ಮಡಿಕೇರಿ: ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ 2017ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ನಗರದ ಪ್ರೆಸ್ಕ್ಲಬ್ ಸಭಾಂಗಣದಲ್ಲಿ ಭಾನುವಾರ ನಡೆಯಿತು. ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಸಮಾಜ ಸೇವಕ ಹಾಗೂ ಜಿಲ್ಲಾ ಜೆಡಿಎಸ್ ಮಾಜಿ ಅಧ್ಯಕ್ಷ ಸಂಕೇತ್ ಪೂವಯ್ಯ ಮಾತನಾಡಿ, ರಾಜ್ಯದ ಬೇರೆ ಜಿಲ್ಲೆಗೆ ಹೋಲಿಕೆ ಮಾಡಿದರೆ ಕೊಡಗು ಜಿಲ್ಲೆಯ ಪತ್ರಕರ್ತರು ಪ್ರಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಜ್ಯ ಪತ್ರಿಕೋದ್ಯಮ ದಲ್ಲಿ ತಮ್ಮದೇ ಆದ ಛಾಪನ್ನು ಕೊಡಗಿನ ಪತ್ರಕರ್ತರು ಮೂಡಿಸಿದ್ದಾರೆ….