ಮಂಡ್ಯ,ಮಾ.28(ನಾಗಯ್ಯ); ಕೊರೊನಾ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕಾದ ಪೌರಾಡಳಿತ ಸಚಿವ ಕೆ.ಸಿ.ನಾರಾಯಣಗೌಡರೇ , ಮಾಸ್ಕ್ ಧರಿಸದೆ ಅಧಿಕಾರಿಗಳೊಂದಿಗೆ ಕೊರೊನಾ ವೈರಸ್ ತಡೆ ಕುರಿತು ಜಾಗೃತಿ ಸಭೆ ನಡೆಸಿದ ಘಟನೆ ಮಂಡ್ಯದಲ್ಲಿಂದು ನಡೆಯಿತು. ಮಂಡ್ಯನಗರದ ಪ್ರವಾಸಿ ಮಂದಿರದಲ್ಲಿಂದು ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮತ್ತುಸುದ್ದಿಗೋಷ್ಠಿಯಲ್ಲಿಯೂ ಕೂಡ ಮಾಸ್ಕ್ ಧರಿಸದೆ ಸಚಿವ ಕೆ,ಸಿ.ನಾರಾಯಣಗೌಡ ಮಾತನಾಡಿದರು. ದಿನೇ ದಿನೇ ಹೆಚ್ಚುತ್ತಿರುವ ಕೊರೊನಾ ವೈರಸ್ ತಡೆಗೆ ಎಲ್ಲರೂ ಮಾಸ್ಕ್ ಧರಿಸುವಂತೆ ಸರ್ಕಾರವೇ ಆದೇಶ ಮಾಡುತ್ತಿದೆ,ಜನಪ್ರತಿನಿಧಿಗಳೂ ಕೂಡ ಉದ್ದುದ್ದ ಭಾಷಣ ಮಾಡುತ್ತಿದ್ದಾರೆ,ಆದರೆ ಇಂದಿನ ಸಭೆಯಲ್ಲಿ ಸಚಿವ…