ಮಡಿಕೇರಿ: ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಹಲವು ಗ್ರಾಮಗಳಲ್ಲಿ ಸಹಸ್ರ ಸಂಖ್ಯೆಯ ಮರಗಳು ಉರಳಿ ಬಿದ್ದಿದ್ದು, ಅವುಗಳ ತೆರವಿಗೆ ಅರಣ್ಯ ಇಲಾಖೆ ಮುಂದಾಗಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯ ದರ್ಶಿ ಮತ್ತು ಜಿಲ್ಲಾಧಿಕಾರಿಗಳು ಮರಗÀಳ ತೆರವಿಗೆ ಅರಣ್ಯ ಇಲಾಖೆಗೆ ಸೂಚಿಸಿದ್ದು, ಮರ ತೆರವು ಕಾರ್ಯಾ ಚರಣೆ ಅರಣ್ಯ ಇಲಾಖೆಯ ಪಾಲಿಗೆ ತಲೆನೋವಾಗಿ ಪರಿಣಮಿಸಿದೆ. ಖಾಸಗಿ ಜಮೀನು, ನದಿ, ತೊರೆಗಳು ಮತ್ತು ಭತ್ತದ ಗದ್ದೆಗಳಲ್ಲಿ ಬುಡಮೇಲಾಗಿ ಉರುಳಿ ಬಿದ್ದಿರುವ ಮರಗಳನ್ನು ತೆಗೆಯಲು ಜಮೀನುಗಳ ಮಾಲೀಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಮರಗಳ ನಾಟ,…
ಸೆ.23, ವಿರಾಜಪೇಟೆಯಲ್ಲಿ ಗಣಪತಿ ವಿಸರ್ಜನೆ ವಾಹನಗಳ ಬದಲಿ ಸಂಚಾರ ಮಾರ್ಗದ ವಿವರ
September 21, 2018ಮಡಿಕೇರಿ: ವಿರಾಜಪೇಟೆ ಪಟ್ಟಣದಲ್ಲಿ ಸಾರ್ವಜನಿಕ ಗಣೇಶೋತ್ಸವ ಪ್ರಯುಕ್ತ ಪ್ರತಿಷ್ಠಾಪಿಸಲಾಗಿರುವ ಗಣೇಶ ವಿಗ್ರಹ ವಿಸರ್ಜನಾ ಸಂದರ್ಭದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸೆಪ್ಟೆಂಬರ್ 23ರ ಸಂಜೆ 5 ಗಂಟೆಯಿಂದ ಸೆಪ್ಟೆಂಬರ್ 24ರ ಬೆಳಗ್ಗೆ 10 ಗಂಟೆ ವರೆಗೆ ವಿರಾಜಪೇಟೆ ಪಟ್ಟಣದಲ್ಲಿ ವಾಹನಗಳ ಸಂಚಾರಕ್ಕೆ ಬದಲಿ ವ್ಯವಸ್ಥೆಯಂತೆ ನಿರ್ವಹಿಸಲು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ಆದೇಶ ಹೊರಡಿಸಿದ್ದಾರೆ. ವಾಹನಗಳ ಸಂಚಾರ ತಾತ್ಕಾಲಿಕ ಮಾರ್ಗದ ಬದಲಾವಣೆ ವಿವರ ಇಂತಿದೆ: ಸೆಪ್ಟೆಂಬರ್ 23 ರಂದು ವಿರಾಜಪೇಟೆ ಪಟ್ಟಣದಲ್ಲಿ ನಡೆಯುವ ಗೌರಿ…
ಮದ್ಯ ಮಾರಾಟ ನಿಷೇಧ
September 21, 2018ಮಡಿಕೇರಿ: ವಿರಾಜಪೇಟೆ ಪಟ್ಟಣದಲ್ಲಿ ಗಣೇಶ ಮಂಟಪಗಳ ವಿಸರ್ಜನಾ ಕಾರ್ಯಕ್ರಮದ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಹಾಗೂ ಕಾರ್ಯಕ್ರಮವು ಶಾಂತಿಯುತವಾಗಿ ನಡೆಯಲು ಅನುಕೂಲವಾಗುವಂತೆ ಸೆಪ್ಟೆಂಬರ್ 22 ರ ಮಧ್ಯ ರಾತ್ರಿ 12 ಗಂಟೆಯಿಂದ ಸೆಪ್ಟೆಂಬರ್ 24 ರ ಬೆಳಗ್ಗೆ 10 ಗಂಟೆಯವರೆಗೆ ವಿರಾಜಪೇಟೆ ಪಟ್ಟಣ ಮತ್ತು ಸುತ್ತಮುತ್ತಲಿನ 10 ಕಿ.ಮೀ ವ್ಯಾಪ್ತಿಯೊಳಗೆ ಬರುವ ಗ್ರಾಮಗಳಲ್ಲಿರುವ ಅಬಕಾರಿ ಕಾಯ್ದೆ 1965 ರ ಕಲಂ 21 ರ ಅಧಿಕಾರದಂತೆ ಎಲ್ಲಾ ರೀತಿಯ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೋಟೆಲ್…
ಗಾಂಜಾ ಮಾರಾಟಗಾರನ ಬಂಧನ
September 21, 2018ಮಡಿಕೇರಿ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನೊಬ್ಬನನ್ನು ಬಂಧಿಸಿದ ಪ್ರಕರಣ ಸುಂಟಿಕೊಪ್ಪ ಪಟ್ಟಣದಲ್ಲಿ ನಡೆದಿದೆ. ಸುಂಟಿಕೊಪ್ಪದ ನಿವಾಸಿ ಪ್ರಕಾಶ್ (20) ಎಂಬಾತ ಬಂಧಿತ ಆರೋಪಿಯಾಗಿದ್ದು, ಈತನಿಂದ 169 ಗ್ರಾಂ. ತೂಕದ ಗಾಂಜಾ ಮತ್ತು ರೂ. 6050 ನಗದು ವಶಪಡಿಸಿಕೊಳ್ಳಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ ಡಿ. ಪಣ್ಣೇಕರ್ ಮಾರ್ಗದರ್ಶನದಲ್ಲಿ ಜಿಲ್ಲಾ ಅಪರಾಧ ಪತ್ತೆ ದಳದ ಇನ್ಸ್ಪೆಕ್ಟರ್ ಎಂ.ಮಹೇಶ್, ಸುಂಟಿಕೊಪ್ಪ ಠಾಣಾಧಿಕಾರಿ ಜಯರಾಂ ನೇತೃತ್ವದಲ್ಲಿ ಸ್ಥಳೀಯ ನಾಡ ಕಛೇರಿ ಹಿಂದೆ ಪಾಳುಬಿದ್ದ ಕಟ್ಟಡವೊಂದರಲ್ಲಿ ಗಾಂಜಾ ಸಂಗ್ರಹಿಸಿಟ್ಟು ಮಾರಾಟ ಮಾಡುತ್ತಿದ್ದ…
ಮಳೆ ನಿಂತು ಹೋದ ಮೇಲೆ…. ಏರುತಿದೆ ಸುಡು ಬಿಸಿಲಿನ ತಾಪ
September 17, 2018ಮಡಿಕೇರಿ: ಅತೀವ ಮಳೆಯಿಂದ ಕಂಗೆಟ್ಟಿದ್ದ ಕೊಡಗಿನಲ್ಲಿ ಇದೀಗ ರಣ ಬಿಸಿಲಿನ ವಾತಾವರಣ ಕಂಡು ಬರುತ್ತಿದೆ. ತಾಪಮಾನದಲ್ಲೂ ಏರಿಕೆಯಾಗಿದ್ದು, ಭವಿಷ್ಯದ ದಿನಗಳಲ್ಲಿ ಬರಗಾಲ ಆವರಿಸುವ ಲಕ್ಷಣಗಳು ಗೋಚರಿಸುತ್ತಿದೆ. ಮಾತ್ರವಲ್ಲದೆ, ಭಾರಿ ಮಳೆಯಿಂದ ಜಲ ಪ್ರಳಯವನ್ನೇ ಸೃಷ್ಟಿಸಿದ್ದ ನದಿ, ತೊರೆ ಗಳಲ್ಲಿ ಕೂಡ ಗಣನೀಯ ಪ್ರಮಾಣದಲ್ಲಿ ನೀರಿನ ಹರಿವು ಕ್ಷೀಣಿಸಿದೆ. ನದಿಗಳ ತಳದಲ್ಲಿ ಕಲ್ಲು ಬಂಡೆಗಳು ಕಂಡು ಬರುತ್ತಿದ್ದು, ಪ್ರಕೃತಿಯ ಮುನಿಸು ಇದೀಗ ಬರಗಾಲದ ರೂಪದಲ್ಲಿ ಜಿಲ್ಲೆಯನ್ನು ಆಪೋಶನ ಪಡೆಯಲು ತಯಾರಿ ನಡೆಸುತ್ತಿರುವಂತೆ ಭಾಸವಾಗುತ್ತಿದೆ. ಜಿಲ್ಲೆಯ ಪ್ರಮುಖ ನದಿಗಳಾದ ಕಾವೇರಿ,…
ನಿರ್ಬಂಧಿತ ಹೆದ್ದಾರಿಯಲ್ಲಿ ವಾಹನಗಳ ಭರಾಟೆ
September 17, 2018ಮಡಿಕೇರಿ: ಭೂ ಕುಸಿತದಿಂದಾಗಿ ತೀವ್ರ ದುರಸ್ತಿ ಗೀಡಾಗಿರುವ ಮಡಿಕೇರಿ-ಜೋಡುಪಾಲ ಹೆದ್ದಾರಿಯಲ್ಲಿ ಸದ್ಯಕ್ಕೆ ಲಘುವಾಹನ ಸೇರಿದಂತೆ ಎಲ್ಲಾ ರೀತಿಯ ವಾಹನಗಳÀ ಸಂಚಾರಕ್ಕೆ ಜಿಲ್ಲಾಧಿಕಾರಿಗಳು ನಿರ್ಬಂಧ ಹೇರಿದ್ದಾರೆ. ಆದರೆ ಜಿಲ್ಲಾಡಳಿತದ ಆದೇಶವನ್ನೂ ಧಿಕ್ಕರಿಸುವಂತೆ ಈಗಲೂ ಅನೇಕ ವಾಹನಗಳು ಈ ರಸ್ತೆಯಲ್ಲಿ ಸಂಚರಿಸಿ ಕಾಮಗಾರಿಗೆ ಅಡ್ಡಿಯುಂಟು ಮಾಡುತ್ತಿದೆ. ಲಘು ವಾಹನಗಳು ಮಾತ್ರವಲ್ಲ, ಟಿಂಬರ್ ತುಂಬಿದ 10 ಚಕ್ರಗಳ ಲಾರಿಯೊಂದು ಈ ಹೆದ್ದಾರಿಯಲ್ಲಿ ಸಾಗುವ ಮೂಲಕ ಗ್ರಾಮಸ್ಥ ರನ್ನು ಕೆರಳಿಸಿದೆ. ಮದೆನಾಡು ವ್ಯಾಪ್ತಿಯಲ್ಲಿ ಟಿಂಬರ್ ತುಂಬಿದ್ದ 10 ಚಕ್ರಗಳ ಭಾರೀ ಲಾರಿಯನ್ನು ತಡೆಹಿಡಿದ…
ನಾಳೆ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ
September 16, 2018ಮಡಿಕೇರಿ: ವಿರಾಜಪೇಟೆಯ ಮಾಜಿ ಸೈನಿಕರ ಸಹಕಾರ ಸಂಘ ನಿಯಮಿತ ವತಿಯಿಂದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮವು ಸೆ.17 ರಂದು ಬೆ.10.30ಕ್ಕೆ ಅಮರ ಜವಾನ ಸ್ಮಾರಕದಲ್ಲಿ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್, ಶಾಸಕ ಕೆ.ಜಿ.ಬೋಪಯ್ಯ, ಎಂಎಲ್ಸಿ ಶಾಂತೆಯಂಡ ವೀಣಾ ಅಚ್ಚಯ್ಯ, ಬ್ರಿಗೇಡಿಯರ್ ಮನೆಯಪಂಡ ಎಂ.ದೇವಯ್ಯ, ಚೇಂದ್ರಿಮಾಡ ಕೆ.ನಂಜಪ್ಪ ಅವರ ಅಧ್ಯಕ್ಷತೆಯಲ್ಲಿ ಕಾರ್ಯ ಕ್ರಮ ನಡೆಯಲಿದೆ. ಸೈನಿಕ ಮತ್ತು ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರಾದ ಲೆ.ಕರ್ನಲ್ ಗೀತ ಮಹಾಬಲ ಶೆಟ್ಟಿ, ವಿ.ಪೇಟೆ ತಾಲೂಕಿನ ತಹಶೀಲ್ದಾರರಾದ…
ಮಡಿಕೇರಿ-ಮಂಗಳೂರು ಹೆದ್ದಾರಿ ಲಘು ವಾಹನ ಸಂಚಾರಕ್ಕೆ ಮುಕ್ತ
September 13, 2018ಮಡಿಕೇರಿ: ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ದುರಸ್ಥಿಗೊಳಿಸುವ ಕಾರ್ಯ ಭರದಿಂದ ಸಾಗಿದ್ದು, ಇದೀಗ 4 ಚಕ್ರದ ಲಘು ವಾಹನಗಳ ಸಂಚಾರಕ್ಕೆ ರಾಷ್ಟ್ರೀಯ ಹೆದ್ದಾರಿ 275ಯನ್ನು ಮುಕ್ತಗೊಳಿಸಲಾಗಿದೆ. ಕಳೆದ 1 ತಿಂಗಳ ಹಿಂದೆ ಸುರಿದ ಭಾರಿ ಮಳೆಗೆ ಭಾರಿ ಬೆಟ್ಟ ಕುಸಿದು ಹೆದ್ದಾರಿಯನ್ನು ಸಂಪೂರ್ಣ ಬಲಿ ಪಡೆದಿತ್ತು. ತದ ನಂತರ ಮಡಿಕೇರಿ- ಮಂಗಳೂರು ಹೆದ್ದಾರಿ ಸಂಪರ್ಕ ಬಂದ್ ಆದ ಸ್ಥಿತಿಯಲ್ಲಿತ್ತು. ಈ ನಡುವೆಯೇ ಕಳೆದ 1 ತಿಂಗಳಿಂದ ಹಗಲಿರುಳು ಹೆದ್ದಾರಿಗೆ ಬಿದ್ದ ಗುಡ್ಡದ ಮಣ್ಣನ್ನು ತೆರವುಗೊಳಿಸುವ ಕಾರ್ಯ ನಡೆಸಲಾಗಿತ್ತು. ಆ…
ಸೆ.18, ಅಂಚೆ ಅದಾಲತ್
September 13, 2018ಮಡಿಕೇರಿ: ಅಂಚೆ ಅದಾಲತ್ ಮುಂದಿನ ಸಭೆಯು ಸೆ.18 ರಂದು ಬೆಳಗ್ಗೆ 11 ಗಂಟೆಗೆ ಕೊಡಗು ಅಂಚೆ ವಿಭಾಗದ, ವಿಭಾಗೀಯ ಕಚೇರಿಯಲ್ಲಿ ನಡೆಯಲಿದೆ. ಸಭೆಯಲ್ಲಿ ಕೊಡಗು ಅಂಚೆ ವಿಭಾಗದ ಅಂಚೆ ಸೇವೆಗೆ ಸಂಬಂಧಿಸಿದ ಎಲ್ಲಾ ತರ ಹದ ದೂರುಗಳನ್ನು ಸ್ವೀಕರಿಸಿ ಚರ್ಚಿಸ ಲಾಗುತ್ತದೆ. ದೂರುಗಳಿದ್ದಲ್ಲಿ ಅಂಚೆ ಅದಾ ಲತ್ ಎಂದು ಬರೆದು ಅಂಚೆ ಅಧೀಕ್ಷಕರು ಕೊಡಗು ಅಂಚೆ ವಿಭಾಗ ಮಡಿಕೇರಿ ಇವರಿಗೆ ಸೆ.14ರೊಳಗೆ ತಲುಪುವಂತೆ ಕಳುಹಿಸಲು ಈ ಮೂಲಕ ಕೋರಲಾಗಿದೆ. ನಂತರ ಸೆ.18 ರಂದು ನಡೆಯುವ ಸಭೆಯಲ್ಲಿ ತಮ್ಮ…
ಮಡಿಕೇರಿ ಸುತ್ತಮುತ್ತ ಗುಡುಗು ಸಹಿತ ಮಳೆ
September 12, 2018ಮಡಿಕೇರಿ: ರಣ ಮಳೆಯ ಅವಾಂತರದಿಂದ ಕಂಗೆಟ್ಟಿದ್ದ ಕೊಡಗು ಜಿಲ್ಲೆ ಸಹಜ ಸ್ಥಿತಿಯತ್ತ ಹೊರಳುತ್ತಿರುವಾಗಲೇ ಮತ್ತೆ ಮಳೆಯ ಆರ್ಭಟ ಕಂಡು ಬಂದಿದೆ. ಮಂಗಳವಾರ ಮಧ್ಯಾಹ್ನದ ಬಳಿಕ ಮಡಿಕೇರಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಗುಡುಗು-ಸಿಡಿಲಿನೊಂದಿಗೆ ಭಾರೀ ಮಳೆ ಸುರಿದಿದೆ. ಈಗಾಗಲೇ ಪ್ರಕೃತಿ ವಿಕೋಪದಿಂದ ಸಂತ್ರಸ್ಥರಾದವರ ಪಾಲಿಗೆ ಕೆಲಕಾಲ ಸುರುದ ಮಳೆ ಮತ್ತೊಮ್ಮೆ ಭೀತಿ ಹುಟ್ಟಿಸಿತು. ನಗರ ಸೇರಿದಂತೆ ಬೆಟ್ಟ ತಪ್ಪಲ ಪ್ರದೇಶಗಳಲ್ಲಿ ವಾಸವಿದ್ದವರು ಮಳೆಯ ಆರ್ಭಟಕ್ಕೆ ನಲುಗಿದ್ದು, ಇರುವ ಮನೆಗಳನ್ನು ಕೂಡ ಕಳೆದುಕೊಳ್ಳುವ ಆತಂಕಕ್ಕೆ ಒಳಗಾಗಿದ್ದಾರೆ. ಈ ಹಿಂದೆ ಬೆಟ್ಟ…