತ್ತಿದ್ದ ಭಾರೀ ಸರಕು ತುಂಬಿದ…