ಮಡಿಕೇರಿ: ಕೊಡಗು ಜಿಲ್ಲೆಯನ್ನೇ ತಲ್ಲಣಗೊಳಿಸಿದ ಪ್ರಕೃತಿ ವಿಕೋಪದಿಂದಾಗಿ ಗ್ರಾಮೀಣ ಭಾಗದ ಜನರ ಬದುಕು ಅತಂತ್ರವಾಗಿದ್ದು, ಒಂದು ಹೊತ್ತಿನ ಊಟಕ್ಕೂ ಕೈ ಚಾಚುವ ದುರ್ಗತಿ ಬಂದೊದಗಿದೆ. ಜಿಲ್ಲೆಯ ಸುಮಾರು 32 ಗ್ರಾಮಗಳು ಸಂಕಷ್ಟಕ್ಕೆ ಸಿಲುಕಿದ್ದು, ಗ್ರಾಮಸ್ಥರ ಬದುಕು ಕುರುಡಾಗಿದೆ. ಮಹಾಮಳೆಯ ದಾಳಿಗೆ ಸಿಲುಕಿದ ಗ್ರಾಮಗಳಲ್ಲಿ ಮಡಿಕೇರಿ ನಗರದ ಸಮೀಪದಲ್ಲಿರುವ ಉಡೋತ್ಮೊಟ್ಟೆ ಗ್ರಾಮ ಕೂಡ ಒಂದು. ಇಲ್ಲಿ ಹೆಚ್ಚಿನ ಸಂಖ್ಯೆಯ ಲ್ಲಿರುವ ಕಾರ್ಮಿಕ ವರ್ಗ ತಮ್ಮ ಬದುಕಿ ಗಾಗಿ ತೋಟದ ಕೆಲಸವನ್ನೇ ಅವಲಂಭಿಸಿದ್ದರು. ಆದರೆ, ಮಹಾಮಳೆ ತಂದೊಡ್ಡಿರುವ ದುರಂತ ಅಧ್ಯಾಯದಿಂದ…
ಮಡಿಕೇರಿ ಸುತ್ತಮುತ್ತ ಗುಡುಗು ಸಹಿತ ಭಾರೀ ಮಳೆ
August 29, 2018ಮಡಿಕೇರಿ: ಈಗಾಗಲೇ ಪ್ರಕೃತಿ ವಿಕೋಪದ ಅನಾಹುತಗಳಿಗೆ ಸಾಕ್ಷಿಯಾಗಿ ದುಗುಡದಲ್ಲಿ ಮುಳುಗಿ ರುವ ಮಡಿಕೇರಿ ಮತ್ತು ಸುತ್ತಮುತ್ತ ಇದೀಗ ಗುಡುಗು ಸಹಿತ ಭಾರೀ ಮಳೆ ಸುರಿಯಲಾರಂಭಿಸಿದೆ. ಈಗಾಗಲೇ ಭೂ ಕುಸಿತದಿಂದ ಕಂಗಾಲಾಗಿರುವ ಮಡಿಕೇರಿ ನಗರದ ಬೆಟ್ಟ ಪ್ರದೇಶಗಳ ನಿವಾಸಿಗಳಲ್ಲಿ ಆತಂಕ ಮಡುಗಟ್ಟಿದೆ. ನಗರ ಸೇರಿದಂತೆ ಹಲವು ಗ್ರಾಮಗಳಲ್ಲಿ ಇಂದಿಗೂ ಭೂಮಿ ಬಿರುಕು ಬಿಟ್ಟಿರುವ ಪ್ರದೇಶಗಳಿದ್ದು, ಮತ್ತಷ್ಟು ವಿಕೋಪಗಳು ಸಂಭವಿಸುವ ಲಕ್ಷಣಗಳು ಗೋಚರಿಸುತ್ತಿವೆ. ಬೆಟ್ಟಗುಡ್ಡ ಪ್ರದೇಶಗಳ ಜನರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಈ ಹಿಂದೆಯೇ ಬೇರೆಡೆಗೆ ಸ್ಥಳಾಂತರ ಮಾಡಲಾಗಿದ್ದು, ಅಳಿದುಳಿದ ಮನೆಗಳು…
ಕೊಡಗಿನ ಭೂ ಕುಸಿತ ಪ್ರದೇಶಗಳ ಭೇಟಿಗೆ ಪ್ರವಾಸಿಗರಿಗೆ ನಿಷೇಧ
August 27, 2018ಮಡಿಕೇರಿ: ಕೊಡಗಿನಲ್ಲಿ ಪ್ರಕೃತಿ ವಿಕೋಪ ದಿಂದ ತೀವ್ರ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಪ್ರವಾಸಿಗರು ಭೇಟಿ ನೀಡುತ್ತಿರುವುದು ಪ್ರವಾಸಿಗರ ಜೀವ ಹಾನಿಗೆ ಕಾರಣವಾಗಬಹುದೆಂದು ಪರಿಗಣಿಸಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಪ್ರವೇಶವನ್ನು ಜಿಲ್ಲಾಡಳಿತ ನಿಷೇಧಿಸಿದೆ. ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿ ರುವ ಧಾರಾಕಾರ ಮಳೆಯಿಂದ ಉಂಟಾಗುತ್ತಿರುವ ಪ್ರವಾಹ, ಭೂ ಕುಸಿತ ಮತ್ತು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಹಾನಿಯಾಗಿದ್ದು, ಅಪಾಯದ ಮಟ್ಟದಲ್ಲಿರುವ ಹಿನ್ನೆಲೆಯಲ್ಲಿ ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯಲ್ಲಿನ ಹೋಟೆಲ್, ರೆಸಾರ್ಟ್, ಹೋಂ-ಸ್ಟೇ ಹಾಗೂ ಇತರೆ ಖಾಸಗಿ ವಸತಿ…
ಹೆಬ್ಬಟ್ಟಗೇರಿಯಲ್ಲಿ ಮತ್ತೊಂದು ಮೃತದೇಹ ಪತ್ತೆ
August 24, 2018ಮಡಿಕೇರಿ: ಭಾರೀ ಮಳೆಗೆ ಮನೆಯ ಮೇಲೆ ಬೆಟ್ಟ ಕುಸಿದು ಮೃತಪಟ್ಟಿದ್ದ ವೃದ್ದ ಮಹಿಳೆಯೋರ್ವರ ಮೃತದೇಹವನ್ನು ಎನ್ಡಿಆರ್ಎಫ್ ಸಿಬ್ಬಂದಿ ಹೊರತೆಗೆ ಯುವಲ್ಲಿ ಯಶಸ್ವಿಯಾಗಿದ್ದಾರೆ. ಆಗಸ್ಟ್ 17ರ ಬೆಳಿಗ್ಗೆ 7.30 ಗಂಟೆಗೆ ಹೆಬ್ಬೆಟ್ಟಗೇರಿಯ ಉಮ್ಮವ್ವ (80) ಎಂಬುವರ ಮನೆ ಮೇಲೆ ಭೂಮಿ ಕುಸಿದಿತ್ತು. ಬರೆಯ ಮಣ್ಣು ಸಂಪೂರ್ಣ ಮನೆಯನ್ನೇ ಆಪೋಷನ ಪಡೆದಿತ್ತಲ್ಲದೆ, ಮನೆಯೊಳ ಗಿದ್ದವರು ಏನಾದರು ಎಂಬ ಮಾಹಿತಿಯೇ ತಿಳಿಯದಾಗಿತ್ತು. ಸ್ಥಳೀಯರು ನೀಡಿದ ಮಾಹಿತಿಯಂತೆ ಆಗಸ್ಟ್ 17ರಿಂದ ಉಮ್ಮವ್ವ ನಾಪತ್ತೆಯಾಗಿದ್ದಾರೆ ಎಂದು ಘೋಷಿಸ ಲಾಗಿತ್ತು. ಗುರುವಾರ ಬೆಳಿಗ್ಗೆ ಹೆಬ್ಬೆಟ್ಟಗೇರಿಯ ಕಡೆಗೆ…
ಕಾಡಾನೆ ದಾಳಿ; ಬೈಕ್ ಸವಾರನಿಗೆ ಗಾಯ
August 23, 2018ಮಡಿಕೇರಿ: ಕಾಡಾನೆ ದಾಳಿಗೆ ತುತ್ತಾಗಿ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬುಧವಾರ ಬೆಳಗ್ಗೆ ಆಲೂರು ಸಿದ್ದಾಪುರ ವ್ಯಾಪ್ತಿಯ ದೊಡ್ಡಳ್ಳಿ ಗ್ರಾಮದಲ್ಲಿ ನಡೆದಿದೆ. ಆಲೂರು ಸಿದ್ದಾಪುರ ಸಮೀಪದ ಪಟ್ಟಡ ಕಾರ್ಯಪ್ಪ ಎಂಬವರೇ ಕಾಡಾನೆ ದಾಳಿಗೆ ತುತ್ತಾದ ವ್ಯಕ್ತಿ. ಬುಧವಾರ ಬೆಳಗ್ಗೆ 6-30 ರ ಸುಮಾರಿಗೆ ಕಾರ್ಯಪ್ಪ ಅವರು ತನ್ನ ಮನೆಯಿಂದ ಎಂದಿನಂತೆ ತನ್ನ ಬೈಕಿನಲ್ಲಿ ಆಲೂರು ಸಿದ್ದಾಪುರದ ಡೈರಿಗೆ ಹಾಲು ನೀಡಲು ಹೋಗುತ್ತಿದ್ದ ಸಂದರ್ಭದಲ್ಲಿ ದೊಡ್ಡಳ್ಳಿ ಗ್ರಾಮದ ಬಸವೇಶ್ವರ ದೇವಸ್ಥಾನದ ಸಮೀಪ ಎದುರುಗೊಂಡ ಒಂಟಿ ಸಲಗ…
ಕೊಡಗಿನಲ್ಲಿ 4 ಸಾವಿರ ಮಂದಿ ನಾಪತ್ತೆ
August 22, 2018ಮಡಿಕೇರಿ: ಕೊಡಗಿನಲ್ಲಿ ಸಂಭವಿಸಿರುವ ಭೂ ಕುಸಿತ ಹಾಗೂ ಪ್ರವಾಹದಿಂದಾಗಿ ಸುಮಾರು 4 ಸಾವಿರ ಮಂದಿ ನಾಪತ್ತೆಯಾಗಿದ್ದಾರೆ ಎಂದು ರಾಜ್ಯ ಸರ್ಕಾರಕ್ಕೆ ಜಿಲ್ಲಾಡಳಿತ ವರದಿ ನೀಡಿದೆ ಎನ್ನಲಾಗಿದೆ. ಗುಡ್ಡಗಳು ಕುಸಿದು, ಪ್ರವಾಹ ಬಂದ ವೇಳೆ ಬಹುತೇಕರು ರಕ್ಷಣೆಗಾಗಿ ಎತ್ತರವಾದ ಬೆಟ್ಟದ ಮೇಲೆ ಹತ್ತಿದ್ದರು. ಮತ್ತೆ ಹಲವರು ತಮಗೆ ತೋಚಿದ ದಿಕ್ಕಿನಲ್ಲಿ ಸಾಗಿ ಪ್ರವಾಹದ ಹೊಡೆತದಿಂದ ತಪ್ಪಿಸಿಕೊಂಡಿದ್ದರು. ಅವರಲ್ಲಿ 4 ಸಾವಿರ ಮಂದಿಯ ವಿವರಗಳು ಲಭ್ಯವಾಗುತ್ತಿಲ್ಲ. ಅವರುಗಳು ಸುರಕ್ಷಿತವಾಗಿ ಹೊರ ಊರುಗಳಲ್ಲಿರುವ ತಮ್ಮ ಸಂಬಂಧಿಕರ ಮನೆ ಸೇರಿರಲೂಬಹುದು ಎಂದು ಅಂದಾಜಿಸಲಾಗಿದೆ….
ಕೊಡಗಿನ ನೆರೆ ಸಂತ್ರಸ್ತರ ಪರಿಹಾರ ಕೇಂದ್ರದಲ್ಲಿ ಗೋಳು ಶೌಚಾಲಯ, ಸ್ನಾನಗೃಹ ಕೊರತೆಯಿಂದ ನಲುಗಿದ ಜೀವಗಳು
August 21, 2018ಮಡಿಕೇರಿ: ಪ್ರಕೃತಿ ವಿಕೋಪಕ್ಕೆ ತುತ್ತಾಗಿರುವ ಕೊಡಗು ಜಿಲ್ಲೆ ಇಂದಿಗೂ ಮಹಾ ಪ್ರಳಯದ ಕರಾಳ ಛಾಯೆಯಿಂದ ಹೊರಬಂದಿಲ್ಲ. ವರುಣನ ಹೊಡೆತದಿಂದ ಸಂಪೂರ್ಣ ಮಂಡಿಯೂರಿರುವ ಕೊಡಗಿನಲ್ಲಿ ಅತೀ ಹೆಚ್ಚು ಹಾನಿಗೆ ತುತ್ತಾಗಿರುವ ಮಡಿಕೇರಿ ತಾಲೂಕು ಮತ್ತು ಸುತ್ತ-ಮುತ್ತಲಿನ ಗ್ರಾಮಗಳಿಂದ ನಿರಾಶ್ರಿತರ ಕೇಂದ್ರಗಳತ್ತ ಬರುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಭೂ ಕುಸಿತ, ಪ್ರವಾಹ ಮತ್ತು ಪಕೃತಿ ವಿಕೋಪಗಳಿಂದ ಮನೆ, ಗ್ರಾಮ, ಊರು ತೊರೆದವರನ್ನು ಸಮೀಪದ ನಿರಾಶ್ರಿತರ ಪರಿಹಾರ ಕೇಂದ್ರಗಳಿಗೆ ದಾಖಲಿಸಲಾಗಿದೆ. ಈಗಾಗಲೇ ಜಿಲ್ಲೆಯ ವಿವಿಧ ನಿರಾಶ್ರಿತ ಕೇಂದ್ರಗಳಲ್ಲಿ ಅಂದಾಜು 7…
ಬಿರುಗಾಳಿ ಮಳೆಗೆ ಕಾವೇರಿ ತವರು ತತ್ತರ
August 14, 2018ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಗಳಲ್ಲಿ ಸಾವಿರಾರು ವಾಹನಗಳು ಸಾಲುಗಟ್ಟಿ ನಿಂತಿದ್ದು, ಸಮರೋಪಾದಿಯಲ್ಲಿ ಮಣ್ಣು ತೆರವುಗೊಳಿಸುವ ಕಾರ್ಯ ನಡೆಸಲಾಗುತ್ತಿದೆ. 6 ಜೆಸಿಬಿ ಯಂತ್ರಗಳು ಸುರಿಯುವ ಮಳೆಯ ನಡುವೆಯೇ ಹೆದ್ದಾರಿ ಸಂಚಾರ ಸುಗಮಗೊಳಿಸಲು ಕಾರ್ಯಾಚರಣೆ ನಡೆಸುತ್ತಿದ್ದರೆ, ಮಳೆ ಯಿಂದಾಗಿ ಮತ್ತಷ್ಟು ಮಣ್ಣು ಹೆದ್ದಾರಿಗೆ ಬಿದ್ದ ಬಗ್ಗೆ ವರದಿಯಾಗಿದೆ. ಇದರಿಂದಾಗಿ ಮಡಿಕೇರಿ-ಮಂಗಳೂರು ಕಡೆಗಳಿಗೆ ತೆರಳುವ ಸಾವಿರಾರು ಪ್ರಯಾಣಿಕರು ದಿನವಿಡಿ ಹೆದ್ದಾರಿಯಲ್ಲೇ ಕಾಲ ಕಳೆಯುವಂತಾಗಿದೆ. ಮಡಿಕೇರಿ-ಮಂಗಳೂರು ಹೆದ್ದಾರಿಯ ಒಟ್ಟು 4 ಕಡೆಗಳಲ್ಲಿ ಭೂಕುಸಿತ ಸಂಭವಿಸಿದ್ದು, ಅಂತರ್ಜಲ ಉಕ್ಕೇರಿದ್ದರಿಂದಾಗಿ ಹೆದ್ದಾರಿ ಯ ತಡೆಗೋಡೆ ಕುಸಿತಗೊಂಡಿದೆ….
ರಾಜ್ಯದಲ್ಲಿ ವಾಸ್ತುದೋಷ ಸರ್ಕಾರ
August 14, 2018ಮಡಿಕೇರಿ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ‘ವಾಸ್ತು’ ಪ್ರಕಾರವಾಗಿ ನಡೆಯುತ್ತಿದ್ದು, ಇದೊಂದು ವಾಸ್ತುದೋಷವಿರುವ ಸರ್ಕಾರ ಎಂದು ಬಿಜೆಪಿ ಹಿರಿಯ ಮುಖಂಡ ಆರ್. ಅಶೋಕ್ ರಾಜ್ಯ ಸರಕಾರವನ್ನು ಟೀಕಿಸಿದ್ದಾರೆ. ಕೊಡಗು ಜಿಲ್ಲಾ ಸ್ಥಳೀಯ ಸಂಸ್ಥೆ ಚುನಾವಣಾ ಉಸ್ತುವಾರಿ ವಹಿಸಿಕೊಂಡಿರುವ ಆರ್.ಅಶೋಕ್, ಮಡಿಕೇರಿಗೆ ಆಗಮಿಸಿ ಪಟ್ಟಣ ಪಂಚಾಯ್ತಿ ಚುನಾವಣೆಗಳ ಕುರಿತು ಸಮಾಲೋಚನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರ್. ಅಶೋಕ್, ಸೂಪರ್ ಸಿಎಂ ಹೆಚ್.ಡಿ.ರೇವಣ್ಣ ನಿಂಬೆಹಣ್ಣು ಇಟ್ಟು ಕೊಂಡು ವಿಧಾನಸಭೆ ಪ್ರವೇಶ ಮಾಡುತ್ತಾರೆ. ಈ ಸರ್ಕಾರದಲ್ಲಿ ರಾಹುಕಾಲದಲ್ಲಿ ಮಸೂದೆಗಳು…
ಭಾಗಮಂಡಲದಲ್ಲಿ ಶ್ರದ್ಧಾಭಕ್ತಿಯ ಪೊಲಿಂಕಾನ ಉತ್ಸವ
August 12, 2018ಮಡಿಕೇರಿ: ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿ ಯಿಂದ ಪೆÇಲಿಂಕಾನ ಉತ್ಸವದ ವಿಶೇಷ ಪೂಜೆ ನಡೆಯಿತು. ಶ್ರೀಭಗಂಡೇಶ್ವರ ದೇವಾ ಲಯದ ಆವರಣದ ಶ್ರೀ ಮಹಾ ಗಣಪತಿ, ಶ್ರೀ ಮಹಾವಿಷ್ಣು, ಶ್ರೀ ಸುಬ್ರಹ್ಮಣ್ಯ ಹಾಗೂ ಶ್ರೀ ಭಗಂಡೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಾಳೆದಿಂಡಿನಿಂದ ತಯಾರಿಸಿದ ಸುಮಂಗಲಿ ಮಂಟಪಕ್ಕೆ ದೀಪ ಬೆಳಗಿ ಕರಿಮಣಿ, ತಾಳಿ, ಬಳೆ, ಸೀರೆ, ಬೆಳ್ಳಿತಟ್ಟೆ ಮತ್ತಿತರ ಆಭರಣಗಳನ್ನು ಹಾಕಿ ವಿಶೇಷ ಪೂಜೆ ಸಲ್ಲಿಸಿ ಭಗಂಡೇಶ್ವರ ದೇವಾಲಯದ ಸುತ್ತ ಪ್ರದಕ್ಷಿಣೆ ಮಾಡಲಾಯಿತು. ನಂತರ ವಾದ್ಯಗೋಷ್ಠಿಯೊಂದಿಗೆ ತ್ರಿವೇಣಿ…