ಮಡಿಕೇರಿ: ಜಿಲ್ಲೆಯ ಪ್ರಸಿದ್ಧ ನೈಸರ್ಗಿಕ ಸೊಬಗಿನ ಮಡಿಕೇರಿಯ ರಾಜಾ ಸೀಟು ಉದ್ಯಾನವನದಲ್ಲಿ ಜ.11 ರಿಂದ 13ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ಅರಳಿ ನಿಂತಿರುವ ರಂಗು ರಂಗಿನ ಹೂವುಗಳಿಂದ ಉದ್ಯಾನವನ ಕಂಗೊಳಿಸುತ್ತಿದೆ. ವಿವಿಧ ಜಾತಿಯ ಹೂವುಗಳನ್ನು ಕುಂಡಗಳಲ್ಲಿ ಬೆಳೆಯಲಾಗಿದ್ದು, ಉದ್ಯಾನ ವನಕ್ಕೆ ಹೊಸ ಮೆರುಗು ತುಂಬಿವೆ. 8 ರಿಂದ 10 ಸಾವಿರ ಸಂಖ್ಯೆಯಲ್ಲಿ ವಿವಿಧ ಜಾತಿಯ ಪೇಟೂನಿಯಾ, ಕ್ಯಾನ, ಸಾಲ್ವಿಯ, ಸೇವಂತಿಗೆ, ಚೆಂಡು ಹೂ, ಪ್ಲಾಕ್ಸ್, ವಿಂಕಾ, ರೋಸಿಯಾ, ಡೇಲಿಯಾ ಹೂವುಗಳು ನೋಡುಗರನ್ನು ಆಕರ್ಷಿಸಲಿದೆ. ಕೊಡಗಿನ ಕುಲದೇವತೆಯಾದ ಕಾವೇರಿ…
ಮದೆನಾಡು ರಸ್ತೆಯಲ್ಲಿ ಸರಣಿ ಕಳ್ಳತನ
January 9, 2019ಮಡಿಕೇರಿ: ಮಂಗಳೂರು-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯ ದೇವರಕೊಲ್ಲಿಯಿಂದ ಮದೆನಾಡುವರೆಗೆ ಸರಣಿ ಕಳ್ಳತನ ನಡೆದಿದೆ. ಜ.7ರ ಬೆಳಗಿನ 3.30ರ ವೇಳೆಯಲ್ಲಿ ಬಿಳಿ ಬಣ್ಣದ ಸಿಫ್ಟ್ ಕಾರಿನಲ್ಲಿ ಬಂದ ಯುವಕನೋರ್ವ ದೇವರಕೊಲ್ಲಿ ಶ್ರೀ ಚಾಮುಂಡೇಶ್ವರಿ ದೇವಾಲಯದ ಬೀಗ ಒಡೆದು ಒಳನುಗ್ಗಿ ಹುಂಡಿ ಒಡೆಯಲು ವಿಫಲ ಯತ್ನ ನಡೆಸಿ ದ್ದಾನೆ. ಕೈಯಲ್ಲಿ ತಲವಾರ್ ಹಿಡಿದು ಒಳನುಗ್ಗುವ ಕಳ್ಳ ದೇವಾ ಲಯದ ಗರ್ಭ ಗುಡಿಯ ಒಳಗೆ ಅಮೂಲ್ಯ ವಸ್ತುಗಳಿ ಗಾಗಿ ತಡಕಾಡುತ್ತಿರುವ ದೃಶ್ಯಾವಳಿಗಳು ದೇವಾಲಯದಲ್ಲಿ ಅಳವಡಿಸಲಾಗಿದ್ದ ಸಿ.ಸಿ. ಕ್ಯಾಮರಾದಲ್ಲಿ ದಾಖಲಾಗಿದೆ. ದೇವಾಲಯದ ಮುಂಭಾಗದ ಹೆದ್ದಾರಿಯಲ್ಲಿ…
ವ್ಯಕ್ತಿ ನಾಪತ್ತೆ
January 5, 2019ಗೋಣಿಕೊಪ್ಪಲು: ಇಲ್ಲಿನ ಮೈಸೂರಮ್ಮ ಕಾಲನಿ ನಿವಾಸಿ ಎಂ. ಆರ್ಮುಗಂ (65) ಎಂಬುವವರು ಕೆಲವು ದಿನಗ ಳಿಂದ ನಾಪತ್ತೆಯಾಗಿದ್ದಾರೆ. ಕಳೆದ ಡಿಸೆಂಬರ್ 15 ರಂದು ಮನೆಯಿಂದ ಹೋದವರು ಹಿಂತಿರುಗಿ ಬಂದಿಲ್ಲ ಎಂದು ಮಗ ಚಂದ್ರಮೋಹನ್ ಗೋಣಿ ಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇವರ ಬಗ್ಗೆ ಮಾಹಿತಿ ಇರುವವರು ಗೋಣಿಕೊಪ್ಪ ಪೊಲೀಸ್ ಠಾಣೆ ದೂ. ಸಂಖ್ಯೆ 08274247333ನ್ನು ಸಂಪರ್ಕಿಸುವಂತೆ ಪೊಲೀಸ್ ಪ್ರಕಟಣೆ ಕೋರಿದೆ.
ಮನ್ವಂತರದ ಸಂಭ್ರಮಕ್ಕೆ ಹರಿದುಬಂದ ಜನಸಾಗರ
January 1, 2019ಮಡಿಕೇರಿ: ಹೊಸ ವರ್ಷವನ್ನು ಸಂಭ್ರಮಿಸಲು ಕೊಡಗು ಜಿಲ್ಲೆಗೆ ಅತ್ಯಧಿಕ ಸಂಖ್ಯೆಯಲ್ಲಿ ಪ್ರವಾಸಿಗರ ಆಗಮನ ವಾಗಿದೆ. ಜಿಲ್ಲೆಯ ಪ್ರವಾಸಿತಾಣಗಳಲ್ಲಿ ಕಾಲಿಡಲು ಸ್ಥಳವಿಲ್ಲದ ರೀತಿಯಲ್ಲಿ ಪ್ರವಾಸಿ ಗರು ತುಂಬಿಕೊಂಡಿದ್ದರು. ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ಸಂಭವಿಸಿದ ಬಳಿಕ ಮಡಿ ಕೇರಿ ದಸರಾ ಉತ್ಸವ, ಶ್ರೀ ತಲಕಾವೇರಿ ತೀರ್ಥೋದ್ಭವವನ್ನು ಹೊರತುಪಡಿಸಿದರೆ ಡಿ.3ನೇ ವಾರದಿಂದ ಜಿಲ್ಲೆಯಲ್ಲಿ ಪ್ರವಾಸಿಗರು ಕಂಡು ಬಂದರು. ಕುಶಾಲನಗರದ ದುಬಾರೆ, ಗೋಲ್ಢನ್ ಟೆಂಪಲ್, ಕಾವೇರಿ ನಿಸರ್ಗಧಾಮ, ಮಡಿಕೇರಿಯ ಮಾಂದಲ್ ಪಟ್ಟಿ, ಅಬ್ಬಿಫಾಲ್ಸ್ ಮತ್ತು ನೈಸರ್ಗಿಕ ಸೌಂದರ್ಯದ ರಾಜಾಸೀಟ್ನಲ್ಲಿ ವರ್ಷಾಂತ್ಯದ ಕೊನೆಯ ದಿನದ…
ಸೋಮವಾರಪೇಟೆ, ಮಡಿಕೇರಿಯಲ್ಲಿ ಭಗವಾನ್ ವಿರುದ್ಧ ದೂರು ದಾಖಲು
December 29, 2018ಸೋಮವಾರಪೇಟೆ: ಶ್ರೀರಾಮನ ವಿರುದ್ಧ ಅವಹೇಳನಕಾರಿ ಬರಹ ಪ್ರಕಟಿ ಸಿರುವ ಸಾಹಿತಿ ಭಗವಾನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅವರನ್ನು ತಕ್ಷಣ ಬಂಧಿಸಬೇಕೆಂದು ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳು ಇಲ್ಲಿನ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಭಗವಾನ್ ಹಿಂದೂಗಳ ಪೂಜನೀಯ ದೇವರುಗಳನ್ನು ಕೀಳುಮಟ್ಟದಲ್ಲಿ ಬಿಂಬಿ ಸಿದ್ದಾರೆ. ಇದು ಅಸಂಖ್ಯಾತ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ. ತಕ್ಷಣ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳ ಬೇಕು. ತಪ್ಪಿದಲ್ಲಿ ತೀವ್ರ ಪ್ರತಿಭಟನೆ ನಡೆಸ ಲಾಗುವುದು ಎಂದು ಬಿಜೆಪಿ ಯುವ…
ಖಾಸಗಿ ಬಸ್ ನಿಲ್ದಾಣ ಸ್ಥಳಾಂತರ ಬಗ್ಗೆ ಸಭೆ
December 27, 2018ಮಡಿಕೇರಿ: ನೂತನ ಖಾಸಗಿ ಬಸ್ ನಿಲ್ದಾಣ ಸ್ಥಳಾಂತರ ಸಂಬಂಧ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅಧ್ಯಕ್ಷತೆಯಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾಹಿತಿ ಪಡೆದ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ, ಕಳೆದ ಬಾರಿಯ ಸಭೆಯಲ್ಲಿ ತೀರ್ಮಾನಿಸಿದಂತೆ ಬಸ್ ಸಂಚಾರ ಮಾರ್ಗದ ರಸ್ತೆ ಸಮೀಕ್ಷೆ ನಡೆಸಲಾಗಿದೆಯೇ ಎಂದು ಪ್ರಶ್ನಿಸಿದರು. ಈ ಬಗ್ಗೆ ಮಾಹಿತಿ ನೀಡಿದ ಎಂಜಿನಿಯರ್ ವನಿತಾ ಮತ್ತು ನಗರ ಪೊಲೀಸ್ ಇನ್ಸ್ಪೆಕ್ಟರ್ ಅನೂಪ್ ಮಾದಪ್ಪ, ಸರ್ವೇ ಕಾರ್ಯ ಮಾಡಲಾಗಿದೆ. ರಾಜಾ…
ಪಾದಚಾರಿ, ಸವಾರರನ್ನು ಕಾಡುತ್ತಿರುವ ಬೀಡಾಡಿ ದನಗಳು
December 27, 2018ಮಡಿಕೇರಿ: ನಗರದ ಮುಖ್ಯ ರಸ್ತೆ ಮತ್ತು ಬೀದಿಗಳಲ್ಲಿ ಬೀಡಾಡಿ ದನ ಗಳ ಹಾವಳಿ ಮಿತಿ ಮೀರಿದ್ದು, ಯಾವುದೇ ಕ್ರಮ ಕೈಗೊಳ್ಳದ ನಗರಸಭೆ ವಿರುದ್ಧ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸುತ್ತಿ ದ್ದಾರೆ. ಬೀಡಾಡಿ ದನಗಳಿಂದ ನಗರದ ರಸ್ತೆಗಳಲ್ಲಿ ವಾಹನ ಸಂಚಾರಕ್ಕೂ ತೊಡಕಾ ಗಿದ್ದು, ಪಾದಚಾರಿಗಳು, ವಾಹನ ಸವಾ ರರು ಮತ್ತು ಪ್ರವಾಸಿಗರು ದನಗಳಿಗೆ ಹೆದರಿ ಕೊಂಡು ರಸ್ತೆಯಲ್ಲಿ ಸಂಚರಿಸುವಂತಾಗಿದೆ. ಗೂಳಿಗಳ ಕಾಳಗ: ಎರಡು ಗೂಳಿಗಳ ಕಾಳಗದ ನಡುವೆ ಸಿಲುಕಿದ ವ್ಯಕ್ತಿಯೋ ರ್ವರು ಕೂದಲೆಳೆಯ ಅಂತರದಲ್ಲಿ ಯಾವುದೇ ಅಪಾಯವಿಲ್ಲದೆ ಪಾರಾದ ಘಟನೆ…
ಬೆಂಬಲ ಬೆಲೆಯಿಂದ ಅತೀರಾ ತಳಿ ಹೊರಕ್ಕೆ ಅತೀರಾ ಭತ್ತ ಬೆಳೆದ ರೈತರ ಕಂಗಾಲು
December 21, 2018ಮಡಿಕೇರಿ: ಸರ್ಕಾರವೇ ಬಿತ್ತನೆ ಗಾಗಿ ಅತೀರಾ ತಳಿ ಭತ್ತವನ್ನು ವಿತರಿ ಸಿದ್ದು, ಇದೀಗ ಅದೇ ಅತೀರಾ ಎಂಬ ಕೆಂಪು ಅಕ್ಕಿಯ ಭತ್ತವನ್ನು ಬೆಂಬಲ ಬೆಲೆಯಿಂದ ಹೊರಗಿಟ್ಟಿರುವುದು ಅತೀರಾ ಭತ್ತ ಬೆಳೆದಿ ರುವ ರೈತರನ್ನು ಕಂಗಲಾಗಿಸಿದೆ. ಕೊಡ ಗಿನ ವಿರಾಜಪೇಟೆ ತಾಲೂಕಿನಲ್ಲಿ ಅತೀ ಹೆಚ್ಚು ರೈತರು ಅತೀರಾ ಭತ್ತದ ಬೆಳೆ ಬೆಳೆ ದಿದ್ದು, ಇದೀಗ ಬೆಲೆಯಿಲ್ಲದೆ ತತ್ತರಿಸು ತ್ತಿದ್ದಾರೆ. ಅತೀರಾ ಬೆಳೆಯ ಕಟಾವು ಕಾರ್ಯ ಮುಕ್ತಾಯವಾಗಿದ್ದು, ಭತ್ತ ರೈತರ ಕಣಜ ಗಳಲ್ಲೇ ಉಳಿದುಕೊಂಡಿದೆ. ಅತೀವೃಷ್ಠಿ ಯಿಂದ ತೋಟಗಾರಿಕಾ ಬೆಳೆಗಳು…
ಮಡಿಕೇರಿ ನೂತನ ಖಾಸಗಿ ಬಸ್ ನಿಲ್ದಾಣಕ್ಕೆ ತೆರಳಲು ರಾಜಾಸೀಟ್ನಿಂದ ರಸ್ತೆ ಅಗಲೀಕರಣಕ್ಕೆ ಶೀಘ್ರ ಚಾಲನೆ
December 20, 2018ಮಡಿಕೇರಿ ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಮಾಹಿತಿ ಮಡಿಕೇರಿ: ನೂತನ ಖಾಸಗಿ ಬಸ್ ನಿಲ್ದಾಣಕ್ಕೆ ಬಸ್ ಸಂಪರ್ಕ ಕಲ್ಪಿ ಸಲು ಸುಗಮ ಸಂಚಾರ ವ್ಯವಸ್ಥೆಗಾಗಿ ರಾಜಾಸೀಟು ಬಳಿಯಿಂದ ಬಸ್ ನಿಲ್ದಾಣ ದವರೆಗಿನ ರಸ್ತೆ ಅಗಲೀಕರಣ ಕಾರ್ಯಕ್ಕೆ ಶೀಘ್ರವೇ ಚಾಲನೆ ನೀಡಲು ಮಡಿಕೇರಿ ನಗರಸಭೆ ನಿರ್ಧರಿಸಿದೆ. ಈಗಾಗಲೇ ರಸ್ತೆ ಅಗಲೀಕರಣ ಸರ್ವೆ ಕಾರ್ಯ ಮುಗಿಸಿರುವ ಅಧಿಕಾರಿಗಳು ಕಾಮಗಾರಿಯನ್ನು 3-4 ದಿನಗಳಲ್ಲಿ ಆರಂ ಭಿಸಲು ನಿರ್ಧರಿಸಿದ್ದಾರೆ. ರಸ್ತೆಯ ಮಧ್ಯ ಭಾಗದಿಂದ 7.5 ಮೀಟರ್ನಂತೆ ಒಟ್ಟು 15 ಮೀ. ಅಗಲದ ರಸ್ತೆ…
ಜಿಪಂ ಸದಸ್ಯತ್ವ ರದ್ಧತಿಗೆ ತಾತ್ಕಾಲಿಕ ತಡೆಯಾಜ್ಞೆ
December 19, 2018ಮಡಿಕೇರಿ: ಜಿಪಂ ಸದಸ್ಯೆ ಕವಿತಾ ಪ್ರಭಾಕರ್ ಸದ ಸ್ಯತ್ವ ರದ್ದುಗೊಳಿಸಿ ಮಡಿ ಕೇರಿಯ ಹಿರಿಯ ಸಿವಿಲ್ ನ್ಯಾಯಾಲಯ ನೀಡಿದ್ದ ತೀರ್ಪಿಗೆ ಜಿಲ್ಲಾ ನ್ಯಾಯಾಲಯ ತಾತ್ಕಾ ಲಿಕ ತಡೆಯಾಜ್ಞೆ ನೀಡಿದೆ. ಕವಿತಾ ಪ್ರಭಾಕರ್ ವಿರುದ್ಧ ಚುನಾವಣೆಗೆ ಸ್ಪರ್ಧಿಸಿ ಪರಾಭವ ಗೊಂಡಿದ್ದ ತಣ್ಣಿಮಾನಿ ಮೂಲದ ಕಾಂಗ್ರೆಸ್ ಅಭ್ಯರ್ಥಿ ದೇವಂಗೋಡಿ ತಿಲಕ ಅವರು ಚುನಾವಣೆ ಸಂದರ್ಭ ಚುನಾವ ಣಾಧಿಕಾರಿಗೆ ದೂರು ನೀಡಿ, ಕವಿತಾ ಅವರ ಪತಿ ಜಿಪಂ ಕಾಮಗಾರಿ ಗುತ್ತಿಗೆದಾರರಾಗಿರು ವುದರಿಂದ ಕವಿತಾ ಅವರ ನಾಮಪತ್ರ ತಿರಸ್ಕರಿಸುವಂತೆ ಮನವಿ ಮಾಡಿದ್ದರು. ಆದರೆ…