ಮಡಿಕೇರಿ: ಮಳೆಹಾನಿ ಸಂತ್ರಸ್ತ ಪ್ರದೇಶಗಳಲ್ಲಿ ಸಮರ್ಪಕ ರೀತಿಯಲ್ಲಿ ಪರಿಹಾರ ಕಾರ್ಯಗಳು ನಡೆಯುತ್ತಿಲ್ಲ ಮತ್ತು ಸಂಕಷ್ಟದಲ್ಲಿರುವ ಸಂತ್ರಸ್ತರ ಗೋಳು ಕೇಳುವವರಿಲ್ಲ ಎನ್ನುವ ಆರೋಪ ಕೇಳಿ ಬಂದ ಬೆನ್ನಲ್ಲೇ ನೊಂದ ಗ್ರಾಮಸ್ಥರ ಮನವಿಗೆ ತಕ್ಷಣ ಸ್ಪಂದಿಸಿದ ಜಿಲ್ಲಾಧಿಕಾರಿ ಶ್ರೀವಿದ್ಯಾ ಅವರು, ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಅಸಹಾಯಕ ಸ್ಥಿತಿಯಲ್ಲಿರುವವರಿಗೆ ಅಭಯ ನೀಡಿದರು. ಪರಿಹಾರದ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿರುವ ನೈಜ ಸಂತ್ರಸ್ತರ ಹೆಸರುಗ ಳನ್ನು ಮತ್ತೆ ಸೇರ್ಪಡೆಗೊಳಿಸುವ ಕುರಿತು ಉಪವಿಭಾಗಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸರ್ವೆ ಕಾರ್ಯ ನಡೆಸಿ…
ನೆರೆ ಸಂತ್ರಸ್ತರ ನೆರವಿನಲ್ಲೂ ರಾಜಕೀಯ? ನೈಜ ಸಂತ್ರಸ್ತರಿಗೆ ನೆರವು ನೀಡಲು ಮನವಿ
December 15, 2018ಮಡಿಕೇರಿ: ಕೊಡಗು ಜಿಲ್ಲೆ ಯಲ್ಲಿ ಮಹಾಮಳೆಯಿಂದ ಹಾನಿ ಸಂಭ ವಿಸಿ ನಾಲ್ಕು ತಿಂಗಳುಗಳೇ ಕಳೆದಿದ್ದರೂ ಸಂತ್ರಸ್ತರಿಗೆ ಸರಿಯಾದ ರೀತಿಯಲ್ಲಿ ಪರಿ ಹಾರ ಕಾರ್ಯಗಳು ನಡೆಯುತ್ತಿಲ್ಲ ಎನ್ನುವ ಆರೋಪಗಳು ಕೇಳಿ ಬಂದಿದೆ. ಸರ್ಕಾರದ ಸೌಲಭ್ಯದಿಂದ ವಂಚಿತರಾಗಿ ರುವ ಅನೇಕ ಮಂದಿ ಸಂತ್ರಸ್ತರು ಕಚೇರಿ ಯಿಂದ ಕಚೇರಿಗೆ ಇಂದಿಗೂ ಅಲೆದಾಡು ತ್ತಲೇ ಇದ್ದಾರೆ. ಮಕ್ಕಂದೂರು ಗ್ರಾಪಂ ವ್ಯಾಪ್ತಿಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಹಾನಿಯಾಗಿದ್ದರೂ ಈ ಭಾಗದ ಗ್ರಾಮ ಸ್ಥರ ಸಂಕಷ್ಟಕ್ಕೆ ಸೂಕ್ತ ಸ್ಪಂದನೆ ದೊರೆಯು ತ್ತಿಲ್ಲ ಎನ್ನುವ ಅಸಮಾಧಾನವಿದೆ. ಮೊದಲ ಹಂತದಲ್ಲಿ…
ಕೊಡಗಿನ ವಿನಾಶಕ್ಕೆ ನಾಂದಿ ಹಾಡುವ ರೈಲು, ಹೆದ್ದಾರಿ ಯೋಜನೆ ವಿರೋಧಿಸಿ ಮಡಿಕೇರಿಯಲ್ಲಿ ಭಾರೀ ಪ್ರತಿಭಟನೆ
December 9, 2018ಮಡಿಕೇರಿ: ಕೊಡಗಿನ ವಿನಾಶಕ್ಕೆ ನಾಂದಿಯಾಗಲಿರುವ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಮತ್ತು ರೈಲು ಮಾರ್ಗಗಳನ್ನು ವಿರೋಧಿಸಿ ‘ಕೊಡಗು ಮಾರಕ ಯೋಜನೆ ವಿರೋಧಿ ಹೋರಾಟ ವೇದಿಕೆ’ ಮಡಿಕೇರಿಯಲ್ಲಿ ಇಂದು ಬೃಹತ್ ರ್ಯಾಲಿ ಹಾಗೂ ಜನಜಾಗೃತಿ ಸಭೆ ಏರ್ಪಡಿಸಿತ್ತು. ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಿಂದ ಗಾಂಧಿ ಮೈದಾನ ದವರೆಗೆ ರ್ಯಾಲಿ ನಡೆಯಿತು. ಇದರಲ್ಲಿ ‘ಕೊಡಗನ್ನು ರಕ್ಷಿಸಿ, ಕಾವೇರಿ ನದಿಯನ್ನು ಉಳಿಸಿ’ ಘೋಷಣೆಗಳನ್ನು ಕೂಗಲಾಯಿತು. ನಂತರ ಗಾಂಧಿ ಮೈದಾನದಲ್ಲಿ ಜನಜಾಗೃತಿ ಸಭೆ ನಡೆಯಿತು. ರ್ಯಾಲಿ ಮತ್ತು ಸಭೆಯಲ್ಲಿ ಖ್ಯಾತ ಪರಿಸರವಾದಿ ಹಾಗೂ ಚಿತ್ರ…
ಕೆಸರು ಹೊಂಡದಲ್ಲಿ ಬಿದ್ದು ಕಾರ್ಮಿಕ ಮಹಿಳೆ ಸಾವು
December 6, 2018ಮಡಿಕೇರಿ: ಕೂಲಿ ಕಾರ್ಮಿಕ ಮಹಿಳೆಯೋರ್ವರು ಕೆಸರು ಹೊಂಡದಲ್ಲಿ ಬಿದ್ದು ಮೃತಪಟ್ಟ ಘಟನೆ ನಗರದ ಮೀನು ಮಾರುಕಟ್ಟೆಯ ಹಿಂಭಾಗ ನಡೆದಿದೆ. ಮೂಲತಃ ಕುಂಬೂರು ನಿವಾಸಿ ಶಾಂತ(47) ಎಂಬಾಕೆಯೇ ಮೃತಪಟ್ಟ ದುರ್ದೈವಿ. ಮೃತ ಶಾಂತ ನಿನ್ನೆ ರಾತ್ರಿ ಕೂಲಿ ಕೆಲಸ ಮುಗಿಸಿ ರಾತ್ರಿ 9.30 ಗಂಟೆಗೆ ಮಾರ್ಕೆಟ್ ಹಿಂಭಾಗದ ಮೀನು ಮಾರ್ಕೆಟ್ನ ಸಮೀಪದ ಶಿಥಿಲಾವಸ್ಥೆಯ ಕಟ್ಟಡದ ಪಕ್ಕದಲ್ಲಿ ಮಲಗಿದ್ದರು ಎನ್ನಲಾಗಿದೆ. ಬುಧವಾರ ಬೆಳಗಿನ 6 ಗಂಟೆಗೆ ಸಮಯದಲ್ಲಿ ಪಕ್ಕದ ಲ್ಲಿದ್ದ ಕೆಸರಿನ ಹೊಂಡದಲ್ಲಿ ಬಿದ್ದು ಹೊರಳಾಡುತ್ತಿರುವುದನ್ನು ಇತರ ಕೂಲಿ ಕಾರ್ಮಿಕರು…
ಡಿ.8ರಂದು ಮಡಿಕೇರಿಯಲ್ಲಿ ಬೃಹತ್ ರ್ಯಾಲಿ
December 5, 2018ಮೈಸೂರು: ಕೊಡಗು ಜಿಲ್ಲೆಯಲ್ಲಿ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ಚತುಷ್ಪಥ ಹೆದ್ದಾರಿ ನಿರ್ಮಾಣ ಸೇರಿದಂತೆ 10 ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತದ ಯೋಜನೆಗಳು ಜಿಲ್ಲೆಯ ವಿನಾಶಕ್ಕೆ ಕಾರಣವಾಗಲಿವೆ ಎಂದು ಆತಂಕ ವ್ಯಕ್ತಪಡಿಸಿರುವ ಕೊಡಗು ಮಾರಕ ಯೋಜನೆ ವಿರೋಧಿ ವೇದಿಕೆ, ಈ ಸಂಬಂಧ ಡಿ.8 ರಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲು ನಿರ್ಧರಿಸಿದೆ. ಕೊಡಗಿನಲ್ಲಿ ಎರಡು ರೈಲ್ವೆ ಮಾರ್ಗ ಹಾಗೂ ಮೈಸೂರು-ಕುಶಾಲನಗರ-ಮಡಿಕೇರಿ ಮಾರ್ಗದಲ್ಲಿ ಚತುಷ್ಪಥ ರಸ್ತೆ ನಿರ್ಮಿಸುವುದು ಸೇರಿದಂತೆ ಒಟ್ಟು ನಾಲ್ಕು ಬಹುಪಥ ಹೆದ್ದಾರಿಗಳನ್ನು ನಿರ್ಮಿಸಲು ಸರ್ಕಾರ ಯೋಜನೆ…
ಭಾಗಮಂಡಲ ಜಿಪಂ ಕ್ಷೇತ್ರದ ಬಿಜೆಪಿ ಸದಸ್ಯ ಆಯ್ಕೆ ಅಸಿಂಧು
December 5, 2018ಪರಾಜಿತ ದೇವಂಗೋಡಿ ತಿಲಕ ಸುಬ್ರಾಯಗೆ ಗೆಲುವಿನ ಹೂರಣ ಮಡಿಕೇರಿ: ಕೊಡಗು ಜಿಲ್ಲಾ ಪಂಚಾಯಿ ತಿಯ ಭಾಗಮಂಡಲದ ಕ್ಷೇತ್ರದ ಚುನಾಯಿತ ಪ್ರತಿನಿಧಿ ಬಿಜೆಪಿಯ ಕವಿತಾ ಪ್ರಭಾಕರ್ ಅವರ ಗೆಲುವನ್ನು ಅಸಿಂಧು ಎಂದು ಘೋಷಿಸಿ ಮಡಿಕೇರಿ ಹಿರಿಯ ಸಿವಿಲ್ ನ್ಯಾಯಾಲಯ ಆದೇಶ ಹೊರಡಿಸಿದೆ. ಮಾತ್ರವಲ್ಲದೆ, ಕವಿತಾ ಪ್ರಭಾಕರ್ ಅವರ ಎದುರಾಳಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದ ದೇವಂಗೋಡಿ ತಿಲಕ ಸುಬ್ರಾಯ ಅವರನ್ನು ವಿಜೇತ ಅಭ್ಯರ್ಥಿಯಾಗಿ ಘೋಷಿಸಿ ನ್ಯಾಯಾಲಯ ಅಪರೂಪದ ತೀರ್ಪು ನೀಡಿದೆ. ಪ್ರಕರಣ ಹಿನ್ನಲೆ: ಭಾಗಮಂಡಲ ಜಿಲ್ಲಾ ಪಂಚಾ ಯಿತಿನ ಮಹಿಳಾ ಮೀಸಲಾತಿ…
ಡಿ.7 ರಂದು ಕೊಡಗು ಜಿಲ್ಲೆಗೆ ಮುಖ್ಯಮಂತ್ರಿ ಭೇಟಿ
December 5, 2018ಮಡಿಕೇರಿ: ಪ್ರಕೃತಿ ವಿಕೋಪದಿಂದ ಸಂತ್ರಸ್ತರಾದ ನಿರಾಶ್ರಿತ ಕುಟುಂ ಬದವರಿಗೆ ಮನೆ ನಿರ್ಮಿಸುವ ಕಾಮಗಾರಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಡಿಸೆಂಬರ್ 7 ರಂದು ಮಾದಾಪುರದಲ್ಲಿ ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾಹಿತಿ ನೀಡಿದ ಅವರು, ಡಿ.7 ರಂದು ಮಧ್ಯಾಹ್ನ 12 ಗಂಟೆಗೆ ಮಾದಾಪುರದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮನೆ ನಿರ್ಮಾಣಕ್ಕೆ ಚಾಲನೆ ನೀಡಲಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ…
ಕೇಂದ್ರದ ಯೋಜನೆಗಳ ಜಾರಿಯಲ್ಲಿ ಸಿಇಓ, ಇಓಗಳಿಗೆ ಹೆಚ್ಚಿನ ಜವಾಬ್ದಾರಿ
December 1, 2018ಮಡಿಕೇರಿ: ಕೇಂದ್ರ ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ಜಾರಿ ಗೊಳಿಸುವ ಮಹತ್ತರ ಜವಾಬ್ದಾರಿ ಜಿಪಂ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಮತ್ತು ತಾಪಂಗಳ ಕಾರ್ಯನಿರ್ವಹಣಾಧಿಕಾರಿಗಳ ಮೇಲಿದ್ದು, ಯೋಜನೆಗಳನ್ನು ಇಚ್ಛಾ ಶಕ್ತಿ ಬಳಸಿ ಅನುಷ್ಠಾನಕ್ಕೆ ತರಬೇಕೆಂದು ಸಂಸದ ಪ್ರತಾಪ್ ಸಿಂಹ ಸೂಚನೆ ನೀಡಿದರು. ನಗರದ ಕೋಟೆ ಹಳೆ ವಿಧಾನ ಸಭಾಂ ಗಣದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಸಿದ ಸಂಸದ ಪ್ರತಾಪ್ ಸಿಂಹ, ಸರಕಾರದ ವಿವಿಧ ಯೋಜ ನೆಗಳ ಅನುಷ್ಠಾನದ ಕುರಿತು ಮಾಹಿತಿ ಪಡೆದರು. 2022ರ ಒಳಗೆ ವಸತಿ…
ಪ್ರಕೃತಿ ವಿಕೋಪ ಪರಿಹಾರ, ಪುನರ್ವಸತಿ ಬಗ್ಗೆ ಮಾಹಿತಿ ಪಡೆದ ಲೋಕಾಯುಕ್ತ ಎಡಿಜಿಪಿ
November 30, 2018ಮಡಿಕೇರಿ: ಪ್ರಕೃತಿ ವಿಕೋಪ ಪರಿ ಹಾರ ಹಾಗೂ ಪುನರ್ವಸತಿ ಸಂಬಂಧ ಇದುವರೆಗೆ ಕೈಗೊಳ್ಳಲಾಗಿರುವ ಕಾರ್ಯ ಗಳ ಬಗ್ಗೆ ಲೋಕಾಯುಕ್ತ ಎಡಿಜಿಪಿ ಎ.ಎನ್.ಎಸ್.ಮೂರ್ತಿ ಜಿಲ್ಲಾಡಳಿತ ದಿಂದ ಮಾಹಿತಿ ಪಡೆದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಗುರುವಾರ ಮಾಹಿತಿ ಪಡೆದ ಲೋಕಾಯುಕ್ತ ಎಡಿಜಿಪಿ ಪ್ರಕೃತಿ ವಿಕೋಪ ಸಂಬಂಧಿಸಿದಂತೆ ಜಿಲ್ಲಾಡಳಿತ ಕೈಗೊಂಡಿ ರುವ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪ ಡಿಸಿದರು. ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಮಾಹಿತಿ ನೀಡಿ ಕೊಡಗು ಜಿಲ್ಲೆಯ 34 ಗ್ರಾಪಂ ವ್ಯಾಪ್ತಿಯಲ್ಲಿ ಮಹಾಮಳೆಯಿಂದ ಭೂಕುಸಿತ ಹಾಗೂ ಪ್ರವಾಹದಿಂದಾಗಿ ಅಪಾರ…
ಮಡಿಕೇರಿ ಜ್ಯುವೆಲರಿ ಅಂಗಡಿಯಲ್ಲಿ ಗೋಡೆ ಕೊರೆದು ಕಳ್ಳತನ ಕಳ್ಳರ ಪಾಲಿಗೆ ಸಿಕ್ಕಿದ್ದು 3 ಬೆಳ್ಳಿ ಉಂಗುರ
November 28, 2018ಮಡಿಕೇರಿ: ಚಿನ್ನಾಭರಣ ಮಳಿ ಗೆಯ ಗೋಡೆ ಕೊರೆದು ಸಾವಿರ ರೂ. ಮುಖ ಬೆಲೆಯ 3 ಬೆಳ್ಳಿ ಉಂಗುರಗಳನ್ನು ಕಳವು ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ಮಹದೇವಪೇಟೆಯ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಇತರ ಜುವೆಲರಿ ಮಳಿಗೆಗಳ ವರ್ತಕರಲ್ಲಿ ಆತಂಕ ಮೂಡಿಸಿದೆ. ಘಟನೆ ವಿವರ: ಮೂಲತಃ ಕೇರಳ ಇರಿಟ್ಟಿ ನಿವಾಸಿಯಾದ ಶಾಹೀರ್ ಎಂಬುವರು ಮಹ ದೇವಪೇಟೆಯಲ್ಲಿ ಫಾತಿಮಾ ಹೆಸರಿನ ಜುವೆಲರಿ ಮಳಿಗೆ ಆರಂಭಿಸಿದ್ದರು. ಸೋಮ ವಾರ ರಾತ್ರಿ ಎಂದಿನಂತೆ ಅಂಗಡಿ ಬಾಗಿಲು ಮುಚ್ಚಿ ಶಾಹೀರ್ ಮನೆಗೆ ತೆರಳಿದ್ದರು….