ಮಂಡ್ಯ: ಲಾರಿಯೊಂದು ಅಡ್ಡಾದಿಡ್ಡಿ ಚಲಿಸಿ ನಡೆದ ಸರಣಿ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತ ಪಟ್ಟು, ಹತ್ತಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಮಂಡ್ಯದ ಗುತ್ತಲು ರಸ್ತೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಅಪಘಾತದಲ್ಲಿ ಶಶಾಂಕ್, ಆತನ ತಾಯಿ ಗಿರಿಜಮ್ಮ, ರಾಹುಲ್ ಮತ್ತು ರಫಿಉಲ್ಲಾ ಎಂಬುವರು ಸಾವನ್ನಪ್ಪಿದ್ದು, ನಟರಾಜು ಮತ್ತು ವೆಂಕಟೇಶ್ ಎಂಬುವರನ್ನು ಬೆಂಗಳೂರಿನ ನಿಮ್ಹಾನ್ಸ್ಗೆ ರವಾನಿಸಲಾಗಿದೆ. ವಿವರ: ಇಂದು ಸಂಜೆ 7…
ಬೇಡಿಕೆ ಈಡೇರಿಕೆಗೆ ಆಗ್ರಹ: ಜಿಲ್ಲೆಯಲ್ಲಿ ಸರಣಿ ಪ್ರತಿಭಟನೆ
October 2, 2018ಮಂಡ್ಯ: ವಿವಿಧ ಬೇಡಿಕೆ ಈಡೇ ರಿಕೆಗೆ ಆಗ್ರಹಿಸಿ ಜಿಲ್ಲೆಯಲ್ಲಿ ಸೋಮವಾರ ಸರಣಿ ಪ್ರತಿಭಟನೆ ನಡೆಯಿತು. ಮಂಡ್ಯದಲ್ಲಿ ಮರ್ಯಾದ ಹತ್ಯೆ, ಶೋಷಿತ, ದಲಿತ, ಹಿಂದುಳಿದವರ ಮೇಲಿನ ದೌರ್ಜನ್ಯ ತಡೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಸದಸ್ಯರು ಧರಣಿ ನಡೆಸಿದರೇ, ನ್ಯಾ.ಎ.ಜೆ.ಸದಾಶಿವ ಆಯೋ ಗದ ವರದಿ ಜಾರಿಗೆ ಆಗ್ರಹಿಸಿ ದಲಿತ ಶೋಷಿತ ಸಮಾಜ ಸಂಘರ್ಷ ಸಮಿತಿ ಕಾರ್ಯ ಕರ್ತರು ತಮಟೆ ಚಳವಳಿ ನಡೆಸಿದರು. ಭಾರತೀನಗರದಲ್ಲಿ ಕಬ್ಬಿನ ಬಾಕಿ ಹಣ ಪಾವತಿಗೆ ಆಗ್ರಹಿಸಿ ರೈತರು ಚಾಂಷು ಗರ್ಸ್ಗೆ ಮುತ್ತಿಗೆ…
ತಾಯಿ ನಿಂದಿಸಿದ ಸ್ನೇಹಿತನ ರುಂಡ ಚೆಂಡಾಡಿದ ಯುವಕ
September 30, 2018ಮಳವಳ್ಳಿ: ತನ್ನ ತಾಯಿಯನ್ನು ನಿಂದಿಸಿದ ಸ್ನೇಹಿತನ ತಲೆ ಕಡಿದ ಯುವಕ, ರುಂಡದೊಂದಿಗೆ ಪೊಲೀಸ್ ಠಾಣೆಗೆ ಬಂದು ಶರಣಾದ ಭಯಾನಕ ಘಟನೆ ಶನಿವಾರ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ. ತಾಲೂಕಿನ ಚಿಕ್ಕಬಾಗಿಲು ಗ್ರಾಮದ ನಾಗಣ್ಣ ಎಂಬುವರ ಪುತ್ರ ಪಶುಪತಿ ಎಂಬಾತನೇ ಅದೇ ಗ್ರಾಮದ ತನ್ನ ಸ್ನೇಹಿತ ಪರಶಿವಮೂರ್ತಿ ಎಂಬುವರ ಪುತ್ರ ಗಿರೀಶ್ (29) ಎಂಬಾತನನ್ನು ಗ್ರಾಮದ ಹೊರ ವಲಯದಲ್ಲಿ ಹತ್ಯೆ ಮಾಡಿ, ಆತನ ತಲೆ ಕಡಿದು 24 ಕಿ.ಮೀ. ದೂರದಿಂದ ಬೈಕಿನಲ್ಲಿ ರುಂಡವನ್ನು ತೆಗೆದುಕೊಂಡು ಬಂದು ಇಲ್ಲಿನ ಪೊಲೀಸರಿಗೆ ಶರಣಾದವನಾಗಿದ್ದಾನೆ….
ಜಿಲ್ಲಾಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ಜಿಲ್ಲೆಯ ಎಲ್ಲಾ ಕೆರೆಗಳ ಭರ್ತಿಗೆ ಸಿಎಂ ಸೂಚನೆ
September 27, 2018ಮಂಡ್ಯ: ‘ಕುಡಿಯುವ ನೀರನ್ನು ಒದಗಿಸಲು ಹಾಗೂ ಜಿಲ್ಲೆಯ ಎಲ್ಲಾ ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ತತ್ಕ್ಷಣ ಕ್ರಮವಹಿಸಬೇಕು. ಈ ನಿಟ್ಟಿನಲ್ಲಿ ನಿರ್ಲಕ್ಷ್ಯ ತೋರಿದರೆ ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಎಚ್ಚರಿಕೆ ನೀಡಿದರು. ನಗರದ ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ಕುಡಿ ಯುವ ನೀರನ್ನು ಪೂರೈಸಲು 1,700 ಕೋಟಿ ರೂ.ಗಳ ಸಮಗ್ರ…
ಜನರ ಸಮಸ್ಯೆ ಆಲಿಸಿ, ಪರಿಹರಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿ
September 27, 2018ಮಂಡ್ಯ: ಮಂಡ್ಯಕ್ಕೆ ಮಧ್ಯಾಹ್ನ 3 ಗಂಟೆಗೆ ಆಗಮಿಸಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಗರದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಅಹ ವಾಲುಗಳನ್ನು ಆಲಿಸಿದರು. ರೈತಸಂಘ, ದಸಂಸ ಸೇರಿದಂತೆ ವಿವಿಧ ಸಂಘಟನೆಗಳು ಹಾಗೂ ಸಾರ್ವ ಜನಿಕರಿಂದ ಅಹವಾಲು ಸ್ವೀಕರಿಸಿ, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು. ಕೆಲವು ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರಿಗೆ ಮಾತ್ರ ಜನತಾ ದರ್ಶನಕ್ಕೆ ಸೀಮಿತವಾಗಿತ್ತು. ಪ್ರವಾಸಿ ಮಂದಿರದ ಗೇಟ್ನಲ್ಲಿಯೇ ಸಾರ್ವಜನಿಕರನ್ನು ತಡೆದು ನಿಲ್ಲಿಸಿದ್ದರಿಂದ ಹೆಚ್ಚು ಸಾರ್ವಜ ನಿಕರು ತಮ್ಮ ಅಹವಾಲುಗಳನ್ನು ಹಿಡಿದು ಕೊಂಡು ಕುಮಾರಸ್ವಾಮಿ ಅವರಿಗಾಗಿ ಕಾದು ಕುಳಿತಿದ್ದರು….
ಜೀತಕ್ಕಾಗಿ ಮಹಿಳೆ ಮೇಲೆ ದೌರ್ಜನ್ಯ ಪ್ರಕರಣ: ಮಂಡ್ಯ, ಮದ್ದೂರಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ
September 22, 2018ಮಂಡ್ಯ: ಬೆಕ್ಕಳಲೆಯಲ್ಲಿ ಜೀತಕ್ಕಾಗಿ ಮಹಿಳೆ ಮೇಲೆ ನಡೆದ ದೌರ್ಜನ್ಯ ಪ್ರಕರಣ ಖಂಡಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಮಂಡ್ಯ, ಮದ್ದೂರಿನಲ್ಲಿಂದು ಪ್ರತಿಭಟನೆ ನಡೆಸಿದರು. ಮಂಡ್ಯ ನಗರದಲ್ಲಿ ಬಿವಿಎಸ್, ದಸಂಸ ಸಂಘ ಟನೆಗಳು ಮತ್ತು ಮದ್ದೂರಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಒಕ್ಕೂಟದ ಕಾರ್ಯ ಕರ್ತರು ಪ್ರತಿಭಟನೆ ನಡೆಸಿದ ಬಗ್ಗೆ ವರದಿಯಾಗಿದೆ. ಮಂಡ್ಯ: ಜೀತಪದ್ಧತಿ ನಿಷೇಧ ಕಾಯ್ದೆಯಡಿ ಕುದುರಗುಂಡಿ ಗ್ರಾಮದ ನಾಗೇಶ, ಪಾಂಡು, ಕರಿ ಯಪ್ಪ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು…
ಪ್ರತ್ಯೇಕ ಪ್ರಕರಣಗಳಲ್ಲಿ ಐವರ ದುರಂತ ಸಾವು
September 20, 2018ಮಂಡ್ಯ: ಜಿಲ್ಲೆಯ ವಿವಿಧೆಡೆ ಬುಧವಾರ ಸಂಭವಿಸಿದ ಪ್ರತ್ಯೇಕ ಅಪಘಾತ, ಆತ್ಮಹತ್ಯೆ ಹಾಗೂ ಅನಾಹುತ ಪ್ರಕರಣ ಗಳಲ್ಲಿ ಐವರು ಸಾವನ್ನಪ್ಪಿದ್ದು, ಓರ್ವ ಗಾಯ ಗೊಂಡಿದ್ದಾನೆ. ಮಳವಳ್ಳಿ ತಾಲೂಕು ವ್ಯಾಪ್ತಿ ಯಲ್ಲಿ ನವದಂಪತಿ ಆತ್ಮಹತ್ಯೆ ಮಾಡಿ ಕೊಂಡರೆ, ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದಾನೆ. ಶ್ರೀರಂಗಪಟ್ಟಣ ಹಾಗೂ ಮಂಡ್ಯ ತಾಲೂಕು ವ್ಯಾಪ್ತಿಯಲ್ಲಿ ಇಬ್ಬರು ಯುವಕರು ಗಣಪತಿ ವಿಸರ್ಜನೆ ವೇಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಅಪಘಾತದಲ್ಲಿ ಓರ್ವ ಸಾವು: ಮಳವಳ್ಳಿ ಬಳಿ ಬೈಕ್ಗೆ ಕಾರು ಡಿಕ್ಕಿ ಹೊಡೆದ ಪರಿ ಣಾಮ ಶ್ರೀರಂಗಪಟ್ಟಣದ ತಾಲೂಕಿನ…
ಸಾಲಮನ್ನಾ ನೀತಿಯಿಂದ ಕೃಷಿ ಪತ್ತಿನ ಸಂಘಗಳು ದಿವಾಳಿ
September 20, 2018ದೇಶಹಳ್ಳಿ ಪ್ರಾಥಮಿಕ ಕೃಷಿಪತ್ತಿನ ಸಂಘದ ಅಧ್ಯಕ್ಷ ಮೋಹನಕುಮಾರ್ ಆರೋಪ ಮದ್ದೂರು: ‘ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ಅವರ ಸಾಲಮನ್ನಾ ನೀತಿಯಿಂದ ರೈತರಷ್ಟೆ ಅಲ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ದಿವಾಳಿ ಹಂತ ತಲುಪಿದೆ’ ಎಂದು ದೇಶಹಳ್ಳಿ ಪ್ರಾಥ ಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ದೇಶ ಹಳ್ಳಿ ಆರ್.ಮೋಹನಕುಮಾರ್ ಹೇಳಿದರು. ಸಂಘದ ವಾರ್ಷಿಕ ಮಹಾಸಭೆಯ ಅಧ್ಯ ಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರ ರೈತ ಸಾಲವನ್ನು ಸಂಪೂರ್ಣ ಮನ್ನಾ ಮಾಡು ತ್ತಿಲ್ಲ. ರೈತರು ಸಾಲವನ್ನು ಕಟ್ಟುವ…
ಮನುಷ್ಯನ ಸ್ವಾರ್ಥದಿಂದ ಅರಣ್ಯ ನಾಶ
September 13, 2018ಪಾಂಡವಪುರ: ‘ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಅರಣ್ಯ ಮರಗಳನ್ನು ಕತ್ತರಿಸಿ ಅರಣ್ಯ ಪ್ರದೇಶವನ್ನು ನಾಶ ಮಾಡು ತ್ತಿದ್ದಾನೆ’ ಎಂದು ಮಂಡ್ಯ ವಿ.ಸಿ.ಫಾರಂನ ತೋಟಗಾರಿಕೆ ಇಲಾಖೆಯ ವಿಜ್ಞಾನಿ ಡಾ.ನಾಗರಾಜ್ ಬೇಸರ ವ್ಯಕ್ತಪಡಿಸಿದರು. ತಾಲೂಕಿ ಶಿಂಡಭೋಗನಹಳ್ಳಿ ಗ್ರಾಮ ದಲ್ಲಿ ಸಮಾಜ ಸುಧಾರಕಿ ಮದರ್ ತೆರೇಸಾ ಅವರ ಜನ್ಮ ದಿನದ ಅಂಗವಾಗಿ ಶಿಂಡ ಭೋಗನಹಳ್ಳಿ ಗ್ರಾಮಸ್ಥರು, ಅರಣ್ಯ ಇಲಾಖೆ ಯ ಸಹಯೋಗದಲ್ಲಿ ಸಮಾಜ ಸೇವಕ ಲವ ಕುಮಾರ್ ಅವರು ಹಮ್ಮಿಕೊಂಡಿದ್ದ ಸಸಿ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮದರ್ ತೆರೇಸಾ ಅವರ ಜನ್ಮ…
ಕೈಕೊಟ್ಟ ಮೈಷುಗರ್: ಕಬ್ಬು ಬೆಳೆಗಾರರ ಪ್ರತಿಭಟನೆ
September 13, 2018ಮಂಡ್ಯ: ತಾಂತ್ರಿಕ ಕಾರಣಗಳಿಂದ ಕುಂಟುತ್ತಾ ನಡೆಯುತ್ತಿರುವ ಮೈಷುಗರ್ ವಿರುದ್ಧ ಆಕ್ರೋಶಗೊಂಡಿರುವ ಕಬ್ಬು ಬೆಳೆಗಾರರು ಬುಧವಾರ ಆಡಳಿತ ಮಂಡಳಿಯ ವ್ಯವಸ್ಥಾಪಕರ ಮುಂದೆ ಪ್ರತಿಭಟನೆ ನಡೆಸಿದರು. ಮೈಷುಗರ್ನಲ್ಲಿ ಕಬ್ಬು ಅರೆಯೋ ಕಾರ್ಯ ಸ್ಥಗಿತಗೊಂಡಿತ್ತು. ಇದರಿಂದ ರೊಚ್ಚಿಗೆದ್ದ ರೈತರು ಪ್ರತಿಭಟನೆಗಿಳಿದಿದ್ದರು ಸುದ್ದಿತಿಳಿದ ಶಾಸಕ ಎಂ.ಶ್ರೀನಿವಾಸ್ ಸ್ಥಳಕ್ಕೆ ಆಗಮಿಸಿ ರೈತರ ಸಮಸ್ಯೆ ಆಲಿಸಿದರು. ಜಿಲ್ಲೆಯ ರೈತರ ಪ್ರಮುಖ ಬೇಡಿಕೆಯಂತೆಯೇ ಮೈಷುಗರ್ ಸಮ್ಮಿಶ್ರ ಸರ್ಕಾರದಲ್ಲಿ ಆರಂಭ ವಾಯಿತು. ಆದರೆ ಈಗ ತಾಂತ್ರಿಕ ಸಮಸ್ಯೆಯಿಂದ ಆಮೆ ವೇಗದಲ್ಲಿ ಸಾಗುತ್ತಿದೆ. ಸಹಜವಾಗಿಯೇ ರೈತರು ಆತಂಕಕ್ಕೀಡಾಗಿದ್ದಾರೆ, ಕಾರ್ಖಾನೆ ಯಾವಾಗ…