ಮೈಸೂರು: ಮನುಷ್ಯನಿಗೆ ವಿದ್ಯೆ, ಅಧಿಕಾರ ಹೆಚ್ಚಾಗುತ್ತಿದ್ದು, ಆರೋಗ್ಯ, ಶಕ್ತಿಯನ್ನು ಕಳೆದುಕೊಳ್ಳುತ್ತಿದ್ದಾನೆ ಎಂದು ಮೈಸೂರು ವಿವಿ ಪ್ರಾಧ್ಯಾಪಕ ಪ್ರೊ.ಬಿ.ಪಿ.ಮಹೇಶ್ಚಂದ್ರ ಗುರು ಅಭಿಪ್ರಾಯಪಟ್ಟರು. ಜೆಎಲ್ಬಿ ರಸ್ತೆಯ ನಾದಬ್ರಹ್ಮ ಸಂಗೀತ ಸಭಾಂಗಣದಲ್ಲಿ ತನುಮನ ಸಂಸ್ಥೆ ಆಯೋಜಿಸಿದ್ದ `ಜಗ ನಡೆಯಲಿ ಬುದ್ಧನ ಕಡೆ’ ಸಂಗೀತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲ ಧರ್ಮಗಳು ನೀವೂ ಒಳ್ಳೆಯವರಾಗಿ ಮತ್ತೊಬ್ಬರಿಗೂ ಒಳ್ಳೆಯದನ್ನೇ ಮಾಡಿ ಎಂಬ ಸಂದೇಶವನ್ನು ಸಾರುತ್ತವೆ. ಆದರೆ ಮನುಷ್ಯನಿಗೆ ಅಹಂಕಾರ ಹೆಚ್ಚಾಗಿದೆ. ನಮಗೆ ಯಾರು ಶತ್ರುಗಳಿಲ್ಲ ಬದಲಾಗಿ ನಮಗೆ ನಾವೇ ಶತ್ರುಗಳಾಗಿದ್ದೇವೆ ಎಂದರು. ಬುದ್ಧ,…