ಮೈಸೂರು: 71ನೇ ಗಣರಾಜ್ಯೋತ್ಸವದ ಅಂಗವಾಗಿ ಮೈಸೂರಿನ ಜಯ ಲಕ್ಷ್ಮೀಪುರಂನ ಎಸ್.ಬಿ.ಆರ್.ಆರ್. ಮಹಾಜನ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗ ಮತ್ತು ಐಕ್ಯೂಎಸಿ ಘಟಕದ ಸಹಯೋಗದಲ್ಲಿ ಅಪರೂಪದ ನೋಟು ಮತ್ತು ನಾಣ್ಯಗಳ ಪ್ರದರ್ಶನ ಆಯೋಜಿಸಲಾಗಿದೆ. ಕೊಟಕ್ ಮಹೀಂದ್ರ ಬ್ಯಾಂಕ್ನ ನಿವೃತ್ತ ಹಿರಿಯ ವ್ಯವಸ್ಥಾಪಕ ಎಂ.ಎನ್. ಮುರಳೀಕೃಷ್ಣ ಅವರು ಈ ಪ್ರದರ್ಶನವನ್ನು ನಡೆಸಿಕೊಡುತ್ತಿದ್ದಾರೆ. ಕಾಲೇಜಿನ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಸಭಾಂಗಣದಲ್ಲಿ ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಉಚಿತ ಪ್ರವೇಶದೊಂದಿಗೆ ಆಯೋ ಜಿಸಲಾಗಿದೆ. ರಂಗಾಯಣ ನಿರ್ದೇಶಕ ಅಡ್ಡಂಡ ಸಿ….