ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ದೊಡ್ಡೇಗೌಡನ ಗ್ರಾಮದ ಬಳಿ ಇರುವ ಗೌತಮ ಕ್ಷೇತ್ರದಲ್ಲಿ ಉಳಿದಿರುವ ಗಜಾನನ ಸ್ವಾಮೀಜಿ ಮತ್ತು ಮೂವರು ಶಿಷ್ಯರನ್ನು ಹೊರ ತರಲು ಎನ್ಡಿಆರ್ಎಫ್ ಪಡೆ ಬುಧವಾರ ಯತ್ನಿಸಿದೆ. ಸ್ವಾಮೀಜಿ ಅವರು ಕಾವೇರಿ ನದಿ ಯಲ್ಲಿ ಪ್ರವಾಹ ಬಂದಾಗಿನಿಂದ ಗೌತಮ ಕ್ಷೇತ್ರದಲ್ಲೇ ತಂಗಿದ್ದರು. ಇದೀಗ ಕಾವೇರಿ ಪ್ರವಾಹ ಕೊಂಚ ಕಡಿಮೆ ಯಾದ ಹಿನ್ನೆಲೆಯಲ್ಲಿ ಸ್ವಾಮೀಜಿ ಅವರ ಮನವೊಲಿಸಿ ಸುರಕ್ಷಿತ ಸ್ಥಳಕ್ಕೆ ಕರೆತರಲು ಮುಂದಾಗಿದೆ. ಎನ್ಡಿಆರ್ಎಫ್ ಪಡೆಯೊಂದಿಗೆ ಶ್ರೀರಂಗಪಟ್ಟಣ ತಹಶೀಲ್ದಾರ್ ನಾಗೇಶ್ ಕೂಡ ಆಗಮಿಸಿದ್ದು, ಅವರ ನೇತೃತ್ವದಲ್ಲಿ ಬೋಟಿಂಗ್…
ಕಣ್ಣೀರು ಹಾಕಿದ ಹೆಚ್ಡಿಕೆಗೆ ವುಡ್ವಡ್ರ್ಸ್, ಫೀಡಿಂಗ್ ಬಾಟಲ್, ನಿಪ್ಪಲ್ ರವಾನೆ
July 18, 2018ಅಳಬೇಡಿ, ವುಡ್ವಡ್ರ್ಸ್ ಕುಡಿದು ಅಳು ನಿಲ್ಲಿಸಿ: ಹೆಚ್ಡಿಕೆಗೆ ಬಿಜೆಪಿ ಕಾರ್ಯಕರ್ತರ ಲೇವಡಿ ಮಂಡ್ಯ: ಜೆಡಿಎಸ್ ಕಾರ್ಯ ಕರ್ತರ ಸಭೆಯಲ್ಲಿ ನಾನು ಸಂತೋಷ ವಾಗಿಲ್ಲ ಎಂದು ಕಣ್ಣೀರು ಹಾಕಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ಬಿಜೆಪಿ ಕಾರ್ಯಕರ್ತರು ವುಡ್ವಡ್ರ್ಸ್ ಫೀಡಿಂಗ್ ಬಾಟಲ್ ಹಾಗೂ ನಿಪ್ಪಲ್ ರವಾನಿಸುವ ಮೂಲಕ ವುಡ್ವಡ್ರ್ಸ್ ಕುಡಿದು ಅಳುವುದನ್ನು ನಿಲ್ಲಿಸುವಂತೆ ಆಗ್ರಹಿಸಿದರು. ಮಂಗಳವಾರ ಬೆಳಿಗ್ಗೆ ನಗರದ ಅಂಚೆ ಕಚೇರಿ ಎದುರು ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ರಾಜ್ಯವನ್ನು ಆಳ್ವಿಕೆ ಮಾಡಲು ಅರ್ಹರಲ್ಲ. ಕೂಡಲೇ ರಾಜೀ ನಾಮೆ…
ಬಸರಾಳಿನ 108 ಆಂಬ್ಯುಲೆನ್ಸ್ಗೆ 108 ರೋಗ!
July 18, 2018ಮಂಡ್ಯ: ಹೋಬಳಿ ಕೇಂದ್ರ ಬಸ ರಾಳಿನ ಪ್ರಾಥಮಿಕ ಆರೋಗ್ಯ ಕೇಂದ್ರ ದಲ್ಲಿರುವ 108 ಆಂಬ್ಯುಲೆನ್ಸ್ ವಾಹನವು 108 ಸಮಸ್ಯೆಗಳಿಂದ ಬಳಲುತ್ತಿದೆ ಎನ್ನಲಾಗಿದೆ. ಬಸರಾಳು ಹೋಬಳಿಯ ಪ್ರಾಥಮಿಕ ಆರೋಗ್ಯ ಕೇಂದ್ರವು ಸುತ್ತಮುತ್ತಲ 50 ಗ್ರಾಮಗಳಿಗೆ ಕೇಂದ್ರ ಸ್ಥಾನವಾಗಿದೆ. ಇಲ್ಲಿ ಕಾರ್ಯ ನಿರ್ವಹಿಸುವ ಈ ಆಂಬ್ಯು ಲೆನ್ಸ್ ನಂಬಿಕೊಂಡು ರೋಗಿಗಳು ಹೈರಾಣಾಗಿದ್ದಾರೆ. ಏನೇನ್ ಸಮಸ್ಯೆ: ಈ ಆಂಬ್ಯುಲೆನ್ಸ್ ವಾಹನದ 4 ಚಕ್ರ ಮತ್ತು ಸ್ಟೆಪ್ನಿ ಸಂಪೂರ್ಣ ಸವೆದು ಹೋಗಿವೆ. ವಾಹನ ಸಂಪೂರ್ಣ ವಾಗಿ ಹಳೆಯದಾಗಿದ್ದು, ಪ್ರತಿನಿತ್ಯ ಈ ವಾಹನವನ್ನು ತಳ್ಳಿಕೊಂಡು ಸ್ಟಾರ್ಟ್…
ರೇಷ್ಮೆಗೆ ಬೆಂಬಲ ಬೆಲೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
July 17, 2018ಮಂಡ್ಯ: ರೇಷ್ಮೆ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನಿಗದಿ, ವಿದೇಶಿ ರೇಷ್ಮೆ ಆಮದು ಸ್ಥಗಿತಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರು ನಗರ ದಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದರು. ಸೋಮವಾರ ಬೆಳಿಗ್ಗೆ ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕ್ನಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು, ಬಳಿಕ ಬೆಂಗಳೂರು -ಮೈಸೂರು ಹೆದ್ದಾರಿ ಮೂಲಕ ಜಿಲ್ಲಾಧಿ ಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದರು. ವಿಶ್ವೇಶ್ವರಯ್ಯ ಪ್ರತಿಮೆ ಎದುರು ಕೆಲಕಾಲ ಧರಣಿ ನಡೆಸಿದ ಬಳಿಕ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ…
ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತ.!
July 17, 2018ಸಚಿವ ಸಿ.ಎಸ್.ಪುಟ್ಟರಾಜು ಆಸ್ಪತ್ರೆಗೆ ಭೇಟಿ, ರೈತರ ಆರೋಗ್ಯ ವಿಚಾರಣೆ ಮಂಡ್ಯ: ರೇಷ್ಮೆ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನಿಗದಿ, ವಿದೇಶಿ ರೇಷ್ಮೆ ಆಮದು ಸ್ಥಗಿತಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆ ವೇಳೆ ರೈತನೋರ್ವ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿ ಸಿರುವ ಘಟನೆ ನಗರದಲ್ಲಿಂದು ನಡೆದಿದೆ. ಮದ್ದೂರು ತಾಲೂಕು ಅಂಬರಹಳ್ಳಿ ಗ್ರಾಮದ ರೇಷ್ಮೆ ಬೆಳೆಗಾರ ಚೌಡಪ್ಪ ಪ್ರತಿಭಟನೆ ವೇಳೆ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿ ದ್ದಾರೆ. ಮಂಡ್ಯದ ವಿಶ್ವೇಶ್ವರಯ್ಯ…
ದಕ್ಷಿಣಕ್ಕಿಂತ ಉತ್ತರ ಕರ್ನಾಟಕ ಸುಭಿಕ್ಷ: ಡಾ.ಕೆ.ಅನ್ನದಾನಿ
July 17, 2018ನಾಗಮಂಗಲ: ಮೂರ್ನಾಲ್ಕು ಜಿಲ್ಲೆಗಳನ್ನು ಹೊರತುಪಡಿಸಿ, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ದಕ್ಷಿಣ ಕರ್ನಾಟಕಕ್ಕಿಂತ ಸುಭಿಕ್ಷವಾಗಿವೆ ಎಂದು ಶಾಸಕ ಡಾ.ಕೆ.ಅನ್ನದಾನಿ ಅಭಿಪ್ರಾಯಪಟ್ಟರು. ಪಟ್ಟಣದ ಟಿ.ಬಿ.ಬಡಾವಣೆಯಲ್ಲಿ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಟಿ. ಕೃಷ್ಣಪ್ಪ ಜಿಲ್ಲೆಯ ಶಾಸಕರುಗಳಿಗೆ ಏರ್ಪ ಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು. ಆಲಮಟ್ಟಿ ಡ್ಯಾಂ ನಿರ್ಮಾಣದಿಂದಾಗಿ ಅಲ್ಲಿಯ ಹಲವು ಜಿಲ್ಲೆಗಳು ಮಂಡ್ಯ, ಮೈಸೂರು ಮತ್ತು ಬೆಂಗಳೂರಿಗಿಂತ ಸಾಕಷ್ಟು ಅಭಿವೃದ್ಧಿ ಹೊಂದಿವೆ. ವಿರೇಂದ್ರ ಪಾಟೀಲ್ ರಿಂದ ಹಿಡಿದು ಹಲವರು ಉತ್ತರ ಕರ್ನಾಟಕದ ಮಂದಿ ಮುಖ್ಯಮಂತ್ರಿಗಳಾ…
ಪ್ರವಾಹ: ನದಿಪಾತ್ರದ ಧಾರ್ಮಿಕ ಶ್ರದ್ಧಾ, ಪ್ರವಾಸಿ ತಾಣಗಳು ಜಲಾವೃತ
July 17, 2018ಶ್ರೀರಂಗಪಟ್ಟಣ: ಕೃಷ್ಣರಾಜ ಸಾಗರ ಅಣೆಕಟ್ಟೆ ಸಂಪೂರ್ಣ ಭರ್ತಿ ಯಾದ ಹಿನ್ನೆಲೆಯಲ್ಲಿ ಜಲಾಶಯದಿಂದ ಸುಮಾರು 80 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಮುಂದುವರೆದಿದೆ. ಪಟ್ಟಣದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಪಟ್ಟಣದ ಪಶ್ಚಿಮ ವಾಹಿನಿಯಲ್ಲಿರುವ ಪುರಾತನ ಮಂಟಪ ಮತ್ತು ಧಾರ್ಮಿಕ ಶ್ರದ್ಧಾ ಕೇಂದ್ರಗಳು ಜಲಾವೃತವಾಗಿವೆ. ಚೆಕ್ಪೋಸ್ಟ್ ಬಳಿಯ ಸಾಯಿ ಮಂದಿರಕ್ಕೆ ನೀರು ನುಗ್ಗಿದ್ದು, ಜನರು ಹಾಗೂ ಪ್ರವಾಸಿಗರು ತಂಡೋಪತಂಡ ವಾಗಿ ವೆಲೆಸ್ಲಿ ಸೇತುವೆ ಬಳಿ ಜಮಾವಣೆ ಗೊಂಡು ಸೆಲ್ಫಿ ತೆಗೆದುಕೊಳ್ಳಲು ಮುಗಿ ಬಿಳುತ್ತಿದ್ದಾರೆ. ಅಲ್ಲದೇ ಪ್ರಸಿದ್ಧ…
ಅಂಗನವಾಡಿ ಕಟ್ಟಡಗಳ ಕಾಮಗಾರಿ ಪೂರ್ಣಗೊಳಿಸಲು ಸೂಚನೆ
July 17, 2018ಮಂಡ್ಯ: ಜಿಲ್ಲೆಯ ವಿವಿಧೆಡೆ ಅಂಗನವಾಡಿ ಮಕ್ಕಳಿಗೆ ಸ್ವಂತ ಕಟ್ಟಡ ಗಳಿಲ್ಲದೇ ಬಾಡಿಗೆ ಕಟ್ಟಡ ಹಾಗೂ ಸೂಕ್ತ ವಿಲ್ಲದ ಕಟ್ಟಡಗಳಲ್ಲಿ ಪಾಠ ಕಲಿಯುವಂತಾ ಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಪ್ರಗತಿ ಯಲ್ಲಿರುವ ಅಂಗನವಾಗಿ ಕಟ್ಟಡಗಳನ್ನು ಶೀಘ್ರ ಪೂರ್ಣಗೊಳಿಸುವ ಜೊತೆಗೆ, ಇನ್ನೂ ಆರಂಭಿಸದಿರುವ ಕಟ್ಟಡದ ಕಾಮಗಾರಿ ಕೈಗೆತ್ತಿಕೊಂಡು ಪೂರ್ಣಗೊಳಿಸಬೇಕು ಎಂದು ಜಿಪಂ ಅಧ್ಯಕ್ಷೆ ನಾಗರತ್ನ ತಿಳಿಸಿದರು. ಸೋಮವಾರ ಜಿಪಂ ಕಾವೇರಿ ಸಭಾಂಗಣದಲ್ಲಿ ನಡೆದ ಜಿಪಂ ಮಾಸಿಕ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಂಗನವಾಡಿ ಕಟ್ಟಡಗಳ ಕಾಮಗಾರಿ ಬಹಳ ನಿಧಾನ ವಾಗಿ…
ಕೆಆರ್ಎಸ್ ಜಲಾಶಯದಿಂದ ನೀರು ಬಿಡುಗಡೆ: ನದಿಪಾತ್ರದ ಜನತೆಯ ಸುರಕ್ಷತೆ ಕ್ರಮವಹಿಸಲು ಡಿಸಿ ಸೂಚನೆ
July 16, 2018ಮಂಡ್ಯ: ರಾಜ್ಯದಲ್ಲಿ ನಿರಂತರ ವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬಹುತೇಕ ಜಲಾಶಯಗಳು ಭರ್ತಿಯಾಗಿದ್ದು, ಹಾರಂಗಿ, ಹೇಮಾವತಿ ಜಲಾಶಯಗಳಿಂದ ನದಿ ಮೂಲಕ ನೀರು ಕೆಆರ್ಎಸ್ ಜಲಾ ಶಯಕ್ಕೆ ಹರಿದು ಬರುತ್ತಿದ್ದು, ಕೆಆರ್ಎಸ್ ಜಲಾಶಯದಿಂದ 50 ಸಾವಿರ ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ನದಿ ಪಾತ್ರದ ಗ್ರಾಮಗಳ ಜನರ ಸುರಕ್ಷತೆಗೆ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಎನ್.ಮಂಜುಶ್ರೀ ತಿಳಿಸಿದರು. ಭಾನುವಾರ ಜಿಪಂ ಕಾವೇರಿ ಸಭಾಂಗಣದಲ್ಲಿ ನದಿ ಪಾತ್ರದ ಗ್ರಾಮಗಳ ಜನರ ಸುರಕ್ಷತೆಗೆ ಕೈಗೊಳ್ಳಬೇಕಾದ ಕ್ರಮಗಳ…
ಎಸಿಬಿ ಮುಚ್ಚಿ, ಲೋಕಾಯುಕ್ತ ಪುನರ್ ಸ್ಥಾಪಿಸಿ: ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಗಡೆ ಸಲಹೆ
July 16, 2018ಮಂಡ್ಯ: ಮೊದಲು ಎಸಿಬಿ ಮುಚ್ಚಿ, ಬಲಿಷ್ಠ ಲೋಕಾಯುಕ್ತ ಸಂಸ್ಥೆ ಯನ್ನು ಪುನರ್ ಸ್ಥಾಪಿಸಿ ಪ್ರಣಾಳಿಕೆಯಲ್ಲಿ ಹೇಳಿದಂತೆ ಮಾತು ಉಳಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಸಲಹೆ ನೀಡಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸಿಬಿಯೂ ಒಂದು ತನಿಖಾ ಸಂಸ್ಥೆಯೇ ಎಂದು ಪ್ರಶ್ನೆ ಮಾಡಿದ ಅವರು, ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ಒಂದು ಸ್ವತಂತ್ರ ಸಂಸ್ಥೆ ಬೇಕು. ಆದರೆ ಎಸಿಬಿ ಸ್ವತಂತ್ರ ಸಂಸ್ಥೆಯಲ್ಲ. ನಾನು ಕೊಟ್ಟ ವರದಿ ಮೇಲೆಯೇ ಕಾಂಗ್ರೆಸ್ ಬಳ್ಳಾರಿಗೆ ಪಾದಯಾತ್ರೆ ಮಾಡಿತು….