ಮಡಿಕೇರಿ: ಬೈಕ್ನಲ್ಲಿ ಮನೆಗೆ ತೆರಳುವ ಸಂದರ್ಭ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ. ನಗರದ ಮಂಗಳೂರು ರಸ್ತೆ ನಿವಾಸಿ ಡಿ.ಎಸ್.ರಾಜಾ ಆಲಿಯಾಸ್ ಆರ್ಮುಘ(32) ಎಂಬಾತನೇ ಮೃತಪಟ್ಟ ಯುವಕನಾಗಿದ್ದಾನೆ. ಆ.8ರ ರಾತ್ರಿ 10 ಗಂಟೆಗೆ ಡಿ.ಎಸ್.ರಾಜಾ ದ್ವಿಚಕ್ರ ವಾಹನದಲ್ಲಿ ಮಂಗಳೂರು ರಸ್ತೆಯ ಕೆಳಭಾಗದಲ್ಲಿರುವ ತನ್ನ ಮನೆಗೆ ತೆರಳುತ್ತಿದ್ದ ಎನ್ನಲಾಗಿದೆ. ಈ ಸಂದರ್ಭ ಆಯತಪ್ಪಿ ಕೆಳಕ್ಕೆ ಬಿದ್ದು, ತಲೆಯ ಹಿಂಭಾಗಕ್ಕೆ ಗಂಭೀರ ಗಾಯವಾಗಿತ್ತು. ತಕ್ಷಣವೇ ಆತನಿಗೆ ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ…
ಹೊಟೇಲ್ನಲ್ಲಿ ನಗದು, ಮೊಬೈಲ್ ಕಳವು
August 11, 2018ಮಡಿಕೇರಿ: ಹೊಟೇಲ್ ಒಂದರ ಹೆಂಚು ತೆಗೆದು ಒಳನುಗ್ಗಿದ ಕಳ್ಳರು, ನಗದು ಮತ್ತು ಮೊಬೈಲ್ ಕಳವು ಮಾಡಿರುವ ಘಟನೆ ನಗರದ ಹೃದಯ ಭಾಗದಲ್ಲಿ ನಡೆದಿದೆ. ನಗರಸಭೆ ಸಂಕೀರ್ಣ ಮುಂಭಾಗದಲ್ಲಿರುವ ಹೊಟೇಲ್ ಹಿಂಬದಿಯ ಅಡುಗೆ ಕೋಣೆಯ ಹೆಂಚು ತೆಗೆದು ಒಳನುಗ್ಗಿ 4 ಸಾವಿರ ನಗದು ಮತ್ತು ಬೆಲೆ ಬಾಳುವ ಮೊಬೈಲನ್ನು ಹೊತ್ತೊಯ್ದಿದ್ದಾರೆ. ಪ್ರತಿ ದಿನ ಹೋಟೆಲ್ನಲ್ಲಿ ರಾತ್ರಿ ವೇಳೆ ಸಿಬ್ಬಂದಿಗಳು ಮಲಗುತ್ತಿದ್ದರು. ಆದರೆ ಗುರುವಾರ ರಾತ್ರಿ ಹೊಟೇಲ್ನಲ್ಲಿ ಯಾರು ಮಲಗಿರಲಿಲ್ಲ. ಈ ಮಾಹಿತಿ ಮತ್ತು ಭಾರಿ ಮಳೆಯ ಲಾಭ ಪಡೆದು…
ವಿದ್ಯಾರ್ಥಿ ಆತ್ಮಹತ್ಯೆ
August 11, 2018ಮಡಿಕೇರಿ: ಶಾಲಾ ವಿದ್ಯಾರ್ಥಿಯೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ತ್ಯಾಗರಾಜ ಕಾಲೋನಿಯಲ್ಲಿ ನಡೆದಿದೆ. ತ್ಯಾಗರಾಜ ಕಾಲೋನಿ ನಿವಾಸಿ ಶರೀಫಾ ಎಂಬವರ ಪುತ್ರ ಜಾಹೀದ್(16) ಎಂಬಾತನೇ ಆತ್ಮಹತ್ಯೆಗೆ ಶರಣಾದ ಬಾಲಕನಾಗಿದ್ದಾನೆ. ಜಾಹೀದ್ ನಗರದ ಸರಕಾರಿ ಫ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಯಾಗಿದ್ದು, ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ಶಾಲೆಗೆ ತೆರಳುವುದಾಗಿ ಹೇಳಿ ಮನೆಯಿಂದ ಹೊರಟಿದ್ದಾನೆ. ಆದರೆ, 9.30ರ ಸಮಯದಲ್ಲಿ ಮನೆಯ ಸಮೀಪವಿರುವ ನೇರಳೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾಹಿತಿ ಅರಿತ ನಗರ ಪೊಲೀಸರು…
ಮಳೆ ಹಾನಿಗೆ ಸರ್ಕಾರ ತುರ್ತಾಗಿ ಸ್ಪಂದಿಸುವಂತೆ ಎಂಎಲ್ಸಿ ಸುನೀಲ್ ಸುಬ್ರಮಣಿ ಆಗ್ರಹ
August 10, 2018ಮಡಿಕೇರಿ: ತೀವ್ರ ಮಳೆ ಯಿಂದಾಗಿ ಕೊಡಗು ಜಿಲ್ಲೆಗೆ ಭಾರೀ ನಷ್ಟ ಸಂಭವಿಸಿದ್ದು, ರಾಜ್ಯ ಸರಕಾರ ಜಿಲ್ಲೆಯ ನೆರವಿಗೆ ಧಾವಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ ಆಗ್ರಹಿಸಿದ್ದಾರೆ. ಮಳೆಯಿಂದ ಹಾನಿಗೊಳಗಾದ ಮಂಗಳದೇವಿ ನಗರ, ಮಂಗಳೂರು ರಸ್ತೆ, ಮೇಕೇರಿ-ಮೂರ್ನಾಡು ಬೈ ಪಾಸ್ ರಸ್ತೆಯಲ್ಲಿ ವಾಹನ ಸಂಚಾರದ ಸ್ಥಿತಿಗತಿಗಳ ಕುರಿತು ಸುನೀಲ್ ಸುಬ್ರಮಣಿ ಪರಿಶೀಲನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಲೋಕೋಪಯೋಗಿ ಇಲಾಖೆ ಅಧಿ ಕಾರಿಗಳೊಂದಿಗೆ ಚರ್ಚಿಸಿದ ಸುನೀಲ್ ಸುಬ್ರಮಣಿ, ರಸ್ತೆಯ ಸ್ಥಿತಿಗತಿಗಳ ಕುರಿತು ಮಾಹಿತಿ ಪಡೆದರು. ಮಂಗಳೂರು…
ಸ್ಥಳೀಯ ಸಂಸ್ಥೆ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ
August 10, 2018ಮಡಿಕೇರಿ: ಸೋಮವಾರಪೇಟೆ, ಕುಶಾಲನಗರ ಮತ್ತು ವಿರಾಜಪೇಟೆ ಪಟ್ಟಣ ಪಂಚಾಯತ್ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ನಾಮಪತ್ರ ಸಲ್ಲಿಕಾ ಪ್ರಕ್ರಿಯೆಯು ಆಗಸ್ಟ್ 10 ರಿಂದ ಆರಂಭವಾಗಲಿದೆ. ಆಗಸ್ಟ್ 10 ರಂದು ಜಿಲ್ಲಾಧಿಕಾರಿಯವರು ಚುನಾವಣಾ ಅಧಿ ಸೂಚನೆ ಹೊರಡಿಸಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ನಡೆಯಲಿದೆ. ಆಗಸ್ಟ್ 17 ರಂದು ನಾಮಪತ್ರ ಸಲ್ಲಿ ಸಲು ಕೊನೆ ದಿನವಾಗಿದೆ. ಆಗಸ್ಟ್ 18 ರಂದು ನಾಮಪತ್ರ ಪರಿಶೀಲನಾ ಕಾರ್ಯ ನಡೆಯಲಿದೆ. ಆಗಸ್ಟ್ 20 ರಂದು ಉಮೇ ದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆ ದಿನವಾಗಿದೆ, ಆಗಸ್ಟ್ 29…
ಕುಟ್ಟದಲ್ಲಿ ಸಂಭ್ರಮದ ಕಕ್ಕಡ ನಮ್ಮೆ
August 8, 2018ಮಡಿಕೇರಿ: ಕೊಡಗಿನ ಗಡಿ ಭಾಗ ಕುಟ್ಟದಲ್ಲಿ ಕುಟ್ಟ ಕೊಡವ ಸಮಾಜ ಹಾಗೂ ವಿವಿಧ ಮಹಿಳಾ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ 6ನೇ ವರ್ಷದ “ಕಕ್ಕಡ ನಮ್ಮೆ”ಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕೊಡವ ಸಮಾಜದಲ್ಲಿ ನಡೆದ ಕಾರ್ಯ ಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ, ಪ್ರತಿಯೊಂದು ಸಂಸ್ಕøತಿ ಯನ್ನು ಮುಂದಿನ ಪೀಳಿಗೆಗಾಗಿ ಉಳಿಸಿ ಬೆಳೆಸುವ ಅಗತ್ಯವಿದೆ. ನಮ್ಮ ಸಂಸ್ಕೃತಿ, ಆಚಾರ ವಿಚಾರಗಳನ್ನು ಪ್ರತಿಬಿಂಬಿಸುವ ಮತ್ತು ಪರಿಚಯಿಸುವ ಇಂತಹ ಕಾರ್ಯ ಕ್ರಮಗಳು ಹೆಚ್ಚು ಹೆಚ್ಚಾಗಿ ನಡೆಯಬೇಕು, ಅಲ್ಲದೆ ಮಹಿಳೆಯರು…
ಇಬ್ಬರು ಬೇಟೆಗಾರರ ಬಂಧನ
August 8, 2018ಮಡಿಕೇರಿ: ತಲಕಾವೇರಿಯ ಬ್ರಹ್ಮಗಿರಿ ರಕ್ಷಿತಾರಣ್ಯದೊಳಗೆ ಅಕ್ರಮವಾಗಿ ಪ್ರವೇಶಿಸಿ ಕಾಡು ಪ್ರಾಣಿಯನ್ನು ಭೇಟಿಯಾಡಲು ಯತ್ನಿಸುತ್ತಿದ್ದ ಇಬ್ಬರು ಬೇಟೆಗಾರರನ್ನು ಭಾಗಮಂಡಲ ವಲಯ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಭಾಗಮಂಡಲ ಸಮೀಪದ ಚೇರಂಗಾಲ ಗ್ರಾಮ ನಿವಾಸಿಗಳಾದ ಪದ್ಮಯ್ಯ ಮತ್ತು ರೋಹಿತ್ ಎಂಬವರೇ ಬಂಧಿತ ಆರೋಪಿಗಳಾಗಿದ್ದಾರೆ. ಪದ್ಮಯ್ಯ ಮತ್ತು ರೋಹಿತ್ ಚೇರಂಗಾಲ ಸಮೀಪದ ಕೋಳಿಕಾಡು ಎಂಬಲ್ಲಿ ಕಾಡು ಪ್ರಾಣಿಯನ್ನು ಭೇಟಿಯಾಡಲು ಹೊಂಚು ಹಾಕಿದ್ದರು ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಭಾಗಮಂಡಲ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು…
ಬೆಂಗಳೂರಲ್ಲಿ ನಾಳೆ ಸಿಎನ್ಸಿ ಸತ್ಯಾಗ್ರಹ
August 8, 2018ಮಡಿಕೇರಿ: ಸ್ವಾಯತ್ತ ಕೊಡವ ಲ್ಯಾಂಡ್ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವಿಶ್ವ ಆದಿಮಸಂಜಾತ ಜನಾಂಗಗಳ ಹಕ್ಕುಗಳ ದಿನವಾದ ಆ.9ರಂದು ಬೆಂಗಳೂರು ಟೌನ್ ಹಾಲ್ ಮುಂಭಾಗದಲ್ಲಿ ಬೆಳಗ್ಗೆ 9.30 ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಿದೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ, ಕೊಡವರ ಪ್ರಧಾನ ಭೂ- ರಾಜಕೀಯ ಲ್ಯಾಂಡ್ ಸ್ವಾಯ ತ್ತತೆ ಅನ್ವೇಷಣೆ (ಕೊಡವ ಕ್ವೆಸ್ಟ್ ಫಾರ್ ಅಟೋನಮಿ) ಕೇಂದ್ರಾಡಳಿತ ಪ್ರದೇಶ…
ಮಡಿಕೇರಿ ಜಿಲ್ಲಾಸ್ಪತ್ರೆಗೆ ಹೈಟೆಕ್ ಸ್ಪರ್ಶ ಶೀಘ್ರದಲ್ಲೇ ಅತ್ಯಾಧುನಿಕ ಸಿಟಿ ಸ್ಕ್ಯಾನಿಂಗ್ ಕಾರ್ಯಾರಂಭ
August 7, 2018ಮಡಿಕೇರಿ: ನಗರದ ಜಿಲ್ಲಾಸ್ಪತ್ರೆಗೆ ಆಧುನಿಕ ತಂತ್ರಜ್ಞಾನದ ವೈದ್ಯಕೀಯ ಸ್ಪರ್ಶ ದೊರಕಿದ್ದು, ಜಿಲ್ಲೆಯ ಜನತೆಯ ಹಲವು ದಶಕಗಳ ಕನಸು ನನಸಾಗಿದೆ. ಜಿಲ್ಲಾಸ್ಪತ್ರೆಗೆ ರಾಜ್ಯ ಸರ್ಕಾರ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಅತ್ಯಾಧುನಿಕ ಸಿಟಿ ಸ್ಕ್ಯಾನಿಂಗ್ ಯಂತ್ರ ಅಳವಡಿಸಲಾಗಿದ್ದು, ಕೆಲವೇ ದಿನಗಳಲ್ಲಿ ಆರೋಗ್ಯ ಸೇವೆಗೆ ಲಭ್ಯವಾಗಲಿದೆ. ಅಂದಾಜು 2 ಕೋಟಿ ರೂ.ಗಳ ವೆಚ್ಚದ ಸಿಟಿ ಸ್ಕ್ಯಾನಿಂಗ್ ಮಿಷಿನ್ ಅಳವಡಿಸಿದ್ದು, ಈಗಾಗಲೇ ನೂರಕ್ಕೂ ಹೆಚ್ಚು ರೋಗಿಗಳಿಗೆ ತುರ್ತು ಸೇವೆಯ ಆಧಾರದ ಮೇಲೆ ಸ್ಕ್ಯಾನಿಂಗ್ ಸೇವೆ ನೀಡಲಾಗಿದೆ. ಜಿಲ್ಲೆಯ ಕೆಲ ಬೆರಳೆಣಿಕೆಯ ಖಾಸಗಿ ಆಸ್ಪತ್ರೆಯಲ್ಲಿ…
ತಮಿಳುನಾಡಲ್ಲಿ ಅಪಘಾತ: ಕೊಡಗಿನ ಯುವಕ ಸಾವು
August 7, 2018ಮಡಿಕೇರಿ: ತಮಿಳುನಾಡು ಕೊಯಮತ್ತೂರಿನಲ್ಲಿ ನಡೆದ ರಸ್ತೆ ಅಪ ಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕೊಡಗಿನ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮಡಿಕೇರಿಯ ಸ್ಟುಡಿಯೋ ಒಂದರಲ್ಲಿ ಫೋಟೋಗ್ರಾಫರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ರಾಜ ಎಂಬುವರ ಪುತ್ರ ಕಿಶೋರ್ (25) ಮೃತಪಟ್ಟ ಯುವಕನಾಗಿದ್ದಾನೆ. ಕೊಯಮತ್ತೂರಿನ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದ ಕಿಶೋರ್ ಆ.03 ರಂದು ದ್ವಿಚಕ್ರ ವಾಹನದಲ್ಲಿ ಕೆಲಸಕ್ಕೆ ತೆರಳುವ ಸಂದರ್ಭ ರಸ್ತೆ ಅಪಘಾತ ಸಂಭವಿಸಿ ತಲೆಯ ಭಾಗಕ್ಕೆ ಗಂಭೀರ ಗಾಯವಾಗಿತ್ತು. ಗಾಯಾಳುವನ್ನು ಕೊಯಮ ತ್ತೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಗೆ ದಾಖ…