Tag: Madikeri

ಮಡಿಕೇರಿ ದಸರಾಕ್ಕೆ ಅನುದಾನ ನೀಡದಿದ್ದಲ್ಲಿ ಸ್ವತಂತ್ರ ನಿರ್ವಹಣೆ
ಮೈಸೂರು

ಮಡಿಕೇರಿ ದಸರಾಕ್ಕೆ ಅನುದಾನ ನೀಡದಿದ್ದಲ್ಲಿ ಸ್ವತಂತ್ರ ನಿರ್ವಹಣೆ

October 5, 2018

ದಶಮಂಟಪ ಸಮಿತಿ ಅಧ್ಯಕ್ಷ ರವಿಕುಮಾರ್ ಎಚ್ಚರಿಕೆ ಮಡಿಕೇರಿ:  ಐತಿಹಾಸಿಕ ಮಡಿಕೇರಿ ದಸರಾದ ಪ್ರಮುಖ ಆಕರ್ಷಣೆ ಯಾಗಿರುವ ದಶ ಮಂಟಪಗಳಿಗೆ ಸರ ಕಾರದಿಂದ ಅನುದಾನ ಒದಗಿಸುವಲ್ಲಿ ದಸರಾ ಸಮಿತಿ ವಿಫಲವಾದಲ್ಲಿ ದಶ ಮಂಟಪ ಸಮಿತಿ ಮುಂದಿನ ದಿನಗಳಲ್ಲಿ ದಸರಾ ಸಮಿತಿಯಿಂದ ಹೊರಬಂದು ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲಿದೆ ಎಂದು ದಶಮಂಟಪ ಸಮಿತಿ ಅಧ್ಯಕ್ಷ ರವಿಕುಮಾರ್ ಎಚ್ಚರಿಕೆ ನೀಡಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರವಿಕುಮಾರ್, ಮುಂಗಾರು ಮಳೆಯ ಆರ್ಭಟದಿಂದ ಪ್ರಾಕೃತಿಕ ವಿಕೋಪ ಸಂಭವಿಸಿದ್ದರೂ ಮುಂಬರುವ ದಿನಗಳಲ್ಲಿ ಹೆಚ್ಚಿನ ಅನಾಹುತಗಳು ಉಂಟಾಗದಂತೆ ಮತ್ತು…

ಸ್ಥಳೀಯ ಸಂಸ್ಥೆಗಳ ಚುನಾವಣಾ ವೇಳಾಪಟ್ಟಿ ಪ್ರಕಟ
ಕೊಡಗು

ಸ್ಥಳೀಯ ಸಂಸ್ಥೆಗಳ ಚುನಾವಣಾ ವೇಳಾಪಟ್ಟಿ ಪ್ರಕಟ

October 5, 2018

ಮಡಿಕೇರಿ:  ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ-2018ರ ಸಂಬಂಧ ಪ್ರಕೃತಿ ವಿಕೋಪದಿಂದಾಗಿ ಮಧ್ಯಂತರದಲ್ಲಿ ಸ್ಥಗಿತಗೊಳಿಸಲಾಗಿದ್ದ ಜಿಲ್ಲೆಯ ಸೋಮವಾರಪೇಟೆ, ವಿರಾಜಪೇಟೆ ಮತ್ತು ಕುಶಾಲನಗರ ಪಟ್ಟಣ ಪಂಚಾಯಿತಿಯ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದೆ. ಅ.16 ರಂದು ಜಿಲ್ಲಾಧಿಕಾರಿ ಅವರು ಪರಿಷ್ಕøತ ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದಾರೆ. ಅಂದೇ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅ.17 ರಂದು ನಾಮಪತ್ರ ಪರಿಶೀಲಿಸುವ ಕಾರ್ಯ ನಡೆಯಲಿದೆ. ಅ.20 ರಂದು ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆ ದಿನವಾಗಿದೆ. ಅ.28 ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ಅವಶ್ಯವಿದ್ದರೆ…

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಕೊಡಗು

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

October 5, 2018

ಮಡಿಕೇರಿ: ಕಾಫಿ ಮಂಡಳಿಯಿಂದ ಕಾಫಿ ತೋಟದ ಕ್ಯೂರಿಂಗ್ ಕಾರ್ಮಿಕರ ಮಕ್ಕಳಿಗೆ 2017-18ರಲ್ಲಿ ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾಗಿ ಪ್ರಸಕ್ತ 2018-19ನೇ ಸಾಲಿ ನಲ್ಲಿ ಪ್ರಥಮ ಪಿಯುಸಿ, ಪಾಲಿಟಿಕ್ನಿಕ್, ವೃತ್ತಿಪರ ಶಿಕ್ಷಣಗಳಲ್ಲಿ ಓದುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ದೊರೆಯಲಿದೆ. 2017-18ರಲ್ಲಿ ದ್ವಿತೀಯ ಪಿಯುಸಿ ಉತ್ತೀರ್ಣರಾಗಿ ಪ್ರಥಮ ವರ್ಷದ ಎಂಬಿಬಿಎಸ್, ಬಿಇ, ಫಾರ್ಮಸಿ, ನರ್ಸಿಂಗ್ ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಓದುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಅಧಿಕ ಅಂಕ ಪಡೆದ…

ಬಿಜೆಪಿ ಕಾರ್ಯಕರ್ತನ ಹತ್ಯೆ ಆರೋಪಿ ಬಂಧನ
ಕೊಡಗು

ಬಿಜೆಪಿ ಕಾರ್ಯಕರ್ತನ ಹತ್ಯೆ ಆರೋಪಿ ಬಂಧನ

October 3, 2018

ಮಡಿಕೇರಿ:  ಮರಗೋಡು ನಿವಾಸಿ, ಸ್ಥಳೀಯ ಬಿಜೆಪಿ ಮುಖಂಡ ಕಾನಡ್ಕ ತಿಲಕ್‍ರಾಜ್ ಅವರನ್ನು ಗುಂಡು ಹಾರಿಸಿ ಹತ್ಯೆಗೈದ ಆರೋಪದ ಅಡಿಯಲ್ಲಿ ಮರಗೋಡು ಗ್ರಾಪಂ ಸದಸ್ಯ ಮುಂಡೋಡಿ ನಂದಾ ನಾಣಯ್ಯನನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಕೃತ್ಯಕ್ಕೆ ಬಳಸಿದ್ದ ರಿವಾಲ್ವರ್, ಜೀವಂತ ಗುಂಡುಗಳು, ಡಸ್ಟರ್ ಕಾರು ಮತ್ತು ಬೈಕ್‍ನ್ನು ವಶಕ್ಕೆ ಪಡೆದಿದ್ದಾರೆ. ಕೊಲೆ ಪ್ರಕರಣದ ಮಾಹಿತಿ ಪೊಲೀಸರಿಗೆ ತಿಳಿಯುತ್ತಿದ್ದಂತೆಯೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ ಅವರು, 2 ಪ್ರತ್ಯೇಕ ತಂಡಗಳನ್ನು ರಚಿಸಿ ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದರು. ಜಿಲ್ಲಾ ಅಪರಾಧ…

ಜೆಡಿಎಸ್ ಬೆಂಬಲಿತ ಗ್ರಾಪಂ ಸದಸ್ಯನಿಂದ  ಗುಂಡಿಕ್ಕಿ ಬಿಜೆಪಿ ಮುಖಂಡನ ಹತ್ಯೆ
ಕೊಡಗು

ಜೆಡಿಎಸ್ ಬೆಂಬಲಿತ ಗ್ರಾಪಂ ಸದಸ್ಯನಿಂದ  ಗುಂಡಿಕ್ಕಿ ಬಿಜೆಪಿ ಮುಖಂಡನ ಹತ್ಯೆ

October 2, 2018

ಮಡಿಕೇರಿ: ರಾಜಕೀಯ ದ್ವೇಷಕ್ಕೆ ಗ್ರಾಮ ಪಂಚಾಯಿತಿ ಸದಸ್ಯ ನೋರ್ವ ಪಿಸ್ತೂಲ್‍ನಿಂದ ಗುಂಡಿಕ್ಕಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಡಿಕೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮರಗೋಡುವಿನಲ್ಲಿ ನಡೆದಿದೆ. ಮರಗೋಡು ನಿವಾಸಿ, ಸ್ಥಳೀಯ ಬಿಜೆಪಿ ಸ್ಥಾನೀಯ ಸಮಿತಿ ಕಾರ್ಯ ದರ್ಶಿ ಕಾನಡ್ಕ ತಿಲಕರಾಜ್ (40) ಗುಂಡಿಗೆ ಬಲಿಯಾದ ವ್ಯಕ್ತಿ. ಆರೋಪಿ ಜೆಡಿಎಸ್ ಬೆಂಬಲಿತ ಗ್ರಾ.ಪಂ ಸದಸ್ಯ ಮುಂಡೋಡಿ ನಂದಾ ನಾಣಯ್ಯ ತಲೆ ಮರೆಸಿಕೊಂಡಿದ್ದಾನೆ. ಸೋಮವಾರ ಸಂಜೆ 6.30 ಗಂಟೆ ಸುಮಾರಿಗೆ ಮರಗೋಡು ಜಂಕ್ಷನ್ ಬಳಿ ನಂದಾ ನಾಣಯ್ಯ ಮತ್ತು ಚಿದಂಬರ…

ಮನೆ ಹಾನಿ ವಿವರದ ಪಟ್ಟಿ ಪ್ರಕಟ; ಆಕ್ಷೇಪಣೆ ಸಲ್ಲಿಸಲು ಅವಕಾಶ
ಕೊಡಗು

ಮನೆ ಹಾನಿ ವಿವರದ ಪಟ್ಟಿ ಪ್ರಕಟ; ಆಕ್ಷೇಪಣೆ ಸಲ್ಲಿಸಲು ಅವಕಾಶ

September 29, 2018

ಮಡಿಕೇರಿ: ಜಿಲ್ಲೆಯಲ್ಲಿ ಈ ವರ್ಷ ಬಿದ್ದ ಭಾರೀ ಮಳೆ ಯಿಂದ ಅತಿವೃಷ್ಟಿ ಹಾಗೂ ಭೂಕುಸಿತ ಉಂಟಾಗಿದ್ದು, ಆದ ಕಾರಣ ತೀವ್ರ ಪ್ರಮಾಣದಲ್ಲಿ ಮನೆಗಳು ಹಾನಿಯಾಗಿರುತ್ತದೆ. ಅದರಂತೆ ಹಾನಿಯಾಗಿರುವ ಪ್ರದೇಶಗಳ ಸ್ಥಳೀಯ ಗ್ರಾಮ ಲೆಕ್ಕಾಧಿಕಾರಿಗಳು, ಕಂದಾಯ ಪರಿವೀಕ್ಷಕರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಳು ಜಂಟಿ ತಪಾಸಣೆ ನಡೆಸಿ ವಾಸಕ್ಕೆ ಯೋಗ್ಯವಿಲ್ಲದ ಹಾನಿಯಾದ ಮನೆಗಳನ್ನು ಗುರುತಿಸಿದ್ದು, ಈ ಮನೆ ಹಾನಿ ವಿವರದ ಪಟ್ಟಿಯನ್ನು ಸೆ.29 ರಂದು ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳಲ್ಲಿ, ನಗರಸಭೆ, ಮಡಿಕೇರಿ ಹಾಗೂ ಪಟ್ಟಣ ಪಂಚಾಯಿತಿ, ಕುಶಾಲನಗರ…

ಅ.1, ವಿಶ್ವ ಹಿರಿಯ ನಾಗರಿಕರ ದಿನಾಚರಣೆ
ಕೊಡಗು

ಅ.1, ವಿಶ್ವ ಹಿರಿಯ ನಾಗರಿಕರ ದಿನಾಚರಣೆ

September 29, 2018

ಮಡಿಕೇರಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀ ಕರಣ ಇಲಾಖೆ ವತಿಯಿಂದ ಶಿಶು ಕಲ್ಯಾಣ ಸಂಸ್ಥೆ(ಬಾಲ ಭವನ) ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಹತ್ತಿರ, ಮಡಿಕೇರಿ ಇಲ್ಲಿ ಅಕ್ಟೋಬರ್ 1 ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ಮಟ್ಟದಲ್ಲಿ “ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2018” ನಡೆಯಲಿದೆ. ಜಿಲ್ಲೆಯ ಎಲ್ಲಾ ಹಿರಿಯ ನಾಗರಿಕ ಬಂಧುಗಳು ಹಾಗೂ ಹಿರಿಯ ನಾಗರಿಕರ ಸಂಘ ಸಂಸ್ಥೆಯವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.

ಜೋಡುಪಾಲದ ಬಳಿ ಅಸ್ಥಿಪಂಜರ ಪತ್ತೆ
ಕೊಡಗು

ಜೋಡುಪಾಲದ ಬಳಿ ಅಸ್ಥಿಪಂಜರ ಪತ್ತೆ

September 28, 2018

ಭೂಕುಸಿತ ವೇಳೆ ನಾಪತ್ತೆಯಾಗಿರುವ ಬಾಲಕಿ ಮಂಜುಳಾ ಅವರದ್ದು ಎಂಬ ಶಂಕೆ ಮಡಿಕೇರಿ: ಭೂ ಕುಸಿತ ಮತ್ತು ಜಲ ಪ್ರಳಯಕ್ಕೆ ತುತ್ತಾಗಿ ಧ್ವಂಸಗೊಂಡ ಜೋಡುಪಾಲದ ಬಳಿ ಮೃತದೇಹವೊಂ ದರ ಅಸ್ತಿಪಂಜರ ಪತ್ತೆಯಾಗಿದೆ. ಆಗಸ್ಟ್ 16ರಂದು ಭೂ ಕುಸಿತ ಮತ್ತು ನದಿ ಪ್ರವಾ ಹಕ್ಕೆ ಸಿಲುಕಿ ಕಣ್ಮರೆಯಾಗಿದ್ದ ಮಂಜುಳಾ (15) ಎಂಬಾಕೆಯ ಮೃತದೇಹದ ಅಸ್ತಿಪಂಜರ ಇಬರಬಹುದೆಂಬ ಬಲ ವಾದ ಶಂಕೆ ವ್ಯಕ್ತವಾಗಿದ್ದು, ವೈದ್ಯಕೀಯ ಮೂಲಗಳು ಮತ್ತು ಪೊಲೀಸರು ಇದನ್ನು ದೃಢಪಡಿಸಿಲ್ಲ. ಮೃತದೇಹದ ಅಸ್ತಿಪಂಜರ ಮಾತ್ರವೇ ಪತ್ತೆಯಾಗಿರುವುದರಿಂದ ಮಂಜುಳಾ ಅವರ ಪೋಷಕರು…

ತಹಶೀಲ್ದಾರ್ ಮೇಲೆ ಹಲ್ಲೆ: ಆರೋಪಿಗಳಿಗೆ ಜಾಮೀನು
ಕೊಡಗು

ತಹಶೀಲ್ದಾರ್ ಮೇಲೆ ಹಲ್ಲೆ: ಆರೋಪಿಗಳಿಗೆ ಜಾಮೀನು

September 28, 2018

ಮಡಿಕೇರಿ: ಸೋಮವಾರಪೇಟೆ ತಹ ಶೀಲ್ದಾರ್ ಮಹೇಶ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪದಲ್ಲಿ ಕಳೆದ ನಾಲ್ಕು ದಿನಗಳಿಂದ ಮಡಿ ಕೇರಿಯ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಎಲ್ಲಾ 15 ಮಂದಿಯನ್ನು ನ್ಯಾಯಾಲಯದ ಆದೇಶದಂತೆ ಜಾಮೀನಿನ ಮೇರೆಗೆ ಬಿಡುಗಡೆ ಮಾಡಲಾಗಿದೆ. ಕುಶಾಲ ನಗರದ ವಾಲ್ಮಿಖಿ ಭವನದಲ್ಲಿದ್ದ ಕೆಲವು ಸಂತ್ರಸ್ಥರು ಅಲ್ಲಿನ ಅವ್ಯವಸ್ಥೆಗಳ ಬಗ್ಗೆ ನೋಡಲ್ ಅಧಿಕಾರಿಯೊಂದಿಗೆ ಪ್ರಶ್ನಿಸುವ ಸಂದರ್ಭ ತಹಶೀಲ್ದಾರರ ಜೊತೆ ವಾಗ್ವಾದ ನಡೆಸಿದ್ದರು. ಈ ಸಂದರ್ಭ ತಹಶೀಲ್ದಾರ್ ಮಹೇಶ್, ಹಲ್ಲೆಯ ದೂರು ನೀಡಿದ್ದ ಹಿನ್ನಲೆಯಲ್ಲಿ 15 ಜನರ…

7 ಲಕ್ಷ ಮೌಲ್ಯದ ಬೀಟೆ ಮರ ವಶ
ಕೊಡಗು

7 ಲಕ್ಷ ಮೌಲ್ಯದ ಬೀಟೆ ಮರ ವಶ

September 27, 2018

ಮಡಿಕೇರಿ:  ಅಕ್ರಮವಾಗಿ ಬೀಟೆ ಮರ ಸಾಗಿಸುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಜಿಲ್ಲಾ ಪೊಲೀಸ್ ಅರಣ್ಯ ಸಂಚಾರಿ ದಳ ಮಾಲು ಸಹಿತ ಆರೋಪಿ ಯನ್ನು ವಶಕ್ಕೆ ಪಡೆದಿದೆ. ಕಾರಗುಂದ ನಿವಾಸಿ ಪಿ.ಡ್ಯಾನಿ ದೇವಯ್ಯ ಎಂಬಾತ ಬಂಧಿತ ಆರೋಪಿಯಾಗಿದ್ದು, ಪಿಕ್‍ಅಪ್ ವಾಹನ ಸಹಿತ 7 ಲಕ್ಷ ರೂ. ಮೌಲ್ಯದ ಬೀಟೆ ಮರವನ್ನು ವಶ ಪಡಿಸಿಕೊಳ್ಳಲಾಗಿದೆ. ಮರಗೋಡು ಸಮೀಪದ ಕಟ್ಟೆಮಾಡು ಮಾರ್ಗವಾಗಿ ಕೊಂಡಗೇರಿ ಕಡೆಗೆ ಪಿಕ್‍ಅಪ್ ವಾಹನದಲ್ಲಿ ಬೀಟೆ ಮರದ ತುಂಡು ಗಳನ್ನು ಸಾಗಿಸುತ್ತಿರುವ ಖಚಿತ ಮಾಹಿತಿ ಜಿಲ್ಲಾ ಪೊಲೀಸ್ ಅರಣ್ಯ…

1 10 11 12 13 14 32
Translate »