Tag: Madikeri

ಪ್ರತಿಭೆ ಸಮರ್ಥ ಬಳಕೆಗೆ ವಿದ್ಯಾರ್ಥಿಗಳಿಗೆ ಕರೆ
ಕೊಡಗು

ಪ್ರತಿಭೆ ಸಮರ್ಥ ಬಳಕೆಗೆ ವಿದ್ಯಾರ್ಥಿಗಳಿಗೆ ಕರೆ

August 6, 2018

ಮಡಿಕೇರಿ: ಮಕ್ಕಳು ತಮ್ಮಲ್ಲಿನ ಪ್ರತಿಭೆಯನ್ನು ಸಮರ್ಥವಾಗಿ ಬಳಸಿಕೊಳ್ಳ ಬೇಕೆಂದು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ.ಅನಂತಶಯನ ಕರೆ ನೀಡಿದ್ದಾರೆ. ನಗರದಲ್ಲಿ ಸಮರ್ಥ ಕನ್ನಡಿಗರು ಸಂಸ್ಥೆಯ ವತಿಯಿಂದ ಸಾಹಿತ್ಯ, ಸಾಂಸ್ಕೃತಿಕ ಅಭಿನಂದನಾ ಕಾರ್ಯಕ್ರಮವಾದ ಹಿಮವನ ಪ್ರತಿಭಾ ಸಂಗಮ ಉದ್ಘಾಟಿಸಿ ಮಾತನಾಡಿದ ಅನಂತಶಯನ, ಪ್ರತಿಯೊಂದು ಮಗುವಿನಲ್ಲಿಯೂ ಪ್ರತಿಭೆಯಿರುತ್ತದೆ. ಆದರೆ ಅದನ್ನು ಹೊರ ಹೊಮ್ಮಿಸುವ ವಿಧಾನ ತಿಳಿದಿರುವುದಿಲ್ಲ. ಹೀಗಾಗಿ ಮನದಲ್ಲಿ ಧೂಳು ಹಿಡಿದಂತಿರುವ ಪ್ರತಿಭೆಯನ್ನು ಹೊರತರಲು ಬುದ್ಧಿವಂತಿಕೆಯನ್ನು ಬಳಸಿಕೊಳ್ಳಬೇಕು. ಪೋಷಕರು, ಶಿಕ್ಷಕರು, ಹಿರಿಯರಿಗೆ ಗೌರವ ನೀಡುವ ಮನೋಭಾವನೆ ಚಿಕ್ಕಂದಿನಲ್ಲಿಯೇ ವ್ಯಕ್ತವಾಗಬೇಕೆಂದು ಅವರು…

ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘ ಅಸ್ತಿತ್ವಕ್ಕೆ
ಕೊಡಗು

ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘ ಅಸ್ತಿತ್ವಕ್ಕೆ

August 6, 2018

ಮಡಿಕೇರಿ: ಮಡಿಕೇರಿ ನಗರದ ಸರ್ಕಾರಿ ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘ ಅಸ್ತಿತ್ವಕ್ಕೆ ಬಂದಿದ್ದು, ಸದ್ಯದಲ್ಲಿಯೇ ಸಂಘದ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ಸಂಘದ ನೂತನ ಅಧ್ಯಕ್ಷೆ ಕುಶಾಲಿನಿ ತಿಳಿಸಿದ್ದಾರೆ. ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ 1839ರಲ್ಲಿ ಸ್ಥಾಪನೆಯಾಗಿ ಅನೇಕ ವಿದ್ಯಾ ರ್ಥಿಗಳ ಸಾಧನೆಯ ಮೆಟ್ಟಿಲಾಗಿದೆ. ಶಾಲೆಯಿಂದ ಹೊರಬಂದ ಎಲ್ಲ ವಿದ್ಯಾರ್ಥಿಗಳನ್ನು ಒಂದೆಡೆ ಸೇರಿಸಿ ಶಾಲೆಯ ಅಭಿವೃದ್ಧಿಗೆ ಶ್ರಮಿಸಲು ಹಳೆಯ ವಿದ್ಯಾರ್ಥಿ ಸಂಘ ನಿರ್ಧರಿಸಿದೆ. ಈಗಾಗಲೇ ಸಂಘದ ಸದಸ್ಯತ್ವ ಕಾರ್ಯವೂ ಪ್ರಗತಿಯಲ್ಲಿದೆ….

ಆ.16, ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
ಕೊಡಗು

ಆ.16, ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

August 6, 2018

ಸೋಮವಾರಪೇಟೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗ ನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಮಹಾ ಮಂಡಳದಿಂದ ಆ.16ರಂದು ಜಿಲ್ಲಾಕೇಂದ್ರ ಮಡಿಕೇರಿಯಲ್ಲಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಮಹಾ ಮಂಡಳದ ತಾಲೂಕು ಅಧ್ಯಕ್ಷೆ ಕೆ.ಕೆ. ಶಾರದ ತಿಳಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರಿಗೆ 18ಸಾವಿರ ವೇತನ ಜಾರಿಗೊಳಿಸಬೇಕು. ಹೆಚ್ಚಿನ ಸೇವೆ ಸಲ್ಲಿಸಿರುವವರನ್ನು ಮಹಿಳಾ ಮೇಲ್ವಿಚಾರಕಿ ಹುದ್ದೆಗೆ ನೇಮಕ ಗೊಳಿಸಬೇಕು. ದಿನಭತ್ಯೆಯನ್ನು 150ಕ್ಕೆ ಹೆಚ್ಚಿಸಬೇಕು. ತುಟ್ಟಿ ಭತ್ಯೆ ಜಾರಿಗೆ ತರಬೇಕು.ಮಾತೃಪೂರ್ಣ ಯೋಜನೆಯ ಬಗ್ಗೆ ಸಮಗ್ರ ಅಧ್ಯಯನ ನಡೆಸಿ ಈ ಹಿಂದೆ ಇದ್ದಂತಹ ಗರ್ಭಿಣಿ ಬಾಣಂತಿಯರಿಗೆ…

ಜೂನಿಯರ್ ಕಾಲೇಜಿನಲ್ಲಿ ಕಳ್ಳತನಕ್ಕೆ ಯತ್ನ
ಕೊಡಗು

ಜೂನಿಯರ್ ಕಾಲೇಜಿನಲ್ಲಿ ಕಳ್ಳತನಕ್ಕೆ ಯತ್ನ

August 6, 2018

ಮಡಿಕೇರಿ:  ನಗರದ ಸರ್ಕಾರಿ ಜೂನಿಯರ್ ಕಾಲೇಜಿನ ಬೀಗ ಮುರಿದು ಕಳ್ಳತನಕ್ಕೆ ವಿಫಲ ಯತ್ನ ನಡೆಸಿರುವ ಘಟನೆ ನಡೆದಿದೆ. ಶನಿವಾರ ರಾತ್ರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೂರು ಕೊಠಡಿಗಳ ಬೀಗ ತುಂಡರಿಸಿ ಒಳನುಗ್ಗಿರುವ ಕಳ್ಳರು ಹಣಕ್ಕಾಗಿ ಶೋಧ ನಡೆಸಿರುವುದು ಕಂಡು ಬಂದಿದೆ. ಪ್ರಾಚಾರ್ಯರ ಕೊಠಡಿ, ಅಧ್ಯಾಪಕರ ಕೊಠಡಿ ಮತ್ತು ಕಾರ್ಯಾಗಾರ ಕೊಠಡಿಯ ಬೀಗವನ್ನು ಮುರಿದು ಕಳ್ಳತನಕ್ಕೆ ಯತ್ನಿಸಿದ್ದಾರೆ. ಭಾನುವಾರ ಬೆಳಗ್ಗೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಕೊಠಡಿಗಳಲ್ಲಿ ಪೊಲೀಸ್ ಇಲಾಖೆಯ ಪರೀಕ್ಷೆ ನಡೆಯುವ ಸಂದರ್ಭ ಈ ಘಟನೆ ಬೆಳಕಿಗೆ…

ಕೊಳೆತ ಸ್ಥಿತಿಯಲ್ಲಿ ಆನೆ ಶವ ಪತ್ತೆ
ಕೊಡಗು

ಕೊಳೆತ ಸ್ಥಿತಿಯಲ್ಲಿ ಆನೆ ಶವ ಪತ್ತೆ

August 6, 2018

ಮಡಿಕೇರಿ: ಚೆಟ್ಟಳ್ಳಿ ಸಮೀಪದ ನಂಜರಾಯ ಪಟ್ಟಣ ಮೀಸಲು ಅರಣ್ಯದೊಳಗೆ ಕೊಳೆತ ಸ್ಥಿತಿಯಲ್ಲಿ ಕಾಡಾನೆ ಕಳೇ ಬರ ಪತ್ತೆಯಾಗಿದೆ. ಅರಣ್ಯ ಸಿಬ್ಬಂದಿಗಳು ಅರಣ್ಯದೊಳಗೆ ಗಸ್ತು ತಿರುಗುತ್ತಿದ್ದ ಸಂದರ್ಭ ಸುಮಾರು 55 ವರ್ಷ ಪ್ರಾಯದ ಒಂಟಿ ದಂತದ ಕಾಡಾನೆಯೊಂದರ ಕಳೇ ಬರ ಪತ್ತೆಯಾಗಿದೆ. ಕಾಡಾನೆಯ ಕಳೇ ಬರ ಸಂಪೂರ್ಣ ಕೊಳೆತುಹೋಗಿದ್ದು, ಸುಮಾರು ಹತ್ತು ದಿನಗಳ ಹಿಂದೆ ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದೆ. ಉಪವಲಯ ಅರಣ್ಯಾಧಿಕಾರಿ ವಿಲಾಸ್‍ಗೌಡ ಹಾಗೂ ವೈದ್ಯಾಧಿಕಾರಿ ಡಾ.ಮುಜೀಬ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದ ಹತ್ತುದಿನಗಳ ಹಿಂದೆ ಕಾಡಾನೆಗಳ ನಡುವಿನ…

ಆತ್ಮಸಾಕ್ಷಿಯಾಗಿ ಕಾರ್ಯನಿರ್ವಹಿಸಿ, ವಿಶ್ವಾಸ ಹೆಚ್ಚಿಸಿಕೊಳ್ಳಿ ಅಧಿಕಾರಿಗಳಿಗೆ ಸಾ.ರಾ.ಮಹೇಶ್ ಸಲಹೆ
ಕೊಡಗು

ಆತ್ಮಸಾಕ್ಷಿಯಾಗಿ ಕಾರ್ಯನಿರ್ವಹಿಸಿ, ವಿಶ್ವಾಸ ಹೆಚ್ಚಿಸಿಕೊಳ್ಳಿ ಅಧಿಕಾರಿಗಳಿಗೆ ಸಾ.ರಾ.ಮಹೇಶ್ ಸಲಹೆ

August 5, 2018

ಮಡಿಕೇರಿ: ಆತ್ಮಸಾಕ್ಷಿಯಾಗಿ ಕಾರ್ಯನಿರ್ವಹಿಸಿ, ವಿಶ್ವಾಸ ಹೆಚ್ಚಿಸಿಕೊಳ್ಳು ವತ್ತ ಗಮನಹರಿಸುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಸಲಹೆ ಮಾಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ಮೊದಲ ಬಾರಿಗೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಶುಕ್ರ ವಾರ ನಡೆದ ಸಭೆಯಲ್ಲಿ ಸಚಿವರು ಮಾತನಾಡಿದರು. ಸಾರ್ವಜನಿಕರಿಗೆ ಸ್ಪಂದಿಸಿ ಕಾರ್ಯ ನಿರ್ವಹಿಸಬೇಕು. ಸರ್ಕಾರದ ಕಾಳಜಿಯನ್ನು ಅರ್ಥ ಮಾಡಿಕೊಂಡು ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಸಚಿ ವರು ನಿರ್ದೇಶನ ನಿಡಿದರು. ಸಭೆಯ ಆರಂಭದಲ್ಲಿ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ಹಳೇ…

ನಾಳೆ ಬೇಲ್‍ನಮ್ಮೆ
ಕೊಡಗು

ನಾಳೆ ಬೇಲ್‍ನಮ್ಮೆ

August 5, 2018

ಮಡಿಕೇರಿ: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮಡಿಕೇರಿ, ಕೊಡವ ಸಮಾಜ ಕಾನೂರು, ಅಮ್ಮ ಕೊಡವ ಸಮಾಜ ಕೋತೂರು, ಮಹಿಳಾ ಸಮಾಜ ಕಾನೂರು- ಕೋತೂರು, ಕಾನೂರು ಪಂಚಾಯಿತಿ ವ್ಯಾಪ್ತಿಯ ಸಂಘ ಸಂಸ್ಥೆಯ ಸಹಯೋಗದಲ್ಲಿ ಆಗಸ್ಟ್ 6 ರಂದು ಬೆಳಗ್ಗೆ 10 ಗಂಟೆಗೆ ಕೋತೂ ರಿನ ಮನ್ನಕ್ಕಮನೆ ವಾಸು ನಾಣಮಯ್ಯ, ಮನ್ನಕ್ಕಮನೆ ಕಿರಣ್ ಅವರ ಗದ್ದೆಯಲ್ಲಿ ಬೇಲ್‍ನಮ್ಮೆ (ಕೃಷಿ ಹಬ್ಬ) ನಡೆಯಲಿದೆ. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಪೆಮ್ಮಂಡ ಕೆ.ಪೊನ್ನಪ್ಪ, ಕಾನೂರು ಕೊಡವ…

ಇಂದು ಹಿಮವನ ಪ್ರತಿಭಾ ಸಂಗಮ
ಕೊಡಗು

ಇಂದು ಹಿಮವನ ಪ್ರತಿಭಾ ಸಂಗಮ

August 5, 2018

ಮಡಿಕೇರಿ:  ಸಮರ್ಥ ಕನ್ನಡಿಗರ ಸಂಸ್ಥೆಯ ವತಿಯಿಂದ ಆಗಸ್ಟ್ 5 ರಂದು ಹಿಮವನ ಪ್ರತಿಭಾ ಸಂಗಮ ಎಂಬ ವೈವಿದ್ಯಮಯ ಕಾರ್ಯಕ್ರಮ ಆಯೋಜಿಸಲಾಗಿದೆ. ನಗರದ ಓಂಕಾರ ಸದನದಲ್ಲಿ ಬೆಳಗ್ಗೆ 10 ಗಂಟೆಗೆ ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ.ಅನಂತಶಯನ ಕಾರ್ಯ ಕ್ರಮ ಉದ್ಘಾಟಿಸಲಿದ್ದಾರೆ. “ಕೈ ದೀವಿಗೆ” ಕವನ ಸಂಕಲನವನ್ನು ಗಮಕ ವ್ಯಾಖ್ಯಾನಕಾರ ಕೃ.ಪಾ.ಮಂಜುನಾಥ ಲೋಕಾರ್ಪಣೆಗೊಳಿ ಸಲಿದ್ದಾರೆ. “ವಿವೇಕ ಪಥ” ಮಾಸಿಕ ಪತ್ರಿಕೆಯನ್ನು ಕೊಡಗಿನ ಗೌರಮ್ಮ ಪ್ರಶಸ್ತಿ ಪುರಸ್ಕೃತರಾದ ಕವಿ ಸಂಗೀತ ರವಿರಾಜ್ ಲೋಕಾರ್ಪಣೆ ಮಾಡಲಿದ್ದಾರೆ.

ಮಡಿಕೇರಿಯಲ್ಲಿ ಉಸ್ತುವಾರಿ ಸಚಿವರ ಕಚೇರಿ ಉದ್ಘಾಟನೆ: ಪ್ರತಿ 2ನೇ ಶುಕ್ರವಾರ ಸಾರ್ವಜನಿಕ ಅಹವಾಲು ಸ್ವೀಕಾರ
ಕೊಡಗು

ಮಡಿಕೇರಿಯಲ್ಲಿ ಉಸ್ತುವಾರಿ ಸಚಿವರ ಕಚೇರಿ ಉದ್ಘಾಟನೆ: ಪ್ರತಿ 2ನೇ ಶುಕ್ರವಾರ ಸಾರ್ವಜನಿಕ ಅಹವಾಲು ಸ್ವೀಕಾರ

August 4, 2018

ಮಡಿಕೇರಿ:  ಮಡಿಕೇರಿ ನಗರದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಪ್ರತೀ ತಿಂಗಳ ಎರಡನೇ ಶುಕ್ರವಾರ (ರಜಾ ದಿನ ಹೊರತುಪಡಿಸಿ) ಬೆಳಗ್ಗೆಯಿಂದ ಸಂಜೆವರೆಗೆ ಸಾರ್ವಜನಿಕರ ಕುಂದುಕೊರತೆ ಆಲಿಸುವ ಸಭೆ ನಡೆಸಲಾಗುವುದು ಎಂದು ಕೊಡಗು ಜಿಲ್ಲಾ ನೂತನ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ತಿಳಿಸಿದರು. ನಗರದ ಜಿಲ್ಲಾಡಳಿತ ಭವನ ಮೊದಲ ಮಹಡಿಯಲ್ಲಿರುವ ತಮ್ಮ ಕಚೇರಿಯನ್ನು ಉದ್ಘಾಟಿಸಿ ಬಳಿಕ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಹಲವು ಸಮಸ್ಯೆಗಳಿದ್ದು, ಅವು ಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು….

ವನ್ಯ ಪ್ರಾಣಿ ನೋವಿಗೂ ಸ್ಪಂದಿಸಿ ಮಾನವೀಯತೆ ಮೆರೆದ ಸಾ.ರಾ.ಮಹೇಶ್
ಕೊಡಗು

ವನ್ಯ ಪ್ರಾಣಿ ನೋವಿಗೂ ಸ್ಪಂದಿಸಿ ಮಾನವೀಯತೆ ಮೆರೆದ ಸಾ.ರಾ.ಮಹೇಶ್

August 4, 2018

ಮಡಿಕೇರಿ: ಮಡಿಕೇರಿ-ಕುಶಾಲನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಡಿಕ್ಕಿಯಿಂದ ಗಂಭೀರ ಗಾಯ ಗೊಂಡಿದ್ದ ಜಿಂಕೆಗೆ ಕೊಡಗು ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಪ್ರವಾಸೋದ್ಯಮ ಸಚಿವರಾದ ಸಾ.ರಾ. ಮಹೇಶ್ ಪ್ರಾಥಮಿಕ ಚಿಕಿತ್ಸೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಅಧಿಕಾರಿಗಳ ಸಭೆ ನಡೆಸಲು ಸಚಿವ ಸಾ.ರಾ. ಮಹೇಶ್ ಮಡಿಕೇರಿಗೆ ಆಗಮಿಸುತ್ತಿದ್ದರು. ಕುಶಾಲನಗರ ಮಾರ್ಗವಾಗಿ ಮಡಿಕೇರಿ ಬರುವ ಸಂದರ್ಭ ಆನೆಕಾಡು ರಕ್ಷಿತಾರಣ್ಯ ಬಳಿ ತಮಿಳುನಾಡು ಮೂಲದ ಪ್ರವಾಸಿ ವಾಹನವೊಂದು ರಸ್ತೆ ದಾಟುತ್ತಿದ್ದ…

1 15 16 17 18 19 32
Translate »