ಪಾಂಡವಪುರ: ತಾಲೂಕಿನ ಬೇಬಿಬೆಟ್ಟದಲ್ಲಿ ಮಾ.4ರಿಂದ 12ರವರೆಗೆ ನಡೆಯಲಿರುವ ಬೃಹತ್ ದನ ಗಳ ಜಾತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್. ಪುಟ್ಟ ರಾಜು ಸೋಮವಾರ ವಿದ್ಯುಕ್ತ ಚಾಲನೆ ನೀಡಲಿದ್ದಾರೆ. 9 ದಿನ ನಡೆಯಲಿರುವ ಜಾತ್ರಾ ಮಹೋತ್ಸವದಲ್ಲಿ ವಿವಿಧ ಸಾಂಸ್ಕøತಿಕ ಹಾಗೂ ಕ್ರೀಡಾ ಚಟುವಟಿಕೆಗಳು ನಡೆಯಲಿವೆ. ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಲಕ್ಷಾಂತರ ರೂ.ಬೆಲೆ ಬಾಳುವ ಜೋಡೆತ್ತುಗಳು ಅದಾಗಲೇ ಜಾತ್ರೆಗೆ ಆಗಮಿಸಿವೆ. ವಸ್ತುಪ್ರದರ್ಶನ ಹಾಗೂ ಜಾತ್ರಾ ಮಹೋ ತ್ಸವಕ್ಕೆ ಸೋಮವಾರ…
5 ಸಾವಿರ ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ
February 28, 2019ಮಂಡ್ಯ: ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ 5 ಸಾವಿರ ಕೋಟಿ ರೂ.ಗಳ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದ್ದು, ಮನೆಯ ಮಗನಾಗಿ ಮಂಡ್ಯದ ಜನತೆಯ ಋಣ ತೀರಿಸಲು ಪ್ರಯತ್ನಿಸಿದ್ದೇನೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನುಡಿದರು. ನಗರದ ಸರ್ಕಾರಿ ಮಹಾವಿದ್ಯಾಲಯದ ಆವರಣದಲ್ಲಿಂದು ನಡೆದ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನಾ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಇಂದು ಅಧಿಕೃತವಾಗಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದು, ಇನ್ನೂ ಹೆಚ್ಚಿನ ಅನು ದಾನ…
ನಾನಿಲ್ಲದಿದ್ದರೆ ಅಂಬಿ ಪಾರ್ಥಿವ ಶರೀರ ಮಂಡ್ಯಕ್ಕೆ ಬರುತ್ತಿರಲಿಲ್ಲ: ಹೆಚ್ಡಿಕೆ
February 28, 2019ಮಂಡ್ಯ: ನಾನಿಲ್ಲದಿದ್ದರೆ ರಾಜಕಾರಣಿ, ನಟ ಅಂಬರೀಶ್ ಪಾರ್ಥಿವ ಶರೀರ ಮಂಡ್ಯಕ್ಕೆ ಬರುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ನಗರದ ಸರ್ಕಾರಿ ಬಾಲಕರ ಕಾಲೇಜು ಆವರಣದಲ್ಲಿಂದು ಆಯೋಜಿಸಿದ್ದ 5 ಸಾವಿರ ಕೋಟಿ ರೂ.ಗಳ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು. ನಮ್ಮೊಂದಿಗೆ ಆತ್ಮೀಯವಾಗಿದ್ದ ಅಂಬ ರೀಶ್ ನಿಧನರಾದಾಗ ಅವರಿಗಿಂತ ಹೆಚ್ಚಾಗಿ ಜಿಲ್ಲೆಯ ಮೇಲಿನ ಅಭಿಮಾನಕ್ಕಾಗಿ ಅವರ ಶವವನ್ನು ನಾನು ಮಂಡ್ಯಕ್ಕೆ ತಂದಿದ್ದೆ ಎಂದರು. ನಾನು ಎಲ್ಲರಂತೆ ಅಂಬರೀಶ್ ಶವಕ್ಕೆ ಕೈಮುಗಿದು ಸುಮ್ಮನಿರಬಹುದಿತ್ತು. ಆಗ…
ಪಾಕಿಸ್ತಾನವನ್ನು ಬೆಂಬಲಿಸಿ ಫೇಸ್ಬುಕ್ನಲ್ಲಿ ಫೋಟೋ ಶೇರ್ ಮಾಡಿದ ಯುವಕನ ಬಂಧನ, ವಿಚಾರಣೆ
February 28, 2019ಕೆ.ಆರ್.ಪೇಟೆ: ಪಾಕಿಸ್ತಾನ ಸೈನಿಕರ ಫೋಟೋಗಳನ್ನು ಫೇಸ್ಬುಕ್ನಲ್ಲಿ ಶೇರ್ ಮಾಡುವ ಮೂಲಕ ಹಿಂದೂ-ಮುಸ್ಲಿ ಮರ ನಡುವೆ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ತಾಲೂಕು ಕಚೇರಿ ರಸ್ತೆಯಲ್ಲಿ ಗುಜರಿ ಅಂಗಡಿ ಮಾಲೀಕ ಶಫೀ ಎಂಬಾತ ಬಂಧಿತ ಯುವಕ. ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ನಡೆಯುವ ಉದ್ವಿಗ್ನ ಪರಿಸ್ಥಿತಿ ಸಮಯದಲ್ಲಿ ಭಾರತ ದೇಶಕ್ಕೆ ಬೆಂಬಲ ವ್ಯಕ್ತಪಡಿಸಬೇಕಾದ ಈತ ಪಾಕಿಸ್ತಾನದ ಯೋಧ ಪಾಕಿಸ್ತಾನದ ಧ್ವಜಕ್ಕೆ ಮುತ್ತಿಡುವ ಫೋಟೋ ಗಳನ್ನು ತನ್ನ ಫೇಸ್ಬುಕ್ನಲ್ಲಿ ಶೇರ್ ಮಾಡುವ ಮೂಲಕ…
ಬೈಕ್ಗೆ ಕ್ಯಾಂಟರ್ ಡಿಕ್ಕಿ; ಮುಂಬದಿ ಸವಾರ ಸಾವು, ಹಿಂಬದಿ ಸವಾರನಿಗೆ ಗಾಯ
February 28, 2019ಭಾರತೀನಗರ: ಬೈಕ್ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಮುಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಸವಾರ ತೀವ್ರ ಗಾಯಗೊಂಡಿರುವ ಘಟನೆ ಹುಣ್ಣನದೊಡ್ಡಿ ಸಮೀಪದಲ್ಲಿ ಜರುಗಿದೆ. ಮಾದರಹಳ್ಳಿ ಶಂಕರ್ ಪುತ್ರ ಮನು(25) ಸಾವನ್ನಪ್ಪಿದ್ದು, ಅದೇ ಗ್ರಾಮದ ಸಿದ್ದೇಗೌಡ ಪುತ್ರ ಮನು(24) ತೀವ್ರ ಗಾಯಗೊಂಡಿದ್ದು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆ.ಎಂ.ದೊಡ್ಡಿ ಕಡೆಯಿಂದ ಮದ್ದೂರು ಕಡೆಗೆ ತೆರಳುತಿದ್ದ ಬೈಕ್ ಸವಾರರು ಎದುರಿನಿಂದ ಬಂದ ಕ್ಯಾಂಟರ್ ಡಿಕ್ಕಿ ಹೊಡೆದ ಪರಿ ಣಾಮ ಸ್ಥಳದಲ್ಲಿ ಮನು ಸಾವನ್ನಪ್ಪಿದ್ದಾರೆ. ವಿಷಯ ತಿಳಿದ ಸಬ್ಇನ್ಸ್ಪೆಕ್ಟರ್ ಅಯ್ಯನಗೌಡ…
ಗುಡಿಗೆರೆ ಕಾಲೋನಿಯಲ್ಲಿ ಯೋಧ ಗುರು ಪುಣ್ಯಸ್ಮರಣೆ
February 27, 2019ಭಾರತೀನಗರ: ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿಯಿಂದ ಹುತಾತ್ಮರಾದ ಇಲ್ಲಿನ ಗುಡಿಗೆರೆ ಕಾಲೋನಿ ಯೋಧ ಎಚ್.ಗುರು ಅವರ ಪುಣ್ಯತಿಥಿ ಮಂಗಳವಾರ ನಡೆಯಿತು. ಮಳವಳ್ಳಿ-ಮದ್ದೂರು ಮುಖ್ಯರಸ್ತೆ ಬದಿಯಲ್ಲಿರುವ ಸಮಾಧಿ ಸ್ಥಳದಲ್ಲಿ ಬೆಳಿಗ್ಗೆ ಯಿಂದಲೇ ಮಡಿವಾಳ ಸಂಪ್ರದಾಯ ದಂತೆ ಪೂಜಾ ವಿಧಿ ವಿಧಾನಗಳ ಮೂಲಕ ತಿಥಿ ಕಾರ್ಯ ನೆರವೇರಿಸಲಾಯಿತು. ಯೋಧನ ಸಮಾಧಿಯನ್ನು ವಿವಿಧ ಹೂಗಳಿಂದ ಅಲಂಕರಿಸಿ, ಹೊಂಬಾಳೆ ಯನ್ನಿಟ್ಟು ಯೋಧ ಗುರು ಭಾವಚಿತ್ರವ ನ್ನಿಟ್ಟು ದೀಪ ಹಚ್ಚಲಾಗಿತ್ತು. ಬಾಳೆ ಎಲೆ ಮೇಲೆ ತಿಂಡಿ, ತಿನಿಸು, ಬಗೆಬಗೆಯ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸ ಲಾಯಿತು….
ಇಂದು 5 ಸಾವಿರ ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ
February 27, 2019ಮಂಡ್ಯ: ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ 5 ಸಾವಿರ ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಫೆ.27 ರಂದು ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದರು. ನಗರದ ಸರ್ಕಾರಿ ಬಾಲಕರ ಕಾಲೇಜು ಮೈದಾನದಲ್ಲಿ ನಿರ್ಮಿಸಲಾಗಿರುವ ಕಾರ್ಯಕ್ರಮದ ಬೃಹತ್ ವೇದಿಕೆ ಸಿದ್ಧತೆಯನ್ನು ಪರಿಶೀಲಿಸಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆ ಇತಿಹಾಸದಲ್ಲೇ ಅಭಿವೃದ್ಧಿ ವಿಚಾರ ದಲ್ಲಿ ನಾಳೆ ಸುದಿನ. ಕೃಷಿ, ರೇಷ್ಮೆ, ತೋಟ ಗಾರಿಕೆ, ನೀರಾವರಿ, ಮೀನುಗಾರಿಕಾ ಇಲಾಖೆ, ಪ್ರವಾಸೋದ್ಯಮ ಇಲಾಖೆಯಿಂದ ಫಲಾನುಭವಿಗಳಿಗೆ…
ಮಂಡ್ಯ ವೀರ ಯೋಧನಿಗೆ ಭಾವಪೂರ್ಣ ವಿದಾಯ
February 17, 2019ಹುಟೂರಲ್ಲಿ ಸಕಲ ಸರ್ಕಾರಿ ಗೌರವ ಹಾಗೂ ಸಹಸ್ರಾರು ಜನರ ಅಶ್ರುತರ್ಪಣದ ನಡುವೆ ಗುರು ಚಿತೆಗೆ ಸಹೋದರನಿಂದ ಅಗ್ನಿಸ್ಪರ್ಶ ಭಾರತೀನಗರ: ಕಾಶ್ಮೀರದ ಪುಲ್ವಾಮಾ ಬಳಿ ಉಗ್ರರ ದಾಳಿಯಿಂದ ಹುತಾತ್ಮನಾದ ಮಂಡ್ಯದ ವೀರ ಯೋಧ ಎಚ್. ಗುರು ಅವರಿಗೆ ಸ್ವಗ್ರಾಮವಾದ ತಾಲೂಕಿನ ಗುಡಿಗೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ‘ ಬೋಲೋ ಭಾರತ್ ಮಾತಾ ಕೀ ಜೈ’, ‘ವಂದೇ ಮಾತರಂ’, ‘ವೀರ ಯೋಧ ಗುರು ಅಮರ್ ರಹೇ’ ಮುಗಿಲು ಮುಟ್ಟುವ ಘೋಷಣೆಗಳ ನಡುವೆ ಭಾವಪೂರ್ಣ ವಿದಾಯ ಹೇಳಲಾಯಿತು. ಸಂಜೆ 7.45ರ ಸುಮಾರಿನಲ್ಲಿ…
ಯೋಧನ ಕುಟುಂಬಕ್ಕೆ ಅರ್ಧ ಎಕರೆ ಭೂಮಿ ನೀಡಿದ ಸುಮಲತಾ
February 17, 2019ಮಂಡ್ಯ: ಪುಲ್ವಾಮಾ ಉಗ್ರ ದಾಳಿಯಲ್ಲಿ ಹುತಾತ್ಮ ನಾದ ಮಂಡ್ಯ ಯೋಧ ಗುರು ಅವರ ಕುಟುಂಬಕ್ಕೆ ನಟ, ರಾಜಕಾರಣಿ ಅಂಬರೀಶ್ ಪತ್ನಿ ಸುಮಲತಾ ಅರ್ಧ ಎಕರೆ ಭೂಮಿ ಯನ್ನು ನೀಡಲು ನಿರ್ಧರಿಸಿದ್ದಾರೆ. ಮಂಡ್ಯದಲ್ಲಿರುವ ತಮ್ಮ ಒಡೆತನದ ಜಮೀನಿನಲ್ಲಿ ಅರ್ಧ ಎಕರೆ ಭೂಮಿ ಯನ್ನು ಯೋಧನ ಕುಟುಂಬಕ್ಕೆ ಹಸ್ತಾಂತರಿಸಲು ತೀರ್ಮಾನಿಸಿದ್ದಾರೆ. ಮಂಡ್ಯದ ಸೊಸೆಯಾಗಿರುವ ನನ್ನದು ದೇಶ ಕಾಯುವ ಯೋಧರಿಗಾಗಿ ಅಳಿಲು ಸೇವೆ ಎಂದಿರುವ ಸುಮಲತಾ ತಾವು ನೀಡಿದ ಭೂಮಿಯನ್ನು ಯೋಧ ಗುರುವಿನ ಕುಟುಂಬ ತಮ್ಮ ಜೀವನ ನಿರ್ವಹಣೆಗೆ ಬಳಸಿಕೊಳ್ಳಲಿ ಎಂದು…
ರಕ್ಷಕರಿಗೇ ರಕ್ಷಣೆ ಇಲ್ಲಾಂದ್ರೆ ಇನ್ಯಾರಿಗೆ ರಕ್ಷಣೆ ಇದೆ..!
February 16, 2019ಮಂಡ್ಯ: ದೇಶ ಕಾಯೋ ರಕ್ಷಕರಿಗೇ ರಕ್ಷಣೆ ಇಲ್ಲಾಂದ್ರೆ ಇನ್ಯಾರಿಗೆ ರಕ್ಷಣೆ ಇದೆ, ನನ್ನ ಗಂಡನನ್ನು ಕೊಂದವರನ್ನು ಬ್ಲಾಸ್ಟ್ ಮಾಡಿ, ಯಾವುದೇ ಕಾರಣಕ್ಕೂ ಬಿಡಬೇಡಿ..! ಜಮ್ಮು-ಕಾಶ್ಮೀರದ ಪುಲ್ವಾಮಾದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧ ಹೆಚ್.ಗುರು ಅವರ ಪತ್ನಿ ಕಲಾವತಿ ಅವರ ಆಕ್ರೋಶದ ನುಡಿಗಳಿವು. ಪತಿಯನ್ನು ಕಳೆದುಕೊಂಡ ದುಃಖದ ನಡುವೆಯೇ ತನ್ನ ಪತಿ ಸಾವಿಗೆ ಪ್ರತೀಕಾರ ಸಾರಿದರು. ನಾನು ಪ್ರತಿದಿನ ಅವರ ಜೊತೆ ಫೋನಿನಲ್ಲಿ ಮಾತನಾಡುತ್ತಿದ್ದೆ. ಅವರು ನಿನ್ನೆ ಬೆಳಿಗ್ಗೆ 11 ಗಂಟೆಗೆ ಫೋನ್ ಮಾಡಿದ್ದರು. ನಾನು ಕೆಲಸ ಮಾಡು…