ಮಡಿಕೇರಿ: ಕೊಡಗು ಜಿಲ್ಲೆ ಯಿಂದ ಇದೇ ಮೊದಲ ಬಾರಿಗೆ ದೇಶದ ನೌಕಾಪಡೆಯ 3ನೇ ಅತ್ಯುನ್ನತ ಸ್ಥಾನಕ್ಕೆ ಐಚೆಟ್ಟಿರ ಬಿ.ಉತ್ತಯ್ಯ ನೇಮಕವಾಗುವ ಮೂಲಕ ಹೊಸ ಸೇನಾ ಇತಿಹಾಸವೊಂದು ದಾಖಲಾಗಿದೆ. ಸ್ವಾತಂತ್ರ್ಯದ ಸಂದರ್ಭದಲ್ಲಿ ಭಾರತೀಯ ರಕ್ಷಣಾ ಪಡೆಗೆ ಸಂಬಂಧಿಸಿದಂತೆ ಸೇನೆಯ ಮೂರೂ ವಿಭಾಗಗಳಾದ ಭೂ ಸೇನೆ, ವಾಯುಸೇನೆ ಹಾಗೂ ನೌಕಾ ಪಡೆಯ ಏಕೈಕ ಮಹಾದಂಡ ನಾಯಕರಾಗಿ ಸೇವೆ ಸಲ್ಲಿಸಿದವರು (ಕಮಾಂಡರ್ ಇನ್ ಚೀಫ್) ಕೊಡಗಿನ ಧೀಮಂತ ಸೇನ ಧಿಕಾರಿ ಫೀಲ್ಡ್ ಮಾರ್ಷಲ್ ಕೊಡಂದೇರ ಎಂ. ಕಾರ್ಯಪ್ಪ. ಭೂಸೇನೆ, ವಾಯು ಪಡೆ…
ಸ್ಥಳೀಯ ಸಂಸ್ಥೆಗಳ ವಾರ್ಡ್ವಾರು ಅಂತಿಮ ಮೀಸಲಾತಿ ಪ್ರಕಟ
August 3, 2018ಮಡಿಕೇರಿ: ರಾಜ್ಯ ಸರ್ಕಾರವು ಸ್ಥಳೀಯ ಸಂಸ್ಥೆಗಳ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದು, ಆಗಸ್ಟ್ 29ರಂದು ವಿರಾಜಪೇಟೆ, ಸೋಮವಾರಪೇಟೆ ಮತ್ತು ಕುಶಾಲನಗರ ಪಪಂಗಳಿಗೆ ಚುನಾವಣೆ ನಡೆಯಲಿದೆ. ಆಗಸ್ಟ್ 10ರಂದು ಅಧಿಸೂಚನೆ ಹೊರಡಿಲಿದ್ದು, ಆಗಸ್ಟ್ 17 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಆ.18ರಂದು ನಾಮಪತ್ರ ಪರಿಶೀಲನಾ ಕಾರ್ಯ ನಡೆಯಲಿದ್ದು, ಆ.20 ನಾಮಪತ್ರ ಹಿಂಪಡೆ ಯಲು ಕೊನೆಯ ದಿನವಾಗಿದೆ. ಸೆ.1ರಂದು ಮತ ಎಣಿಕೆ ನಡೆಯಲಿದೆ. ರಾಜ್ಯ ಸರ್ಕಾರ ಮಡಿಕೇರಿ ನಗರಸಭೆ, ವಿರಾಜಪೇಟೆ, ಸೋಮವಾರಪೇಟೆ ಮತ್ತು ಕುಶಾಲನಗರ ಪಟ್ಟಣ ಪಂಚಾಯಿತಿಗಳ ವಾರ್ಡ್ವಾರು ಮೀಸಲಾತಿ ಪ್ರಕಟಿಸಿದ್ದು,…
ಚಲಿಸುತ್ತಿದ್ದ ಬೈಕ್ನಿಂದ ಬಿದ್ದು ಯುವತಿ ಸಾವು
August 3, 2018ಮಡಿಕೇರಿ: ಅತೀ ವೇಗದಲ್ಲಿ ಚಲಿಸು ತ್ತಿದ್ದ ಬೈಕ್ನಿಂದ ಬಿದ್ದು ಯುವತಿಯೋರ್ವಳು ಮೃತಪಟ್ಟ ಘಟನೆ ನಗರದ ಹೊರವಲಯದ ಅಬ್ಭಿಫಾಲ್ಸ್ ರಸ್ತೆಯಲ್ಲಿ ಸಂಭವಿಸಿದೆ. ಕುಶಾಲನಗರದ ಹಾರಂಗಿ ಹೇರೂರು ಗ್ರಾಮದ ನಿವಾಸಿ ಭವ್ಯ(26) ಎಂಬಾಕೆಯೇ ಮೃತಪಟ್ಟ ದುರ್ದೈವಿ. ಘಟನೆ ವಿವರ: ಸೋ.ಪೇಟೆ ತಾಲೂಕು ಬಜೆಗುಂಡಿ ನಿವಾಸಿ ನವೀನ್ ಕುಮಾರ್ ತನ್ನ ಸ್ನೇಹಿತ ಮೋಹನ್ ಅವರೊಂದಿಗೆ ಆರ್ಟಿಓ ಕಚೇರಿಗೆ ಆಗಮಿಸಿ ತನ್ನ ವಾಹನ ಚಾಲನಾ ಪರವಾನಗಿ ನವೀಕರಣ ಮಾಡಿಸಿಕೊಂಡು ಮಡಿಕೇರಿಗೆ ಬಂದಿದ್ದರು. ಈ ಸಂದರ್ಭ ಭವ್ಯ ತನ್ನ ಪರಿಚಿತನಾದ ನವೀನ್ ಕುಮಾರ್ ನೊಂದಿಗೆ…
ನಾಳೆ ಕೊಡಗಿನಲ್ಲಿ ಕಕ್ಕಡ ಪದಿನೆಟ್ ಆಚರಣೆ
August 2, 2018ಮಡಿಕೇರಿ: ಆಟಿ ಅಥವಾ ಕಕ್ಕಡ ಆಚರಣೆಯ 18ನೇ ದಿನ ಆಗಸ್ಟ್ 3 ಕಕ್ಕಡ ಆರಂಭವಾಗಿ 18 ದಿನ ತುಂಬುತ್ತಿದ್ದಂತೆ 18 ಔಷಧಿಯ ಗುಣಗಳನ್ನು ಹೊಂದಿರುವ ಮದ್ದು ಸೊಪ್ಪಿನ ಪಾಯಸ ಅಥವಾ ರುಚಿ ರುಚಿಯಾದ ವಿವಿಧ ಖಾದ್ಯಗಳನ್ನು ಮಾಡಿ ಸೇವಿಸುವುದು ವಿಶೇಷ. ಕೊಡಗಿನ ಮನೆ ಮನೆಗಳಲ್ಲಿ ಮದ್ದು ಸೊಪ್ಪಿನ ಪಾಯಸ ಘಮಘಮಿಸುತ್ತದೆ. ತುಳುನಾಡಿನಲ್ಲಿ ಆಟಿ 18 ಹೇಗೋ, ಹಾಗೇ ಕೊಡಗಿನಲ್ಲಿ ಕಕ್ಕಡ 18 ಕೂಡ ಒಂದು ವಿಶಿಷ್ಠ ಆಚರಣೆಯಾಗಿದೆ. ಕೊಡಗಿನಲ್ಲಿ ಔಷಧೀಯ ಗುಣಗಳನ್ನು ಹೊಂದಿರುವ ಹಸಿರ ಗಿಡಗಳಿಗೇನು ಕೊರತೆ…
ಆ.5, ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಪರೀಕ್ಷೆ
August 1, 2018ಮಡಿಕೇರಿ: ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯು ಆಗಸ್ಟ್ 5ರಂದು ನಗರದ ವಿವಿಧ ಶಾಲಾ-ಕಾಲೇಜುಗಳಲ್ಲಿ ನಡೆಯಲಿದೆ. ಅಭ್ಯರ್ಥಿಗಳು ಪ್ರವೇಶ/ಹಾಜರಾತಿ ಪತ್ರವನ್ನು ಪೊಲೀಸ್ ಅಂತರ್ಜಾಲದಲ್ಲಿ www.ksp.gov.in ಪಡೆದು ಅದರಲ್ಲಿ ನಿಗದಿ ಪಡಿಸಿರುವ ಭಾವಚಿತ್ರವಿರುವ ದಾಖಲೆಗಳೊಂದಿಗೆ ಪರೀಕ್ಷೆಗೆ ಹಾಜರಾಗುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಅವರು ತಿಳಿಸಿದ್ದಾರೆ.
ನಿವೇಶನ, ವಸತಿ ರಹಿತರ ಪಟ್ಟಿ ಸಿದ್ದಪಡಿಸಲು ಶಾಸಕ ಅಪ್ಪಚ್ಚು ರಂಜನ್ ಸೂಚನೆ
August 1, 2018ಸೋಮವಾರಪೇಟೆ: ಮುಂದಿನ 5 ವರ್ಷದೊಳಗೆ ತಾಲೂಕಿನ ಎಲ್ಲರಿಗೂ ನಿವೇಶನ ಮತ್ತು ಸ್ವಂತ ಮನೆ ಒದಗಿಸುವ ನಿಟ್ಟಿನಲ್ಲಿ ಆಯಾ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ನಿವೇಶನ ರಹಿತರು ಹಾಗೂ ವಸತಿ ರಹಿತರ ಪಟ್ಟಿ ಸಿದ್ಧಗೊಳಿಸಬೇಕು ಎಂದು ಶಾಸಕ ರಂಜನ್ ಸೂಚಿಸಿದರು. ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಹತ್ತಾರು ಎಕರೆ ಪೈಸಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿರುವ ಪ್ರಕರಣಗಳನ್ನು ಪತ್ತೆ ಹಚ್ಚಿ ತೆರವಿಗೆ ಕ್ರಮ ಕೈಗೊಳ್ಳಬೇಕು ಎಂದು ತಾಲೂಕು ತಹಸೀಲ್ದಾರ್ ಮಹೇಶ್…
ಸಾಧಾರಣ ಮಳೆ: ಕೃಷಿ ಚಟುವಟಿಕೆ ಚುರುಕು
August 1, 2018ಮಡಿಕೇರಿ: ಜಿಲ್ಲೆಯಲ್ಲಿ ಸಾಧಾರಣ ಮಳೆ ಮುಂದುವರೆದಿದ್ದು, ಕೃಷಿ ಚಟುವಟಿಕೆ ಗರಿಗೆದರಿದೆ. ಭತ್ತ ಕೃಷಿಗೆ ನಾಟಿ ಪ್ರಕ್ರಿಯೆ ನಡೆಯುತ್ತಿದ್ದು, ಈಗಾಗಲೇ ಹಲವು ಕಡೆ ನಾಟಿ ಪ್ರಾರಂಭವಾಗಿದೆ. ಜಿಲ್ಲೆಯಾದ್ಯಂತ ಸುಮಾರು 9,800 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ನಾಟಿ ಆಗಿದೆ. ಹಾಗೆಯೇ ಮುಸುಕಿನ ಜೋಳ 1800 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಯಾಗಿದೆ. ಮಡಿಕೇರಿ ತಾಲೂಕಿ ನಲ್ಲಿ 6500 ಹೆಕ್ಟೇರ್ ಪ್ರದೇಶದ ಗುರಿಗೆ 850 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ನಾಟಿಯಾಗಿದೆ. ಸೋಮವಾರಪೇಟೆ ತಾಲ್ಲೂಕಿನಲ್ಲಿ 10000 ಹೆಕ್ಟೇರ್ ಪ್ರದೇಶದ ಗುರಿಯಲ್ಲಿ 1,103 ಹೆಕ್ಟೇರ್ ಪ್ರದೇಶದಲ್ಲಿ…
ಜೆಡಿಎಸ್ ಮಡಿಕೇರಿ ನಗರಾಧ್ಯಕ್ಷ ರಾಜೀನಾಮೆ
August 1, 2018ಮಡಿಕೇರಿ: ಜೆಡಿಎಸ್ ಮಡಿಕೇರಿ ನಗರ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರು ವುದಾಗಿ ಬಿ.ವೈ.ರಾಜೇಶ್ ಯಲ್ಲಪ್ಪ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಪಕ್ಷದ ಮುಖಂಡರು ಹಾಗೂ ಮಾಜಿ ಸಚಿವ ಬಿ.ಎ.ಜೀವಿಜಯ ಅವರಿಗೆ ರಾಜೀನಾಮೆ ಸಲ್ಲಿಸಿರುವುದಾಗಿ ಹೇಳಿದ್ದಾರೆ. ಪಕ್ಷದ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ರಾಜೀನಾಮೆ ನೀಡಿರು ವುದರಿಂದ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸುಗಮವಾಗಿ ನಡೆಯಲು, ಪಕ್ಷದ ಪುನರ್ ರಚನೆ ಮತ್ತು ಪುನರ್ ಸಂಘಟನೆ ಬಲಯುತ ವಾಗಬೇಕೆನ್ನುವ ಉದ್ದೇಶದಿಂದ ನಗರಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ರಾಜೇಶ್ ಯಲ್ಲಪ್ಪ…
ಆ.8 ರಿಂದ ಕುಟುಂಬ ಕಲ್ಯಾಣ ಕಾರ್ಯಕ್ರಮದ ಶಸ್ತ್ರ ಚಿಕಿತ್ಸಾ ಶಿಬಿರ
August 1, 2018ಮಡಿಕೇರಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ 2018ರ ಆಗಸ್ಟ್ ಮಾಹೆಯಲ್ಲಿ ಕುಟುಂಬ ಕಲ್ಯಾಣ ಕಾರ್ಯಕ್ರಮದ ಶಸ್ತ್ರ ಚಿಕಿತ್ಸಾ ಶಿಬಿರ ನಡೆಯಲಿದೆ. ಆಗಸ್ಟ್ 8 ರಂದು ನಾಪೋಕ್ಲು, ಆಗಸ್ಟ್ 18 ರಂದು ಸೋಮವಾರಪೇಟೆ, ಆಗಸ್ಟ್ 20ರಂದು ಕುಶಾಲನಗರ ಆ.13 ರಂದು ಗೋಣಿಕೊಪ್ಪ, ಆಗಸ್ಟ್ 25ರಂದು ಸಿದ್ದಾಪುರ, ಪಾಲಿಬೆಟ್ಟ ಮತ್ತು ಆಗಸ್ಟ್ 27 ರಂದು ಕುಟ್ಟ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಲ್ಯಾಪ್ರೊಸ್ಕೋಪಿಕ್ ಎಂಬ ಚಿಕಿತ್ಸಾ ಶಿಬಿರ ನಡೆಯಲಿದೆ. ಆಗಸ್ಟ್ 14 ರಂದು ಸುಂಟಿಕೊಪ್ಪ, ಆ.16 ರಂದು…
ಮಡಿಕೇರಿಯಲ್ಲಿ ಮನೆ ಮೇಲೆ ಶೂಟೌಟ್: ಇಬ್ಬರ ಬಂಧನ
July 31, 2018ಮಡಿಕೇರಿ: ಮನೆಯೊಂದರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ನಗರದ ಎಫ್.ಎಂ.ಸಿ. ಕಾಲೇಜು ಹಿಂಭಾಗ ನಡೆದಿದ್ದು, ಕೆಲವೇ ಗಂಟೆಗಳಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಜಿಲ್ಲಾ ಅಪರಾಧ ಪತ್ತೆದಳ ಯಶಸ್ವಿಯಾಗಿದೆ. ಮಡಿಕೇರಿಯ ಜೀವ ವಿಮಾ ನಿಗಮದಲ್ಲಿ ಉದ್ಯೋಗಿಯಾಗಿರುವ ಜನಾರ್ಧನ ಎಂಬು ವರ ಮನೆಯ ಮೇಲೆ ಗುಂಡಿನ ದಾಳಿ ನಡೆದಿದ್ದು, ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ. ಈ ಕೃತ್ಯವೆಸಗಿದ ಮಡಿಕೇರಿ ನಿವಾಸಿಗಳಾದ ಲೋಕೇಶ್, ಆಟೋ ಮೆಕ್ಯಾನಿಕ್ ಅಕ್ರಂ ಅವರನ್ನು ಜಿಲ್ಲಾ ಅಪರಾಧ ಪತ್ತೆ ದಳ ಬಂಧಿಸಿದ್ದು, ನಗರ ಠಾಣೆ…