ಮೈಸೂರು: ರೆಬೆಲ್ ಸ್ಟಾರ್ ಅಂಬರೀಶ್ ಅವರ ಮೂಲ ಮಂಡ್ಯ ಆದರೂ ಅವರು ಹುಟ್ಟಿ, ಬೆಳೆದಿದ್ದೆಲ್ಲವೂ ಮೈಸೂರಿನಲ್ಲಿಯೇ. ಆದ್ದರಿಂದ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಅಂಬರೀಶ್ ಹೆಸರು ನಾಮಕರಣ ಮಾಡುವ ಮೂಲಕ ಅವರನ್ನು ಗೌರವಿಸುವಂತಾಗಬೇಕು ಎಂದು ಸಾಹಿತಿ ಬನ್ನೂರು ರಾಜು ಸಲಹೆ ನೀಡಿದ್ದಾರೆ.ಮೈಸೂರಿನ ಶಿವರಾಂಪೇಟೆ ವಿನೋಬ ರಸ್ತೆಯಲ್ಲಿ ಅಂಬರೀಶ್ ಅಭಿಮಾನಿ ಬಳಗ ಶುಕ್ರವಾರ ಆಯೋಜಿಸಿದ್ದ ಅಂಬರೀಶ್ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಂಬರೀಶ್ ಮಂಡ್ಯದ ಗಂಡು ನಿಜ. ಆದರೆ ಅವರು ಹುಟ್ಟಿದ್ದು ಮೈಸೂರಿನ ಜಯ ನಗರದಲ್ಲಿರುವ ಅವರ ತಾತ…
ಮೈಸೂರು
ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಚಿರತೆ ಪ್ರತ್ಯಕ್ಷ
November 12, 2018ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ಆವರಣದಲ್ಲೇ ಭಾನುವಾರ ರಾತ್ರಿ ಚಿರತೆ ಪ್ರತ್ಯಕ್ಷವಾಗಿದ್ದು, ಸಾರ್ವಜನಿಕರ ಆತಂಕ ಹೆಚ್ಚಿಸಿದೆ. ಮಂಡಕಳ್ಳಿ ಸಮೀಪದ ಶ್ರೀನಗರದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಸಂಚರಿಸಿ, ನಿವಾಸಿಗಳಲ್ಲಿ ಆತಂಕ ಹುಟ್ಟಿಸಿ ರುವ ಚಿರತೆಯೇ ಇಂದು ವಿಮಾನ ನಿಲ್ದಾಣದ ಆವರಣದಲ್ಲಿ ಕಾಣಿಸಿಕೊಂಡಿದೆ ಎನ್ನಲಾಗುತ್ತಿದೆ. ವಿಮಾನ ನಿಲ್ದಾಣದ ಆವ ರಣದಲ್ಲಿ ಕಾಣಿಸಿಕೊಂಡ ಚಿರತೆಯನ್ನು ಮೈಸೂರಿನ ವಿಜಯನಗರದ ನಿವಾಸಿ ಧನಂಜಯ, ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ಚೆನ್ನೈಗೆ ಪ್ರಯಾಣ ಬೆಳೆಸಿದ ನಮ್ಮ ತಾಯಿಯನ್ನು ವಿಮಾನ ನಿಲ್ದಾಣಕ್ಕೆ ಡ್ರಾಪ್ ಮಾಡಿ ವಾಪಸ್ಸಾಗುತ್ತಿದ್ದಾಗ…