ಮಡಿಕೇರಿ: ಭಾಗಮಂಡಲ ಸಮೀಪದ ಚೇರಂಗಾಲ ಗ್ರಾಮದಲ್ಲಿರುವ ಕಾವೇರಿಯ ಮೂಲ ಸ್ಥಾನದಲ್ಲಿ ಸುಮಾರು 12 ಕೋಟಿ ರೂ.ವೆಚ್ಚದಲ್ಲಿ ದೇವಾಲಯ ನಿರ್ಮಿಸಲು ಶ್ರೀ ಕನ್ನಿಕಾವೇರಿ ಸೇವಾ ಟ್ರಸ್ಟ್ ನಿರ್ಧರಿಸಿದೆ ಎಂದು ಟ್ರಸ್ಟ್ನ ಸಂಚಾಲಕ ಮುಲ್ಲೇಂಗಡ ಶಂಕರಿ ಪೊನ್ನಪ್ಪ ತಿಳಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಂಕರಿ ಪೊನ್ನಪ್ಪ, ಚೇರಂ ಗಾಲ ಗ್ರಾಮದ ಹೊಸೂರು ಎಂಬಲ್ಲಿ ಕಾವೇರಿಯ ಮೂಲ ಸ್ಥಾನವಿದ್ದು, ಈ ಕ್ಷೇತ್ರದ ಅಭಿವೃದ್ಧಿಗಾಗಿ ಕಳೆದ 7 ದಶಕ ಗಳಿಂದ ಹೊಸೂರು ನಾಣಯ್ಯ ದಂಪತಿ ಪ್ರಯತ್ನಿಸಿದ್ದರೂ, ಅದು ಕಾರ್ಯರೂಪಕ್ಕೆ ಬಂದಿಲ್ಲ. ಇದೀಗ ಈ…
ಪತ್ರಕರ್ತರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಮೂವರ ಪೈಪೋಟಿ
July 25, 2018ಮಡಿಕೇರಿ: ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಮೂವರು ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದುಕೊಂಡಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ಚಟ್ಟಂಡ ರವಿ ಸುಬ್ಬಯ್ಯ ಮಂಗಳವಾರ ತಮ್ಮ ನಾಮಪತ್ರ ಹಿಂಪಡೆದುಕೊಂಡರು. ಅಂತಿಮ ಕಣದಲ್ಲಿ ಕೊಡಗು ವಾರ್ತೆ ಸಂಪಾದಕ ಚಮ್ಮಟೀರ ಪ್ರವೀಣ್ ಉತ್ತಪ್ಪ, ಕೊಡಗು ಚಾನಲ್ ಸಂಪಾದಕ ಜಿ.ವಿ. ರವಿಕುಮಾರ್, ಚಿತ್ತಾರ ಪ್ರಧಾನ ಸಂಪಾ ದಕಿ ಬಿ.ಆರ್.ಸವಿತಾ ರೈ ಇದ್ದಾರೆ. ಜಿ.ವಿ. ರವಿಕುಮಾರ್ ಕಾರ್ಯದರ್ಶಿ ಸ್ಥಾನಕ್ಕೆ ಸಲ್ಲಿಸಿದ್ದ ನಾಮಪತ್ರ ಹಿಂಪಡೆದುಕೊಂಡಿ ರುವುದರಿಂದ ಪಿ.ಪಿ….
ನಾಲ್ವರು ಖದೀಮರ ಸೆರೆ: ಬೈಕ್, 32 ಸಾವಿರ ನಗದು ವಶ
July 25, 2018ಮಡಿಕೇರಿ: ನಗರದ ಆಂಜನೇಯ ದೇವಸ್ಥಾನದ ಹುಂಡಿ ಹಣ ಕಳವು ಮಾಡಿದ್ದ ನಾಲ್ವರು ಆರೋಪಿಗಳನ್ನು ಮಡಿಕೇರಿ ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರು ಈ ಹಿಂದೆ ಹಲವಾರು ಕ್ರಿಮಿನಲ್ ಮೊಕದ್ದಮೆಗಳಲ್ಲಿ ಭಾಗಿಗಳಾಗಿದ್ದು, ಅನೇಕ ವರ್ಷಗಳ ಕಾಲ ಸೆರೆ ವಾಸವನ್ನು ಅನುಭವಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಂಟಿಕೊಪ್ಪ ಹಾಲೇರಿಯ ಸುರೇಶ್, ಕೇರಳ ಕಂಜಿಗೋಡ್ನ ಸುಭಾಷ್, ಹುಣಸೂರಿನ ಸುರೇಶ್ ನಾರಾಯಣ್, ಹಾಸನದ ದೊಡ್ಡಮಗ್ಗೆ ಹೋಬಳಿಯ ಕುಮಾರ್ ಅವರುಗಳನ್ನು ಮಡಿಕೇರಿ ನಗರ ಪೊಲೀಸರು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗಳನ್ನು 14…
ಜಿಂಕೆ ಬೇಟೆಗಾರ ಬಂಧನ
July 25, 2018ಮಡಿಕೇರಿ: ಮತ್ತಿಗೋಡು ಅರಣ್ಯ ವ್ಯಾಪ್ತಿಯ ಬಾಳೆಲೆ ಹೊಸಕೆರೆ ಬಳಿ ಉರುಳು ಹಾಕಿ ಜಿಂಕೆಯನ್ನು ಭೇಟಿಯಾಡಿದ ಆರೋಪಿಯನ್ನು ಮಾಂಸ ಸಹಿತ ವಶಕ್ಕೆ ಪಡೆಯಲಾಗಿದೆ. ಮತ್ತಿಗೋಡು ರಾಮಾಪುರ ಪೈಸಾರಿ ನಿವಾಸಿ ಆರ್ಮುಘ ಎಂಬಾತನೆ ಬಂಧಿತ ಆರೋಪಿಯಾಗಿದ್ದು, ಈತನಿಂದ 30 ಕೆ.ಜಿ. ಜಿಂಕೆ ಮಾಂಸ, ಮಾಂಸ ಮಾಡಲು ಬಳಸಿದ 2 ಕತ್ತಿ ಮತ್ತು ಕೃತ್ಯಕ್ಕೆ ಬಳಸಿದ ಉರುಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತ ಆರೋಪಿ ಉರುಳು ಬಳಸಿ ಕಾಡುಪ್ರಾಣಿಗಳ ಬೇಟೆಯಾಡುತ್ತಿದ್ದ ಖಚಿತ ಮಾಹಿತಿ ಪಡೆದ ಆನೆಚೌಕೂರು ಹುಲಿ ಸಂರಕ್ಷಣಾ ವಲಯದ ಅರಣ್ಯ ಅಧಿಕಾರಿಗಳು…
ಮತದಾರರ ಪಟ್ಟಿ ಪರಿಶೀಲನೆ: ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ
July 25, 2018ಮಡಿಕೇರಿ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ 2019 ರ ಸಂಬಂಧ ಬೂತ್ ಮಟ್ಟದ ಅಧಿಕಾರಿ ಗಳು ಮನೆ ಮನೆಗೆ ಭೇಟಿ ನೀಡಿ ಮತ ದಾರರ ಪಟ್ಟಿ ಪರಿಶೀಲನೆ/ ಮತದಾರರ ಮಾಹಿತಿ ಸಂಗ್ರಹಿಸಲಿದ್ದಾರೆ ಎಂದು ಡಿಸಿ ಪಿ.ಐ.ಶ್ರೀವಿದ್ಯಾ ಅವರು ತಿಳಿಸಿದ್ದಾರೆ. ಭಾವಚಿತ್ರವಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2019 ರ ಸಂಬಂಧ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲು ಭಾರತ ಚುನಾವಣಾ ಆಯೋ ಗವು ಬೂತ್ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಲು ಸೂಚಿಸಿದ್ದು, ಆ.10ರವರೆಗೆ ಬೂತ್ ಮಟ್ಟದ ಅಧಿಕಾರಿ…
ಆ.5ರಂದು ಪತ್ರಕರ್ತರ ಸಂಘದ ಚುನಾವಣೆ
July 23, 2018ಮಡಿಕೇರಿ: ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2018-21ನೇ ಸಾಲಿನ ಆಡಳಿತ ಮಂಡಳಿ ಚುನಾವಣೆಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿ ಸಿರುವ ಸವಿತಾ ರೈ, ಚಟ್ಟಂಗಡ ರವಿ ಸುಬ್ಬಯ್ಯ, ಚಮ್ಮಟ್ಟಿರ ಪ್ರವೀಣ್ ಉತ್ತಪ್ಪ, ಜಿ.ವಿ. ರವಿ ಕುಮಾರ್ ಇವರ ನಾಮಪತ್ರ ಕ್ರಮಬದ್ಧ ವಾಗಿದೆ ಎಂದು ಚುನಾವಣಾಧಿಕಾರಿ ಚಕ್ಕೇರ ಪ್ರಮೋದ್ ಘೋಷಣೆ ಮಾಡಿದ್ದಾರೆ. ನಾಮಪತ್ರ ಹಿಂಪಡೆಯಲು ಜು.24 ರಂದು ಮಧ್ಯಾಹ್ನ 12ಗಂಟೆಗೆ ಕೊನೆಯ ದಿನವಾಗಿದ್ದು, ಆ.5ರಂದು ಕೊಡಗು ಪತ್ರಿಕಾ ಭವನದ ಸಭಾಂಗಣದಲ್ಲಿ ಚುನಾ ವಣೆ ನಡೆಯಲಿದೆ. ಮೂರು ಕಾರ್ಯದರ್ಶಿ ಸ್ಥಾನಕ್ಕೆ…
ಕುಂದು ಕೊರತೆ ನಿವಾರಣಾ ಸಭೆ
July 23, 2018ಮಡಿಕೇರಿ: ನವದೆಹಲಿ ರಾಷ್ಟ್ರೀಯ ಮಾನವ ಹಕ್ಕು ಆಯೋಗ ವತಿಯಿಂದ ರಾಜ್ಯದಲ್ಲಿನ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಕ್ಕೆ ಸೇರಿದ ವ್ಯಕ್ತಿಗಳ ಮೇಲೆ ಸರ್ಕಾರಿ ನೌಕರರು ದೌರ್ಜನ್ಯವೆಸಗಿದ ಬಗ್ಗೆ ಹಾಗೂ ಸರ್ಕಾರಿ ನೌಕರರ ನಿರ್ಲಕ್ಷ್ಯದಿಂದ ದೌರ್ಜನ್ಯ ಕ್ಕೊಳಗಾದ ಬಗ್ಗೆ ದೂರುಗಳ ಕುರಿತು ಜುಲೈ 26 ಮತ್ತು 27 ರಂದು ಬೆಂಗಳೂರಿನಲ್ಲಿ ಕುಂದು ಕೊರತೆ ನಿವಾರಣೆ ಸಭೆ ನಡೆಯಲಿದೆ. ಆ ದಿಸೆಯಲ್ಲಿ ದೌರ್ಜನ್ಯಕ್ಕೊಳಗಾದ ವ್ಯಕ್ತಿಗಳು ತಮ್ಮ ದೂರುಗಳನ್ನು ಸಲ್ಲಿಸಲು ಜೂ.30 ರವರೆಗೆ ಅವಕಾಶ ನೀಡಿದೆ. ದೂರನ್ನು ರಿಜಿಸ್ಟ್ರಾರ್, ರಾಷ್ಟ್ರೀಯ ಮಾನವ ಹಕ್ಕು…
ಗಾಳಿಬೀಡು ಬಳಿ ಭೂಮಿ ಬಿರುಕು ಅಧಿಕಾರಿಗಳಿಂದ ಪರಿಶೀಲನೆ
July 22, 2018ಮಡಿಕೇರಿ: ಗಾಳಿಬೀಡು ಗ್ರಾಮ ಪಂಚಾಯ್ತಿ ವ್ಯಾಪ್ತಿಯ 2ನೇ ಮೊಣ್ಣಂಗೇರಿ ಬಳಿ ಭೂಮಿ ಬಿರುಕು ಬಿಟ್ಟಿದ್ದು, ಬೆಟ್ಟದ ಒಂದು ತಪ್ಪಲು 2 ಇಂಚುಗಳಷ್ಟು ಆಳಕ್ಕೆ ಇಳಿದಿದೆ. ಬೆಟ್ಟದಲ್ಲಿ 1 ಕಿ.ಮೀ ಉದ್ದಕ್ಕೂ ಅಂದಾಜು 3 ಇಂಚು ಅಗಲ ದಷ್ಟು ಬಿರುಕು ಮೂಡಿದೆ. 1 ಕಿ.ಮೀ ಉದ್ದದ ಬಿರುಕು 50 ಎಕರೆ ಬೆಟ್ಟ ಪ್ರದೇಶ ವನ್ನು ಆವರಿಸಿದ್ದು, ಈ ವ್ಯಾಪ್ತಿಯ ಗ್ರಾಮಸ್ಥರಲ್ಲಿ ಆತಂಕ ಹುಟ್ಟು ಹಾಕಿದೆ. ಬಿರುಕು ಕಾಣಿಸಿಕೊಂಡ ಪ್ರದೇಶದಲ್ಲಿ 4 ಕುಟುಂಬಗಳು ವಾಸವಿದ್ದು, ಜೀವಭಯ ಎದುರಿಸುತ್ತಿದ್ದಾರೆ. ಈ ವಿಚಾರ…
ಕಾರ್ಮಿಕ ಸಾವು
July 22, 2018ಮಡಿಕೇರಿ: ಮಡಿಕೇರಿ ತಾಲೂ ಕಿನ ಕೋಡಂಬೂರು ಗ್ರಾಮದ ನಿವಾಸಿ ಬಾದುಮಂಡ ಕೆ.ಸುಬ್ಬಯ್ಯ ಅವರ ತೋಟ ದಲ್ಲಿ ಕೆಲಸ ಮಾಡುತ್ತಿದ್ದ ಪಂಜರಿ ಎರವರ ಕಾಳ(60) ಜು.17 ರಂದು ರಾತ್ರಿ ಊಟ ಮುಗಿಸಿ ಮಲಗಿದ್ದು, ಜು.18 ರಂದು ಬೆಳಗ್ಗೆ ಕೆಲಸಕ್ಕೆ ಬಾರದ ಕಾರಣ ಹೋಗಿ ನೋಡಿ ದಾಗ ಮಲಗಿದಲ್ಲಿಯೇ ಮೃತಪಟ್ಟಿರು ವುದು ಕಂಡು ಬಂದಿದೆ. ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ದೇಹವನ್ನು ಮಡಿಕೇರಿ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ಮೃತ ಕಾಳನ…
ಸೋಮವಾರಪೇಟೆ-ವಿರಾಜಪೇಟೆ ರಸ್ತೆ : ಮೇಲ್ದರ್ಜೆಗೇರಿಸಲು ಶಾಸಕ ಅಪ್ಪಚ್ಚು ರಂಜನ್ ಮನವಿ
July 22, 2018ಮಡಿಕೇರಿ: ಹೊಳೆನರಸಿಪುರ- ಅರಕಲಗೋಡು-ಸೋಮವಾರಪೇಟೆ-ವಿರಾಜಪೇಟೆ ರಸ್ತೆಯನ್ನು ಮೇಲ್ದರ್ಜೆಗೆ ಏರಿಸುವ ಸಂಬಂಧ ಕೆಷಿಫ್ನಿಂದ ಡಿಪಿಆರ್ ಆಗಿದ್ದು, ಈ ರಸ್ತೆಯು ಸೋಮವಾರ ಪೇಟೆ-ಮಡಿಕೇರಿ-ವಿರಾಜಪೇಟೆ ತಾಲೂಕು ಮೂಲಕ ಹಾದು ಹೋಗುವುದರಿಂದ ಈ ವ್ಯಾಪ್ತಿಯ ಜನತೆಗೂ ತುಂಬಾ ಅನುಕೂಲವಾಗುವುದರಿಂದ ರಸ್ತೆಯನ್ನು ಮೇಲ್ದರ್ಜೆಗೆ ಏರಿಸಿ ಅಗಲೀಕರಣಕ್ಕೆ ಅನು ದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಅವರಲ್ಲಿ ಶಾಸಕರಾದ ಅಪ್ಪಚ್ಚು ರಂಜನ್ ಅವರು ಕೋರಿದ್ದಾರೆ. ಕೊಡಗು ಜಿಲ್ಲೆಯಲ್ಲಿನ ಹೆಚ್ಚಿನ ರಸ್ತೆಗಳು ಮತ್ತು ಸೇತುವೆಗಳು ಇತ್ತೀಚೆಗೆ ಬಿದ್ದ ಮಳೆಯಿಂದ ಹಾನಿಯಾಗಿರುವುದರಿಂದ ವಿಶೇಷವಾಗಿ ರಸ್ತೆ ಹಾಗೂ ಸೇತುವೆ ದುರಸ್ತಿಗೆ ಒಂದು ಸಾವಿರ…