ಮೈಸೂರು: ಮೈಸೂರಿನ ಮಹಾರಾಣಿ ವಿಜ್ಞಾನ-ಕಲಾ ಕಾಲೇಜಿನಲ್ಲಿ ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಅವರು ಮೈಸೂರು ಮಹಾನಗರ ಪಾಲಿಕೆ, ಕಾಲೇಜಿನ ಅಧ್ಯಾಪಕ ವೃಂದ, ವಿದ್ಯಾರ್ಥಿಗಳೊಂದಿಗೆ ಶ್ರಮದಾನ ಮಾಡುವುದರ ಮೂಲಕ ಮಹಾರಾಣಿ ಕಾಲೇಜಿನ ಕಸ ಮುಕ್ತಗೊಳಿಸುವ ಅಭಿಯಾನಕ್ಕೆ ನಾಂದಿ ಹಾಡಿದರು. ಶಾಸಕ ಎಲ್.ನಾಗೇಂದ್ರ, ಮೇಯರ್ ಭಾಗ್ಯವತಿ, ನಗರ ಪಾಲಿಕೆ ಆಯುಕ್ತ ಜಗದೀಶ್, ಆರೋಗ್ಯಾಧಿಕಾರಿ ನಾಗರಾಜ್, ಕಾಲೇಜಿನ ಜಂಟಿ ನಿರ್ದೇಶಕ ಉದಯಶಂಕರ್ ಹಾಗೂ ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲಿ ಕಸ ಗುಡಿಸಿ, ಅಲ್ಲಲ್ಲಿ ಬಿದ್ದಿದ್ದ ಕಸ-ಕಡ್ಡಿಗಳನ್ನು ತೆಗೆಯುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು….