ಮಂಡ್ಯ: ಮತದಾನಕ್ಕೆ ಒಂದೆರಡು ದಿನ ಬಾಕಿ ಇರುವಾಗ ಸುಮಲತಾ ಅವರೇ ಪ್ರಚಾರ ಸಭೆಯಲ್ಲಿ ಕಲ್ಲೆಸೆದುಕೊಂಡು, ತಲೆಗೆ ಪೆಟ್ಟು ಮಾಡಿಕೊಂಡು ನಾಟಕ ಮಾಡಲು ಯೋಜನೆ ರೂಪಿಸಿದ್ದಾರೆ. ಆದರೆ ಪಕ್ಷೇತರ ಅಭ್ಯರ್ಥಿ ರೀತಿ ತಾವು ಯಾವುದೇ ಕುತಂತ್ರ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಇಂದು ಮದ್ದೂರು ಬಳಿಯ ಗೆಜ್ಜಲಗೆರೆ ಬಳಿ ರೋಡ್ ಶೋ ವೇಳೆ ಮಾತನಾಡಿದ ಅವರು, ಚುನಾವಣೆ ಗೆಲ್ಲಲು ಸುಮಲತಾ ಹೊಸ ಪ್ಲಾನ್ ಮಾಡಿಕೊಂಡಿದ್ದಾರೆ. ಪ್ರಚಾರ ಸಭೆಯಲ್ಲಿ ಅವರೇ ಕಲ್ಲೆಸೆದುಕೊಂಡು ಜೆಡಿಎಸ್ ವಿರುದ್ಧ…
ರೈತರ ಹೆಸರಲ್ಲಿ ರಾಜಕೀಯ ಮಾಡಬೇಡಿ: ಸುಮಲತಾ ಅಂಬರೀಶ್
April 12, 2019ಮಂಡ್ಯ: ರೈತರ ಆತ್ಮಹತ್ಯೆ ತಡೆಯುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿಲ್ಲ ಏಕೆ? 50 ವರ್ಷಗಳಿಂದ ಅಧಿಕಾರದಲ್ಲಿರುವ ನಿಮಗೆ ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಲಿಲ್ಲವೇ? ಆತ್ಮಹತ್ಯೆ ಮಾಡಿಕೊಂಡ ರೈತರ ಮನೆಗೆ ಹೋಗಿ ಸಾಂತ್ವನ ಹೇಳಿದರೆ ನಿಮ್ಮ ಜವಾಬ್ದಾರಿ ಮುಗಿಯಿತೆ? ಎಂದು ಸಿಎಂ ಕುಮಾರಸ್ವಾಮಿ ಅವರಿಗೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಖಾರವಾಗಿ ಪ್ರಶ್ನಿಸಿದ್ದಾರೆ. ಇಂದು ಶ್ರೀರಂಗಪಟ್ಟಣದ ನಿಮಿಷಾಂಬ ದೇವಿ ದರ್ಶನ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ಆತ್ಮಹತ್ಯೆ ಮಾಡಿಕೊಂಡ ಬಳಿಕ ಅವರ ಮನೆಗಳಿಗೆ ತೆರಳಿ ಸಾಂತ್ವನ ಹೇಳಿದರೆ…
ಶ್ರೀರಂಗಪಟ್ಟಣದ ಹಲವೆಡೆ ಪುತ್ರ ನಿಖಿಲ್ ಪರ ಸಿಎಂ ಬಿರುಸಿನ ಪ್ರಚಾರ
April 11, 2019ಶ್ರೀರಂಗಪಟ್ಟಣ: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ, ತಮ್ಮ ಪುತ್ರ ನಿಖಿಲ್ ಕುಮಾರ ಸ್ವಾಮಿ ಪರ ಶ್ರೀರಂಗಪಟ್ಟಣ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ರೋಡ್ ಶೋ ಮೂಲಕ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಬಿರುಸಿನ ಪ್ರಚಾರ ನಡೆಸಿದರು. ಕೆಆರ್ಎಸ್ನಲ್ಲಿ ಪ್ರಚಾರ ಆರಂಭಿಸಿದ ಅವರು ಮಾತನಾಡಿ, ಮೈಸೂರು ಅರಸರು ಕೆಆರ್ಎಸ್ ಜಲಾಶಯ ಕಟ್ಟಿದ್ದಾರೆ. ಅವರ ಕೊಡುಗೆ ಬಗ್ಗೆ ಅಪಾರ ಗೌರವ ಇಟ್ಟು ಕೊಂಡಿದ್ದೇನೆ. ಈ ಭಾಗದ ಜನರು ಹಕ್ಕು ಪತ್ರಕ್ಕಾಗಿ ಕಳೆದ 40 ವರ್ಷಗಳಿಂದ ಕಾಯುತ್ತಿದ್ದೀರಿ. ಚುನಾವಣೆ ಮುಗಿದ ನಂತರ ಖಂಡಿತವಾಗಿ ನಿಮಗೆ…
ಪಾಂಡವಪುರದ ಹಲವೆಡೆ ಸುಮಲತಾ ಮತ ಯಾಚನೆ
April 11, 2019ಪಾಂಡವಪುರ: ಪಾಂಡವಪುರ ತಾಲೂಕಿನ ಹಲವು ಗ್ರಾಮಗಳಲ್ಲಿ ಬುಧ ವಾರ ರೈತ ಸಂಘದ ಮುಖಂಡ ದರ್ಶನ್ ಪುಟ್ಟಣ್ಣಯ್ಯನವರೊಂದಿಗೆ ರೋಡ್ ಶೋ ಮೂಲಕ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಬಿರುಸಿನ ಪ್ರಚಾರ ನಡೆಸಿದರು. ಎಣ್ಣೆಹೊಳೆಕೊಪ್ಪಲು ಗ್ರಾಮದಿಂದ ಪ್ರಚಾರ ಆರಂಭಿಸಿದ ಸುಮಲತಾ, ಚಲುವರಸನ ಕೊಪ್ಪಲು, ಹರವು, ಶ್ಯಾದನಹಳ್ಳಿ, ಜಾಗಟೆ ಮಲ್ಲೇನಹಳ್ಳಿ, ಹಾಗನಹಳ್ಳಿ, ಅಲ್ಪಳಿ, ಬೇಬಿ, ಶಿಂಡ ಬೋಗನಹಳ್ಳಿ, ಹೊನಗಾನಹಳ್ಳಿ, ಚಿನ ಕುರಳಿ, ಕಾಳೇಗೌಡನಕೊಪ್ಪಲು, ಗುಮ್ಮನ ಹಳ್ಳಿ, ರಾಗಿಮುದ್ದನಹಳ್ಳಿ, ಡಿಂಕ, ಬನ್ನಂಗಾಡಿ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಈ…
ನೀತಿ ಸಂಹಿತೆ ಉಲ್ಲಂಘನೆ: ನಿಖಿಲ್, ಸುಮಲತಾ ವಿರುದ್ಧ ಎಫ್ಐಆರ್ ದಾಖಲು
April 11, 2019ಮಂಡ್ಯ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ಆರೋಪದ ಮೇಲೆ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ ಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ಪ್ರತ್ಯೇಕ ಪ್ರಕರಣದಲ್ಲಿ ಎಫ್ಐಆರ್ ದಾಖ ಲಾಗಿದೆ. ನಾಗಮಂಗಲ ತಾಲೂಕಿನ ಬೆಳ್ಳೂರು ಬಳಿ ತೆಂಗಿನತೋಟದಲ್ಲಿ ಕಾರ್ಯಕರ್ತರಿಗೆ ಊಟ ಹಂಚಿದ ಆರೋಪದ ಮೇಲೆ,ಅಭ್ಯರ್ಥಿ ನಿಖಿಲ್ ಮತ್ತು ಬೆಂಬಲಿಗ ಕನಘಟ್ಟ ಶ್ರೀನಿವಾಸ್ ವಿರುದ್ದ ಬೆಳ್ಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,ಹಾಗೆಯೇ ನಾಗಮಂಗಲ ವ್ಯಾಪ್ತಿಯಲ್ಲಿ ಅನುಮತಿ ಪಡೆದದ್ದಕ್ಕಿಂತ ಹೆಚ್ಚು ಸಮಯ ಪ್ರಚಾರ ನಡೆಸಿದ ಆರೋಪದ ಮೇಲೆ ಪಕ್ಷೇತರ ಅಭ್ಯರ್ಥಿ ಸುಮಲತಾ…
ಕೆಆರ್ಎಸ್ನಲ್ಲಿ ಸಿಎಂ ಸೀಕ್ರೆಟ್ ಸಭೆ
April 9, 2019ಶ್ರೀರಂಗಪಟ್ಟಣ: ರಾಜ್ಯದ ಗಮನವನ್ನು ಸೆಳೆದಿ ರುವ ಹೈ ವೋಲ್ಟೇಜ್ ಕ್ಷೇತ್ರವಾದ ಮಂಡ್ಯದಲ್ಲಿ ಅಂಬರೀಶ್ ಪತ್ನಿ ಸುಮಲತಾ ಆರ್ಭಟದ ಮುಂದೆ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ರಣತಂತ್ರ ರೂಪಿಸಿದ್ದಾರೆ. ತಾಲೂಕಿನ ಕೆಆರ್ಎಸ್ ಬೃಂದಾವನದಲ್ಲಿರುವ ಖಾಸಗಿ ಹೋಟೆಲ್ನಲ್ಲಿ ಭಾನುವಾರ ರಾತ್ರಿ ಮುಖ್ಯಮಂತ್ರಿಗಳು ಮಂಡ್ಯ ಕ್ಷೇತ್ರದ ಸಚಿವರು, ಶಾಸಕರು ಹಾಗೂ ಮುಖಂಡರ ಸಭೆ ನಡೆಸಿದರು. ಈ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಭಾರೀ ಅಂತರದಲ್ಲಿ ಮಣಿಸಿದ್ದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ಕೂಡ…
ಚುನಾವಣೆ ವೆಚ್ಚಕ್ಕೆ ಜಿ.ಮಾದೇಗೌಡರಿಂದ ಹಣದ ಬೇಡಿಕೆ
April 8, 2019ಮಂಡ್ಯ:ಇಡೀ ರಾಜ್ಯದಲ್ಲೇ ಹೈವೋಲ್ಟೇಜ್ ಕ್ಷೇತ್ರವೆನಿಸಿ ಕೊಂಡಿರುವ ಮಂಡ್ಯದಲ್ಲಿ ಹಣದ ಹೊಳೆ ಹರಿಯುತ್ತಿದೆ ಎಂಬ ಆರೋಪಗಳ ನಡುವೆಯೇ ಹಿರಿಯ ಕಾಂಗ್ರೆಸ್ ಮುತ್ಸದ್ಧಿ, ಮಾಜಿ ಸಂಸದ ಜಿ.ಮಾದೇಗೌಡರು ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟ ರಾಜು ಬಳಿ ಹಣದ ಬೇಡಿಕೆಯಿಟ್ಟ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಕ್ಷೇತ್ರದಲ್ಲಿ ಸಿಎಂ ಕುಮಾರ ಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಅಂಬರೀಶ್ ಪತ್ನಿ ಸುಮಲತಾ ನಡುವೆ ಜಿದ್ದಾಜಿದ್ದಿ ಸ್ಪರ್ಧೆ ಏರ್ಪಟ್ಟಿದ್ದು, ಈ ಹಿನ್ನೆಲೆಯಲ್ಲಿ…
ಮಸೀದಿಯಲ್ಲಿ ನಿಖಿಲ್ ಪ್ರಾರ್ಥನೆ
April 6, 2019ಮಂಡ್ಯ: ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರಿಂದು ಮಂಡ್ಯ ಗಾಂಧಿನಗರದ ಮಸೀದಿಗೆ ಭೇಟಿ ನೀಡಿ ಮತಯಾಚನೆ ಮಾಡಿದರು. ಮುಸ್ಲಿಂ ಟೋಪಿ ಧರಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ನಿಖಿಲ್ಗೆ ಶಾಸಕ ಎಂ.ಶ್ರೀನಿವಾಸ್ ಸೇರಿದಂತೆ ಮುಸ್ಲಿಂ ಮುಖಂಡರು ಸಾಥ್ ನೀಡಿದರು. ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ವಾತಾವರಣ ತುಂಬಾ ಚೆನ್ನಾಗಿದೆ. ಶುಕ್ರವಾರ ಮುಸ್ಲಿಮರಿಗೆ ಪವಿತ್ರ ದಿನವಾಗಿದೆ. ಹಾಗಾಗಿ ಮಸೀದಿಗೆ ಬಂದೆ. ಏಪ್ರಿಲ್ 8 ರಿಂದ ಮಂಡ್ಯದಲ್ಲಿ ಸಿಎಂ ಕುಮಾರಸ್ವಾಮಿ, ಡಿಕೆಶಿ ಪ್ರಚಾರ ಮಾಡುತ್ತಾರೆ.ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ…
ಸಿದ್ದು-ಜಿಟಿಡಿ ಸಮಾಗಮ: ಮೈತ್ರಿ ಧರ್ಮ ಪಾಲನೆ ನಿರ್ಧಾರ, ಒಟ್ಟಾಗಿ ಚುನಾವಣಾ ಪ್ರಚಾರ
April 5, 2019ಮೈಸೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪರಸ್ಪರ ಸೆಣಸಾಡಿ, ನಂತರವೂ ಹಾವು-ಮುಂಗುಸಿ ಯಂತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡರು ಕೊನೆಗೂ ಒಂದೂವರೆ ದಶಕದ ನಂತರ ಸಂದಿಸಿದ್ದಾರೆ. ಇದೀಗ ಒಂದಾಗಿ ಲೋಕಸಭಾ ಚುನಾವಣಾ ಪ್ರಚಾರ ನಡೆಸಲು ಮುಂದಾಗಿದ್ದಾರೆ. ಬೆಂಗಳೂರಿನ ಬಸವೇಶ್ವರನಗರದಲ್ಲಿರುವ ಮಾಗಡಿ ಮಾಜಿ ಶಾಸಕ ಬಾಲಕೃಷ್ಣ ಅವರ ಮನೆಯಲ್ಲಿ ಮಂಗಳವಾರ ರಾತ್ರಿ ಏರ್ಪಡಿಸಿದ್ದ ಔತಣಕೂಟದಲ್ಲಿ ಜಿಟಿಡಿ ಮತ್ತು ಸಿದ್ದರಾಮಯ್ಯ ಮುಖಾಮುಖಿಯಾಗಿದ್ದರು. ಸಚಿವ ಜಮೀರ್ ಅಹಮದ್ ಖಾನ್, ಮಾಗಡಿ ಬಾಲಕೃಷ್ಣ ಹಾಗೂ ಇತರ ಕಾಂಗ್ರೆಸ್…
ರಾಜಕೀಯ ವೈರತ್ವದಿಂದ ಅಭಿವೃದ್ಧಿ ಕಾಣದ ಮಂಡ್ಯ ಗ್ರಾಮಗಳ ಪುನಶ್ಚೇತನಕ್ಕೆ ಆದ್ಯತೆ
April 5, 2019ಬೆಂಗಳೂರು: ಸಂಸದರಾಗಿ ಆಯ್ಕೆ ಗೊಂಡರೆ ರಾಜಕೀಯ ವೈರತ್ವದಿಂದ ಅಭಿವೃದ್ಧಿಯೇ ಕಾಣದ ಗ್ರಾಮಗಳ ಪುನ ಶ್ಚೇತನಕ್ಕೆ ಆದ್ಯತೆ ನೀಡುವುದಾಗಿ ಚಿತ್ರನಟಿ ಸುಮಲತಾ ಅಂಬರೀಶ್ ಇಂದಿಲ್ಲಿ ತಿಳಿಸಿದ್ದಾರೆ. ಪತಿ ಅಂಬರೀಶ್ ಮಂಡ್ಯ ಜಿಲ್ಲೆಯ ಬಗ್ಗೆ ಕನಸುಗಳ ಸರಮಾಲೆ ಹೊತ್ತುಕೊಂಡಿದ್ದರು. ಆದರೆ ಅವರಿಗೆ ಆ ಕನಸುಗಳನ್ನು ಈಡೇರಿಸಲು ಸಾಧ್ಯವಾಗಲಿಲ್ಲ. ಅಂತಹ ಕನಸುಗಳನ್ನು ನನಸು ಮಾಡಲು ಮೊದಲ ಪ್ರಯತ್ನ ಮಾಡುವುದಾಗಿ ಹೇಳಿದ್ದಾರೆ. ಬೆಂಗಳೂರು ವರದಿಗಾರರ ಕೂಟ ಹಾಗೂ ಪ್ರೆಸ್ಕ್ಲಬ್ ಏರ್ಪಡಿಸಿದ್ದ ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪತಿ ಇದ್ದಾಗ ಜಿಲ್ಲೆಯ ಪ್ರವಾಸ…